AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್​​ಬಾಸ್ ಮನೆಯಲ್ಲಿ ಡಬಲ್ ಎಲಿಮಿನೇಷನ್, ಹೊರ ಹೋದವರ್ಯಾರು?

Bigg boss Kannada season 12: ಬಿಗ್​​ಬಾಸ್ ಕನ್ನಡ ಸೀಸನ್ 12 ರಲ್ಲಿ ಈ ವಾರ ಮೊದಲ ಫಿನಾಲೆ ಇದೆ. ಶನಿವಾರದ ಎಪಿಸೋಡ್​​ನಲ್ಲಿ ಬಿಗ್​​ಬಾಸ್ ಮನೆಯಲ್ಲಿ ಡಬಲ್ ಎಲಿಮಿನೇಷನ್ ಆಗಿದೆ. ಈ ವಾರ ಒಟ್ಟಿಗೆ ಮನೆಯಿಂದ ಹೊರಗೆ ಹೋದ ಸ್ಪರ್ಧಿಗಳು ಯಾರ್ಯಾರು? ಇಲ್ಲಿದೆ ನೋಡಿ ಮಾಹಿತಿ.. ಅಂದಹಾಗೆ ಈ ವಾರ ಇಲ್ಲಿಯವರೆಗೆ ಮೂರು ಮಂದಿ ಮನೆಯಿಂದ ಹೊರಗೆ ಹೋಗಿದ್ದಾರೆ.

ಬಿಗ್​​ಬಾಸ್ ಮನೆಯಲ್ಲಿ ಡಬಲ್ ಎಲಿಮಿನೇಷನ್, ಹೊರ ಹೋದವರ್ಯಾರು?
Bigg Boss Kannada 12 Elimination
ಮಂಜುನಾಥ ಸಿ.
|

Updated on: Oct 18, 2025 | 11:07 PM

Share

ಬಿಗ್​​ಬಾಸ್ ಕನ್ನಡ ಸೀಸನ್ 12ರ (Bigg Boss Kannada 12) ಶನಿವಾರದ ಎಪಿಸೋಡ್​​ನಲ್ಲಿ ಒಟ್ಟಿಗೆ ಇಬ್ಬರು ಹೊರಗೆ ಹೋಗಿದ್ದಾರೆ. ಈ ವಾರ ಮೊದಲ ಫಿನಾಲೆ ನಡೆಯುತ್ತಿದ್ದು, ಈ ವಾರವೇ ಬಿಗ್​​ಬಾಸ್ ಮನೆಯಿಂದ ಸುಮಾರು ಆರು ಮಂದಿ ಹೊರಗೆ ಹೋಗಲಿದ್ದಾರೆ ಎಂಬ ಸುಳಿವನ್ನು ಸುದೀಪ್ ನೀಡಿದ್ದರು. ಅದರಂತೆ ವಾರದ ಪಂಚಾಯಿತಿಯ ಮೊದಲ ದಿನ ಅಂದರೆ ಶನಿವಾರವೇ ಬಿಗ್​​ಬಾಸ್ ಮನೆಯಿಂದ ಒಟ್ಟಿಗೆ ಇಬ್ಬರನ್ನು ಎಲಿಮಿನೇಟ್ ಮಾಡಲಾಯ್ತು. ಅಲ್ಲಿಗೆ ಡಾಗ್ ಸತೀಶ್ ಸಹ ಸೇರಿದಂತೆ ವಾರದಲ್ಲಿ ಇನ್ನೂ ಒಂದು ದಿನ ಬಾಕಿ ಇರುವಂತೆ ಮೂರು ಮಂದಿಯನ್ನು ಮನೆಯಿಂದ ಹೊರ ಹಾಕಲಾಗಿದೆ.

ಈ ವಾರ ಭರ್ಜರಿ ನಾಮಿನೇಷನ್ಸ್​​ ಆಗಿತ್ತು. ಈ ವಾರ ಬರೋಬ್ಬರಿ 11 ಮಂದಿ ನಾಮಿನೇಟ್ ಆಗಿದ್ದರು. ಗಿಲ್ಲಿ, ಕಾವ್ಯಾ, ಮಲ್ಲಮ್ಮ, ಮಂಜು ಭಾಷಿಣಿ, ಅಶ್ವಿನಿ, ಸ್ಪಂದನಾ, ರಕ್ಷಿತಾ ಶೆಟ್ಟಿ, ಅಭಿಷೇಕ್, ಧ್ರುವಂತ್, ಧನುಶ್, ಚಂದ್ರಪ್ರಭಾ ಅವರುಗಳು ನಾಮಿನೇಟ್ ಆಗಿದ್ದರು. ಮೊದಲಿಗೆ ಎಲ್ಲ ಸ್ಪರ್ಧಿಗಳಿಂದ ಗೇಮ್ ಒಂದನ್ನು ಸುದೀಪ್ ಆಡಿಸಿದರು. ನಾಮಿನೇಟ್ ಆದ ಸ್ಪರ್ಧಿಗಳ ಫೋಟೊ ಇರಿಸಿ ಅದರ ಮೇಲೆ ಇದ್ದ ಗಾಜಿನ ಹೊದಿಕೆಯನ್ನು ಅವರಿಂದಲೇ ಹೊಡೆಸಲಾಯ್ತು. ಯಾರಿಗೆ ಸೇಫ್ ಎಂದು ಬಂದಿದ್ದರೆ ಅವರು ಸೇಫ್, ಯಾರಿಗೆ ಡೇಂಜರ್ ಎಂದು ಬಂದಿದ್ದರೆ ಅವರು ಡೇಂಜರ್ ಜೋನ್.

ಇದನ್ನೂ ಓದಿ:ಬಿಗ್​​ಬಾಸ್ ಮನೆಯಲ್ಲಿ ಸಂಜನಾ ಬರೆದ ಚಿತ್ರ ನೋಡಿ ನಗುವೋ ನಗು

ಈ ಕ್ರಿಯೆಯಲ್ಲಿ ಚಂದ್ರಪ್ರಭಾ, ಗಿಲ್ಲಿ, ಕಾವ್ಯಾ, ರಕ್ಷಿತಾ ಶೆಟ್ಟಿ, ಮಲ್ಲಮ್ಮ ಅವರುಗಳು ಸೇಫ್ ಆಗಿಬಿಟ್ಟರು. ಅಶ್ವಿನಿ, ಸ್ಪಂದನಾ, ಮಂಜು ಭಾಷಿಣಿ, ಅಶ್ವಿನಿ, ಅಭಿಷೇಕ್, ಧ್ರುವಂತ್, ಧನುಶ್ ಅವರುಗಳು ಡೇಂಜರ್ ಜೋನ್​​​ನಲ್ಲಿ ಉಳಿದರು. ಬಳಿಕ ಡೇಂಜರ್ ಜೋನ್ ಅವರನ್ನು ಮಾತ್ರವೇ ಕರೆದು ಮತ್ತೊಂದು ಆಟ ಆಡಿಸಲಾಯ್ತು. ಆ ಆಟದಲ್ಲಿ ಧ್ರುವಂತ್ ಮತ್ತು ಸ್ಪಂದನಾ ಸೇಫ್ ಆದರು.

ಉಳಿದ ಸ್ಪರ್ಧಿಗಳಲ್ಲಿ ಹೊರ ಹೋಗುತ್ತಿರುವವರ ಹೆಸರನ್ನು ಸ್ವತಃ ಸುದೀಪ್ ಘೋಷಿಸಿದರು. ಮಂಜು ಭಾಷಿಣಿ ಮತ್ತು ಅಶ್ವಿನಿ ಅವರು ಈ ವಾರ ಬಿಗ್​​ಬಾಸ್ ಮನೆಯಿಂದ ಹೊರ ಹೋದರು. ಮಿಡ್ ವೀಕ್ ಎಲಿಮಿನೇಷನ್​​ನಲ್ಲಿ ಡಾಗ್ ಸತೀಶ್ ಹೊರಗೆ ಹೋಗಿದ್ದರು. ಈಗ ಮಂಜು ಭಾಷಿಣಿ ಮತ್ತು ಅಶ್ವಿನಿ ಹೊರ ಹೋಗುವ ಮೂಲಕ ವಾರದಲ್ಲಿ ಇನ್ನೂ ಒಂದು ದಿನ ಉಳಿದಿರುವಾಗಲೇ ಮೂವರು ಹೊರ ಹೋಗಿದ್ದಾರೆ. ಅಂದಹಾಗೆ ನಾಳಿನ ಎಪಿಸೋಡ್​​ನಲ್ಲಿ ಕೆಲ ಹೊಸ ಸ್ಪರ್ಧಿಗಳು ಬಿಗ್​​ಬಾಸ್ ಮನೆ ಸೇರುವ ಸಾಧ್ಯತೆ ಇದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ಅತಾವುಲ್ಲಾ ಹತ್ಯೆ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಪೊಲೀಸರು
ಅತಾವುಲ್ಲಾ ಹತ್ಯೆ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಪೊಲೀಸರು
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?