AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್​​ಬಾಸ್ ಎಲಿಮಿನೇಷನ್: ವಿಶೇಷ ಅಧಿಕಾರ ಬಳಸಿದ ಸುಧಿ, ಹೊರಬಂದಿದ್ದು ಯಾರು?

Bigg Boss Kannada 12: ಪ್ರತಿ ಭಾನುವಾರ ಬಿಗ್​​ಬಾಸ್ ಮನೆಯಿಂದ ಒಬ್ಬರು ಹೊರ ಹೋಗುತ್ತಾರೆ. ಕಳೆದ ಭಾನುವಾರ ಮಲ್ಲಮ್ಮ ಎಲಿಮಿನೇಟ್ ಆಗಿ ಹೊರಬಂದಿದ್ದರು. ಮಲ್ಲಮ್ಮ ಹೊರಗೆ ಬಂದಿದ್ದು ಹಲವು ವೀಕ್ಷಕರಿಗೆ ಬೇಸರ ತರಿಸಿತ್ತು. ಅದರಿಂದ ಸಾವರಿಸಿಕೊಳ್ಳುವ ಮುಂಚೆಯೇ ಇದೀಗ ಮತ್ತೊಂದು ಎಲಿಮಿನೇಷನ್ ಬಿಗ್​​ಬಾಸ್ ಮನೆಯಲ್ಲಿ ಆಗಿದೆ. ಆದರೆ ಈ ಬಾರಿಯ ಎಲಿಮಿನೇಷನ್​​ಗೆ ಸಖತ್ ಟ್ವಿಸ್ಟ್ ಸಹ ಇತ್ತು ಎಂಬುದು ವಿಶೇಷ.

ಬಿಗ್​​ಬಾಸ್ ಎಲಿಮಿನೇಷನ್: ವಿಶೇಷ ಅಧಿಕಾರ ಬಳಸಿದ ಸುಧಿ, ಹೊರಬಂದಿದ್ದು ಯಾರು?
Bigg Boss Kannada Elimination
ಮಂಜುನಾಥ ಸಿ.
|

Updated on: Nov 09, 2025 | 11:05 PM

Share

ಬಿಗ್​​ಬಾಸ್ ಕನ್ನಡ ಸೀಸನ್ 12ರಲ್ಲಿ (Bigg Boss Kannada) ಕಳೆದ ಭಾನುವಾರದ ಎಪಿಸೋಡ್​​ನಲ್ಲಿ ಮಲ್ಲಮ್ಮ ಎಲಿಮಿನೇಟ್ ಆಗಿ ಹೊರಬಂದಿದ್ದರು. ಮಲ್ಲಮ್ಮ ಹೊರಗೆ ಬಂದಿದ್ದು ಹಲವು ವೀಕ್ಷಕರಿಗೆ ಬೇಸರ ತರಿಸಿತ್ತು. ಅದರಿಂದ ಸಾವರಿಸಿಕೊಳ್ಳುವ ಮುಂಚೆಯೇ ಇದೀಗ ಮತ್ತೊಂದು ಎಲಿಮಿನೇಷನ್ ಬಿಗ್​​ಬಾಸ್ ಮನೆಯಲ್ಲಿ ಆಗಿದೆ. ಆದರೆ ಈ ಬಾರಿಯ ಎಲಿಮಿನೇಷನ್​​ಗೆ ಸಖತ್ ಟ್ವಿಸ್ಟ್ ಸಹ ಇತ್ತು ಎಂಬುದು ವಿಶೇಷ.

ಈ ವಾರ ನಾಮಿನೇಟ್ ಆದವರಲ್ಲಿ ಅಶ್ವಿನಿ, ರಕ್ಷಿತಾ ಇನ್ನೂ ಕೆಲವರು ನಿನ್ನೆಯ ಎಪಿಸೋಡಿನಲ್ಲೇ ಪಾರಾಗಿದ್ದರು. ಭಾನುವಾರದ ಎಪಿಸೋಡ್​​ನಲ್ಲಿ ಸ್ಪಂದನ, ಧನುಶ್, ರಾಶಿಕಾ ಇನ್ನೂ ಕೆಲವರು ಸೇಫ್ ಆದರು. ಕೊನೆಯದಾಗಿ ಕಾಕ್ರೂಚ್ ಸುಧಿ ಮತ್ತು ಚಂದ್ರಪ್ರಭ ಉಳಿದುಕೊಂಡರು. ಆ ಸಮಯದಲ್ಲಿ ಕಾಕ್ರೂಚ್ ಸುಧಿ ತಮ್ಮಲ್ಲಿದ್ದ ವಿಶೇಷ ಅಧಿಕಾರ ಬಳಸಿದರು. ಆ ಅಧಿಕಾರ ಬಳಸುವ ಮೂಲಕ ಬಿಗ್​​ಬಾಸ್ ಮನೆಯಲ್ಲೇ ಉಳಿದುಕೊಂಡರು. ಚಂದ್ರಪ್ರಭಾ ಅವರು ಮತಗಳ ಲೆಕ್ಕಾಚಾರವಿಲ್ಲದೆ ಹೊರಗೆ ಬರಲೇ ಬೇಕಾಯ್ತು.

ಅಸಲಿಗೆ ಚಂದ್ರಪ್ರಭ ಅವರಿಗೂ ಸಹ ಅದೇ ಬೇಕಿತ್ತು. ಚಂದ್ರಪ್ರಭ ಅವರು ಬಿಗ್​​ಬಾಸ್ ಮನೆಯಿಂದ ಹೊರಗೆ ಬರಬೇಕೆಂದು ಮೊದಲೇ ನಿಶ್ಚಯ ಮಾಡಿದ್ದರು. ವಾರದ ಪಂಚಾಯಿತಿ ನಡೆಯುವ ಸಂದರ್ಭದಲ್ಲಿ ಬ್ರೆಕ್ ಬಿಟ್ಟಾಗ ಚಂದ್ರಪ್ರಭಾ ಅವರು ಯಾರಿಗೂ ಹೇಳದೆ ಬಿಗ್​​ಬಾಸ್ ಮನೆಯಿಂದ ಹೊರಗೆ ಹೋಗುವ ಪ್ರಯತ್ನ ಸಹ ಮಾಡಿದ್ದರು. ಬಿಗ್​​ಬಾಸ್ ಬಾಗಿಲು ತೆರೆದು, ಗೇಟು ಡೋರನ್ನು ಬಡಿಯುತ್ತಾ ಬಾಗಿಲು ತೆಗೆಯುವಂತೆ ಕೇಳಿ ಕೊಳ್ಳುತ್ತಿದ್ದರು. ಗಿಲ್ಲಿ ಸೇರಿದಂತೆ ಇನ್ನೂ ಕೆಲವರು ಹೋಗಿ ಅವರನ್ನು ಮತ್ತೆ ಒಳಗೆ ಕರೆದುಕೊಂಡು ಬಂದರು. ಆದರೆ ಅಂತಿಮವಾಗಿ ಅವರು ಬಯಸಿದಂತೆ ಅವರೇ ಹೊರಗೆ ಬಂದರು.

ಇದನ್ನೂ ಓದಿ:ಬಿಗ್​ಬಾಸ್ ವೇದಿಕೆ ಮೇಲೆ ಪ್ರಿಯಾ ಸುದೀಪ್: ಸೊಸೆಯ ಬಗ್ಗೆ ಕಿಚ್ಚನ ತಂದೆಯ ಭಾವುಕ ಮಾತು

ಹೊರಗೆ ಬಂದ ಬಳಿಕವೂ ಸಹ ಅವರು ಖುಷಿಯಾಗಿರಲಿಲ್ಲ. ನನಗೆ ಬಿಗ್​​ಬಾಸ್ ಮನೆಯಲ್ಲಿ ಹೇಗಿರಬೇಕು ಎಂಬುದೇ ಗೊತ್ತಾಗುತ್ತಿಲ್ಲ ಎಂದರು. ಅಲ್ಲದೆ ಇದೇ ದಿನ ಸುದೀಪ್ ಆಡಿಸಿದ ಒಂದು ಚಟುವಟಿಕೆಯಲ್ಲಿ ಚಂದ್ರಪ್ರಭ ಅವರಿಗೆ ಊಸರವಳ್ಳಿ ಎಂಬ ಬಿರುದನ್ನು ಸ್ಪರ್ಧಿ ಒಬ್ಬರು ನೀಡಿದರು. ಅದು ಸಹ ಅವರಿಗೆ ಬಹಳ ಬೇಸರ ತರಿಸಿತು. ಒಟ್ಟಾರೆಯಾಗಿ ಬೇಸರದಿಂದಲೇ ಬಿಗ್​​ಬಾಸ್ ಮನೆಯಿಂದ ಚಂದ್ರಪ್ರಭ ಅವರು ಹೊರಗೆ ಬಂದರು. ವಿಶೇಷತೆ ಏನೆಂದರೆ ಇದೇ ವಾರ ಅವರು ಮನೆ ಮಂದಿಯಿಂದ ಉತ್ತಮ ಎನಿಸಿಕೊಂಡಿದ್ದರು. ಆದರೆ ಇದೇ ವಾರವೇ ಅವರು ಬಿಗ್​​ಬಾಸ್ ಮನೆಯಿಂದ ಎಲಿಮಿನೇಟ್ ಸಹ ಆಗಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಮಂಜುನಾಥ ಸಿ.
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ಜಗದೀಶ್ ಶೆಟ್ಟರ್ ನಿವಾಸಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್
ಜಗದೀಶ್ ಶೆಟ್ಟರ್ ನಿವಾಸಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್
ಹೊಸ ಸಿಎಂ, ಹೊಸ ಸಂಪ್ರದಾಯ: ಈ ಭೇಟಿ ಬಗ್ಗೆ ಡಿಕೆ ಶಿವಕುಮಾರ್ ಹೇಳಿದ್ದೇನು?
ಹೊಸ ಸಿಎಂ, ಹೊಸ ಸಂಪ್ರದಾಯ: ಈ ಭೇಟಿ ಬಗ್ಗೆ ಡಿಕೆ ಶಿವಕುಮಾರ್ ಹೇಳಿದ್ದೇನು?
ಕೆನಡಾದಲ್ಲಿ ಭಾರತೀಯ ಯುವಕರ ಬಳಿ ಸಹಾಯ ಕೇಳಿದ ಯುವತಿ
ಕೆನಡಾದಲ್ಲಿ ಭಾರತೀಯ ಯುವಕರ ಬಳಿ ಸಹಾಯ ಕೇಳಿದ ಯುವತಿ
ಟ್ರಕ್​ಗೆ ಡಿಕ್ಕಿಯಾಗಿ KSRTC ಬಸ್ ನುಜ್ಜುಗುಜ್ಜು: ತಪ್ಪಿದ ಭಾರೀ ಅನಾಹುತ
ಟ್ರಕ್​ಗೆ ಡಿಕ್ಕಿಯಾಗಿ KSRTC ಬಸ್ ನುಜ್ಜುಗುಜ್ಜು: ತಪ್ಪಿದ ಭಾರೀ ಅನಾಹುತ
ದಿಲೀಪ್ ರಾಜ್​ ನಿಧನ ಹೊಂದಿ ತಿಂಗಳು ಕಳೆದರೂ ಕಡಿಮೆ ಆಗಿಲ್ಲ ಕಣ್ಣೀರು
ದಿಲೀಪ್ ರಾಜ್​ ನಿಧನ ಹೊಂದಿ ತಿಂಗಳು ಕಳೆದರೂ ಕಡಿಮೆ ಆಗಿಲ್ಲ ಕಣ್ಣೀರು
ಅಧಿಕ ಮಾಸದಲ್ಲಿ ಹುಟ್ಟಿದ ಮಕ್ಕಳ ಭವಿಷ್ಯ ಹೇಗಿರಲಿದೆ?
ಅಧಿಕ ಮಾಸದಲ್ಲಿ ಹುಟ್ಟಿದ ಮಕ್ಕಳ ಭವಿಷ್ಯ ಹೇಗಿರಲಿದೆ?
ಇಂದು ಈ ರಾಶಿಯವರು ಕೋಪ ಮತ್ತು ಆತುರದ ನಿರ್ಧಾರಗಳನ್ನು ತೆಗೆದುಕೊಳ್ಳಬೇಡಿ
ಇಂದು ಈ ರಾಶಿಯವರು ಕೋಪ ಮತ್ತು ಆತುರದ ನಿರ್ಧಾರಗಳನ್ನು ತೆಗೆದುಕೊಳ್ಳಬೇಡಿ
ತಾಯ್ನಾಡಿನಲ್ಲಿ ಮೊದಲ ಟೆಸ್ಟ್ ವಿಕೆಟ್ ಪಡೆದ ಪ್ರಸಿದ್ಧ್ ಕೃಷ್ಣ
ತಾಯ್ನಾಡಿನಲ್ಲಿ ಮೊದಲ ಟೆಸ್ಟ್ ವಿಕೆಟ್ ಪಡೆದ ಪ್ರಸಿದ್ಧ್ ಕೃಷ್ಣ
ಸತ್ಯನಾರಾಯಣ ಸ್ವಾಮಿ ಪೂಜೆಗೆ ಪತ್ನಿಯೊಡನೆ ಬಂದ ಶಿವಣ್ಣ: ವಿಡಿಯೋ
ಸತ್ಯನಾರಾಯಣ ಸ್ವಾಮಿ ಪೂಜೆಗೆ ಪತ್ನಿಯೊಡನೆ ಬಂದ ಶಿವಣ್ಣ: ವಿಡಿಯೋ
ಕೇವಲ ನಾಲ್ಕು ಎಸೆತಗಳಲ್ಲಿ ಚೊಚ್ಚಲ ಟೆಸ್ಟ್ ವಿಕೆಟ್ ಪಡೆದ ಮಾನವ್
ಕೇವಲ ನಾಲ್ಕು ಎಸೆತಗಳಲ್ಲಿ ಚೊಚ್ಚಲ ಟೆಸ್ಟ್ ವಿಕೆಟ್ ಪಡೆದ ಮಾನವ್