AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್ ಬಾಸ್ ಮನೆಯಲ್ಲಿ ಮೊದಲ ದಿನವೇ ಕೂಗಾಟ, ಗೊಂದಲ; ರಿಪೀಟ್ ಆಗುತ್ತಾ ಕಳೆದ ಸೀಸನ್?

ಬಿಗ್ ಬಾಸ್ ಮನೆಯ ನರಕದಲ್ಲಿ ಇರೋರಿಗೆ ಬಿಸಿನೀರು ಬೇಕಾಗಿದೆ. ಇದನ್ನು ಸೌಕರ್ಯ ಎಂದು ಸ್ವರ್ಗ ನಿವಾಸಿಗಳು ಪರಿಗಣಿಸಿದ್ದಾರೆ. ಹೀಗಾಗಿ, ಬಿಸಿ ನೀರನ್ನು ಕೊಡೋಕೆ ಅವರು ಇಷ್ಟಪಡುತ್ತಿಲ್ಲ. ಇದರಿಂದ ಇಬ್ಬರ ಮಧ್ಯೆ ಕಿತ್ತಾಟ ಆಗಿದೆ. ಮಾತಿಗೆ ಮಾತು ಬೆಳೆದಿದೆ.

ಬಿಗ್ ಬಾಸ್ ಮನೆಯಲ್ಲಿ ಮೊದಲ ದಿನವೇ ಕೂಗಾಟ, ಗೊಂದಲ; ರಿಪೀಟ್ ಆಗುತ್ತಾ ಕಳೆದ ಸೀಸನ್?
ಬಿಗ್ ಬಾಸ್
ರಾಜೇಶ್ ದುಗ್ಗುಮನೆ
|

Updated on: Oct 01, 2024 | 6:56 AM

Share

‘ಬಿಗ್ ಬಾಸ್ ಕನ್ನಡ ಸೀಸನ್ 10’ರಲ್ಲಿ ಭರ್ಜರಿ ದ್ವೇಷ ಹುಟ್ಟಿಕೊಂಡಿತ್ತು. ಸ್ಪರ್ಧಿಗಳು ಪರಸ್ಪರ ಕಿತ್ತಾಡಿಕೊಂಡಿದ್ದರು. ಈಗ ಈ ದ್ವೇಷದ ಬೀಜ ಮೊದಲ ದಿನವೇ ಮೊಳಕೆ ಒಡೆದಿದೆ. ಬಿಸಿನೀರು ಹಾಗೂ ತಣ್ಣೀರಿನ ವಿಚಾರಕ್ಕೆ ಮನೆ ಮಂದಿ ಕಿತ್ತಾಡಿಕೊಂಡಿದ್ದಾರೆ. ಕಳೆದ ಸೀಸನ್ ಇದು ರಿಪೀಟ್ ಆಗುತ್ತದೆಯಾ ಎಂಬುದನ್ನು ಕಾದು ನೋಡಬೇಕಿದೆ.

‘ಬಿಗ್ ಬಾಸ್’ ಮನೆಯಲ್ಲಿ 17 ಸ್ಪರ್ಧಿಗಳು ಎಂಟ್ರಿ ಪಡೆದಿದ್ದಾರೆ. ಅನುಷಾ ರೈ, ಧರ್ಮಕೀರ್ತಿರಾಜ್, ಲಾಯರ್ ಜಗದೀಶ್, ಭವ್ಯಾ ಗೌಡ, ಯಮುನಾ ಶ್ರೀನಿಧಿ, ಧನರಾಜ್ ಆಚಾರ್, ಗೌತಮಿ ಜಾಧವ್, ಶಿಶಿರ್, ತ್ರಿವಿಕ್ರಂ, ಹಂಸ, ಮಾನಸಾ, ಗೋಲ್ಡ್ ಸುರೇಶ್, ಐಶ್ವರ್ಯಾ ಸಿಂಧೋಗಿ, ಚೈತ್ರಾ ಕುಂದಾಪುರ್, ಉಗ್ರಂ ಮಂಜು, ರಂಜಿತ್ ಕುಮಾರ್, ಮೋಕ್ಷಿತಾ ಪೈ, ಬಿಗ್ ಬಾಸ್ ಮನೆಯಲ್ಲಿ ಇದ್ದಾರೆ. ಇದರಲ್ಲಿ ಒಂದಷ್ಟು ಮಂದಿ ಸ್ವರ್ಗದಲ್ಲಿ ಹಾಯಾಗಿದ್ದರೆ, ಒಂದಷ್ಟು ಮಂದಿ ನರಕದಲ್ಲಿ ಇದ್ದಾರೆ.

ನರಕದಲ್ಲಿ ಇರೋರಿಗೆ ಬಿಸಿನೀರು ಬೇಕಾಗಿದೆ. ಇದನ್ನು ಸೌಕರ್ಯ ಎಂದು ಸ್ವರ್ಗ ನಿವಾಸಿಗಳು ಪರಿಗಣಿಸಿದ್ದಾರೆ. ಹೀಗಾಗಿ, ಬಿಸಿ ನೀರನ್ನು ಕೊಡೋಕೆ ಅವರು ಇಷ್ಟಪಡುತ್ತಿಲ್ಲ. ಇದರಿಂದ ಇಬ್ಬರ ಮಧ್ಯೆ ಕಿತ್ತಾಟ ಆಗಿದೆ. ಮಾತಿಗೆ ಮಾತು ಬೆಳೆದಿದೆ. ಅಷ್ಟೇ ಅಲ್ಲ, ಇದನ್ನು ಉದ್ದೇಶಪೂರ್ವಕವಾಗಿ ಮಾಡಲಾಗುತ್ತಿದೆ ಎಂದು ಕೆಲ ನರಕ ನಿವಾಸಿಗಳು ಭಾವಿಸಿದ್ದಾರೆ.

‘ನಮ್ಮ ಕೈಯಲ್ಲಿ ಮಿಸ್ಟೇಕ್ ಮಾಡಿಸೋಕೆ ಅವರು ಪ್ಲ್ಯಾನ್ ಮಾಡಿಸುತ್ತಾರೆ. ಎಲ್ಲರೂ ಹುಷಾರಾಗಿರಿ. ಈಗ ಆಟ ಶುರು’ ಎಂದು ಉಗ್ರಂ ಮಂಜು ಅವರು ಹೇಳಿದ್ದಾರೆ. ಎಲ್ಲರೂ ಸಣ್ಣ ಸಣ್ಣ ವಿಚಾರಕ್ಕೆ ದೊಡ್ಡ ಮಟ್ಟದ ಗೊಂದಲ ಮಾಡಿಕೊಳ್ಳುತ್ತಿದ್ದು, ಸಾಕಷ್ಟು ಕಿತ್ತಾಡಿಕೊಳ್ಳುತ್ತಿದ್ದಾರೆ. ಯಮುನಾ ಶ್ರೀನಿಧಿ ಹಾಗೂ ಚೈತ್ರಾ ಮಧ್ಯೆ ಮಾತಿನ ಚಕಮಕಿ ನಡೆದಿದೆ. ಚೈತ್ರಾ ಹಣ್ಣನ್ನು ತಿಂದು ರೂಲ್ಸ್ ಬ್ರೇಕ್ ಮಾಡಿದ್ದಾರೆ.

ಇದನ್ನೂ ಓದಿ: ‘ಜೈಲಿನಲ್ಲೂ ಬಿಗ್ ಬಾಸ್ ನೋಡ್ತಾರೆ’: ಈ ಮಾತು ವಿವಾದ ಆಗತ್ತೆ ಎಂದಿದ್ದಕ್ಕೆ ಸುದೀಪ್ ಹೇಳಿದ್ದೇನು?

ಇನ್ನು, ಲಾಯರ್ ಎನಿಸಿಕೊಂಡಿರೋ ಜಗದೀಶ್ ಅವರು ಮೊದಲ ದಿನವೇ ರೂಲ್ಸ್ ಬ್ರೇಕ್ ಮಾಡಿದ್ದಾರೆ. ನರಕ ನಿವಾಸಿಗಳು ಮನೆಗೆಲಸ ಮಾಡಬೇಕಿತ್ತು. ಈ ವೇಳೆ ಚೈತ್ರಾ ಹಾಗೂ ಜಗದೀಶ್ ಅವರನ್ನು ಕೆಲಸಕ್ಕೆ ನೇಮಿಸಲಾಯಿತು. ಚೈತ್ರಾ ಸರಿಯಾಗಿ ಶುಚಿಮಾಡಿಲ್ಲ ಎಂದು ಜಗದೀಶ್ ಅವರೇ ಶುಚಿಮಾಡಿ ನಿಯಮ ಬ್ರೇಕ್ ಮಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ