AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಬಿಗ್ ಬಾಸ್ ಕನ್ನಡ ಸೀಸನ್ 11’ರ ವಿನ್ನರ್ ಹನುಮಂತ; ಮೊದಲೇ ಸೋರಿಕೆ ಆಯ್ತು ಮಾಹಿತಿ

Bigg Boss Kannada Season 11 Winner: ಬಿಗ್ ಬಾಸ್ ಕನ್ನಡ ಸೀಸನ್ 11ರ ವಿನ್ನರ್ ಯಾರು ಎಂಬ ಬಗ್ಗೆ ಸಾಕಷ್ಟು ಚರ್ಚೆ ನಡೆಯುತ್ತಿದೆ. ಹನುಮಂತ ಅವರನ್ನು ವಿನ್ನರ್ ಎಂದು ವಿಕಿಪೀಡಿಯಾದಲ್ಲಿ ತಪ್ಪಾಗಿ ಅಪ್ಡೇಟ್ ಮಾಡಲಾಗಿದೆ ಎಂದು ಹೇಳಲಾಗುತ್ತಿದೆ. ಸೋಶಿಯಲ್ ಮೀಡಿಯಾದಲ್ಲಿ ಹಲವಾರು ವದಂತಿಗಳು ಹರಡುತ್ತಿದ್ದರೂ, ನಿಜವಾದ ವಿನ್ನರ್ ಯಾರೆಂದು ಶೀಘ್ರದಲ್ಲಿ ತಿಳಿಯಲಿದೆ.

‘ಬಿಗ್ ಬಾಸ್ ಕನ್ನಡ ಸೀಸನ್ 11’ರ ವಿನ್ನರ್ ಹನುಮಂತ; ಮೊದಲೇ ಸೋರಿಕೆ ಆಯ್ತು ಮಾಹಿತಿ
ಹನುಮಂತ
ರಾಜೇಶ್ ದುಗ್ಗುಮನೆ
|

Updated on:Jan 26, 2025 | 8:02 PM

Share

‘ಬಿಗ್ ಬಾಸ್ ಕನ್ನಡ ಸೀಸನ್ 11ರಲ್ಲಿ ಯಾರು ಗೆಲ್ಲುತ್ತಾರೆ, 50 ಲಕ್ಷ ರೂಪಾಯಿ ಹಣವನ್ನು ಯಾರು ತೆಗೆದುಕೊಂಡು ಹೋಗುತ್ತಾರೆ ಎಂಬ ಬಗ್ಗೆ ಚರ್ಚೆ ಜೋರಾಗಿದೆ. ಸೋಶಿಯಲ್ ಮೀಡಿಯಾದಲ್ಲಿ ಈ ಬಗ್ಗೆ ಸಾಕಷ್ಟು ವದಂತಿಗಳು ಕೂಡ ಹರಡುತ್ತಿವೆ. ಹನುಮಂತ ಅವರು ವಿನ್ನರ್ ಎಂದು ಅವರ ಅಭಿಮಾನಿಗಳು ಹೇಳಿದರೆ, ತ್ರಿವಿಕ್ರಂ ಅವರು ವಿನ್ನರ್ ಎಂದು ಅವರ ಫ್ಯಾನ್ಸ್ ಹೇಳಿಕೊಳ್ಳುತ್ತಿದ್ದಾರೆ. ಈ ಮಧ್ಯೆ ಹನುಮಂತ ಅವರು ಬಿಗ್ ಬಾಸ್ ವಿನ್ನರ್ ಎಂದು ವಿಕಿಪೀಡಿಯಾದಲ್ಲಿ ಮಾಹಿತಿ ಅಪ್​ಡೇಟ್ ಮಾಡಲಾಗಿದೆ.

‘ಬಿಗ್ ಬಾಸ್ ಕನ್ನಡ ಸೀಸನ್ 11’ಕ್ಕೆ ಪ್ರತ್ಯೇಕ ವಿಕಿಪೀಡಿಯಾ ಪೇಜ್ ಕ್ರಿಯೇಟ್ ಆಗಿದೆ. ಮೊದಲ ದಿನದಿಂದ ಹಿಡಿದು, ಇಲ್ಲಿಯವರೆಗೆ ಅಲ್ಲಿ ಯಾರು ಎಲಿಮಿನೇಟ್ ಆದರು, ಯಾರು ವೈಲ್ಡ್ ಕಾರ್ಡ್ ಮೂಲಕ ಎಂಟ್ರಿ ಕೊಟ್ಟರು ಎಂಬ ಬಗ್ಗೆ ಮಾಹಿತಿಯನ್ನು ಅಪ್​ಡೇಟ್ ಮಾಡುತ್ತಾ ಬರಲಾಗಿದೆ. ವಿನ್ನರ್ ಯಾರು ಎಂದು ಘೋಷಿಸುವ ಕೆಲವೇ ಗಂಟೆಗಳ ಮೊದಲು ವಿಕಿಪೀಡಿಯಾದಲ್ಲಿ ವಿನ್ನರ್ ಹೆಸರನ್ನು ಅಪ್​​ಡೇಟ್ ಮಾಡಲಾಗಿದೆ.

ಹನುಮಂತ ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 11’ರ ವಿನ್ನರ್ ಎಂದು ಮಾಹಿತಿ ಬರೆಯಲಾಗಿದೆ. ಮೋಕ್ಷಿತಾ ಅವರು ರನ್ನರ್ ಅಪ್ ಎಂದು ತಿಳಿಸಲಾಗಿದೆ. ಮಂಜು ಅವರು ನಾಲ್ಕನೇ ರನ್ನರ್ ಅಪ್ ಎಂದು ಮಾಹಿತಿಯಲ್ಲಿ ತಿಳಿಸಲಾಗಿದೆ. ಸದ್ಯ ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ ಜೋರಾಗಿದೆ.

ಇದನ್ನೂ ಓದಿ: ಬಿಗ್​ಬಾಸ್​ನಲ್ಲಿ ಇತಿಹಾಸ ಸೃಷ್ಟಿಸಿದ ಹನುಮಂತು, ರಜತ್, ಭೇಷ್ ಎಂದ ಕಿಚ್ಚ

ಹಾಗಾದರೆ ನಿಜಕ್ಕೂ ಹನುಮಂತ ಅವರೇ ವಿನ್ನರ್? ಈ ಪ್ರಶ್ನೆಗೆ ಇನ್ನು ಕೆಲವೇ ಗಂಟೆಗಳಲ್ಲಿ ಉತ್ತರ ಸಿಗಲಿದೆ. ವಿಕಿಪೀಡಿಯಾ ಮಾಹಿತಿಯನ್ನು ಯಾರು, ಹೇಗೆ ಬೇಕಿದ್ದರೂ ಅಪ್​​ಡೇಟ್ ಮಾಡಬುದು. ಹೀಗಾಗಿ, ಇದರಲ್ಲಿ ಇರೋ ಮಾಹಿತಿ ಸಂಪೂರ್ಣ ಸತ್ಯ ಎಂದು ನಂಬಲು ಸಾಧ್ಯ ಇಲ್ಲ. ಅದೇ ರೀತಿ ‘ಬಿಗ್ ಬಾಸ್ ಕನ್ನಡ ಸೀಸನ್ 11’ರ ವಿನ್ನರ್ ಹನುಮಂತ ಎಂಬ ಮಾಹಿತಿಯನ್ನೂ ಈಗಲೇ ನಂಬಲು ಸಾಧ್ಯವಿಲ್ಲ. ಈಗಾಗಲೇ ಭವ್ಯಾ ಅವರು ಎಲಿಮಿನೇಟ್ ಆಗಿದ್ದಾರೆ. ರಜತ್, ಮಂಜು ಹಾಗೂ ಮೋಕ್ಷಿತಾ ಕೂಡ ಎಲಿಮಿನೇಟ್ ಆಗಿದ್ದಾರೆ ಎಂದು ಹೇಳಲಾಗುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 7:36 pm, Sun, 26 January 25

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ
ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!