AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್​​ಬಾಸ್ ಮನೆಗೆ ಹೋಗುತ್ತಿರುವವರು ಯಾರು? ಇಲ್ಲಿದೆ ನೋಡಿ ಸಂಭಾವ್ಯ ಪಟ್ಟಿ

Bigg Boss Kannada season 12: ಬಿಗ್​​ಬಾಸ್ ಕನ್ನಡ ಸೀಸನ್ 12 ನಾಳೆ ಭಾನುವಾರ ಪ್ರಾರಂಭ ಆಗಲಿದೆ. ಇನ್ನೋವೇಟಿವ್ ಫಿಲಂ ಸಿಟಿಯಲ್ಲಿ ಅದ್ಧೂರಿ, ಐಶಾರಾಮಿ ಬಿಗ್​​ಬಾಸ್ ಮನೆ ಸಿದ್ಧವಾಗಿದೆ. 18 ಮಂದಿ ಸ್ಪರ್ಧಿಗಳು ನಾಳೆ ಬಿಗ್​​ಬಾಸ್ ಮನೆ ಪ್ರವೇಶ ಮಾಡಲಿದ್ದಾರೆ. ಯಾರು ಈ 18 ಮಂದಿ ಸ್ಪರ್ಧಿಗಳು, ಯಾರ್ಯಾರು ಮನೆ ಸೇರಲಿದ್ದಾರೆ. ಇಲ್ಲಿದೆ ನೋಡಿ ಪಟ್ಟಿ...

ಬಿಗ್​​ಬಾಸ್ ಮನೆಗೆ ಹೋಗುತ್ತಿರುವವರು ಯಾರು? ಇಲ್ಲಿದೆ ನೋಡಿ ಸಂಭಾವ್ಯ ಪಟ್ಟಿ
Bigg Boss Kannada 12
ಮಂಜುನಾಥ ಸಿ.
|

Updated on: Sep 27, 2025 | 5:35 PM

Share

ಬಿಗ್​​ಬಾಸ್ ಕನ್ನಡ ಸೀಸನ್ 12 ನಾಳೆ (ಸೆಪ್ಟೆಂಬರ್ 28) ಪ್ರಾರಂಭ ಆಗಲಿದೆ. ಕಿಚ್ಚ ಸುದೀಪ್ ಅವರು ಈ ಬಾರಿಯೂ ಬಿಗ್​​ಬಾಸ್ ನಿರೂಪಣೆ ಮಾಡಲಿದ್ದಾರೆ. ಇನ್ನೊವೇಟಿವ್ ಫಿಲಂ ಸಿಟಿಯಲ್ಲಿ ಅದ್ಧೂರಿಯಾಗಿ ಬಿಗ್​​ಬಾಸ್ ಮನೆ ನಿರ್ಮಾಣ ಮಾಡಲಾಗಿದ್ದು, ಬಿಗ್​​ಬಾಸ್ ಮನೆಯ ಸಣ್ಣ ಝಲಕ್ ಅನ್ನು ಸುದೀಪ್ ಅವರು ಇಂದು ತೋರಿಸಿದ್ದಾರೆ. ಇನ್ನು ಈ ಬಾರಿ 18 ಮಂದಿ ಬಿಗ್​​ಬಾಸ್ ಮನೆ ಪ್ರವೇಶ ಮಾಡಲಿದ್ದಾರೆ. ಈ ಬಾರಿ ಮನೆ ಪ್ರವೇಶಿಸುವ 18 ಮಂದಿ ಯಾರು? ಇಲ್ಲಿದೆ ಸಂಭಾವ್ಯ ಪಟ್ಟಿ…

ನಟ ಕಾಕ್ರೂಚ್ ಸುಧಿ ಈ ಬಾರಿ ಬಿಗ್​​ಬಾಸ್ ಮನೆ ಪ್ರವೇಶಿಸುವುದು ಬಹುತೇಕ ಖಾತ್ರಿ ಎನ್ನಲಾಗುತ್ತಿದೆ. ಸುಧಿ ಅವರು ಮಾಸ್ಕ್ ಹಾಕಿಕೊಂಡು ತಾವು ಈ ಬಾರಿ ಬಿಗ್​​ಬಾಸ್ ಮನೆಗೆ ಹೋಗುತ್ತಿರುವುದಾಗಿ ಜನರಿಗೆ ಹೇಳುತ್ತಿರುವ ವಿಡಿಯೋ ಒಂದು ಈಗಾಗಲೇ ವೈರಲ್ ಆಗಿದೆ. ಚಾನೆಲ್​​ನವರೇ ಹೀಗೊಂದು ವಿಡಿಯೋ ಮಾಡಿಸಿ ಹರಿಬಿಟ್ಟಿದ್ದಾರೆ. ಅಲ್ಲಿಗೆ ಕಾಕ್ರೂಚ್ ಸುಧಿ ಬಿಗ್​​ಬಾಸ್​​ಗೆ ಹೋಗುವುದು ಪಕ್ಕಾ ಎಂದಾಗಿದೆ.

ನಿರ್ಮಾಪಕ ಕೆ ಮಂಜು ಪುತ್ರ, ಹಲವು ಸಿನಿಮಾಗಳಲ್ಲಿ ನಟಿಸಿರುವ ಕೆ ಮಂಜು ಈ ಬಾರಿ ಬಿಗ್​​ಬಾಸ್ ಮನೆಗೆ ಹೋಗುವುದು ಪಕ್ಕಾ ಎನ್ನಲಾಗುತ್ತಿದೆ. ‘ಪಡ್ಡೆ ಹುಲಿ’, ‘ರಾಣಾ’ ಮತ್ತು ‘ವಿಷ್ಣು ಪ್ರಿಯ’ ಸಿನಿಮಾಗಳಲ್ಲಿ ಶ್ರೆಯಸ್ ಮಂಜು ನಟಿಸಿದ್ದಾರೆ. ಶಾಂತ ಸ್ವಭಾವದ ಶ್ರೇಯಸ್ ಮಂಜು ಬಿಗ್​​ಬಾಸ್ ಮನೆಯಲ್ಲಿ ಉಳಿದುಕೊಳ್ಳುತ್ತಾರೆಯೇ ಕಾದು ನೋಡಬೇಕು.

ಇದನ್ನೂ ಓದಿ:ಬಿಗ್​​ಬಾಸ್ ಕನ್ನಡ ಸೀಸನ್ 12: ಈ ಬಾರಿಯ ಮನೆ ಹೀಗಿದೆ ನೋಡಿ

ಪ್ರತಿ ಸೀಸನ್​​ನಲ್ಲೂ ಕೆಲ ಹಿರಿಯ ನಟ, ನಟಿಯರನ್ನು ಬಿಗ್​​ಬಾಸ್ ಮನೆಗೆ ಕರೆತರಲಾಗುತ್ತದೆ. ಅಂತೆಯೇ ಈ ಬಾರಿ ಮಂಜು ಭಾಷಿಣಿ ಅವರನ್ನು ಬಿಗ್​​ಬಾಸ್ ಮನೆಗೆ ಕರೆತರಲಾಗಿದೆ. ಹಲವು ಸಿನಿಮಾಗಳು, ಧಾರಾವಾಹಿಗಳಲ್ಲಿ ತಮ್ಮ ಅದ್ಭುತ ನಟನೆಯಿಂದ ಲಕ್ಷಾಂತರ ಮಂದಿ ಅಭಿಮಾನಿಗಳನ್ನು ಮಂಜು ಭಾಷಿಣಿ ಸಂಪಾದಿಸಿದ್ದಾರೆ.

ನಿರೂಪಕಿ ಆಗಿ ಜನಪ್ರಿಯರಾಗಿರುವ ಜಾಹ್ನವಿ, ‘ಗೀತ’ ಧಾರಾವಾಹಿ ನಾಯಕ ಧನುಷ್ ಗೌಡ , ಹಾಸ್ಯ ನಟ ಗಿಲ್ಲಿ, ನಟಿ ರಾಶಿಕ ಶೆಟ್ಟಿ, ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯ ಘಟಕ ಅಧ್ಯಕ್ಷೆ ಅಶ್ವಿನಿ ಗೌಡ, ಕೊತ್ತಲವಾಡಿ ಸಿನಿಮಾದ ನಟಿ ಕಾವ್ಯ ಶೈವ, ಕಾಮಿಡಿ ಕಿಲಾಡಿಗಳು ಖ್ಯಾತಿಯ ಸೂರಜ್, ಆರ್. ಜೆ ಆಗಿರುವ ಅಮಿತ್, ಡಾಗ್ ಸತೀಶ್ , ನಟಿ ಸ್ಪಂದನ ಸೋಮಣ್ಣ, ನಟಿ ಮೌನ ಗುಡ್ಡೆಮನೆ, ‘ಕೋಟಿ’ ಸಿನಿಮಾದ ವಿಲನ್ ‘ಅಭಿ’ ಇನ್ನೂ ಕೆಲವರು ಈ ಬಾರಿ ಬಿಗ್​​ಬಾಸ್ ಮನೆಗೆ ಸ್ಪರ್ಧಿಗಳಾಗಿ ಎಂಟ್ರಿ ಕೊಡಲಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ