AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್​ಬಾಸ್ ಕನ್ನಡ: ನಾಳೆ ಸಿಗಲಿದೆ ಎಲ್ಲ ಪ್ರಶ್ನೆಗಳಿಗೂ ಉತ್ತರ

Bigg Boss Kannada season 12: ಬಿಗ್​ಬಾಸ್ ಸೀಸನ್​ ಮತ್ತೆ ಪ್ರಾರಂಭವಾಗಿದೆ. ಬೇರೆ ಬೇರೆ ಭಾಷೆಗಳಲ್ಲಿ ಬಿಗ್​​ಬಾಸ್ ಹೊಸ ಸೀಸನ್​ನ ಪ್ರೋಮೊಗಳು, ಘೋಷಣೆಗಳು ಹರಿದಾಡುತ್ತಿವೆ. ಇದೀಗ ಕನ್ನಡ ಬಿಗ್​ಬಾಸ್ ಸೀಸನ್ 12ರ ಅಪ್​ಡೇಟ್ ಸಹ ಹೊರಬೀಳಲಿದೆ. ಈ ಬಾರಿ ನಿರೂಪಕರು ಯಾರಿರಲಿದ್ದಾರೆ. ಈ ಸೀಸನ್​ನ ವಿಶೇಷತೆಗಳೇನು? ಎಲ್ಲ ಪ್ರಶ್ನೆಗಳಿಗೆ ಜೂನ್ 30ರಂದು ಉತ್ತರ ಸಿಗಲಿದೆ.

ಬಿಗ್​ಬಾಸ್ ಕನ್ನಡ: ನಾಳೆ ಸಿಗಲಿದೆ ಎಲ್ಲ ಪ್ರಶ್ನೆಗಳಿಗೂ ಉತ್ತರ
Bigg Boss Kannada 12
ಮಂಜುನಾಥ ಸಿ.
|

Updated on: Jun 29, 2025 | 5:48 PM

Share

ಬಿಗ್​ಬಾಸ್ ಕನ್ನಡ ಸೀಸನ್ 11 (Bigg Boss Kannada) ಮುಗಿದು ತಿಂಗಳುಗಳಾಗಿವೆ. ಇದೀಗ 12ನೇ ಸೀಸನ್​ಗೆ ತಯಾರಿ ಆರಂಭವಾಗಿದೆ. ಆದರೆ ಈ ಬಾರಿಯ ಬಿಗ್​​ಬಾಸ್ ಸ್ಪರ್ಧಿಗಳ ಕಾರಣಕ್ಕೆಲ್ಲದೆ ಆಯೋಜಕರು ಮತ್ತು ನಿರೂಪಕರ ಕಾರಣಕ್ಕೆ ಭಾರಿ ಗಮನ ಸೆಳೆದಿದೆ. ಕನ್ನಡದಲ್ಲಿ ಬಿಗ್​​ಬಾಸ್ ರಿಯಾಲಿಟಿ ಶೋ ಆರಂಭ ಆದಾಗಿನಿಂದಲೂ ಸುದೀಪ್ ಅವರೇ ಬಿಗ್​ಬಾಸ್ ನಿರೂಪಣೆ ಮಾಡಿಕೊಂಡು ಬಂದಿದ್ದಾರೆ. ಅವರ ಗೈರು ಹಾಜರಿಯಲ್ಲಿ ಸಹ ಯಾರೊಬ್ಬರೂ ಸಹ ಆ ವೇದಿಕೆ ಏರಿದ್ದಿಲ್ಲ. ಆದರೆ ತಾವು ಇನ್ನು ಮುಂದೆ ಬಿಗ್​ಬಾಸ್ ನಿರೂಪಣೆ ಮಾಡುವುದಿಲ್ಲ ಎಂದು ಸುದೀಪ್ ಘೋಷಣೆ ಮಾಡಿದ್ದಾರೆ.

ಇದೀಗ ಬಿಗ್​ಬಾಸ್ ಆಯೋಜಕರು ಹೊಸ ನಿರೂಪಕರಿಗೆ ಹುಡುಕಾಟ ನಡೆಸುತ್ತಿದ್ದಾರೆ. ಕೆಲವು ನಟರನ್ನು ಸಂಪರ್ಕ ಮಾಡಿದ್ದಾರೆ ಎಂಬ ಸುದ್ದಿಗಳು ಹರಿದಾಡಿತ್ತು. ಡಾಲಿ ಧನಂಜಯ್, ರಿಷಬ್ ಶೆಟ್ಟಿ, ರಮೇಶ್ ಅರವಿಂದ್ ಇನ್ನೂ ಕೆಲವು ಹೆಸರುಗಳು ತುಸು ಜೋರಾಗಿಯೇ ಕೇಳಿ ಬಂದಿತ್ತು. ಆದರೆ ಯಾವುದೂ ಸಹ ಅಧಿಕೃತ ಆಗಿರಲಿಲ್ಲ. ಆದರೆ ಈಗ ಎಲ್ಲ ಪ್ರಶ್ನೆಗಳಿಗೆ ನಾಳೆ (ಜೂನ್ 30) ಉತ್ತರ ಸಿಗಲಿದೆ.

ಇದನ್ನೂ ಓದಿ:ಅರ್ಥವಾಗದ ಹಾಡು ಹಾಡುತ್ತಾ ಫೋಸು ಕೊಟ್ಟ ಬಿಗ್​ಬಾಸ್ ಇಶಾನಿ

ಜೂನ್ 30 ರಂದು ಬಿಗ್​ಬಾಸ್ ಕನ್ನಡ ಆಯೋಜಕರು, ಕಲರ್ಸ್ ವಾಹಿನಿ ಬಿಗ್​ಬಾಸ್ ಕುರಿತು ಪತ್ರಿಕಾಗೋಷ್ಠಿ ಆಯೋಜನೆ ಮಾಡಿದೆ. ತಾಜ್ ಹೋಟೆಲ್​​ನಲ್ಲಿ ಪತ್ರಿಕಾಗೋಷ್ಠಿ ಆಯೋಜನೆ ಮಾಡಲಾಗಿದ್ದು, ಸಾರ್ವಜನಿಕರಿಗೆ ಪ್ರವೇಶ ಇರುವುದಿಲ್ಲ. ಈ ಪತ್ರಿಕಾ ಗೋಷ್ಠಿಯಲ್ಲಿ ಬಿಗ್​ಬಾಸ್ ಕನ್ನಡ ಸೀಸನ್ 12 ಅನ್ನು ಯಾರು ನಿರೂಪಣೆ ಮಾಡಲಿದ್ದಾರೆ ಎಂಬ ಪ್ರಶ್ನೆಗೆ ಉತ್ತರ ಸಿಗುವ ಬಹುತೇಕ ಸಾಧ್ಯತೆಗಳು ಇವೆ.

ಈಗಾಗಲೇ ಕೆಲವು ಊಹಾಪೋಹಳು ಹರಿದಾಡುತ್ತಿದ್ದು, ಆಯೋಜಕರು ಸುದೀಪ್ ಅವರ ಮನವೊಲಿಸಿದ್ದು, ಸುದೀಪ್ ಅವರೇ ಸೀಸನ್ 12ನ್ನು ಸಹ ನಿರೂಪಣೆ ಮಾಡಲಿದ್ದಾರೆ ಎನ್ನಲಾಗುತ್ತಿದೆ. ಇನ್ನೊಂದು ಗಾಳಿಸುದ್ದಿಯ ಪ್ರಕಾರ, ಸುದೀಪ್ ಅವರು ಮತ್ತೊಬ್ಬ ನಿರೂಪಕರೊಬ್ಬರ ಜೊತೆಗೆ ಜಂಟಿಯಾಗಿ ಈ ಸೀಸನ್ ನಡೆಸಿಕೊಡಲಿದ್ದಾರೆ ಎನ್ನಲಾಗುತ್ತಿದೆ. ನಾಳೆ ಹೊಸ ಪ್ರೋಮೋ ಬಿಡುಗಡೆ ಆಗುವ ಸಾಧ್ಯತೆಯೂ ಇದ್ದಂತಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ