AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಾಯಿಯ ನೆನೆದು ಬಿಗ್​ಬಾಸ್ ವೇದಿಕೆ ಮೇಲೆ ಕಿಚ್ಚನ ಕಣ್ಣೀರು

Bigg Boss Kannada: ಕಿಚ್ಚ ಸುದೀಪ್ ಬಿಗ್​ಬಾಸ್ ವೇದಿಕೆ ಮೇಲೆ ಇಷ್ಟು ವರ್ಷ ಕಾಣಿಸಿಕೊಂಡಿದ್ದಕ್ಕಿಂತಲೂ ಬೇರೆಯದ್ದೇ ರೀತಿಯಲ್ಲಿ ಇಂದು (ನವೆಂಬರ್ 02) ಕಾಣಿಸಿಕೊಂಡರು. ಸುದೀಪ್ ಇಂದು ಬಿಗ್​ಬಾಸ್ ವೇದಿಕೆ ಮೇಲೆ ಭಾವುಕರಾಗಿ ಕಣ್ಣೀರು ಹಾಕಿದರು.

ತಾಯಿಯ ನೆನೆದು ಬಿಗ್​ಬಾಸ್ ವೇದಿಕೆ ಮೇಲೆ ಕಿಚ್ಚನ ಕಣ್ಣೀರು
ಮಂಜುನಾಥ ಸಿ.
|

Updated on: Nov 02, 2024 | 9:52 PM

Share

ಬಿಗ್​ಬಾಸ್ ವೇದಿಕೆ ಮೇಲೆ ಕಿಚ್ಚ ಸುದೀಪ್ ಸಾಮಾನ್ಯವಾಗಿ ಮೂರು ರೀತಿಯ ಷೇಡ್​ಗಳಲ್ಲಿ ಕಾಣಿಸಿಕೊಳ್ಳುತ್ತಾರೆ. ಒಂದೋ ಸಖತ್ ಖಡಕ್, ಇಲ್ಲ ತಮಾಷೆ ಮಾಡುತ್ತಾ, ಕಾಲೆಳೆಯುತ್ತಾ ಕಾಣಿಸಿಕೊಳ್ಳುತ್ತಾರೆ. ಎರಡೂ ಅಲ್ಲದಿದ್ದರೆ ಫಿಲಾಸಫರ್ ರೀತಿ, ಗಂಭೀರ ವಿಶ್ಲೇಷಣಕಾರನಾಗಿ ಕಾಣಿಸಿಕೊಳ್ಳುತ್ತಾರೆ. ಆದರೆ ಇಂದು ಬಿಗ್​ಬಾಸ್ ವೇದಿಕೆ ಮೇಲೆ ಬೇರೆಯದ್ದೇ ರೀತಿಯ ಸುದೀಪ್ ಕಾಣಿಸಿಕೊಂಡರು. ಬಿಗ್​ಬಾಸ್ ವೇದಿಕೆ ಮೇಲೆ ಸುದೀಪ್ ಕಣ್ಣೀರು ಹಾಕಿದರು. ಹಲವು ಭಾರಿ ಗದ್ಗದಿತರಾದರು.

ಅಕ್ಟೋಬರ್ 19ರಂದು ಬಿಗ್​ಬಾಸ್ ಶೋ ನಡೆಸಿಕೊಡುವಾಗಲೇ ತಾಯಿಯ ಅನಾರೋಗ್ಯದ ಸುದ್ದಿ ತಿಳಿದು ಅರ್ಧಕ್ಕೆ ಶೋ ನಿಲ್ಲಿಸಿ ಹೋಗಿದ್ದ ಸುದೀಪ್ ಒಂದು ವಾರದ ಗ್ಯಾಪ್ ಬಳಿಕ ಇಂದು ವಾಪಸ್ಸಾಗಿದ್ದಾರೆ. ಸುದೀಪ್, ತಮ್ಮ ತಾಯಿಯನ್ನು ಕಳೆದುಕೊಂಡ ನೋವಿನ ನಡುವೆಯೂ ಬಿಗ್​ಬಾಸ್ ವೇದಿಕೆಗೆ ವಾಪಸ್ಸಾಗಿದ್ದಾರೆ. ಸುದೀಪ್ ಅವರ ತಾಯಿಗೆ ಬಿಗ್​ಬಾಸ್ ಸಹ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ. ಈ ವೇಳೆ ಬಿಗ್​ಬಾಸ್ ವೇದಿಕೆ ಮೇಲೆ ಸುದೀಪ್ ಭಾವುಕರಾಗಿದ್ದಾರೆ.

ಸುದೀಪ್, ಶನಿವಾರದ ಎಪಿಸೋಡ್ ಪ್ರಾರಂಭ ಮಾಡಿ ಮನೆಯ ಸದಸ್ಯರೊಂದಿಗೆ ಮಾತುಕತೆ ಪ್ರಾರಂಭ ಮಾಡುತ್ತಿದ್ದಂತೆ ಬಿಗ್​ಬಾಸ್ ಧ್ವನಿ ಕೇಳಿ ಬಂತು. ಈ ಶೋ ಪ್ರಾರಂಭವಾದ ದಿನ, ‘ನೋಡಮ್ಮ ಶೇರ್ವಾನಿ ಧರಿಸಿದ್ದೀನಿ, ಬರಿಗಾಲಲ್ಲಿ ಇದ್ದೀನಿ, ಓಕೆ ನಾ’ ಎಂದು ತಮ್ಮ ತಾಯಿಯನ್ನು ಬಿಗ್​ಬಾಸ್ ವೇದಿಕೆ ಮೂಲಕ ಮಾತನಾಡಿಸಿ ಶೋ ಪ್ರಾರಂಭ ಮಾಡಿದ್ದರು ಸುದೀಪ್. ಇದೇ ವಿಷಯವನ್ನು ಬಿಗ್​ಬಾಸ್ ನೆನಪು ಮಾಡಿಸಿದರು. ತಮ್ಮ ಪ್ರೀತಿಯ ಮಾಣಿಕ್ಯವನ್ನು ಕರ್ನಾಟಕದ ಜನರ ಮಡಿಲಿಗೆ ಹಾಕಿದ ತಾಯಿಗೆ ಈ ವೇದಿಕೆ ಮೂಲಕ ಶ್ರದ್ಧಾಂಜಲಿ ನೀಡಬೇಕು ಎಂದುಕೊಂಡಿದ್ದೇವೆ’ ಎಂದು ಹೇಳಿದರು.

ಇದನ್ನೂ ಓದಿ:ಕಿಚ್ಚ ಸುದೀಪ್ ತಾಯಿ ನಿಧನಕ್ಕೆ ಸಂತಾಪ ಸೂಚಿಸಿ ಪತ್ರ ಬರೆದ ನರೇಂದ್ರ ಮೋದಿ

ಆ ಬಳಿಕ ಮಾಜಿ ಬಿಗ್​ಬಾಸ್ ಸ್ಪರ್ಧಿ, ಗಾಯಕ, ಸಂಗೀತ ನಿರ್ದೇಶಕ ವಾಸುಕಿ ವೈಭವ್ ವೇದಿಕೆಗೆ ಬಂದು ಪರಪಂಚ ನೀನೆ ಹಾಡು ಹಾಡಿದರು. ವೇದಿಕೆ ಮುಂದೆ ಕೂತಿದ್ದ ಪ್ರೇಕ್ಷಕರು ಮೇಣಬತ್ತಿ ಹಚ್ಚಿ ಎದ್ದು ನಿಂತರು, ವೇದಿಕೆ ಮೇಲಿರುವ ದೊಡ್ಡ ಎಲ್​ಸಿಡಿಯಲ್ಲಿ ಸುದೀಪ್ ತಾಯಿಯವರ ದೊಡ್ಡ ಚಿತ್ರ ಮೂಡಿತು, ಬಿಗ್​ಬಾಸ್​ ಸ್ಪರ್ಧಿಗಳು ಸಹ ಎಲ್ಲರೂ ಎದ್ದು ನಿಂತು ಸುದೀಪ್ ತಾಯಿಯವರಿಗೆ ಶ್ರದ್ಧಾಂಜಲಿ ಸಲ್ಲಿಸಿದರು.

ಹಾಡು ಮುಗಿದ ಮೇಲೆ ಮಾತನಾಡಿದ ವಾಸುಕಿ ವೈಭವ್, ‘ನಿಮ್ಮ ತಾಯಿಯವರಿಂದ ಹಲವು ಬಾರಿ ಆಶೀರ್ವಾದ ಪಡೆದಿದ್ದೇನೆ. ನಿಮಗೆ ಸಾಧ್ಯವಾದರೆ ತಾಯಿಯವರ ಬಗ್ಗೆ ಒಂದೆರಡು ಮಾತು ಮಾತನಾಡಬಹುದೆ? ಎಂದು ಕೇಳಿದರು. ಅದಕ್ಕೆ ಉತ್ತರಿಸಿದ ಸುದೀಪ್, ‘ಬಿಗ್​ಬಾಸ್ ವೇದಿಕೆ ಮೇಲೆ ತಾಯಿಯ ಬಗ್ಗೆ ಮಾತನಾಡಲು ನನಗೆ ಏನೂ ತೋಚುತ್ತಿಲ್ಲ. ಆದರೆ ನನ್ನ ತಾಯಿಗೆ ಬಿಗ್​ಬಾಸ್ ಶೋ ಬಹಳ ಇಷ್ಟದ ಶೋ ಆಗಿತ್ತು’ ಎಂದರು. ಆ ನಂತರ ನನಗೆ ಮಾಡಲು ಹೆಚ್ಚು ಕೆಲಸವಿದೆ ಎಂದು ಹೇಳಿ ‘ವಾರದ ಪಂಚಾಯಿತಿ’ ಆರಂಭಿಸಿದರು.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ವಿಜಯೇಂದ್ರ ಮತ್ತು ಅಶೋಕ್​ಗೆ ಹುಷಾರ್​​ ಆಗಿರಿ ಎಂದಿದ್ದೇಕೆ ಯತ್ನಾಳ್​
ವಿಜಯೇಂದ್ರ ಮತ್ತು ಅಶೋಕ್​ಗೆ ಹುಷಾರ್​​ ಆಗಿರಿ ಎಂದಿದ್ದೇಕೆ ಯತ್ನಾಳ್​
ಬೆಂಗಳೂರಿನ ಆಟೋ ಚಾಲಕನಿಗೆ ಹಿಂದಿಯಲ್ಲಿ ನಿಂದಿಸಿದ ಮಹಿಳೆ
ಬೆಂಗಳೂರಿನ ಆಟೋ ಚಾಲಕನಿಗೆ ಹಿಂದಿಯಲ್ಲಿ ನಿಂದಿಸಿದ ಮಹಿಳೆ