AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ಬಾರಿ ಇಬ್ಬರಿಗೆ ಸಿಗುತ್ತಾ ಬಿಗ್ ಬಾಸ್ ಟ್ರೋಫಿ: ಮೊದಲ ವಾರವೇ ಸಿಕ್ತು ಸೂಚನೆ

‘ಬಿಗ್ ಬಾಸ್ ಕನ್ನಡ ಸೀಸನ್ 12’ ಶೋನಲ್ಲಿ 3ನೇ ವಾರವೇ ಒಂದು ಫಿನಾಲೆ ನಡೆಯಲಿದೆ. ಈ ಬಗ್ಗೆ ಬಿಗ್ ಬಾಸ್ ಘೋಷಣೆ ಮಾಡಿದ್ದಾರೆ. ಆ ಮೂಲಕ ಮೊದಲೇ ಸೂಚನೆ ನೀಡಲಾಗಿದೆ. 2 ಫಿನಾಲೆ ಇದ್ದ ಮೇಲೆ ಇಬ್ಬರು ವಿನ್ನರ್ ಕೂಡ ಇರಬಹುದು ಎಂದು ಬಿಗ್ ಬಾಸ್ ಹೇಳಿದ್ದಾರೆ.

ಈ ಬಾರಿ ಇಬ್ಬರಿಗೆ ಸಿಗುತ್ತಾ ಬಿಗ್ ಬಾಸ್ ಟ್ರೋಫಿ: ಮೊದಲ ವಾರವೇ ಸಿಕ್ತು ಸೂಚನೆ
Bigg Boss Kannada Season 12
ಮದನ್​ ಕುಮಾರ್​
|

Updated on: Oct 01, 2025 | 7:04 PM

Share

ಪ್ರತಿ ಬಾರಿ ಬಿಗ್ ಬಾಸ್ ಆಟ ಒಂದೇ ರೀತಿ ಇರುವುದಿಲ್ಲ. ಪ್ರತಿ ವರ್ಷ ಕೂಡ ಆಟದ ವರಸೆ ಬದಲಾಗುತ್ತದೆ. ‘ಬಿಗ್ ಬಾಸ್ ಕನ್ನಡ ಸೀಸನ್ 12’ (Bigg Boss Kannada 12) ಆರಂಭ ಆಗಿದ್ದು ಮೊದಲ ವಾರವೇ ಹೊಸ ಹೊಸ ಟ್ವಿಸ್ಟ್ ನೀಡಲಾಗುತ್ತಿದೆ. ‘ಅನಿರೀಕ್ಷಿತವಾದದ್ದನ್ನು ನಿರೀಕ್ಷಿಸಿ’ ಎಂಬ ಥೀಮ್​​ನಲ್ಲಿ ಶೋ ಶುರುವಾಗಿದೆ. ಅದರಂತೆಯೇ ಆಟ ನಡೆಯುತ್ತಿದೆ. 2ನೇ ದಿನವೇ ಬಿಗ್ ಬಾಸ್ ಮನೆಯಲ್ಲಿ ಒಂದು ಘೋಷಣೆ ಮಾಡಲಾಗಿದೆ. ಈ ಬಾರಿ 2 ಫಿನಾಲೆ ಇರಲಿದೆ. ಇಬ್ಬರು ವಿನ್ನರ್ ಕೂಡ ಇರಬಹುದು ಎಂದು ಬಿಗ್ ಬಾಸ್ (Bigg Boss) ತಿಳಿಸಿದ್ದಾರೆ.

‘ಈ ಸೀಸನ್ ಯಾರು ಗೆಲ್ಲುತ್ತಾರೆ ಎಂಬುದನ್ನು ತಿಳಿಯಲು ನೂರು ದಿನಗಳ ಕಾಲ ಕಾಯಬೇಕಿಲ್ಲ. ಮೂರನೇ ವಾರದಲ್ಲೇ ಗೊತ್ತಾಗಿಬಿಡುತ್ತದೆ. ಮಿಂಚಿನ ಓಟದಂತೆ ವೇಗವಾಗಿ ಓಡುತ್ತಿರುವ ಈ ಸೀಸನ್​ನಲ್ಲಿ ಮೂರನೇ ವಾರದಲ್ಲೇ ಒಂದು ಫಿನಾಲೆ ನಡೆಯಲಿದೆ. ಅಲ್ಲಿಯವರೆಗೆ ನೀವು ಯಾರೂ ಈ ಮನೆಯಲ್ಲಿ ಶಾಶ್ವತ ಅಲ್ಲ, ಯಾರೊಬ್ಬರೂ ಸೇಫ್ ಅಲ್ಲ. ಯಾರು ಬೇಕಾದರೂ ಹೇಗೆ ಬೇಕಾದರೂ ಎಲಿಮಿನೇಟ್ ಆಗಬಹುದು. ಒಬ್ಬೊಬ್ಬರಾಗಿ ಹೋಗಬಹುದು, ಗುಂಪು ಗುಂಪಾಗಿಯೂ ಎಲಿಮಿನೇಟ್ ಆಗಬಹುದು’ ಎಂದು ಬಿಗ್ ಬಾಸ್ ಘೋಷಿಸಿದ್ದಾರೆ.

‘ಈ ಎಲಿಮಿನೇಷನ್ ಭಯದಿಂದ ನೀವು ಮುಕ್ತರಾಗಬೇಕೆಂದರೆ, ಅದಕ್ಕೆ ಇರೋದು ಒಂದೇ ದಾರಿ – ನೀವು ಫೈನಲಿಸ್ಟ್ ಆಗೋದು. ಇಂದಿನಿಂದ ವಾರ ವಾರ ಬಿಗ್ ಬಾಸ್ ಸರಣಿ ಟಾಸ್ಕ್​​ಗಳನ್ನು ನೀಡಲಿದ್ದಾರೆ. ಪ್ರತಿವಾರದ ಅಂತ್ಯದಲ್ಲಿ ಸರಣಿ ಟಾಸ್ಕ್ ಗೆಲ್ಲುವವರು ಫೈನಲಿಸ್ಟ್​​ಗಳಾಗಿ ಆಯ್ಕೆ ಆಗುತ್ತಾರೆ. ಆ ಫೈನಲಿಸ್ಟ್​​ಗಳ ಪೈಕಿ ಒಬ್ಬರು ಮೂರನೇ ವಾರ ನಡೆಯಲಿರುವ ಮೊದಲನೇ ಫಿನಾಲೆಯನ್ನು ಗೆಲ್ಲುತ್ತಾರೆ. ಅಲ್ಲಿಯವರೆಗೆ ಈ ಮನೆಗೆ ಕ್ಯಾಪ್ಟನ್ ಕೂಡ ಇರಲ್ಲ’ ಎಂದಿದ್ದಾರೆ ಬಿಗ್ ಬಾಸ್.

‘ಈ ಮುಂಚೆ ತಿಳಿಸಿದಂತೆ ಸೀಸನ್ 12 ಎಂದರೆ ಒಂದರ ವಿರುದ್ಧ ಎರಡು. ಡಬಲ್ ಟ್ವಿಸ್ಟ್​ಗಳ ಸೀಸನ್​​ನಲ್ಲಿ ಫಿನಾಲೆ ಕೂಡ ಡಬಲ್. ಯಾರಿಗೆ ಗೊತ್ತು? ವಿನ್ನರ್ ಕೂಡ ಡಬಲ್ ಆಗಬಹುದು. ಮಿಂಚಿನ ಓಟ ಆರಂಭ ಆಗಿ 24 ಗಂಟೆಗಳೇ ಕಳೆದಿವೆ. ಆದರೆ ನೀವೆಲ್ಲ ಇನ್ನೂ ಈಗಷ್ಟೇ ಎಚ್ಚರಗೊಂಡು ಕಣ್ಣು ಉಜ್ಜಿಕೊಳ್ಳುತ್ತಾ, ಮೈ ಮುರಿಯುತ್ತ, ನಾನು ಎಲ್ಲಿದ್ದೇನೆ ಎಂದು ತಮ್ಮನ್ನು ತಾವು ಕೇಳಿಕೊಳ್ಳುತ್ತಿರುವಂತೆ ಭಾಸವಾಗುತ್ತಿದೆ’

ಇದನ್ನೂ ಓದಿ: ಪದೇ ಪದೇ ಟ್ವಿಸ್ಟ್ ನೀಡುತ್ತಿರುವ ಬಿಗ್ ಬಾಸ್: ಚಂದ್ರಪ್ರಭ, ಸತೀಶ್ ಸೀಕ್ರೆಟ್ ಬಯಲು

‘ಗೆಲ್ಲುವ ಆಸೆ ಇದ್ದರೆ ಮೈಕೊಡವಿ ಸಿದ್ಧರಾಗಿ. ಓಡಲಷ್ಟೇ ಅಲ್ಲ, ಗೆಲ್ಲಲು ಆರಂಭಿಸಿ. ಹೆಮ್ಮಾರಿ ಮಹೋತ್ಸವಕ್ಕೆ ನಿಮಗೆಲ್ಲ ಆತ್ಮೀಯ ಸ್ವಾಗತ’ ಎಂದು ಬಿಗ್ ಬಾಸ್ ಹೇಳಿದ್ದಾರೆ. ಆ ಮೂಲಕ ಆಟಕ್ಕೆ ಚುರುಕು ಮುಟ್ಟಿಸಲಾಗಿದೆ. ಮೂರವೇ ವಾರ ಸಮೀಪಿಸಿದಾಗ ಈ ಬಗ್ಗೆ ಹೆಚ್ಚಿನ ಸ್ಪಷ್ಟತೆ ಸಿಗಲಿದೆ. ಸದ್ಯ 18 ಸ್ಪರ್ಧಿಗಳು ಬಿಗ್​ ಬಾಸ್ ಮನೆಯಲ್ಲಿ ಪೈಪೋಟಿ ನೀಡುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ