AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್​​ಬಾಸ್ ಮನೆಗೆ ಹೋಗುತ್ತಿರುವವರು ಯಾರು? ಇಲ್ಲಿದೆ ನೋಡಿ ಸಂಭಾವ್ಯ ಪಟ್ಟಿ

Bigg Boss Kannada season 12: ಬಿಗ್​​ಬಾಸ್ ಕನ್ನಡ ಸೀಸನ್ 12 ನಾಳೆ ಭಾನುವಾರ ಪ್ರಾರಂಭ ಆಗಲಿದೆ. ಇನ್ನೋವೇಟಿವ್ ಫಿಲಂ ಸಿಟಿಯಲ್ಲಿ ಅದ್ಧೂರಿ, ಐಶಾರಾಮಿ ಬಿಗ್​​ಬಾಸ್ ಮನೆ ಸಿದ್ಧವಾಗಿದೆ. 18 ಮಂದಿ ಸ್ಪರ್ಧಿಗಳು ನಾಳೆ ಬಿಗ್​​ಬಾಸ್ ಮನೆ ಪ್ರವೇಶ ಮಾಡಲಿದ್ದಾರೆ. ಯಾರು ಈ 18 ಮಂದಿ ಸ್ಪರ್ಧಿಗಳು, ಯಾರ್ಯಾರು ಮನೆ ಸೇರಲಿದ್ದಾರೆ. ಇಲ್ಲಿದೆ ನೋಡಿ ಪಟ್ಟಿ...

ಬಿಗ್​​ಬಾಸ್ ಮನೆಗೆ ಹೋಗುತ್ತಿರುವವರು ಯಾರು? ಇಲ್ಲಿದೆ ನೋಡಿ ಸಂಭಾವ್ಯ ಪಟ್ಟಿ
Bigg Boss Kannada 12
ಮಂಜುನಾಥ ಸಿ.
|

Updated on: Sep 27, 2025 | 5:35 PM

Share

ಬಿಗ್​​ಬಾಸ್ ಕನ್ನಡ ಸೀಸನ್ 12 ನಾಳೆ (ಸೆಪ್ಟೆಂಬರ್ 28) ಪ್ರಾರಂಭ ಆಗಲಿದೆ. ಕಿಚ್ಚ ಸುದೀಪ್ ಅವರು ಈ ಬಾರಿಯೂ ಬಿಗ್​​ಬಾಸ್ ನಿರೂಪಣೆ ಮಾಡಲಿದ್ದಾರೆ. ಇನ್ನೊವೇಟಿವ್ ಫಿಲಂ ಸಿಟಿಯಲ್ಲಿ ಅದ್ಧೂರಿಯಾಗಿ ಬಿಗ್​​ಬಾಸ್ ಮನೆ ನಿರ್ಮಾಣ ಮಾಡಲಾಗಿದ್ದು, ಬಿಗ್​​ಬಾಸ್ ಮನೆಯ ಸಣ್ಣ ಝಲಕ್ ಅನ್ನು ಸುದೀಪ್ ಅವರು ಇಂದು ತೋರಿಸಿದ್ದಾರೆ. ಇನ್ನು ಈ ಬಾರಿ 18 ಮಂದಿ ಬಿಗ್​​ಬಾಸ್ ಮನೆ ಪ್ರವೇಶ ಮಾಡಲಿದ್ದಾರೆ. ಈ ಬಾರಿ ಮನೆ ಪ್ರವೇಶಿಸುವ 18 ಮಂದಿ ಯಾರು? ಇಲ್ಲಿದೆ ಸಂಭಾವ್ಯ ಪಟ್ಟಿ…

ನಟ ಕಾಕ್ರೂಚ್ ಸುಧಿ ಈ ಬಾರಿ ಬಿಗ್​​ಬಾಸ್ ಮನೆ ಪ್ರವೇಶಿಸುವುದು ಬಹುತೇಕ ಖಾತ್ರಿ ಎನ್ನಲಾಗುತ್ತಿದೆ. ಸುಧಿ ಅವರು ಮಾಸ್ಕ್ ಹಾಕಿಕೊಂಡು ತಾವು ಈ ಬಾರಿ ಬಿಗ್​​ಬಾಸ್ ಮನೆಗೆ ಹೋಗುತ್ತಿರುವುದಾಗಿ ಜನರಿಗೆ ಹೇಳುತ್ತಿರುವ ವಿಡಿಯೋ ಒಂದು ಈಗಾಗಲೇ ವೈರಲ್ ಆಗಿದೆ. ಚಾನೆಲ್​​ನವರೇ ಹೀಗೊಂದು ವಿಡಿಯೋ ಮಾಡಿಸಿ ಹರಿಬಿಟ್ಟಿದ್ದಾರೆ. ಅಲ್ಲಿಗೆ ಕಾಕ್ರೂಚ್ ಸುಧಿ ಬಿಗ್​​ಬಾಸ್​​ಗೆ ಹೋಗುವುದು ಪಕ್ಕಾ ಎಂದಾಗಿದೆ.

ನಿರ್ಮಾಪಕ ಕೆ ಮಂಜು ಪುತ್ರ, ಹಲವು ಸಿನಿಮಾಗಳಲ್ಲಿ ನಟಿಸಿರುವ ಕೆ ಮಂಜು ಈ ಬಾರಿ ಬಿಗ್​​ಬಾಸ್ ಮನೆಗೆ ಹೋಗುವುದು ಪಕ್ಕಾ ಎನ್ನಲಾಗುತ್ತಿದೆ. ‘ಪಡ್ಡೆ ಹುಲಿ’, ‘ರಾಣಾ’ ಮತ್ತು ‘ವಿಷ್ಣು ಪ್ರಿಯ’ ಸಿನಿಮಾಗಳಲ್ಲಿ ಶ್ರೆಯಸ್ ಮಂಜು ನಟಿಸಿದ್ದಾರೆ. ಶಾಂತ ಸ್ವಭಾವದ ಶ್ರೇಯಸ್ ಮಂಜು ಬಿಗ್​​ಬಾಸ್ ಮನೆಯಲ್ಲಿ ಉಳಿದುಕೊಳ್ಳುತ್ತಾರೆಯೇ ಕಾದು ನೋಡಬೇಕು.

ಇದನ್ನೂ ಓದಿ:ಬಿಗ್​​ಬಾಸ್ ಕನ್ನಡ ಸೀಸನ್ 12: ಈ ಬಾರಿಯ ಮನೆ ಹೀಗಿದೆ ನೋಡಿ

ಪ್ರತಿ ಸೀಸನ್​​ನಲ್ಲೂ ಕೆಲ ಹಿರಿಯ ನಟ, ನಟಿಯರನ್ನು ಬಿಗ್​​ಬಾಸ್ ಮನೆಗೆ ಕರೆತರಲಾಗುತ್ತದೆ. ಅಂತೆಯೇ ಈ ಬಾರಿ ಮಂಜು ಭಾಷಿಣಿ ಅವರನ್ನು ಬಿಗ್​​ಬಾಸ್ ಮನೆಗೆ ಕರೆತರಲಾಗಿದೆ. ಹಲವು ಸಿನಿಮಾಗಳು, ಧಾರಾವಾಹಿಗಳಲ್ಲಿ ತಮ್ಮ ಅದ್ಭುತ ನಟನೆಯಿಂದ ಲಕ್ಷಾಂತರ ಮಂದಿ ಅಭಿಮಾನಿಗಳನ್ನು ಮಂಜು ಭಾಷಿಣಿ ಸಂಪಾದಿಸಿದ್ದಾರೆ.

ನಿರೂಪಕಿ ಆಗಿ ಜನಪ್ರಿಯರಾಗಿರುವ ಜಾಹ್ನವಿ, ‘ಗೀತ’ ಧಾರಾವಾಹಿ ನಾಯಕ ಧನುಷ್ ಗೌಡ , ಹಾಸ್ಯ ನಟ ಗಿಲ್ಲಿ, ನಟಿ ರಾಶಿಕ ಶೆಟ್ಟಿ, ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯ ಘಟಕ ಅಧ್ಯಕ್ಷೆ ಅಶ್ವಿನಿ ಗೌಡ, ಕೊತ್ತಲವಾಡಿ ಸಿನಿಮಾದ ನಟಿ ಕಾವ್ಯ ಶೈವ, ಕಾಮಿಡಿ ಕಿಲಾಡಿಗಳು ಖ್ಯಾತಿಯ ಸೂರಜ್, ಆರ್. ಜೆ ಆಗಿರುವ ಅಮಿತ್, ಡಾಗ್ ಸತೀಶ್ , ನಟಿ ಸ್ಪಂದನ ಸೋಮಣ್ಣ, ನಟಿ ಮೌನ ಗುಡ್ಡೆಮನೆ, ‘ಕೋಟಿ’ ಸಿನಿಮಾದ ವಿಲನ್ ‘ಅಭಿ’ ಇನ್ನೂ ಕೆಲವರು ಈ ಬಾರಿ ಬಿಗ್​​ಬಾಸ್ ಮನೆಗೆ ಸ್ಪರ್ಧಿಗಳಾಗಿ ಎಂಟ್ರಿ ಕೊಡಲಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್