AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್​ಬಾಸ್ ಕನ್ನಡ: ನಾಳೆ ಸಿಗಲಿದೆ ಎಲ್ಲ ಪ್ರಶ್ನೆಗಳಿಗೂ ಉತ್ತರ

Bigg Boss Kannada season 12: ಬಿಗ್​ಬಾಸ್ ಸೀಸನ್​ ಮತ್ತೆ ಪ್ರಾರಂಭವಾಗಿದೆ. ಬೇರೆ ಬೇರೆ ಭಾಷೆಗಳಲ್ಲಿ ಬಿಗ್​​ಬಾಸ್ ಹೊಸ ಸೀಸನ್​ನ ಪ್ರೋಮೊಗಳು, ಘೋಷಣೆಗಳು ಹರಿದಾಡುತ್ತಿವೆ. ಇದೀಗ ಕನ್ನಡ ಬಿಗ್​ಬಾಸ್ ಸೀಸನ್ 12ರ ಅಪ್​ಡೇಟ್ ಸಹ ಹೊರಬೀಳಲಿದೆ. ಈ ಬಾರಿ ನಿರೂಪಕರು ಯಾರಿರಲಿದ್ದಾರೆ. ಈ ಸೀಸನ್​ನ ವಿಶೇಷತೆಗಳೇನು? ಎಲ್ಲ ಪ್ರಶ್ನೆಗಳಿಗೆ ಜೂನ್ 30ರಂದು ಉತ್ತರ ಸಿಗಲಿದೆ.

ಬಿಗ್​ಬಾಸ್ ಕನ್ನಡ: ನಾಳೆ ಸಿಗಲಿದೆ ಎಲ್ಲ ಪ್ರಶ್ನೆಗಳಿಗೂ ಉತ್ತರ
Bigg Boss Kannada 12
ಮಂಜುನಾಥ ಸಿ.
|

Updated on: Jun 29, 2025 | 5:48 PM

Share

ಬಿಗ್​ಬಾಸ್ ಕನ್ನಡ ಸೀಸನ್ 11 (Bigg Boss Kannada) ಮುಗಿದು ತಿಂಗಳುಗಳಾಗಿವೆ. ಇದೀಗ 12ನೇ ಸೀಸನ್​ಗೆ ತಯಾರಿ ಆರಂಭವಾಗಿದೆ. ಆದರೆ ಈ ಬಾರಿಯ ಬಿಗ್​​ಬಾಸ್ ಸ್ಪರ್ಧಿಗಳ ಕಾರಣಕ್ಕೆಲ್ಲದೆ ಆಯೋಜಕರು ಮತ್ತು ನಿರೂಪಕರ ಕಾರಣಕ್ಕೆ ಭಾರಿ ಗಮನ ಸೆಳೆದಿದೆ. ಕನ್ನಡದಲ್ಲಿ ಬಿಗ್​​ಬಾಸ್ ರಿಯಾಲಿಟಿ ಶೋ ಆರಂಭ ಆದಾಗಿನಿಂದಲೂ ಸುದೀಪ್ ಅವರೇ ಬಿಗ್​ಬಾಸ್ ನಿರೂಪಣೆ ಮಾಡಿಕೊಂಡು ಬಂದಿದ್ದಾರೆ. ಅವರ ಗೈರು ಹಾಜರಿಯಲ್ಲಿ ಸಹ ಯಾರೊಬ್ಬರೂ ಸಹ ಆ ವೇದಿಕೆ ಏರಿದ್ದಿಲ್ಲ. ಆದರೆ ತಾವು ಇನ್ನು ಮುಂದೆ ಬಿಗ್​ಬಾಸ್ ನಿರೂಪಣೆ ಮಾಡುವುದಿಲ್ಲ ಎಂದು ಸುದೀಪ್ ಘೋಷಣೆ ಮಾಡಿದ್ದಾರೆ.

ಇದೀಗ ಬಿಗ್​ಬಾಸ್ ಆಯೋಜಕರು ಹೊಸ ನಿರೂಪಕರಿಗೆ ಹುಡುಕಾಟ ನಡೆಸುತ್ತಿದ್ದಾರೆ. ಕೆಲವು ನಟರನ್ನು ಸಂಪರ್ಕ ಮಾಡಿದ್ದಾರೆ ಎಂಬ ಸುದ್ದಿಗಳು ಹರಿದಾಡಿತ್ತು. ಡಾಲಿ ಧನಂಜಯ್, ರಿಷಬ್ ಶೆಟ್ಟಿ, ರಮೇಶ್ ಅರವಿಂದ್ ಇನ್ನೂ ಕೆಲವು ಹೆಸರುಗಳು ತುಸು ಜೋರಾಗಿಯೇ ಕೇಳಿ ಬಂದಿತ್ತು. ಆದರೆ ಯಾವುದೂ ಸಹ ಅಧಿಕೃತ ಆಗಿರಲಿಲ್ಲ. ಆದರೆ ಈಗ ಎಲ್ಲ ಪ್ರಶ್ನೆಗಳಿಗೆ ನಾಳೆ (ಜೂನ್ 30) ಉತ್ತರ ಸಿಗಲಿದೆ.

ಇದನ್ನೂ ಓದಿ:ಅರ್ಥವಾಗದ ಹಾಡು ಹಾಡುತ್ತಾ ಫೋಸು ಕೊಟ್ಟ ಬಿಗ್​ಬಾಸ್ ಇಶಾನಿ

ಜೂನ್ 30 ರಂದು ಬಿಗ್​ಬಾಸ್ ಕನ್ನಡ ಆಯೋಜಕರು, ಕಲರ್ಸ್ ವಾಹಿನಿ ಬಿಗ್​ಬಾಸ್ ಕುರಿತು ಪತ್ರಿಕಾಗೋಷ್ಠಿ ಆಯೋಜನೆ ಮಾಡಿದೆ. ತಾಜ್ ಹೋಟೆಲ್​​ನಲ್ಲಿ ಪತ್ರಿಕಾಗೋಷ್ಠಿ ಆಯೋಜನೆ ಮಾಡಲಾಗಿದ್ದು, ಸಾರ್ವಜನಿಕರಿಗೆ ಪ್ರವೇಶ ಇರುವುದಿಲ್ಲ. ಈ ಪತ್ರಿಕಾ ಗೋಷ್ಠಿಯಲ್ಲಿ ಬಿಗ್​ಬಾಸ್ ಕನ್ನಡ ಸೀಸನ್ 12 ಅನ್ನು ಯಾರು ನಿರೂಪಣೆ ಮಾಡಲಿದ್ದಾರೆ ಎಂಬ ಪ್ರಶ್ನೆಗೆ ಉತ್ತರ ಸಿಗುವ ಬಹುತೇಕ ಸಾಧ್ಯತೆಗಳು ಇವೆ.

ಈಗಾಗಲೇ ಕೆಲವು ಊಹಾಪೋಹಳು ಹರಿದಾಡುತ್ತಿದ್ದು, ಆಯೋಜಕರು ಸುದೀಪ್ ಅವರ ಮನವೊಲಿಸಿದ್ದು, ಸುದೀಪ್ ಅವರೇ ಸೀಸನ್ 12ನ್ನು ಸಹ ನಿರೂಪಣೆ ಮಾಡಲಿದ್ದಾರೆ ಎನ್ನಲಾಗುತ್ತಿದೆ. ಇನ್ನೊಂದು ಗಾಳಿಸುದ್ದಿಯ ಪ್ರಕಾರ, ಸುದೀಪ್ ಅವರು ಮತ್ತೊಬ್ಬ ನಿರೂಪಕರೊಬ್ಬರ ಜೊತೆಗೆ ಜಂಟಿಯಾಗಿ ಈ ಸೀಸನ್ ನಡೆಸಿಕೊಡಲಿದ್ದಾರೆ ಎನ್ನಲಾಗುತ್ತಿದೆ. ನಾಳೆ ಹೊಸ ಪ್ರೋಮೋ ಬಿಡುಗಡೆ ಆಗುವ ಸಾಧ್ಯತೆಯೂ ಇದ್ದಂತಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಕ್ಷಮೆ ಕೇಳಿದ ಮೇಲೂ ಕೆನ್ನೆಗೆ ಬಾರಿಸಿದ ಯುವತಿಗೆ ಮನಬಂದಂತೆ ಥಳಿಸಿದ ಯುವಕ!
ಕ್ಷಮೆ ಕೇಳಿದ ಮೇಲೂ ಕೆನ್ನೆಗೆ ಬಾರಿಸಿದ ಯುವತಿಗೆ ಮನಬಂದಂತೆ ಥಳಿಸಿದ ಯುವಕ!
ಹೈಕೋರ್ಟ್ ತೀರ್ಪಿನ ಬೆನ್ನಲ್ಲೇ ಭೋಜಶಾಲೆಯಲ್ಲಿ ಹಿಂದೂ ಭಕ್ತರಿಂದ ಭಜನೆ
ಹೈಕೋರ್ಟ್ ತೀರ್ಪಿನ ಬೆನ್ನಲ್ಲೇ ಭೋಜಶಾಲೆಯಲ್ಲಿ ಹಿಂದೂ ಭಕ್ತರಿಂದ ಭಜನೆ
ಸ್ಲೀಪರ್ ಬಸ್ ಭಸ್ಮವಾದ್ರೂ 36 ಪ್ರಯಾಣಿಕರು ಪಾರಾಗಿದ್ಹೇಗೆ?
ಸ್ಲೀಪರ್ ಬಸ್ ಭಸ್ಮವಾದ್ರೂ 36 ಪ್ರಯಾಣಿಕರು ಪಾರಾಗಿದ್ಹೇಗೆ?
ಭೂಪಟದಿಂದಲೇ ಮರೆಯಾಗಬೇಕಾದೀತು: ಪಾಕ್​ಗೆ ಸೇನಾ ಮುಖ್ಯಸ್ಥರ ಖಡಕ್ ಎಚ್ಚರಿಕೆ!
ಭೂಪಟದಿಂದಲೇ ಮರೆಯಾಗಬೇಕಾದೀತು: ಪಾಕ್​ಗೆ ಸೇನಾ ಮುಖ್ಯಸ್ಥರ ಖಡಕ್ ಎಚ್ಚರಿಕೆ!