AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೆ.29ರಿಂದ ‘ಬಿಗ್​ ಬಾಸ್​ ಕನ್ನಡ 11’ ಶುರು: ಸುದೀಪ್ ಆ್ಯಂಕರ್​; ಇದು ಹೊಸ ಅಧ್ಯಾಯ

10 ಸೀಸನ್​ಗಳ ಯಶಸ್ಸಿನ ಬಳಿಕ 11ನೇ ಸೀಸನ್​ ಆರಂಭ ಆಗುತ್ತಿದೆ ‘ಬಿಗ್​ ಬಾಸ್​ ಕನ್ನಡ’ ರಿಯಾಲಿಟಿ ಶೋ ಹೊಸ ಸೀಸನ್​ಗೂ ಕಿಚ್ಚ ಸುದೀಪ್​ ಅವರೇ ಸಾರಥ್ಯ ವಹಿಸಿಕೊಂಡಿದ್ದಾರೆ. ಅವರನ್ನು ಬಿಟ್ಟು ಬೇರೆ ನಟರನ್ನು ನಿರೂಪಕರ ಸ್ಥಾನದಲ್ಲಿ ಕಲ್ಪಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಹೇಳುತ್ತಿದ್ದ ಅಭಿಮಾನಿಗಳ ಮಾತು ನಿಜವಾಗಿದೆ. ಈ ಬಗ್ಗೆ ಇಲ್ಲಿದೆ ಮಾಹಿತಿ..

ಸೆ.29ರಿಂದ ‘ಬಿಗ್​ ಬಾಸ್​ ಕನ್ನಡ 11’ ಶುರು: ಸುದೀಪ್ ಆ್ಯಂಕರ್​; ಇದು ಹೊಸ ಅಧ್ಯಾಯ
ಬಿಗ್​ ಬಾಸ್​ ಕನ್ನಡ ಸೀಸನ್ 11, ಕಿಚ್ಚ ಸುದೀಪ್​
ಮದನ್​ ಕುಮಾರ್​
|

Updated on: Sep 15, 2024 | 7:42 PM

Share

ಬಿಗ್ ಬಾಸ್​ ಕನ್ನಡ ಹೊಸ ಸೀಸನ್ ಯಾವಾಗ ಶುರು ಆಗಲಿದೆ ಎಂದು ಕಾದಿದ್ದ ವೀಕ್ಷಕರಿಗೆಲ್ಲ ಇಂದು (ಸೆಪ್ಟೆಂಬರ್ 15) ದೊಡ್ಡ ಸುದ್ದಿ ಸಿಕ್ಕಿದೆ. ಅಲ್ಲದೇ ಈ ಸೀಸನ್​ನಲ್ಲಿ ಆ್ಯಂಕರ್​ ಬದಲಾಗುತ್ತಾರಾ ಎಂಬ ಅನುಮಾನಕ್ಕೂ ತೆರೆ ಬಿದ್ದಿದೆ. ‘ಬಿಗ್ ಬಾಸ್ ಕನ್ನಡ ಸೀಸನ್​ 11’ ಕಾರ್ಯಕ್ರಮ ಸೆಪ್ಟೆಂಬರ್ 29ರಿಂದ ಆರಂಭ ಆಗಲಿದೆ. ಈ ಬಾರಿ ಕೂಡ ಕಿಚ್ಚ ಸುದೀಪ್​ ಅವರೇ ಆ್ಯಂಕರ್​ ಆಗಿ ಮುಂದುವರಿಯಲಿದ್ದಾರೆ. ಈ ಬಗ್ಗೆ ಅಪ್​ಡೇಟ್​ ನೀಡಲು ‘ಕಲರ್ಸ್​ ಕನ್ನಡ’ ಟಿವಿಯಲ್ಲಿ ಹೊಸ ಪ್ರೋಮೋ ಬಿಡುಗಡೆ ಮಾಡಲಾಗಿದೆ. ಇದರಲ್ಲಿ ಕಿಚ್ಚ ಸುದೀಪ್​ ಅವರು ಅಬ್ಬರಿಸಿದ್ದಾರೆ.

ಇಷ್ಟು ವರ್ಷಗಳ ಕಾಲ ಸುದೀಪ್​ ಅವರು ಯಶಸ್ವಿಯಾಗಿ ಬಿಗ್​ ಬಾಸ್​ ಕಾರ್ಯಕ್ರಮವನ್ನು ನಡೆಸಿಕೊಟ್ಟಿದ್ದಾರೆ. ಅವರಿಂದಾಗಿ ಎಲ್ಲ 10 ಸೀಸನ್​ಗಳಿಗೆ ಸ್ಟಾರ್ ಮೆರುಗು ಸಿಕ್ಕಿತು. ಈಗ ಸಡನ್​ ಆಗಿ ಬೇರೆ ಆ್ಯಂಕರ್​ ಬರುತ್ತಾರೆ ಎಂದರೆ ಅಭಿಮಾನಿಗಳು ಅದನ್ನು ಸ್ವೀಕರಿಸುವುದು ಕಷ್ಟ. ಹಾಗಿದ್ದರೂ ಕೂಡ ಕೆಲವು ಅನುಮಾನಗಳು ಹುಟ್ಟಿಕೊಂಡಿದ್ದವು. ಸುದೀಪ್​ ಬದಲು ಬೇರೆಯವರು ಈ ಬಾರಿ ನಿರೂಪಣೆ ಮಾಡಬಹುದು ಎಂದು ಕೆಲವರು ಊಹಿಸಿದ್ದರು. ಆದರೆ ಅದು ನಿಜವಾಗಿಲ್ಲ.

ಇದನ್ನೂ ಓದಿ: ಬಿಗ್ ಬಾಸ್​ನಲ್ಲಿ ನಾನು ಟಾಯ್ಲೆಟ್ ಕ್ಲೀನ್​ ಮಾಡಬೇಕಾ? ಸ್ಟಾರ್​ ನಟನ ಪತ್ನಿಯ ತಿರುಗೇಟು

‘ಗಿಚ್ಚಿ ಗಿಲಿಗಿಲಿ 3’ ಗ್ರ್ಯಾಂಡ್​ ಫಿನಾಲೆಯ ಸಂಚಿಕೆಯ ನಡುವೆ ‘ಬಿಗ್​ ಬಾಸ್​ ಕನ್ನಡ ಸೀಸನ್​ 11’ ಹೊಸ ಪ್ರೋಮೋ ಬಿತ್ತರ ಆಗಿದೆ. ಇದರಲ್ಲಿ ಸುದೀಪ್​ ಅವರು ಖಡಕ್​ ಆಗಿ ಡೈಲಾಗ್​ ಹೊಡೆದಿದ್ದಾರೆ. ‘10 ವರ್ಷದಿಂದ ಒಂದು ಲೆಕ್ಕ, ಈಗಿಂದ ಬೇರೇನೇ ಲೆಕ್ಕ. ಇದು ಹೊಸ ಅಧ್ಯಾಯ’ ಎಂದು ಕಿಚ್ಚ ಸುದೀಪ್​ ಹೇಳಿದ್ದಾರೆ. ಈ ಪ್ರೋಮೋ ನೋಡಿ ಸುದೀಪ್​ ಅಭಿಮಾನಿಗಳಿಗೆ ಖುಷಿ ಆಗಿದೆ.

ಪ್ರತಿ ವರ್ಷದಂತೆ ಈ ವರ್ಷ ಕೂಡ ಈಗಾಗಲೇ ಅನೇಕ ವ್ಯಕ್ತಿಗಳ ಹೆಸರು ಕೇಳಿಬರುತ್ತಿದೆ. ಈ ಬಾರಿ ಯಾರೆಲ್ಲ ಬಿಗ್​ ಬಾಸ್​ ಮನೆಯೊಳಗೆ ಕಾಲಿಡುತ್ತಾರೆ ಎಂಬುದನ್ನು ತಿಳಿಯುವ ಕೌತುಕ ನಿರ್ಮಾಣ ಆಗಿದೆ. ಸಿನಿಮಾ ಸೆಲೆಬ್ರಿಟಿಗಳು, ಕಿರುತೆರೆಯಲ್ಲಿ ಖ್ಯಾತಿ ಗಳಿಸಿದವರು, ಸೋಶಿಯಲ್​ ಮೀಡಿಯಾದಲ್ಲಿ ಸದ್ದು ಮಾಡಿದವರು, ಪತ್ರಿಕೋದ್ಯಮದ ಖ್ಯಾತನಾಮರು.. ಹೀಗೆ ವಿವಿಧ ಕ್ಷೇತ್ರಗಳಿಂದ ಸ್ಪರ್ಧಿಗಳು ಬರಲಿದ್ದಾರೆ. ‘ಕಲರ್ಸ್​ ಕನ್ನಡ’ ಹಾಗೂ ‘ಜಿಯೋ ಸಿನಿಮಾ’ ಮೂಲಕ ಈ ಶೋ ಪ್ರಸಾರ ಆಗಲಿದೆ. ಸೆ.29ರ ಭಾನುವಾರ ಗ್ರ್ಯಾಂಡ್ ಓಪನಿಂಗ್ ಆಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ