AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೊದಲ ದಿನವೇ ನರಕವಾಯಿತು ಸ್ವರ್ಗ; ರೂಲ್ಸ್ ಬ್ರೇಕ್ ಮಾಡಿದವರಿಗೆ ಯಾರೂ ಊಹಿಸದ ಶಿಕ್ಷೆ

‘ಬಿಗ್ ಬಾಸ್ ಕನ್ನಡ ಸೀಸನ್ 10’ರಲ್ಲಿ ಭರ್ಜರಿ ದ್ವೇಷ ಹುಟ್ಟಿಕೊಂಡಿತ್ತು. ಸ್ಪರ್ಧಿಗಳು ಪರಸ್ಪರ ಕಿತ್ತಾಡಿಕೊಂಡಿದ್ದರು. ಈಗ ಈ ದ್ವೇಷದ ಬೀಜ ಮೊದಲ ದಿನವೇ ಮೊಳಕೆ ಒಡೆದಿದೆ. ಬಿಸಿನೀರು ಹಾಗೂ ತಣ್ಣೀರಿನ ವಿಚಾರಕ್ಕೆ ಮನೆ ಮಂದಿ ಕಿತ್ತಾಡಿಕೊಂಡಿದ್ದಾರೆ. ಇದರಿಂದ ಮನೆಯವರಿಗೆ ಶಿಕ್ಷೆ ಆಗಿದೆ.

ಮೊದಲ ದಿನವೇ ನರಕವಾಯಿತು ಸ್ವರ್ಗ; ರೂಲ್ಸ್ ಬ್ರೇಕ್ ಮಾಡಿದವರಿಗೆ ಯಾರೂ ಊಹಿಸದ ಶಿಕ್ಷೆ
ಬಿಗ್ ಬಾಸ್
ರಾಜೇಶ್ ದುಗ್ಗುಮನೆ
|

Updated on: Oct 01, 2024 | 7:29 AM

Share

‘ಬಿಗ್ ಬಾಸ್ ಕನ್ನಡ ಸೀಸನ್ 11’ ಮನೆ ಮೊದಲ ದಿನವೇ ಎಲ್ಲವೂ ಅಲ್ಲೋಲ ಕಲ್ಲೋಲ ಆಗಿದೆ. ಸ್ಪರ್ಧಿಗಳ ಮಧ್ಯೆ ಸಾಕಷ್ಟು ಗೊಂದಲ ಏರ್ಪಟ್ಟಿದೆ. ಸಾಲು ಸಾಲು ರೂಲ್ಸ್​ಗಳನ್ನು ಬ್ರೇಕ್ ಮಾಡಲಾಗಿದೆ. ಇದರಿಂದ ಮನೆ ಮಂದಿ ಸಾಕಷ್ಟು ಸಂಕಷ್ಟ ಅನುಭವಿಸಬೇಕಾಗಿದೆ. ಎಲ್ಲಕಿಂತ ಮುಖ್ಯವಾಗಿ ಎಲ್ಲರಿಗೂ ಕಾನೂನು ಹೇಳುವ ಜಗದೀಶ್ ಅವರೇ ನಿಯಮ ಮುರಿದಿದ್ದಾರೆ. ಇದರಿಂದ ಮನೆ ಮಂದಿ ಕಠಿಣ ಶಿಕ್ಷೆ ಅನುಭವಿಸಿದ್ದಾರೆ.

‘ಬಿಗ್ ಬಾಸ್​’ನಲ್ಲಿರೋ ಸಣ್ಣ ಸಣ್ಣ ನಿಯಮಗಳನ್ನು ಎಲ್ಲರೂ ಪಾಲಿಸಲೇಬೇಕು. ಕೆಲವೊಮ್ಮೆ ಬೇರೆಯವರು ಹೇಳಿದರೂ ಅದನ್ನು ಅರ್ಥ ಮಾಡಿಸಿಕೊಳ್ಳುವ ಮನಸ್ಥಿತಿಯಲ್ಲಿ ಯಾರೂ ಇರುವುದಿಲ್ಲ. ಈಗ ಆಗಿದ್ದೂ ಅದೇ. ನರಕವಾಸಿಗಳಿಗೆ ಮನೆಯ ಯಾವುದೇ ಸೌಲಭ್ಯ ಕೊಡುವಂತೆ ಇಲ್ಲ. ಆದಾಗ್ಯೂ ನಿಯಮ ಬ್ರೇಕ್ ಮಾಡಿ ನರಕವಾಸಿಗಳಿಗೆ ಲಾಯರ್ ಜಗದೀಶ್ ಅವರು ಬಿಸಿ ನೀರು ಕೊಟ್ಟರು. ಇದರ ಪರಿಣಾಮ ಸ್ವರ್ಗವಾಸಿಗಳ ಮೇಲೆ ಆಗಿದೆ.

‘ಮನೆಯಲ್ಲಿ ದಿನಸಿ ಸಾಮಗ್ರಿಗಳ ಜೊತೆ ಒಂದಷ್ಟು ಲಕ್ಷುರಿ ಸಾಮಗ್ರಿಗಳು ಇದ್ದವು. ಸ್ವರ್ಗ ಹಾಗೂ ನರಕ ನಿವಾಸಗಿಗಳಿಗೆ ನೀಡಿದ್ದ ನಿಯಮಗಳ ಪೈಕಿ ಬಿಸಿನೀರಿನ ನಿಯಮ ಬ್ರೇಕ್ ಆಗಿದೆ. ಇದನ್ನು ಬಿಗ್ ಬಾಸ್ ಗಮನಿಸಿದ್ದಾರೆ. ಹೀಗಾಗಿ, ಸ್ವರ್ಗ ನಿವಾಸಿಗಳಿಗೆ ಮೀಸಲಿರುವ ಲಕ್ಷುರಿ ಸಾಮಗ್ರಿಗಳಾದ ಪನೀರ್, ಚಿಪ್ಸ್, ಕಾಫಿ, ಐಸ್​ಕ್ರೀಮ್, ಚಾಕೋಲೇಟ್, ತುಪ್ಪ ಸೇರಿ ಎಲ್ಲಾ ಲಕ್ಷುರಿ ವಸ್ತುಗಳನ್ನು ಈಗಲೇ ಹಿಂದಿರುಗಿಸಲೇಬೇಕು. ಇದು ಬಿಗ್ ಬಾಸ್ ಆದೇಶ. ಇದನ್ನು ಪಾಲಿಸಲೇಬೇಕು’ ಎಂದು ಧನರಾಜ್ ಬಿಗ್ ಬಾಸ್ ಆದೇಶ ಓದಿದರು.

ಇದನ್ನೂ ಓದಿ: ಬಿಗ್ ಬಾಸ್ ಮನೆಯಲ್ಲಿ ಮೊದಲ ದಿನವೇ ಕೂಗಾಟ, ಗೊಂದಲ; ರಿಪೀಟ್ ಆಗುತ್ತಾ ಕಳೆದ ಸೀಸನ್?

ಇದಾದ ಬಳಿಕ ತಾವೇ ಇದರ ಜವಾಬ್ದಾರಿ ಹೊತ್ತುಕೊಳ್ಳೋದಾಗಿ ಜಗದೀಶ್ ಹೇಳಿದರು. ಆದರೆ, ಎಲ್ಲಾ ವಸ್ತುಗಳನ್ನು ತೆಗೆದುಕೊಂಡು ಹೋದಮೇಲೆ ಏನು ಪ್ರಯೋಜನ ಎನ್ನುವ ಮಾತು ಮನೆಯವರಿಂದ ಕೇಳಿ ಬಂತು. ಸದ್ಯ, ಜಗದೀಶ್ ವಿರುದ್ಧ ಎಲ್ಲರೂ ಸಿಟ್ಟಾಗಿದ್ದಾರೆ. ಈ ಶಿಕ್ಷೆಯನ್ನು ಯಾರೂ ಊಹಿಸಿರಲಿಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್