AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಬಿಗ್ ಬಾಸ್ ಕನ್ನಡ ಸೀಸನ್ 11’ರ ವಿನ್ನರ್ ಹನುಮಂತ; ಮೊದಲೇ ಸೋರಿಕೆ ಆಯ್ತು ಮಾಹಿತಿ

Bigg Boss Kannada Season 11 Winner: ಬಿಗ್ ಬಾಸ್ ಕನ್ನಡ ಸೀಸನ್ 11ರ ವಿನ್ನರ್ ಯಾರು ಎಂಬ ಬಗ್ಗೆ ಸಾಕಷ್ಟು ಚರ್ಚೆ ನಡೆಯುತ್ತಿದೆ. ಹನುಮಂತ ಅವರನ್ನು ವಿನ್ನರ್ ಎಂದು ವಿಕಿಪೀಡಿಯಾದಲ್ಲಿ ತಪ್ಪಾಗಿ ಅಪ್ಡೇಟ್ ಮಾಡಲಾಗಿದೆ ಎಂದು ಹೇಳಲಾಗುತ್ತಿದೆ. ಸೋಶಿಯಲ್ ಮೀಡಿಯಾದಲ್ಲಿ ಹಲವಾರು ವದಂತಿಗಳು ಹರಡುತ್ತಿದ್ದರೂ, ನಿಜವಾದ ವಿನ್ನರ್ ಯಾರೆಂದು ಶೀಘ್ರದಲ್ಲಿ ತಿಳಿಯಲಿದೆ.

‘ಬಿಗ್ ಬಾಸ್ ಕನ್ನಡ ಸೀಸನ್ 11’ರ ವಿನ್ನರ್ ಹನುಮಂತ; ಮೊದಲೇ ಸೋರಿಕೆ ಆಯ್ತು ಮಾಹಿತಿ
ಹನುಮಂತ
ರಾಜೇಶ್ ದುಗ್ಗುಮನೆ
|

Updated on:Jan 26, 2025 | 8:02 PM

Share

‘ಬಿಗ್ ಬಾಸ್ ಕನ್ನಡ ಸೀಸನ್ 11ರಲ್ಲಿ ಯಾರು ಗೆಲ್ಲುತ್ತಾರೆ, 50 ಲಕ್ಷ ರೂಪಾಯಿ ಹಣವನ್ನು ಯಾರು ತೆಗೆದುಕೊಂಡು ಹೋಗುತ್ತಾರೆ ಎಂಬ ಬಗ್ಗೆ ಚರ್ಚೆ ಜೋರಾಗಿದೆ. ಸೋಶಿಯಲ್ ಮೀಡಿಯಾದಲ್ಲಿ ಈ ಬಗ್ಗೆ ಸಾಕಷ್ಟು ವದಂತಿಗಳು ಕೂಡ ಹರಡುತ್ತಿವೆ. ಹನುಮಂತ ಅವರು ವಿನ್ನರ್ ಎಂದು ಅವರ ಅಭಿಮಾನಿಗಳು ಹೇಳಿದರೆ, ತ್ರಿವಿಕ್ರಂ ಅವರು ವಿನ್ನರ್ ಎಂದು ಅವರ ಫ್ಯಾನ್ಸ್ ಹೇಳಿಕೊಳ್ಳುತ್ತಿದ್ದಾರೆ. ಈ ಮಧ್ಯೆ ಹನುಮಂತ ಅವರು ಬಿಗ್ ಬಾಸ್ ವಿನ್ನರ್ ಎಂದು ವಿಕಿಪೀಡಿಯಾದಲ್ಲಿ ಮಾಹಿತಿ ಅಪ್​ಡೇಟ್ ಮಾಡಲಾಗಿದೆ.

‘ಬಿಗ್ ಬಾಸ್ ಕನ್ನಡ ಸೀಸನ್ 11’ಕ್ಕೆ ಪ್ರತ್ಯೇಕ ವಿಕಿಪೀಡಿಯಾ ಪೇಜ್ ಕ್ರಿಯೇಟ್ ಆಗಿದೆ. ಮೊದಲ ದಿನದಿಂದ ಹಿಡಿದು, ಇಲ್ಲಿಯವರೆಗೆ ಅಲ್ಲಿ ಯಾರು ಎಲಿಮಿನೇಟ್ ಆದರು, ಯಾರು ವೈಲ್ಡ್ ಕಾರ್ಡ್ ಮೂಲಕ ಎಂಟ್ರಿ ಕೊಟ್ಟರು ಎಂಬ ಬಗ್ಗೆ ಮಾಹಿತಿಯನ್ನು ಅಪ್​ಡೇಟ್ ಮಾಡುತ್ತಾ ಬರಲಾಗಿದೆ. ವಿನ್ನರ್ ಯಾರು ಎಂದು ಘೋಷಿಸುವ ಕೆಲವೇ ಗಂಟೆಗಳ ಮೊದಲು ವಿಕಿಪೀಡಿಯಾದಲ್ಲಿ ವಿನ್ನರ್ ಹೆಸರನ್ನು ಅಪ್​​ಡೇಟ್ ಮಾಡಲಾಗಿದೆ.

ಹನುಮಂತ ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 11’ರ ವಿನ್ನರ್ ಎಂದು ಮಾಹಿತಿ ಬರೆಯಲಾಗಿದೆ. ಮೋಕ್ಷಿತಾ ಅವರು ರನ್ನರ್ ಅಪ್ ಎಂದು ತಿಳಿಸಲಾಗಿದೆ. ಮಂಜು ಅವರು ನಾಲ್ಕನೇ ರನ್ನರ್ ಅಪ್ ಎಂದು ಮಾಹಿತಿಯಲ್ಲಿ ತಿಳಿಸಲಾಗಿದೆ. ಸದ್ಯ ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ ಜೋರಾಗಿದೆ.

ಇದನ್ನೂ ಓದಿ: ಬಿಗ್​ಬಾಸ್​ನಲ್ಲಿ ಇತಿಹಾಸ ಸೃಷ್ಟಿಸಿದ ಹನುಮಂತು, ರಜತ್, ಭೇಷ್ ಎಂದ ಕಿಚ್ಚ

ಹಾಗಾದರೆ ನಿಜಕ್ಕೂ ಹನುಮಂತ ಅವರೇ ವಿನ್ನರ್? ಈ ಪ್ರಶ್ನೆಗೆ ಇನ್ನು ಕೆಲವೇ ಗಂಟೆಗಳಲ್ಲಿ ಉತ್ತರ ಸಿಗಲಿದೆ. ವಿಕಿಪೀಡಿಯಾ ಮಾಹಿತಿಯನ್ನು ಯಾರು, ಹೇಗೆ ಬೇಕಿದ್ದರೂ ಅಪ್​​ಡೇಟ್ ಮಾಡಬುದು. ಹೀಗಾಗಿ, ಇದರಲ್ಲಿ ಇರೋ ಮಾಹಿತಿ ಸಂಪೂರ್ಣ ಸತ್ಯ ಎಂದು ನಂಬಲು ಸಾಧ್ಯ ಇಲ್ಲ. ಅದೇ ರೀತಿ ‘ಬಿಗ್ ಬಾಸ್ ಕನ್ನಡ ಸೀಸನ್ 11’ರ ವಿನ್ನರ್ ಹನುಮಂತ ಎಂಬ ಮಾಹಿತಿಯನ್ನೂ ಈಗಲೇ ನಂಬಲು ಸಾಧ್ಯವಿಲ್ಲ. ಈಗಾಗಲೇ ಭವ್ಯಾ ಅವರು ಎಲಿಮಿನೇಟ್ ಆಗಿದ್ದಾರೆ. ರಜತ್, ಮಂಜು ಹಾಗೂ ಮೋಕ್ಷಿತಾ ಕೂಡ ಎಲಿಮಿನೇಟ್ ಆಗಿದ್ದಾರೆ ಎಂದು ಹೇಳಲಾಗುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 7:36 pm, Sun, 26 January 25

Follow Us
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ