AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಾಯಿಯ ನೆನೆದು ಬಿಗ್​ಬಾಸ್ ವೇದಿಕೆ ಮೇಲೆ ಕಿಚ್ಚನ ಕಣ್ಣೀರು

Bigg Boss Kannada: ಕಿಚ್ಚ ಸುದೀಪ್ ಬಿಗ್​ಬಾಸ್ ವೇದಿಕೆ ಮೇಲೆ ಇಷ್ಟು ವರ್ಷ ಕಾಣಿಸಿಕೊಂಡಿದ್ದಕ್ಕಿಂತಲೂ ಬೇರೆಯದ್ದೇ ರೀತಿಯಲ್ಲಿ ಇಂದು (ನವೆಂಬರ್ 02) ಕಾಣಿಸಿಕೊಂಡರು. ಸುದೀಪ್ ಇಂದು ಬಿಗ್​ಬಾಸ್ ವೇದಿಕೆ ಮೇಲೆ ಭಾವುಕರಾಗಿ ಕಣ್ಣೀರು ಹಾಕಿದರು.

ತಾಯಿಯ ನೆನೆದು ಬಿಗ್​ಬಾಸ್ ವೇದಿಕೆ ಮೇಲೆ ಕಿಚ್ಚನ ಕಣ್ಣೀರು
ಮಂಜುನಾಥ ಸಿ.
|

Updated on: Nov 02, 2024 | 9:52 PM

Share

ಬಿಗ್​ಬಾಸ್ ವೇದಿಕೆ ಮೇಲೆ ಕಿಚ್ಚ ಸುದೀಪ್ ಸಾಮಾನ್ಯವಾಗಿ ಮೂರು ರೀತಿಯ ಷೇಡ್​ಗಳಲ್ಲಿ ಕಾಣಿಸಿಕೊಳ್ಳುತ್ತಾರೆ. ಒಂದೋ ಸಖತ್ ಖಡಕ್, ಇಲ್ಲ ತಮಾಷೆ ಮಾಡುತ್ತಾ, ಕಾಲೆಳೆಯುತ್ತಾ ಕಾಣಿಸಿಕೊಳ್ಳುತ್ತಾರೆ. ಎರಡೂ ಅಲ್ಲದಿದ್ದರೆ ಫಿಲಾಸಫರ್ ರೀತಿ, ಗಂಭೀರ ವಿಶ್ಲೇಷಣಕಾರನಾಗಿ ಕಾಣಿಸಿಕೊಳ್ಳುತ್ತಾರೆ. ಆದರೆ ಇಂದು ಬಿಗ್​ಬಾಸ್ ವೇದಿಕೆ ಮೇಲೆ ಬೇರೆಯದ್ದೇ ರೀತಿಯ ಸುದೀಪ್ ಕಾಣಿಸಿಕೊಂಡರು. ಬಿಗ್​ಬಾಸ್ ವೇದಿಕೆ ಮೇಲೆ ಸುದೀಪ್ ಕಣ್ಣೀರು ಹಾಕಿದರು. ಹಲವು ಭಾರಿ ಗದ್ಗದಿತರಾದರು.

ಅಕ್ಟೋಬರ್ 19ರಂದು ಬಿಗ್​ಬಾಸ್ ಶೋ ನಡೆಸಿಕೊಡುವಾಗಲೇ ತಾಯಿಯ ಅನಾರೋಗ್ಯದ ಸುದ್ದಿ ತಿಳಿದು ಅರ್ಧಕ್ಕೆ ಶೋ ನಿಲ್ಲಿಸಿ ಹೋಗಿದ್ದ ಸುದೀಪ್ ಒಂದು ವಾರದ ಗ್ಯಾಪ್ ಬಳಿಕ ಇಂದು ವಾಪಸ್ಸಾಗಿದ್ದಾರೆ. ಸುದೀಪ್, ತಮ್ಮ ತಾಯಿಯನ್ನು ಕಳೆದುಕೊಂಡ ನೋವಿನ ನಡುವೆಯೂ ಬಿಗ್​ಬಾಸ್ ವೇದಿಕೆಗೆ ವಾಪಸ್ಸಾಗಿದ್ದಾರೆ. ಸುದೀಪ್ ಅವರ ತಾಯಿಗೆ ಬಿಗ್​ಬಾಸ್ ಸಹ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ. ಈ ವೇಳೆ ಬಿಗ್​ಬಾಸ್ ವೇದಿಕೆ ಮೇಲೆ ಸುದೀಪ್ ಭಾವುಕರಾಗಿದ್ದಾರೆ.

ಸುದೀಪ್, ಶನಿವಾರದ ಎಪಿಸೋಡ್ ಪ್ರಾರಂಭ ಮಾಡಿ ಮನೆಯ ಸದಸ್ಯರೊಂದಿಗೆ ಮಾತುಕತೆ ಪ್ರಾರಂಭ ಮಾಡುತ್ತಿದ್ದಂತೆ ಬಿಗ್​ಬಾಸ್ ಧ್ವನಿ ಕೇಳಿ ಬಂತು. ಈ ಶೋ ಪ್ರಾರಂಭವಾದ ದಿನ, ‘ನೋಡಮ್ಮ ಶೇರ್ವಾನಿ ಧರಿಸಿದ್ದೀನಿ, ಬರಿಗಾಲಲ್ಲಿ ಇದ್ದೀನಿ, ಓಕೆ ನಾ’ ಎಂದು ತಮ್ಮ ತಾಯಿಯನ್ನು ಬಿಗ್​ಬಾಸ್ ವೇದಿಕೆ ಮೂಲಕ ಮಾತನಾಡಿಸಿ ಶೋ ಪ್ರಾರಂಭ ಮಾಡಿದ್ದರು ಸುದೀಪ್. ಇದೇ ವಿಷಯವನ್ನು ಬಿಗ್​ಬಾಸ್ ನೆನಪು ಮಾಡಿಸಿದರು. ತಮ್ಮ ಪ್ರೀತಿಯ ಮಾಣಿಕ್ಯವನ್ನು ಕರ್ನಾಟಕದ ಜನರ ಮಡಿಲಿಗೆ ಹಾಕಿದ ತಾಯಿಗೆ ಈ ವೇದಿಕೆ ಮೂಲಕ ಶ್ರದ್ಧಾಂಜಲಿ ನೀಡಬೇಕು ಎಂದುಕೊಂಡಿದ್ದೇವೆ’ ಎಂದು ಹೇಳಿದರು.

ಇದನ್ನೂ ಓದಿ:ಕಿಚ್ಚ ಸುದೀಪ್ ತಾಯಿ ನಿಧನಕ್ಕೆ ಸಂತಾಪ ಸೂಚಿಸಿ ಪತ್ರ ಬರೆದ ನರೇಂದ್ರ ಮೋದಿ

ಆ ಬಳಿಕ ಮಾಜಿ ಬಿಗ್​ಬಾಸ್ ಸ್ಪರ್ಧಿ, ಗಾಯಕ, ಸಂಗೀತ ನಿರ್ದೇಶಕ ವಾಸುಕಿ ವೈಭವ್ ವೇದಿಕೆಗೆ ಬಂದು ಪರಪಂಚ ನೀನೆ ಹಾಡು ಹಾಡಿದರು. ವೇದಿಕೆ ಮುಂದೆ ಕೂತಿದ್ದ ಪ್ರೇಕ್ಷಕರು ಮೇಣಬತ್ತಿ ಹಚ್ಚಿ ಎದ್ದು ನಿಂತರು, ವೇದಿಕೆ ಮೇಲಿರುವ ದೊಡ್ಡ ಎಲ್​ಸಿಡಿಯಲ್ಲಿ ಸುದೀಪ್ ತಾಯಿಯವರ ದೊಡ್ಡ ಚಿತ್ರ ಮೂಡಿತು, ಬಿಗ್​ಬಾಸ್​ ಸ್ಪರ್ಧಿಗಳು ಸಹ ಎಲ್ಲರೂ ಎದ್ದು ನಿಂತು ಸುದೀಪ್ ತಾಯಿಯವರಿಗೆ ಶ್ರದ್ಧಾಂಜಲಿ ಸಲ್ಲಿಸಿದರು.

ಹಾಡು ಮುಗಿದ ಮೇಲೆ ಮಾತನಾಡಿದ ವಾಸುಕಿ ವೈಭವ್, ‘ನಿಮ್ಮ ತಾಯಿಯವರಿಂದ ಹಲವು ಬಾರಿ ಆಶೀರ್ವಾದ ಪಡೆದಿದ್ದೇನೆ. ನಿಮಗೆ ಸಾಧ್ಯವಾದರೆ ತಾಯಿಯವರ ಬಗ್ಗೆ ಒಂದೆರಡು ಮಾತು ಮಾತನಾಡಬಹುದೆ? ಎಂದು ಕೇಳಿದರು. ಅದಕ್ಕೆ ಉತ್ತರಿಸಿದ ಸುದೀಪ್, ‘ಬಿಗ್​ಬಾಸ್ ವೇದಿಕೆ ಮೇಲೆ ತಾಯಿಯ ಬಗ್ಗೆ ಮಾತನಾಡಲು ನನಗೆ ಏನೂ ತೋಚುತ್ತಿಲ್ಲ. ಆದರೆ ನನ್ನ ತಾಯಿಗೆ ಬಿಗ್​ಬಾಸ್ ಶೋ ಬಹಳ ಇಷ್ಟದ ಶೋ ಆಗಿತ್ತು’ ಎಂದರು. ಆ ನಂತರ ನನಗೆ ಮಾಡಲು ಹೆಚ್ಚು ಕೆಲಸವಿದೆ ಎಂದು ಹೇಳಿ ‘ವಾರದ ಪಂಚಾಯಿತಿ’ ಆರಂಭಿಸಿದರು.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಅಭಿವೃದ್ಧಿಯಲ್ಲಿ ಬೆಂಗಳೂರಿಗಿಂತ ದಾವಣಗೆರೆಯೇ ಮುಂದು ಎಂದ ಡಿಕೆಶಿ
ಅಭಿವೃದ್ಧಿಯಲ್ಲಿ ಬೆಂಗಳೂರಿಗಿಂತ ದಾವಣಗೆರೆಯೇ ಮುಂದು ಎಂದ ಡಿಕೆಶಿ
ಪ್ರೇಮ ವಿವಾಹಕ್ಕೆ ಪೋಷಕರ ವಿರೋಧ! ರಾಜಿ ಆಗೋಣವೆಂದು ಕರೆದು ಹಲ್ಲೆ
ಪ್ರೇಮ ವಿವಾಹಕ್ಕೆ ಪೋಷಕರ ವಿರೋಧ! ರಾಜಿ ಆಗೋಣವೆಂದು ಕರೆದು ಹಲ್ಲೆ
ಈ ಸರ್ಕಾರದ ಲೂಟಿ ನೋಡಿಯೇ ಕೆಂಪಣ್ಣ ಸತ್ಹೋಗ್ಬಿಟ್ಟ: ಪ್ರತಾಪಸಿಂಹ
ಈ ಸರ್ಕಾರದ ಲೂಟಿ ನೋಡಿಯೇ ಕೆಂಪಣ್ಣ ಸತ್ಹೋಗ್ಬಿಟ್ಟ: ಪ್ರತಾಪಸಿಂಹ
ಕೋಲಾರ: ಸೆಷನ್ಸ್ ಕೋರ್ಟ್ ಒಳ ಸೇರಿಕೊಂಡಿದ್ದ ಹಾವು! ಆಮೇಲೇನಾಯ್ತು ನೋಡಿ
ಕೋಲಾರ: ಸೆಷನ್ಸ್ ಕೋರ್ಟ್ ಒಳ ಸೇರಿಕೊಂಡಿದ್ದ ಹಾವು! ಆಮೇಲೇನಾಯ್ತು ನೋಡಿ
ಮೈಮೇಲೆ ಹರಿದು ಕಾರು, ಕೆಲವೇ ಕ್ಷಣಗಳಲ್ಲಿ ಪವಾಡವೆಂಬಂತೆ ಎದ್ದು ನಿಂತ ಬಾಲಕ
ಮೈಮೇಲೆ ಹರಿದು ಕಾರು, ಕೆಲವೇ ಕ್ಷಣಗಳಲ್ಲಿ ಪವಾಡವೆಂಬಂತೆ ಎದ್ದು ನಿಂತ ಬಾಲಕ
ಮೈ ರೋಮಾಂಚನಗೊಳಿಸುವ ಕುಮಾರ - ಸಿರಿ ಭೇಟಿ
ಮೈ ರೋಮಾಂಚನಗೊಳಿಸುವ ಕುಮಾರ - ಸಿರಿ ಭೇಟಿ
ಅಯೋಧ್ಯೆಯಲ್ಲಿ ಬಂದೂಕು ತೋರಿಸಿ ಆಭರಣದಂಗಡಿ ದೋಚಿದ ಬುರ್ಖಾಧಾರಿ ಮಹಿಳೆ
ಅಯೋಧ್ಯೆಯಲ್ಲಿ ಬಂದೂಕು ತೋರಿಸಿ ಆಭರಣದಂಗಡಿ ದೋಚಿದ ಬುರ್ಖಾಧಾರಿ ಮಹಿಳೆ
ಆನೇಕಲ್: ಗ್ರಾಮಕ್ಕೆ ನುಗ್ಗಿ ಕಾಡಾನೆಗಳ ನೈಟ್ ರೌಂಡ್ಸ್! ವಿಡಿಯೋ ವೈರಲ್
ಆನೇಕಲ್: ಗ್ರಾಮಕ್ಕೆ ನುಗ್ಗಿ ಕಾಡಾನೆಗಳ ನೈಟ್ ರೌಂಡ್ಸ್! ವಿಡಿಯೋ ವೈರಲ್
ನಾನು ಸಿಎಂ ಆದ್ರೆ ಮಹಿಳೆಯರಿಗೆ 3,000 ರೂ. ಪುರುಷರಿಗೆ 2,000 ರೂ.: ಯತ್ನಾಳ್
ನಾನು ಸಿಎಂ ಆದ್ರೆ ಮಹಿಳೆಯರಿಗೆ 3,000 ರೂ. ಪುರುಷರಿಗೆ 2,000 ರೂ.: ಯತ್ನಾಳ್
ಬೆಂಕಿ ಹಚ್ಚುವ ಮುಲ್ಲಾಗಳಿಗೆ 6 ಸಾವಿರ ಕೊಡತ್ತೆ ಕಾಂಗ್ರೆಸ್ ಸರ್ಕಾರ: ಯತ್ನಾಳ
ಬೆಂಕಿ ಹಚ್ಚುವ ಮುಲ್ಲಾಗಳಿಗೆ 6 ಸಾವಿರ ಕೊಡತ್ತೆ ಕಾಂಗ್ರೆಸ್ ಸರ್ಕಾರ: ಯತ್ನಾಳ