AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್​​ಬಾಸ್ ಕನ್ನಡ ಸೀಸನ್ 12: ಈ ಬಾರಿಯ ಮನೆ ಹೀಗಿದೆ ನೋಡಿ

Bigg Boss Kannada season 12: ಬಿಗ್​​​ಬಾಸ್ ಕನ್ನಡ 12 ಆರಂಭಕ್ಕೆ ಕೆಲವೇ ಗಂಟೆಗಳು ಬಾಕಿ ಇದೆ. ಈ ಬಾರಿ ಬಿಗ್​​ಬಾಸ್ ಮನೆಗೆ ಯಾರು ಹೋಗಲಿದ್ದಾರೆ ಎಂಬುದರ ಜೊತೆಗೆ ಈ ಬಾರಿ ಬಿಗ್​​ಬಾಸ್ ಮನೆ ಹೇಗಿರಲಿದೆ ಎಂಬ ಬಗ್ಗೆಯೂ ಕುತೂಹಲ ಇದೆ. ಅಂದಹಾಗೆ ಈ ಬಾರಿ ಇಡೀ ಕರ್ನಾಟಕವನ್ನು ಪ್ರತಿಬಿಂಬಿಸುತ್ತಿದೆ ಬಿಗ್​​ಬಾಸ್ ಮನೆ. ಹೊಸ ಬಿಗ್​​ಬಾಸ್ ಮನೆಯ ಸಣ್ಣ ಝಲಕ್ ಇಲ್ಲಿದೆ ನೋಡಿ...

ಬಿಗ್​​ಬಾಸ್ ಕನ್ನಡ ಸೀಸನ್ 12: ಈ ಬಾರಿಯ ಮನೆ ಹೀಗಿದೆ ನೋಡಿ
Bigg Boss House
ಮಂಜುನಾಥ ಸಿ.
|

Updated on: Sep 27, 2025 | 12:49 PM

Share

ಬಿಗ್​​ಬಾಸ್ ಕನ್ನಡ ಸೀಸನ್ 12 (Bigg Boss Kannada season 12) ಪ್ರಾರಂಭಕ್ಕೆ ಕೆಲವೇ ಗಂಟೆಗಳಷ್ಟೆ ಬಾಕಿ ಇದೆ. ಈ ಬಾರಿ ಮನೆಯ ಒಳಗೆ ಯಾರ್ಯಾರು ಹೋಗಲಿದ್ದಾರೆ ಎಂಬ ಬಗ್ಗೆ ಈಗಾಗಲೇ ಚರ್ಚೆ ಶುರುವಾಗಿದೆ. ನಿನ್ನೆ ಮಾಸ್ಕ್ ಧರಿಸಿದ ವ್ಯಕ್ತಿಯೊಬ್ಬ ನಾನು ಬಿಗ್​​ಬಾಸ್ ಮನೆಗೆ ಹೋಗುತ್ತಿದ್ದೇನೆ ಎಂದು ಸಾರ್ವಜನಿಕರ ಬಳಿ ಹೇಳುತ್ತಿರುವ ವಿಡಿಯೋ ಅನ್ನು ಚಾನೆಲ್ ಹಂಚಿಕೊಂಡಿತ್ತು. ಪ್ರತಿ ಬಾರಿ ಬಿಗ್​​ಬಾಸ್ ಸ್ಪರ್ಧಿಗಳು ಯಾರಾಗಲಿದ್ದಾರೆ ಎಂಬ ಕುತೂಹಲದ ಜೊತೆಗೆ ಬಿಗ್​​ಬಾಸ್ ಮನೆ ಈ ಬಾರಿ ಹೇಗಿರಲಿದೆ ಎಂಬ ಕುತೂಹಲವೂ ಸಹ ಪ್ರೇಕ್ಷಕರಿಗೆ ಇರುತ್ತದೆ. ಕಿಚ್ಚ ಸುದೀಪ್ ಅವರು ಬಿಗ್​​ಬಾಸ್ ಮನೆಯ ಝಲಕ್ ಒಂದನ್ನು ತೋರಿಸಿದ್ದಾರೆ.

ಪ್ರತಿ ಬಾರಿ ಬಿಗ್​​ಬಾಸ್ ಮನೆಯನ್ನು ಭಿನ್ನವಾಗಿ, ಐಶಾರಾಮಿಯಾಗಿ, ಅದ್ಧೂರಿಯಾಗಿ ಮತ್ತು ಕಲರ್ ಫುಲ್​ ಆಗಿ ನಿರ್ಮಾಣ ಮಾಡುತ್ತಾರೆ ಆಯೋಜಕರು. ಕಳೆದ ಬಾರಿ ಬೆಂಗಳೂರಿನ ಹೊರಭಾಗದ ಖಾಸಗಿ ಜಾಗದಲ್ಲಿ ಬಿಗ್​​ಬಾಸ್ ಮನೆ ನಿರ್ಮಿಸಲಾಗಿತ್ತು. ಇದರಿಂದಾಗಿ ಸಾಕಷ್ಟು ಸಮಸ್ಯೆಗಳನ್ನು ಎದುರಿಸಬೇಕಾಯ್ತು, ಸ್ಥಳೀಯ ಆಡಳಿತದವರು ಕೆಲವು ನೊಟೀಸ್​​ಗಳನ್ನು ಸಹ ನೀಡಿದ್ದರು. ಅದೇ ಕಾರಣಕ್ಕೆ ಈ ಬಾರಿ ಇನ್ನೋವೇಟಿವ್ ಫಿಲಂ ಸಿಟಿಯಲ್ಲಿ ಬಿಗ್​​ಬಾಸ್ ಮನೆಯನ್ನು ನಿರ್ಮಾಣ ಮಾಡಲಾಗಿದೆ. ಈ ಬಾರಿಯ ಮನೆಯ ಹೌಸ್​​ಟೂರ್​​ನ ಪ್ರೋಮೊ ಅನ್ನು ಕಲರ್ಸ್ ವಾಹಿನಿ ಹಂಚಿಕೊಂಡಿದೆ.

ಪ್ರತಿ ಬಾರಿಯಂತೆ ಈ ಬಾರಿಯೂ ಸಹ ಮನೆಯನ್ನು ಭಿನ್ನವಾಗಿ, ಅದ್ಧೂರಿಯಾಗಿ, ಐಶಾರಾಮಿಯಾಗಿ ನಿರ್ಮಾಣ ಮಾಡಲಾಗಿದೆ. ಕಿಚ್ಚ ಸುದೀಪ್ ಅವರು ಬಿಗ್​​ಬಾಸ್ ಮನೆಯನ್ನು ಪ್ರೇಕ್ಷಕರಿಗೆ ತೋರಿಸಿಕೊಟ್ಟಿದ್ದಾರೆ. ರಿಚ್ ಆಗಿರುವ ಕರ್ನಾಟಕದವನ್ನು ಒಂದೇ ಕಡೆ ಸ್ಕೆಚ್ ಮಾಡಿದರೆ ಹೇಗಿರುತ್ತದೆಯೋ ಹಾಗಿದೆ ಬಿಗ್​​ಬಾಸ್ ಮನೆ ಎಂದಿದ್ದಾರೆ ಕಿಚ್ಚ. ಅವರು ಹೇಳಿದಂತೆಯೇ ಇಡೀ ಕರ್ನಾಟಕವನ್ನು ಪ್ರತಿಬಿಂಬಿಸುತ್ತಿದೆ ಈ ಬಾರಿಯ ಬಿಗ್​​ಬಾಸ್ ಮನೆ.

ಮೈಸೂರು ಅರಮನೆ, ದಸರಾ, ಹೊಯ್ಸಳ, ಬೇಲೂರು-ಹಳೆಬೀಡಿನ ಶಿಲ್ಪಗಳು, ಯಕ್ಷಗಾನ, ಭರತ ನಾಟ್ಯ, ಡೊಳ್ಳು ಕುಣಿತ ಹೀಗೆ ಕರ್ನಾಟಕದ ಅನೇಕ ಸಂಸ್ಕೃತಿಯ ಪ್ರತಿರೂಪಗಳು ಈ ಬಾರಿಯ ಬಿಗ್​​ಬಾಸ್ ಮನೆಯಲ್ಲಿವೆ. ಬಿಗ್​​ಬಾಸ್ ಮನೆಯ ಪ್ರತಿ ಗೋಡೆಯ ಮೇಲೂ ಕರ್ನಾಟಕದ ಸಂಸ್ಕೃತಿಕ ವೈಭವವನ್ನು ನೆನಪಿಸುವ ಚಿತ್ರಗಳನ್ನು ರಚಿಸಲಾಗಿದೆ. ಇವುಗಳ ಜೊತೆಗೆ ಬೇಲೂರು, ಹಳೆಬೀಡು, ಹಂಪಿಯ ಕೆಲವು ವಿಗ್ರಹಗಳನ್ನು ಆಧುನಿಕ ವಸ್ತುಗಳನ್ನು ಬಳಸಿ ನಿರ್ಮಿಸಲಾಗಿದೆ. ಒಟ್ಟಾರೆಯಾಗಿ ಬಿಗ್​​ಬಾಸ್ ಮನೆ ಇಡೀ ಕರ್ನಾಟಕವನ್ನು ಪ್ರತಿಬಿಂಬಿಸುತ್ತಿದೆ.

ಪ್ರೋಮೊನಲ್ಲಿ ಮಾತನಾಡಿರುವ ಸುದೀಪ್, ‘ಅರಮನೆಯನ್ನು ಉಳಿಸಿಕೊಳ್ಳಲು ಎಷ್ಟೋ ಯುದ್ಧಗಳು ನಡೆದು ಹೋಗಿವೆ. ಆದರೆ ಈ ಅರಮನೆಯಲ್ಲಿ ಉಳಿದುಕೊಳ್ಳಲು ಯುದ್ಧಗಳೇ ನಡೆಯಲಿವೆ’ ಎಂದಿದ್ದಾರೆ. ಅದು ನಿಜವೂ ಹೌದು. ಅರಮನೆಯಂಥಹಾ ಬಿಗ್​​ಬಾಸ್ ಮನೆಯಲ್ಲಿ ಉಳಿದುಕೊಳ್ಳಲು ಸ್ಪರ್ಧಿಗಳು ಪ್ರತಿ ದಿನ, ಪ್ರತಿ ಕ್ಷಣ ಇತರೆ ಸ್ಪರ್ಧಿಗಳೊಂದಿಗೆ ಸ್ಪರ್ಧೆ ನಡೆಸುತ್ತಾರೆ, ಕಿತ್ತಾಡುತ್ತಾರೆ, ರಾಜಕೀಯ ಮಾಡುತ್ತಾರೆ. ಕೈ-ಕೈ ಮಿಲಾಯಿಸುವ ಹಂತಕ್ಕೂ ಹೋಗುತ್ತಾರೆ. ಈ ಬಾರಿಯೂ ಇವೆಲ್ಲ ಮತ್ತೆ ಪುನರಾವರ್ತನೆ ಆಗಲಿವೆ. ಅಂದಹಾಗೆ ಬಿಗ್​​ಬಾಸ್ ಕನ್ನಡ ಸೀಸನ್ 12 ನಾಳೆ ಅಂದರೆ ಭಾನುವಾರ ಸಂಜೆ ಪ್ರಾರಂಭ ಆಗಲಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ