AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್ ಬಾಸ್​ ಟಾಸ್ಕ್ ವೇಳೆ ನಡೆಯಿತು ಅವಘಡ; ಇಬ್ಬರು ಆಸ್ಪತ್ರೆಗೆ?

ಬಿಗ್ ಬಾಸ್ ಮನೆಯಲ್ಲಿ ಸ್ವರ್ಗ ಹಾಗೂ ನರಕ ಎನ್ನುವ ಕಾನ್ಸೆಪ್ಟ್ ಮಾಡಲಾಗಿದೆ. ಸ್ವರ್ಗದಲ್ಲಿ ಇರುವವರಿಗೆ ಎಲ್ಲಾ ಸೌಕರ್ಯ ಸಿಗುತ್ತಿದೆ. ನರಕದಲ್ಲಿ ಇರುವವರಿಗೆ ಸಾಮಾನ್ಯ ಸೌಲಭ್ಯ ಮಾತ್ರ ಒದಗಿಸಲಾಗುತ್ತಿದೆ. ಎರಡೂ ಗುಂಪಿಗೆ ಒಂದು ಟಾಸ್ಕ್ ನೀಡಲಾಗಿತ್ತು. ಈ ಟಾಸ್ಕ್ ಆಡುವಾಗ ಅವಘಡ ಸಂಭವಿಸಿದೆ.

ಬಿಗ್ ಬಾಸ್​ ಟಾಸ್ಕ್ ವೇಳೆ ನಡೆಯಿತು ಅವಘಡ; ಇಬ್ಬರು ಆಸ್ಪತ್ರೆಗೆ?
ಬಿಗ್ ಬಾಸ್​ ಟಾಸ್ಕ್ ವೇಳೆ ನಡೆಯಿತು ಅವಘಡ; ಇಬ್ಬರು ಆಸ್ಪತ್ರೆಗೆ?
ರಾಜೇಶ್ ದುಗ್ಗುಮನೆ
|

Updated on: Oct 04, 2024 | 7:45 AM

Share

‘ಬಿಗ್ ಬಾಸ್ ಕನ್ನಡ ಸೀಸನ್ 11’ರ ಟಾಸ್ಕ್​ ವೇಳೆ ಅವಘಡ ಸಂಭವಿಸಿದೆ. ಈ ವೇಳೆ ತ್ರಿವಿಕ್ರಂಗೆ ಗಾಯ ಆಗಿದೆ ಎಂದು ಹೇಳಲಾಗುತ್ತಿದೆ. ಇದರಿಂದ ಅವರು ಆಸ್ಪತ್ರೆಗೆ ಸೇರಿದ್ದಾರೆ ಎಂದು ವರದಿ ಆಗಿದೆ. ಟಾಸ್ಕ್ ವೇಳೆ ಆದ ಅವಘಡದಿಂದ ಇಡೀ ಬಿಗ್ ಬಾಸ್ ಮನೆ ಆತಂಕಕ್ಕೆ ಒಳಗಾಗಿದೆ. ತ್ರಿವಿಕ್ರಂ ಆದಷ್ಟು ಬೇಗ ಚೇತರಿಕೆ ಕಂಡು ಬರಲಿ ಎಂದು ಎಲ್ಲರೂ ಆಶಿಸುತ್ತಿದ್ದಾರೆ. ಇದೇ ವೇಳೆ ಗೋಲ್ಡ್ ಸುರೇಶ್​ಗೂ ಪೆಟ್ಟಾಗಿದೆ ಎನ್ನಲಾಗಿದೆ.

ಬಿಗ್ ಬಾಸ್ ಮನೆಯಲ್ಲಿ ಸ್ವರ್ಗ ಹಾಗೂ ನರಕ ಎನ್ನುವ ಕಾನ್ಸೆಪ್ಟ್ ಮಾಡಲಾಗಿದೆ. ಸ್ವರ್ಗದಲ್ಲಿ ಇರುವವರಿಗೆ ಎಲ್ಲಾ ಸೌಕರ್ಯ ಸಿಗುತ್ತಿದೆ. ನರಕದಲ್ಲಿ ಇರುವವರಿಗೆ ಸಾಮಾನ್ಯ ಸೌಲಭ್ಯ ಮಾತ್ರ ಒದಗಿಸಲಾಗುತ್ತಿದೆ. ಎರಡೂ ಗುಂಪಿಗೆ ಒಂದು ಟಾಸ್ಕ್ ನೀಡಲಾಗಿತ್ತು. ಈ ಟಾಸ್ಕ್ ಆಡುವಾಗ ಅವಘಡ ಸಂಭವಿಸಿದೆ.

ಟಾಸ್ಕ್ ಆಡುವಾಗ ಚೆಂಡು ಹಿಡಿದು ಓಡುತ್ತಿದ್ದ ತ್ರಿವಿಕ್ರಂ ಅವರು ಬಿದ್ದಿದ್ದಾರೆ. ಇದರಿಂದ ಅವರಿಗೆ ಪೆಟ್ಟಾಗಿದೆ. ಅವರನ್ನು ಕನ್ಫೆಷನ್​ ರೂಂಗೆ ಕರೆತರುವಂತೆ ಬಿಗ್ ಬಾಸ್ ಸೂಚನೆ ನೀಡಿದ್ದಾರೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿ ಆಗಿದೆ. ಅವರು ಚಿಕಿತ್ಸೆ ಪಡೆದು ದೊಡ್ಮನೆ ಒಳಗೆ ಬಂದಿದ್ದಾರಂತೆ. ಅದೇ ರೀತಿ ಗೋಲ್ಡ್​ ಸುರೇಶ್​ಗೂ ಪೆಟ್ಟಾಗಿದೆ ಎಂದು ಹೇಳಲಾಗುತ್ತಿದೆ.

‘ಬಿಗ್ ಬಾಸ್’ನಲ್ಲಿ ಟಾಸ್ಕ್ ಆಡುವಾಗ ಸಾಕಷ್ಟು ತೊಂದರೆಗಳು ಆಗಿದ್ದು ಇದೆ. ಕಳೆದ ಸೀಸನ್​ನಲ್ಲಿ ಪ್ರತಾಪ್ ಹಾಗೂ ಸಂಗೀತಾ ಕಣ್ಣಿಗೆ ಹಾನಿ ಆಗಿತ್ತು. ಅವರು 2-3 ದಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಬಂದಿದ್ದರು. ಈಗ ತ್ರಿವಿಕ್ರಂ ಹಾಗೂ ಗೋಲ್ಡ್ ಸುರೇಶ್ ಅವರು ಮೊದಲನೇ ವಾರವೇ ಆಸ್ಪತ್ರೆ ಸೇರಿ ಬಂದಿದ್ದಾರೆ.

ಇದನ್ನೂ ಓದಿ: ‘ನಂಗೆ ಬಿಗ್ ಬಾಸ್​ನೇ ಖರೀದಿಸೋ ತಾಕತ್ತಿದೆ, ಆಗ ಕಪ್ ನಂದೇ’; ಬಡಾಯಿ ಕೊಚ್ಚಿಕೊಂಡ ಜಗದೀಶ್

‘ಬಿಗ್ ಬಾಸ್ ಕನ್ನಡ ಸೀಸನ್ 11’ರಲ್ಲಿ ಮೊದಲ ವಾರವೇ ಕಿತ್ತಾಟ ಆರಂಭ ಆಗಿದೆ. ಸ್ಪರ್ಧಿಗಳ ಮಧ್ಯೆ ಒಂದಲ್ಲಾ ಒಂದು ವಿಚಾರಕ್ಕೆ ಗದ್ದಲ ನಡೆಯುತ್ತಿದೆ. ಟಾಸ್ಕ್ ವೇಳೆ ಅವಘಡಗಳು ನಡೆಯುತ್ತಿವೆ. ವಕೀಲ ಜಗದೀಶ್ ಅವರ ಎಲ್ಲರ ವಿರುದ್ಧವೂ ಕೂಗಾಟ ನಡೆಸುತ್ತಿದ್ದಾರೆ. ಅವರು ಬಿಗ್ ಬಾಸ್​ಗೆ ಅವಮಾನ ಮಾಡುವ ಕೆಲಸವನ್ನು ಮಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ