AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bigg Boss Kannada Press Meet Live: ‘ಬಿಗ್ ಬಾಸ್ ಕನ್ನಡ ಸೀಸನ್​ 12’ ಬಗ್ಗೆ ಕಲರ್ಸ್ ಕನ್ನಡ ವಾಹಿನಿ ಸುದ್ದಿಗೋಷ್ಠಿ ಲೈವ್

‘ಬಿಗ್ ಬಾಸ್ ಕನ್ನಡ’ ಹೊಸ ಸೀಸನ್​ ಪ್ರಸಾರಕ್ಕೆ ತಯಾರಿ ನಡೆಯುತ್ತಿದೆ. ಆ ಬಗ್ಗೆ ಮಾಹಿತಿ ನೀಡಲು ಸುದ್ದಿಗೋಷ್ಠಿ ಕರೆಯಲಾಗಿದೆ. ‘ಬಿಗ್ ಬಾಸ್ ಕನ್ನಡ ಸೀಸನ್​ 12’ ಶೋ ಬಗ್ಗೆ ಹಬ್ಬಿರುವ ಅಂತೆ-ಕಂತೆಗಳಿಗೆ ಆಯೋಜಕರು ಪ್ರತಿಕ್ರಿಯೆ ನೀಡುತ್ತಿದ್ದಾರೆ. ಶೋ ನಿರೂಪಕರಾಗಿ ಕಿಚ್ಚ ಸುದೀಪ್ ಮುಂದುವರಿಯುತ್ತಾರಾ ಎಂಬ ಪ್ರಶ್ನೆಗೂ ಉತ್ತರ ಸಿಗಲಿದೆ.

Bigg Boss Kannada Press Meet Live: ‘ಬಿಗ್ ಬಾಸ್ ಕನ್ನಡ ಸೀಸನ್​ 12’ ಬಗ್ಗೆ ಕಲರ್ಸ್ ಕನ್ನಡ ವಾಹಿನಿ ಸುದ್ದಿಗೋಷ್ಠಿ ಲೈವ್
Bigg Boss Kannada, Kichcha Sudeep
ಮದನ್​ ಕುಮಾರ್​
|

Updated on:Jun 30, 2025 | 4:11 PM

Share

ಕಿರುತೆರೆ ಲೋಕದ ಅತ್ಯಂತ ಜನಪ್ರಿಯ ಶೋ ‘ಬಿಗ್ ಬಾಸ್’ (Bigg Boss) ವಿವಿಧ ಭಾಷೆಗಳಲ್ಲಿ ಸಕ್ಸಸ್ ಆಗಿದೆ. ಕನ್ನಡದಲ್ಲಿ ಕೂಡ ಯಶಸ್ವಿಯಾಗಿ 11 ಸೀಸನ್​ಗಳು ಪೂರ್ಣಗೊಂಡಿವೆ. 11ನೇ ಸೀಸನ್​ನಲ್ಲಿ ಸಿಂಗರ್ ಹನುಮಂತ ಅವರು ಟ್ರೋಫಿ ಗೆದ್ದರು. ಈಗ 12ನೇ ಸೀಸನ್​​ಗೆ ನಿರೀಕ್ಷೆ ಹೆಚ್ಚಾಗಿದೆ. ‘ಬಿಗ್ ಬಾಸ್​ ಕನ್ನಡ ಸೀಸನ್ 12’ (Bigg Boss Kannada 12) ಕಾರ್ಯಕ್ರಮವನ್ನು ಯಾರು ನಿರೂಪಣೆ ಮಾಡುತ್ತಾರೆ ಎಂಬ ಬಗ್ಗೆ ಅಭಿಮಾನಿಗಳಲ್ಲಿ ಕುತೂಹಲ ಇದೆ. ಮತ್ತೆ ಸುದೀಪ್ (Kichcha Sudeep) ಅವರೇ ನಿರೂಪಣೆ ಮಾಡಬೇಕು ಎಂಬುದು ಅಭಿಮಾನಿಗಳ ಆಸೆ. ಈ ಎಲ್ಲ ವಿಷಯಗಳ ಬಗ್ಗೆ ಮಾಹಿತಿ ನೀಡಲು ಸುದ್ದಿಗೋಷ್ಠಿ ಏರ್ಪಡಿಸಲಾಗಿದೆ.

ಬೆಂಗಳೂರಿನ ಖಾಸಗಿ ಹೋಟೆಲ್​ನಲ್ಲಿ ‘ಕಲರ್ಸ್​ ಕನ್ನಡ’ ವಾಹಿನಿಯು ಸುದ್ದಿಗೋಷ್ಠಿ ಆಯೋಜಿಸಿದೆ. ‘ಬಿಗ್ ಬಾಸ್ ಕನ್ನಡ ಸೀಸನ್​ 11’ ರಿಯಾಲಿಟಿ ಶೋನ ಆಯೋಜಕರು ಈ ಸುದ್ದಿಗೋಷ್ಠಿಯಲ್ಲಿ ಭಾಗಿಯಾಗಿದ್ದಾರೆ. ಬಿಗ್ ಬಾಸ್ ಕನ್ನಡ ಹೊಸ ಆವೃತ್ತಿಯ ಬಗ್ಗೆ ಮಾಧ್ಯಮಗಳ ಜೊತೆ ಮಾಹಿತಿ ಹಂಚಿಕೊಳ್ಳಲಾಗುತ್ತಿದೆ. ವಿವಿಧ ಪ್ರಶ್ನೆಗಳಿಗೆ ಉತ್ತರ ಸಿಗುತ್ತಿದೆ.

ಕನ್ನಡದಲ್ಲಿ ಮೊದಲನೇ ಸೀಸನ್​ನಿಂದ 11ನೇ ಸೀಸನ್ ತನಕ ಕಿಚ್ಚ ಸುದೀಪ್ ಅವರೇ ಸತತವಾಗಿ ಬಿಗ್ ಬಾಸ್ ಕಾರ್ಯಕ್ರಮದ ನಿರೂಪಣೆ ಮಾಡಿದರು. ಆದರೆ 11ನೇ ಸೀಸನ್​ ತಮ್ಮ ಕೊನೆಯೇ ಸೀಸನ್​ ಎಂದು ಸುದೀಪ್ ಅವರು ಘೋಷಣೆ ಮಾಡಿದ ಬಳಿಕ ಅಭಿಮಾನಿಗಳಿಗೆ ನಿರಾಸೆ ಆಗಿತ್ತು. ಯಾಕೆಂದರೆ ಸುದೀಪ್ ಇಲ್ಲದೇ ಬಿಗ್ ಬಾಸ್ ಕಾರ್ಯಕ್ರಮವನ್ನು ಕಲ್ಪಿಸಿಕೊಳ್ಳಲು ಫ್ಯಾನ್ಸ್ ಸಿದ್ಧರಿಲ್ಲ.

ವರ್ಷದಿಂದ ವರ್ಷಕ್ಕೆ ಬಿಗ್ ಬಾಸ್ ರಿಯಾಲಿಟಿ ಶೋನಲ್ಲಿ ಅದ್ದೂರಿತನ ಹೆಚ್ಚುತ್ತಿದೆ. ಕೆಲವು ವಿವಾದಗಳು ಇದ್ದರೂ ಕೂಡ ಕಾರ್ಯಕ್ರಮದ ಜನಪ್ರಿಯತೆ ಕೂಡ ಜಾಸ್ತಿ ಆಗುತ್ತಿದೆ. ಪ್ರತಿ ಸೀಸನ್​ನಲ್ಲಿ ಉತ್ತಮ ಟಿಆರ್​ಪಿ ಬರುತ್ತಿದೆ. ‘ಬಿಗ್ ಬಾಸ್ ಕನ್ನಡ ಸೀಸನ್ 11’ ಅತ್ಯಂತ ಯಶಸ್ವಿ ಆಯಿತು. ಈಗ ‘ಬಿಗ್ ಬಾಸ್ ಕನ್ನಡ 12’ ಹೇಗಿರಲಿದೆ ಎಂಬುದನ್ನು ತಿಳಿದುಕೊಳ್ಳಲು ಪ್ರೇಕ್ಷಕರು ಕಾದಿದ್ದಾರೆ.

ಇದನ್ನೂ ಓದಿ: ಸಲ್ಮಾನ್ ಖಾನ್ ಈ ಬಾರಿಯ ಬಿಗ್ ಬಾಸ್​ಗೆ ಪಡೆಯೋ ಸಂಭಾವನೆ ಇಷ್ಟೊಂದಾ?

ಪ್ರತಿಬಾರಿಯೂ ಬಿಗ್ ಬಾಸ್ ಶೋ ಆರಂಭಕ್ಕೂ ಮುನ್ನ ಒಂದಷ್ಟು ಗಾಸಿಪ್​ಗಳು ಹುಟ್ಟಿಕೊಳ್ಳುತ್ತವೆ. ಈ ಬಾರಿ ಕೂಡ ಅದು ಮುಂದುವರಿದಿದೆ. ಅನೇಕ ಅಂತೆ-ಕಂತೆಗಳು ಈಗಾಗಲೇ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿವೆ. ಅವುಗಳಿಗೆಲ್ಲ ಈ ಸುದ್ದಿಗೋಷ್ಠಿಯಲ್ಲಿ ‘ಕಲರ್ಸ್ ಕನ್ನಡ’ ವಾಹಿನಿಯವರು ಸ್ಪಷ್ಟನೆ ನೀಡಲಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 4:02 pm, Mon, 30 June 25

ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್​​​: ಪೊಲೀಸ್ ಇಲಾಖೆಯಿಂದ ತರಬೇತಿ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್​​​: ಪೊಲೀಸ್ ಇಲಾಖೆಯಿಂದ ತರಬೇತಿ
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..
ಭಲೇ ಆನೆ: ಪೊಲೀಸರಂತೆ ವಾಹನ ತಪಾಸಣೆ ಮಾಡಿದ ಕಾಡಾನೆ, ವಿಡಿಯೋ ನೋಡಿ
ಭಲೇ ಆನೆ: ಪೊಲೀಸರಂತೆ ವಾಹನ ತಪಾಸಣೆ ಮಾಡಿದ ಕಾಡಾನೆ, ವಿಡಿಯೋ ನೋಡಿ
ತಲ್ವಾರ್ ಹಿಡಿದು ಡ್ಯಾನ್ಸ್ ಮಾಡಿ ಫೇಸ್​ಬುಕ್ ಪೋಸ್ಟ್: ಇಬ್ಬರ ಬಂಧನ
ತಲ್ವಾರ್ ಹಿಡಿದು ಡ್ಯಾನ್ಸ್ ಮಾಡಿ ಫೇಸ್​ಬುಕ್ ಪೋಸ್ಟ್: ಇಬ್ಬರ ಬಂಧನ