AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್ ಬಾಸ್ ಮನೆಯಲ್ಲಿ ಮೊದಲ ದಿನವೇ ಕೂಗಾಟ, ಗೊಂದಲ; ರಿಪೀಟ್ ಆಗುತ್ತಾ ಕಳೆದ ಸೀಸನ್?

ಬಿಗ್ ಬಾಸ್ ಮನೆಯ ನರಕದಲ್ಲಿ ಇರೋರಿಗೆ ಬಿಸಿನೀರು ಬೇಕಾಗಿದೆ. ಇದನ್ನು ಸೌಕರ್ಯ ಎಂದು ಸ್ವರ್ಗ ನಿವಾಸಿಗಳು ಪರಿಗಣಿಸಿದ್ದಾರೆ. ಹೀಗಾಗಿ, ಬಿಸಿ ನೀರನ್ನು ಕೊಡೋಕೆ ಅವರು ಇಷ್ಟಪಡುತ್ತಿಲ್ಲ. ಇದರಿಂದ ಇಬ್ಬರ ಮಧ್ಯೆ ಕಿತ್ತಾಟ ಆಗಿದೆ. ಮಾತಿಗೆ ಮಾತು ಬೆಳೆದಿದೆ.

ಬಿಗ್ ಬಾಸ್ ಮನೆಯಲ್ಲಿ ಮೊದಲ ದಿನವೇ ಕೂಗಾಟ, ಗೊಂದಲ; ರಿಪೀಟ್ ಆಗುತ್ತಾ ಕಳೆದ ಸೀಸನ್?
ಬಿಗ್ ಬಾಸ್
ರಾಜೇಶ್ ದುಗ್ಗುಮನೆ
|

Updated on: Oct 01, 2024 | 6:56 AM

Share

‘ಬಿಗ್ ಬಾಸ್ ಕನ್ನಡ ಸೀಸನ್ 10’ರಲ್ಲಿ ಭರ್ಜರಿ ದ್ವೇಷ ಹುಟ್ಟಿಕೊಂಡಿತ್ತು. ಸ್ಪರ್ಧಿಗಳು ಪರಸ್ಪರ ಕಿತ್ತಾಡಿಕೊಂಡಿದ್ದರು. ಈಗ ಈ ದ್ವೇಷದ ಬೀಜ ಮೊದಲ ದಿನವೇ ಮೊಳಕೆ ಒಡೆದಿದೆ. ಬಿಸಿನೀರು ಹಾಗೂ ತಣ್ಣೀರಿನ ವಿಚಾರಕ್ಕೆ ಮನೆ ಮಂದಿ ಕಿತ್ತಾಡಿಕೊಂಡಿದ್ದಾರೆ. ಕಳೆದ ಸೀಸನ್ ಇದು ರಿಪೀಟ್ ಆಗುತ್ತದೆಯಾ ಎಂಬುದನ್ನು ಕಾದು ನೋಡಬೇಕಿದೆ.

‘ಬಿಗ್ ಬಾಸ್’ ಮನೆಯಲ್ಲಿ 17 ಸ್ಪರ್ಧಿಗಳು ಎಂಟ್ರಿ ಪಡೆದಿದ್ದಾರೆ. ಅನುಷಾ ರೈ, ಧರ್ಮಕೀರ್ತಿರಾಜ್, ಲಾಯರ್ ಜಗದೀಶ್, ಭವ್ಯಾ ಗೌಡ, ಯಮುನಾ ಶ್ರೀನಿಧಿ, ಧನರಾಜ್ ಆಚಾರ್, ಗೌತಮಿ ಜಾಧವ್, ಶಿಶಿರ್, ತ್ರಿವಿಕ್ರಂ, ಹಂಸ, ಮಾನಸಾ, ಗೋಲ್ಡ್ ಸುರೇಶ್, ಐಶ್ವರ್ಯಾ ಸಿಂಧೋಗಿ, ಚೈತ್ರಾ ಕುಂದಾಪುರ್, ಉಗ್ರಂ ಮಂಜು, ರಂಜಿತ್ ಕುಮಾರ್, ಮೋಕ್ಷಿತಾ ಪೈ, ಬಿಗ್ ಬಾಸ್ ಮನೆಯಲ್ಲಿ ಇದ್ದಾರೆ. ಇದರಲ್ಲಿ ಒಂದಷ್ಟು ಮಂದಿ ಸ್ವರ್ಗದಲ್ಲಿ ಹಾಯಾಗಿದ್ದರೆ, ಒಂದಷ್ಟು ಮಂದಿ ನರಕದಲ್ಲಿ ಇದ್ದಾರೆ.

ನರಕದಲ್ಲಿ ಇರೋರಿಗೆ ಬಿಸಿನೀರು ಬೇಕಾಗಿದೆ. ಇದನ್ನು ಸೌಕರ್ಯ ಎಂದು ಸ್ವರ್ಗ ನಿವಾಸಿಗಳು ಪರಿಗಣಿಸಿದ್ದಾರೆ. ಹೀಗಾಗಿ, ಬಿಸಿ ನೀರನ್ನು ಕೊಡೋಕೆ ಅವರು ಇಷ್ಟಪಡುತ್ತಿಲ್ಲ. ಇದರಿಂದ ಇಬ್ಬರ ಮಧ್ಯೆ ಕಿತ್ತಾಟ ಆಗಿದೆ. ಮಾತಿಗೆ ಮಾತು ಬೆಳೆದಿದೆ. ಅಷ್ಟೇ ಅಲ್ಲ, ಇದನ್ನು ಉದ್ದೇಶಪೂರ್ವಕವಾಗಿ ಮಾಡಲಾಗುತ್ತಿದೆ ಎಂದು ಕೆಲ ನರಕ ನಿವಾಸಿಗಳು ಭಾವಿಸಿದ್ದಾರೆ.

‘ನಮ್ಮ ಕೈಯಲ್ಲಿ ಮಿಸ್ಟೇಕ್ ಮಾಡಿಸೋಕೆ ಅವರು ಪ್ಲ್ಯಾನ್ ಮಾಡಿಸುತ್ತಾರೆ. ಎಲ್ಲರೂ ಹುಷಾರಾಗಿರಿ. ಈಗ ಆಟ ಶುರು’ ಎಂದು ಉಗ್ರಂ ಮಂಜು ಅವರು ಹೇಳಿದ್ದಾರೆ. ಎಲ್ಲರೂ ಸಣ್ಣ ಸಣ್ಣ ವಿಚಾರಕ್ಕೆ ದೊಡ್ಡ ಮಟ್ಟದ ಗೊಂದಲ ಮಾಡಿಕೊಳ್ಳುತ್ತಿದ್ದು, ಸಾಕಷ್ಟು ಕಿತ್ತಾಡಿಕೊಳ್ಳುತ್ತಿದ್ದಾರೆ. ಯಮುನಾ ಶ್ರೀನಿಧಿ ಹಾಗೂ ಚೈತ್ರಾ ಮಧ್ಯೆ ಮಾತಿನ ಚಕಮಕಿ ನಡೆದಿದೆ. ಚೈತ್ರಾ ಹಣ್ಣನ್ನು ತಿಂದು ರೂಲ್ಸ್ ಬ್ರೇಕ್ ಮಾಡಿದ್ದಾರೆ.

ಇದನ್ನೂ ಓದಿ: ‘ಜೈಲಿನಲ್ಲೂ ಬಿಗ್ ಬಾಸ್ ನೋಡ್ತಾರೆ’: ಈ ಮಾತು ವಿವಾದ ಆಗತ್ತೆ ಎಂದಿದ್ದಕ್ಕೆ ಸುದೀಪ್ ಹೇಳಿದ್ದೇನು?

ಇನ್ನು, ಲಾಯರ್ ಎನಿಸಿಕೊಂಡಿರೋ ಜಗದೀಶ್ ಅವರು ಮೊದಲ ದಿನವೇ ರೂಲ್ಸ್ ಬ್ರೇಕ್ ಮಾಡಿದ್ದಾರೆ. ನರಕ ನಿವಾಸಿಗಳು ಮನೆಗೆಲಸ ಮಾಡಬೇಕಿತ್ತು. ಈ ವೇಳೆ ಚೈತ್ರಾ ಹಾಗೂ ಜಗದೀಶ್ ಅವರನ್ನು ಕೆಲಸಕ್ಕೆ ನೇಮಿಸಲಾಯಿತು. ಚೈತ್ರಾ ಸರಿಯಾಗಿ ಶುಚಿಮಾಡಿಲ್ಲ ಎಂದು ಜಗದೀಶ್ ಅವರೇ ಶುಚಿಮಾಡಿ ನಿಯಮ ಬ್ರೇಕ್ ಮಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ವಿಜಯೇಂದ್ರ ಮತ್ತು ಅಶೋಕ್​ಗೆ ಹುಷಾರ್​​ ಆಗಿರಿ ಎಂದಿದ್ದೇಕೆ ಯತ್ನಾಳ್​
ವಿಜಯೇಂದ್ರ ಮತ್ತು ಅಶೋಕ್​ಗೆ ಹುಷಾರ್​​ ಆಗಿರಿ ಎಂದಿದ್ದೇಕೆ ಯತ್ನಾಳ್​