ಬಿಗ್ ಬಾಸ್ ಮನೆಯಲ್ಲಿ ಮೊದಲ ದಿನವೇ ಕೂಗಾಟ, ಗೊಂದಲ; ರಿಪೀಟ್ ಆಗುತ್ತಾ ಕಳೆದ ಸೀಸನ್?

ಬಿಗ್ ಬಾಸ್ ಮನೆಯ ನರಕದಲ್ಲಿ ಇರೋರಿಗೆ ಬಿಸಿನೀರು ಬೇಕಾಗಿದೆ. ಇದನ್ನು ಸೌಕರ್ಯ ಎಂದು ಸ್ವರ್ಗ ನಿವಾಸಿಗಳು ಪರಿಗಣಿಸಿದ್ದಾರೆ. ಹೀಗಾಗಿ, ಬಿಸಿ ನೀರನ್ನು ಕೊಡೋಕೆ ಅವರು ಇಷ್ಟಪಡುತ್ತಿಲ್ಲ. ಇದರಿಂದ ಇಬ್ಬರ ಮಧ್ಯೆ ಕಿತ್ತಾಟ ಆಗಿದೆ. ಮಾತಿಗೆ ಮಾತು ಬೆಳೆದಿದೆ.

ಬಿಗ್ ಬಾಸ್ ಮನೆಯಲ್ಲಿ ಮೊದಲ ದಿನವೇ ಕೂಗಾಟ, ಗೊಂದಲ; ರಿಪೀಟ್ ಆಗುತ್ತಾ ಕಳೆದ ಸೀಸನ್?
ಬಿಗ್ ಬಾಸ್
Follow us
|

Updated on: Oct 01, 2024 | 6:56 AM

‘ಬಿಗ್ ಬಾಸ್ ಕನ್ನಡ ಸೀಸನ್ 10’ರಲ್ಲಿ ಭರ್ಜರಿ ದ್ವೇಷ ಹುಟ್ಟಿಕೊಂಡಿತ್ತು. ಸ್ಪರ್ಧಿಗಳು ಪರಸ್ಪರ ಕಿತ್ತಾಡಿಕೊಂಡಿದ್ದರು. ಈಗ ಈ ದ್ವೇಷದ ಬೀಜ ಮೊದಲ ದಿನವೇ ಮೊಳಕೆ ಒಡೆದಿದೆ. ಬಿಸಿನೀರು ಹಾಗೂ ತಣ್ಣೀರಿನ ವಿಚಾರಕ್ಕೆ ಮನೆ ಮಂದಿ ಕಿತ್ತಾಡಿಕೊಂಡಿದ್ದಾರೆ. ಕಳೆದ ಸೀಸನ್ ಇದು ರಿಪೀಟ್ ಆಗುತ್ತದೆಯಾ ಎಂಬುದನ್ನು ಕಾದು ನೋಡಬೇಕಿದೆ.

‘ಬಿಗ್ ಬಾಸ್’ ಮನೆಯಲ್ಲಿ 17 ಸ್ಪರ್ಧಿಗಳು ಎಂಟ್ರಿ ಪಡೆದಿದ್ದಾರೆ. ಅನುಷಾ ರೈ, ಧರ್ಮಕೀರ್ತಿರಾಜ್, ಲಾಯರ್ ಜಗದೀಶ್, ಭವ್ಯಾ ಗೌಡ, ಯಮುನಾ ಶ್ರೀನಿಧಿ, ಧನರಾಜ್ ಆಚಾರ್, ಗೌತಮಿ ಜಾಧವ್, ಶಿಶಿರ್, ತ್ರಿವಿಕ್ರಂ, ಹಂಸ, ಮಾನಸಾ, ಗೋಲ್ಡ್ ಸುರೇಶ್, ಐಶ್ವರ್ಯಾ ಸಿಂಧೋಗಿ, ಚೈತ್ರಾ ಕುಂದಾಪುರ್, ಉಗ್ರಂ ಮಂಜು, ರಂಜಿತ್ ಕುಮಾರ್, ಮೋಕ್ಷಿತಾ ಪೈ, ಬಿಗ್ ಬಾಸ್ ಮನೆಯಲ್ಲಿ ಇದ್ದಾರೆ. ಇದರಲ್ಲಿ ಒಂದಷ್ಟು ಮಂದಿ ಸ್ವರ್ಗದಲ್ಲಿ ಹಾಯಾಗಿದ್ದರೆ, ಒಂದಷ್ಟು ಮಂದಿ ನರಕದಲ್ಲಿ ಇದ್ದಾರೆ.

ನರಕದಲ್ಲಿ ಇರೋರಿಗೆ ಬಿಸಿನೀರು ಬೇಕಾಗಿದೆ. ಇದನ್ನು ಸೌಕರ್ಯ ಎಂದು ಸ್ವರ್ಗ ನಿವಾಸಿಗಳು ಪರಿಗಣಿಸಿದ್ದಾರೆ. ಹೀಗಾಗಿ, ಬಿಸಿ ನೀರನ್ನು ಕೊಡೋಕೆ ಅವರು ಇಷ್ಟಪಡುತ್ತಿಲ್ಲ. ಇದರಿಂದ ಇಬ್ಬರ ಮಧ್ಯೆ ಕಿತ್ತಾಟ ಆಗಿದೆ. ಮಾತಿಗೆ ಮಾತು ಬೆಳೆದಿದೆ. ಅಷ್ಟೇ ಅಲ್ಲ, ಇದನ್ನು ಉದ್ದೇಶಪೂರ್ವಕವಾಗಿ ಮಾಡಲಾಗುತ್ತಿದೆ ಎಂದು ಕೆಲ ನರಕ ನಿವಾಸಿಗಳು ಭಾವಿಸಿದ್ದಾರೆ.

‘ನಮ್ಮ ಕೈಯಲ್ಲಿ ಮಿಸ್ಟೇಕ್ ಮಾಡಿಸೋಕೆ ಅವರು ಪ್ಲ್ಯಾನ್ ಮಾಡಿಸುತ್ತಾರೆ. ಎಲ್ಲರೂ ಹುಷಾರಾಗಿರಿ. ಈಗ ಆಟ ಶುರು’ ಎಂದು ಉಗ್ರಂ ಮಂಜು ಅವರು ಹೇಳಿದ್ದಾರೆ. ಎಲ್ಲರೂ ಸಣ್ಣ ಸಣ್ಣ ವಿಚಾರಕ್ಕೆ ದೊಡ್ಡ ಮಟ್ಟದ ಗೊಂದಲ ಮಾಡಿಕೊಳ್ಳುತ್ತಿದ್ದು, ಸಾಕಷ್ಟು ಕಿತ್ತಾಡಿಕೊಳ್ಳುತ್ತಿದ್ದಾರೆ. ಯಮುನಾ ಶ್ರೀನಿಧಿ ಹಾಗೂ ಚೈತ್ರಾ ಮಧ್ಯೆ ಮಾತಿನ ಚಕಮಕಿ ನಡೆದಿದೆ. ಚೈತ್ರಾ ಹಣ್ಣನ್ನು ತಿಂದು ರೂಲ್ಸ್ ಬ್ರೇಕ್ ಮಾಡಿದ್ದಾರೆ.

ಇದನ್ನೂ ಓದಿ: ‘ಜೈಲಿನಲ್ಲೂ ಬಿಗ್ ಬಾಸ್ ನೋಡ್ತಾರೆ’: ಈ ಮಾತು ವಿವಾದ ಆಗತ್ತೆ ಎಂದಿದ್ದಕ್ಕೆ ಸುದೀಪ್ ಹೇಳಿದ್ದೇನು?

ಇನ್ನು, ಲಾಯರ್ ಎನಿಸಿಕೊಂಡಿರೋ ಜಗದೀಶ್ ಅವರು ಮೊದಲ ದಿನವೇ ರೂಲ್ಸ್ ಬ್ರೇಕ್ ಮಾಡಿದ್ದಾರೆ. ನರಕ ನಿವಾಸಿಗಳು ಮನೆಗೆಲಸ ಮಾಡಬೇಕಿತ್ತು. ಈ ವೇಳೆ ಚೈತ್ರಾ ಹಾಗೂ ಜಗದೀಶ್ ಅವರನ್ನು ಕೆಲಸಕ್ಕೆ ನೇಮಿಸಲಾಯಿತು. ಚೈತ್ರಾ ಸರಿಯಾಗಿ ಶುಚಿಮಾಡಿಲ್ಲ ಎಂದು ಜಗದೀಶ್ ಅವರೇ ಶುಚಿಮಾಡಿ ನಿಯಮ ಬ್ರೇಕ್ ಮಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ರಾಹುಲ್ ಗಾಂಧಿ ಕಾರಿನ ಪಕ್ಕ ಬೈಕ್​ನಲ್ಲಿ ಕೋಲು ಹಿಡಿದು ಬಂದ ವ್ಯಕ್ತಿ
ರಾಹುಲ್ ಗಾಂಧಿ ಕಾರಿನ ಪಕ್ಕ ಬೈಕ್​ನಲ್ಲಿ ಕೋಲು ಹಿಡಿದು ಬಂದ ವ್ಯಕ್ತಿ
ಪೊಲೀಸ್ ಠಾಣೆ ಮುಂದೆ ಯುವಕನ ಹೈಡ್ರಾಮಾ: ಕೊನೆಗೆ ಪೊಲೀಸ್​ ಮಾಡಿದ್ದೇನು?
ಪೊಲೀಸ್ ಠಾಣೆ ಮುಂದೆ ಯುವಕನ ಹೈಡ್ರಾಮಾ: ಕೊನೆಗೆ ಪೊಲೀಸ್​ ಮಾಡಿದ್ದೇನು?
ಆಂಧ್ರಪ್ರದೇಶದ ಎಟಿಎಂನಲ್ಲಿ ಹಾವು ಕಂಡು ಬೆಚ್ಚಿಬಿದ್ದ ಜನ
ಆಂಧ್ರಪ್ರದೇಶದ ಎಟಿಎಂನಲ್ಲಿ ಹಾವು ಕಂಡು ಬೆಚ್ಚಿಬಿದ್ದ ಜನ
ರೆಡ್ಮಿ ಲೇಟೆಸ್ಟ್ ಸ್ಮಾರ್ಟ್​​ಫೋನ್ ಮಾರುಕಟ್ಟೆಗೆ ಗ್ರ್ಯಾಂಡ್ ಎಂಟ್ರಿ!
ರೆಡ್ಮಿ ಲೇಟೆಸ್ಟ್ ಸ್ಮಾರ್ಟ್​​ಫೋನ್ ಮಾರುಕಟ್ಟೆಗೆ ಗ್ರ್ಯಾಂಡ್ ಎಂಟ್ರಿ!
ಜಿಗಣಿಯಲ್ಲಿ ಪಾಕಿಸ್ತಾನ ಪ್ರಜೆ ಬಂಧನ: ಗೃಹ ಸಚಿವ ಪರಮೇಶ್ವರ್ ಹೇಳಿದ್ದಿಷ್ಟು​
ಜಿಗಣಿಯಲ್ಲಿ ಪಾಕಿಸ್ತಾನ ಪ್ರಜೆ ಬಂಧನ: ಗೃಹ ಸಚಿವ ಪರಮೇಶ್ವರ್ ಹೇಳಿದ್ದಿಷ್ಟು​
ಡಿಸಿಎಂ ಡಿ.ಕೆ ಶಿವಕುಮಾರ್ ಸುದ್ದಿಗೋಷ್ಠಿ ಲೈವ್ ​
ಡಿಸಿಎಂ ಡಿ.ಕೆ ಶಿವಕುಮಾರ್ ಸುದ್ದಿಗೋಷ್ಠಿ ಲೈವ್ ​
ಅತ್ಯದ್ಭುತ ಕ್ಯಾಚ್ ಹಿಡಿದು ಎಲ್ಲರನ್ನು ನಿಬ್ಬೆರಗಾಗಿಸಿದ ಸಿರಾಜ್
ಅತ್ಯದ್ಭುತ ಕ್ಯಾಚ್ ಹಿಡಿದು ಎಲ್ಲರನ್ನು ನಿಬ್ಬೆರಗಾಗಿಸಿದ ಸಿರಾಜ್
ಪರಮೇಶ್ವರ್ ಭೇಟಿಯ ರಹಸ್ಯ ಬಿಚ್ಚಿಟ್ಟ ಡಿಕೆ ಶಿವಕುಮಾರ್: ಏನದು?
ಪರಮೇಶ್ವರ್ ಭೇಟಿಯ ರಹಸ್ಯ ಬಿಚ್ಚಿಟ್ಟ ಡಿಕೆ ಶಿವಕುಮಾರ್: ಏನದು?
KSRTC ಬಸ್​ ಅಪಘಾತ, ಪವಾಡ ಸದೃಶ್ಯ ರೀತಿಯಲ್ಲಿ ಪಾರಾದ ಬೈಕ್​ ಸವಾರ
KSRTC ಬಸ್​ ಅಪಘಾತ, ಪವಾಡ ಸದೃಶ್ಯ ರೀತಿಯಲ್ಲಿ ಪಾರಾದ ಬೈಕ್​ ಸವಾರ
ತಾಂತ್ರಿಕ ದೋಷ, ಕೋಲಾರ ಕೆರೆಯಲ್ಲಿ ಲ್ಯಾಂಡ್ ಆದ ಹೆಲಿಕಾಪ್ಟರ್
ತಾಂತ್ರಿಕ ದೋಷ, ಕೋಲಾರ ಕೆರೆಯಲ್ಲಿ ಲ್ಯಾಂಡ್ ಆದ ಹೆಲಿಕಾಪ್ಟರ್