AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್ ಬಾಸ್ ಆಟದಲ್ಲಿ ಎಷ್ಟೇ ಕಷ್ಟಪಟ್ಟರೂ ಈ ಸ್ಪರ್ಧಿಗಳಿಗೆ ಕಾಣುತ್ತಿದೆ ಮನೆ ದಾರಿ

‘ಬಿಗ್ ಬಾಸ್ ಕನ್ನಡ ಸೀಸನ್​ 11’ ರಿಯಾಲಿಟಿ ಶೋ ಕೊನೆ ಹಂತವನ್ನು ತಲುಪುತ್ತಿದೆ. ಇಲ್ಲಿಯವರೆಗೂ ಕಷ್ಟಪಟ್ಟು ಪೈಪೋಟಿ ನೀಡಿದ ಸ್ಪರ್ಧಿಗಳಿಗೆ ಕೊನೇ ಟಾಸ್ಕ್​ನಲ್ಲಿ ನಿರೀಕ್ಷಿತ ಗೆಲವು ಸಿಕ್ಕಿಲ್ಲ. ಹಾಗಾಗಿ ಮನೆಯ ದಾರಿ ಕಾಣಲು ಆರಂಭಿಸಿದೆ. ಇವರ ಪೈಕಿ ಯಾರು ಈ ವಾರ ಬಿಗ್ ಬಾಸ್​ ಆಟಕ್ಕೆ ವಿದಾಯ ಹೇಳಬೇಕಾಗುತ್ತದೆ ಎಂಬುದನ್ನು ಸದ್ಯದಲ್ಲೇ ನಿರ್ಧಾರ ಆಗಲಿದೆ.

ಬಿಗ್ ಬಾಸ್ ಆಟದಲ್ಲಿ ಎಷ್ಟೇ ಕಷ್ಟಪಟ್ಟರೂ ಈ ಸ್ಪರ್ಧಿಗಳಿಗೆ ಕಾಣುತ್ತಿದೆ ಮನೆ ದಾರಿ
Bigg Boss Kannada Season 11
ಮದನ್​ ಕುಮಾರ್​
|

Updated on: Jan 07, 2025 | 10:11 PM

Share

ಪ್ರತಿ ವಾರವೂ ಬಿಗ್ ಬಾಸ್ ಮನೆಯಲ್ಲಿ ನಾಮಿನೇಷನ್​ ಪ್ರತಿಕ್ರಿಯೆ ಬೇರೆ ಬೇರೆ ರೀತಿ ನಡೆಯುತ್ತದೆ. ಈ ವಾರ ‘ಟಿಕೆಟ್​ ಟು ಫಿನಾಲೆ’ ಮತ್ತು ‘ಟಿಕೆಟ್​ ಹೋಮ್’ ಎಂದು ವಿಂಗಡಿಸಿ ಟಾರ್ಗೆಟ್ ನೀಡಲಾಗಿದೆ. ಫಿನಾಲೆ ಟಿಕೆಟ್ ಪಡೆಯಲು ಎಲ್ಲರೂ ಕಷ್ಟಪಡುತ್ತಿದ್ದಾರೆ. ಅದರ ನಡುವೆ 5 ಸುತ್ತಿನ ಆಟದಲ್ಲಿ ಹಿನ್ನಡೆ ಕಂಡ ಸ್ಪರ್ಧಿಗಳು ನಾಮಿನೇಟ್ ಆಗಿದ್ದಾರೆ. ತ್ರಿವಿಕ್ರಮ್, ಭವ್ಯಾ ಗೌಡ, ಚೈತ್ರಾ ಕುಂದಾಪುರ, ಮೋಕ್ಷಿತಾ ಪೈ ಹಾಗೂ ಧನರಾಜ್ ಅವರ ಹೆಸರನ್ನು ನಾಮಿನೇಟ್ ಮಾಡಲಾಗಿದೆ. ಗೌತಮಿ ಜಾದವ್, ಉಗ್ರಂ ಮಂಜು, ಹನುಮಂತ ಹಾಗೂ ರಜತ್ ಅವರು ಸದ್ಯಕ್ಕೆ ಸೇಫ್ ಆಗಿದ್ದಾರೆ.

ನೋಡನೋಡುತ್ತಿದ್ದಂತೆಯೇ ಬಿಗ್ ಬಾಸ್ ಆಟದಲ್ಲಿ 100 ದಿನಗಳು ಕಳೆದಿವೆ. ಬಿಗ್ ಬಾಸ್​ ಗ್ರ್ಯಾಂಡ್​ ಓಪನಿಂಗ್ ನಿನ್ನೆ-ಮೊನ್ನೆ ಆದಂತೆ ಇದೆ. ಹಲವು ಬಗೆಯ ಟಾಸ್ಕ್​, ನೂರಾರು ಕಿರಿಕ್, ವಾದ-ಪ್ರತಿವಾದ, ಹಲವಾರು ಡ್ರಾಮಾಗಳು ನಡೆದಿವೆ. ಭಾರಿ ಸೌಂಡು ಮಾಡುತ್ತಿದ್ದ ಸ್ಪರ್ಧಿಗಳೆಲ್ಲ ಎಲಿಮಿನೇಟ್ ಆದರು. ಟಾಸ್ಕ್ ಆಡುತ್ತಾ, ತಮ್ಮದೇ ತಂತ್ರಗಾರಿಕೆ ಮಾಡುತ್ತಾ 9 ಜನರು ಈಗ ಉಳಿದುಕೊಂಡಿದ್ದಾರೆ.

ಕಿಚ್ಚ ಸುದೀಪ್ ಅವರು ನಡೆಸಿಕೊಡುವ ಕೊನೇ ಬಿಗ್ ಬಾಸ್ ಸೀಸನ್​ ಇದು. ಆದ್ದರಿಂದ ವೀಕ್ಷಕರಿಗೆ ಇದು ತುಂಬ ವಿಶೇಷವಾದ ಸೀಸನ್. ಕಳೆದ ಸೀಸನ್​ಗಿಂತಲೂ ಹೆಚ್ಚಿನ ಟಿಆರ್​ಪಿ ಪಡೆದುಕೊಳ್ಳುವಲ್ಲಿ ಈ ಸೀಸನ್ ಯಶಸ್ವಿ ಆಗಿದೆ. ಕಳೆದ ವಾರ ಫ್ಯಾಮಿಲಿ ಸಂಚಿಕೆಗಳು ಪ್ರಸಾರ ಆದವು. ಎಲ್ಲರೂ ನಗುವಿನ ಅಲೆಯಲ್ಲಿ ತೇಲಿದ್ದರು. ಆದರೆ ಈ ವಾರ ಟಿಕೆಟ್​ ಟು ಫಿನಾಲೆ ಟಾಸ್ಕ್ ನೀಡಿದ್ದರಿಂದ ಎಲ್ಲರ ಆಟದಲ್ಲಿ ಅಗ್ರೆಷನ್ ಜಾಸ್ತಿ ಆಗಿದೆ.

ಇದನ್ನೂ ಓದಿ: ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?

ವೈಲ್ಡ್ ಕಾರ್ಡ್​ ಮೂಲಕ ಬಂದಿರುವ ಹನುಮಂತ, ರಜತ್ ಅವರು ತುಂಬ ಸ್ಟ್ರಾಂಗ್ ಸ್ಪರ್ಧಿಗಳ ಎನಿಸಿಕೊಂಡಿದ್ದಾರೆ. ತ್ರಿವಿಕ್ರಮ್ ಅವರು ಕೇವಲ ಭವ್ಯಾ ಗೌಡ ಜೊತೆ ಹೆಚ್ಚು ಕಾಲ ಕಳೆದಿದ್ದರಿಂದ ಅವರ ಆಟಕ್ಕೆ ಹಿನ್ನಡೆ ಆಗಿದೆ. ಮಂಜು ಮತ್ತು ಗೌತಮಿ ನಡುವಿನ ಸ್ನೇಹ ಕೂಡ ಆಟಕ್ಕೆ ಅಡ್ಡಿ ಆಗಿದೆ. ಇನ್ನು ಕೇವಲ ಮೂರು ವಾರ ಮಾತ್ರ ಬಿಗ್ ಬಾಸ್ ಆಟ ಉಳಿದಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ