AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಯ ಜಾಸ್ತಿ ಆಗಿದೆ: ಜನರ ಪ್ರೀತಿ ನೋಡಿ ಬೆಚ್ಚಿದ ಬಿಗ್ ಬಾಸ್ ವಿನ್ನರ್ ಗಿಲ್ಲಿ ನಟ

ಗಿಲ್ಲಿ ನಟ ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 12’ ವಿನ್ನರ್ ಆದ ಬಳಿಕ ಅವರ ಅಭಿಮಾನಿಗಳ ಸಂಖ್ಯೆ ಹೆಚ್ಚಿದೆ. ತಾವು ಹೋದ ಕಡೆಗಳಲ್ಲೆಲ್ಲ ಜನರು ತೋರಿಸುತ್ತಿರುವ ಪ್ರೀತಿಯನ್ನು ಕಂಡು ಗಿಲ್ಲಿ ನಟ ಅವರು ಬೆರಗಾಗಿದ್ದಾರೆ. ಈ ಬಗ್ಗೆ ಟಿವಿ9 ಜೊತೆ ಮಾತನಾಡಿದ ಅವರು ‘ಇದರಿಂದ ಭಯ, ಜವಾಬ್ದಾರಿ ಜಾಸ್ತಿ ಆಗಿದೆ’ ಎಂದು ಹೇಳಿದ್ದಾರೆ.

ಭಯ ಜಾಸ್ತಿ ಆಗಿದೆ: ಜನರ ಪ್ರೀತಿ ನೋಡಿ ಬೆಚ್ಚಿದ ಬಿಗ್ ಬಾಸ್ ವಿನ್ನರ್ ಗಿಲ್ಲಿ ನಟ
Gilli Nata
ಮಾಲತೇಶ ಜಗ್ಗೀನ್
| Edited By: |

Updated on: Jan 19, 2026 | 6:02 PM

Share

‘ಬಿಗ್ ಬಾಸ್ ಕನ್ನಡ ಸೀಸನ್ 12’ (Bigg Boss Kannada Season 12) ರಿಯಾಲಿಟಿ ಶೋ ಟ್ರೋಫಿ ಗೆದ್ದಿರುವ ಗಿಲ್ಲಿ ನಟ ಅವರು ಹುಟ್ಟೂರಿಗೆ ಮರಳಿದ್ದಾರೆ. ಅವರ ಸ್ವಾಗತಕ್ಕೆ ಅಪಾರ ಸಂಖ್ಯೆಯಲ್ಲಿ ಜನರು ಸೇರಿದ್ದಾರೆ. ಅದರಿಂದಾಗಿ ರಸ್ತೆಗಳು ಜಾಮ್ ಆಗಿವೆ. ಅಷ್ಟರಮಟ್ಟಿಗೆ ಕ್ರೇಜ್ ಹೆಚ್ಚಿದೆ. ಈ ವೇಳೆ ಕಿಕ್ಕಿರಿದು ಸೇರಿದ ಜನರ ನಡುವೆ ಟಿವಿ9 ಜೊತೆ ಗಿಲ್ಲಿ ನಟ (Gilli Nata) ಅವರು ಮಾತನಾಡಿದ್ದಾರೆ. ಹುಟ್ಟೂರಿನಲ್ಲಿ ತಮಗೆ ಸಿಗುತ್ತಿರುವ ಪ್ರೀತಿಯ ಬಗ್ಗೆ ಅವರು ಸಂತಸ ವ್ಯಕ್ತಪಡಿಸಿದ್ದಾರೆ.

‘ನಾನು ಕೆ.ಎಂ. ದೊಡ್ಡಿಯಲ್ಲಿ ಐಟಿಐ ಓದಿದ್ದು. ಇದೇ ರಸ್ತೆಯಲ್ಲಿ ಓಡಾಡುತ್ತಿದ್ದೆ. ಸರ್ಕಾರಿ ಬಸ್​ನಲ್ಲಿ ಪಾಸ್ ತೋರಿಸಿ ಓಡಾಡುತ್ತಿದ್ದೆ. ನಾನು ಕನಸು ಮನಸ್ಸಿನಲ್ಲೂ ಅಂದುಕೊಂಡಿರಲಿಲ್ಲ. ಈಗ ಇದೇ ರಸ್ತೆಯಲ್ಲಿ ಕಪ್ ಹಿಡಿದುಕೊಂಡು, ಕಾರಿನಲ್ಲಿ ಬರುತ್ತೇನೆ ಅಂತ ಊಹಿಸಿರಲಿಲ್ಲ. ನಮ್ಮೂರಿಗೆ ನಾವು ವಾಪಸ್ ಬಂದಾಗ ಸಿಕ್ಕಾಪಟ್ಟೆ ಖುಷಿ ಆಗುತ್ತದೆ’ ಎಂದು ಗಿಲ್ಲಿ ನಟ ಅವರು ಹೇಳಿದ್ದಾರೆ.

‘ಜನರ ಪ್ರೀತಿ ಜಾಸ್ತಿ ಆಗುತ್ತಿದೆ. ಅದರಿಂದ ಜವಾಬ್ದಾರಿ ಮತ್ತು ಭಯ ಕೂಡ ಹೆಚ್ಚಾಗುತ್ತಿದೆ. ಖುಷಿಗಿಂತಲೂ ಭಯ ಜಾಸ್ತಿ ಆಗಿದೆ. ಎಲ್ಲಾದರೂ ಎಡವಿಬಿಟ್ಟರೆ ಏನು ಮಾಡೋದು? ಇಷ್ಟು ಜನರ ಪ್ರೀತಿ ಸಂಪಾದಿಸಿದ ಮೇಲೆ ಆ ಭಯ ಯಾವಾಗಲೂ ಇರುತ್ತದೆ’ ಎಂದಿದ್ದಾರೆ ಗಿಲ್ಲಿ ನಟ. ಅವರು ಹೋದ ಕಡೆಗಳಲ್ಲೆಲ್ಲ ಜನರು ಕಿಕ್ಕಿರಿದು ಸೇರುತ್ತಿದ್ದಾರೆ.

ಅಂಬರೀಷ್ ಅವರ ಹುಟ್ಟೂರಾದ ದೊಡ್ಡಅರಸಿನ ಕೆರೆ ಗೇಟ್ ಬಳಿ ಗಿಲ್ಲಿ ಬಂದಾಗ ಅಂಬರೀಷ್ ಫ್ಯಾನ್ಸ್ ಮೆಚ್ಚಿಕೊಂಡು ಮಾತನಾಡಿದರು. ಆ ಬಗ್ಗೆ ಗಿಲ್ಲಿ ನಟ ಪ್ರತಿಕ್ರಿಯೆ ನೀಡಿದ್ದಾರೆ. ‘ಅಂಬರೀಷಣ್ಣನವರ ಕಾಲಿನ ಧೂಳಿಗೂ ನಾನು ಸಮನಲ್ಲ. ಅವರಿಗೆ ನಮ್ಮನ್ನು ಹೋಲಿಸಿಕೊಳ್ಳಲು ಆಗಲ್ಲ. ಅವರ ಊರಿನ ಪಕ್ಕ ನಮ್ಮ ಊರು ಇರುವುದು ನಮ್ಮ ಅದೃಷ್ಟ’ ಎಂದಿದ್ದಾರೆ ಗಿಲ್ಲಿ ನಟ.

ಇದನ್ನೂ ಓದಿ: ಬಿಗ್ ಬಾಸ್ ವಿನ್ನರ್ ಗಿಲ್ಲಿ ನಟ ಹೋದಲ್ಲೆಲ್ಲ ಜನಜಾತ್ರೆ: ಮುಗಿಬಿದ್ದ ಮದ್ದೂರು ಫ್ಯಾನ್ಸ್

ಗಿಲ್ಲಿ ನಟ ಅವರು ಈ ಮಟ್ಟಕ್ಕೆ ಬೆಳೆಯುತ್ತಾರೆ ಎಂದು ಜಗ್ಗೇಶ್ ಈ ಮೊದಲೇ ಊಹಿಸಿದ್ದರು. ಒಂದು ವರ್ಷ ಕಳೆಯುವುದರಲ್ಲಿ 4 ಜನ ಬಾಡಿಗಾರ್ಡ್ ಇಟ್ಟುಕೊಂಡು ಓಡಾಡುತ್ತಾನೆ ಎಂದು ಅವರು ಭವಿಷ್ಯ ನುಡಿದಿದ್ದರು. ಆ ಮಾತು ನಿಜವಾಗಿದೆ. ಈಗ ಪೊಲೀಸ್ ಭದ್ರತೆಯಲ್ಲಿ ಗಿಲ್ಲಿ ನಟ ಅವರು ತೆರಳಿದ್ದಾರೆ. ‘ಜಗ್ಗೇಶ್ ಅವರ ಆಶೀರ್ವಾದದಿಂದ ಈ ರೀತಿ ಆಗಿದೆ’ ಎಂದು ಗಿಲ್ಲಿ ನಟ ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಮಾಲತೇಶ ಜಗ್ಗೀನ್
ಮಾಲತೇಶ ಜಗ್ಗೀನ್

ಮಾಲತೇಶ ಜಗ್ಗೀನ್. Tv9 ಕನ್ನಡ ವಾಹಿನಿ ಫಿಲಂ ಬ್ಯೂರೋ ಮುಖ್ಯಸ್ಥನಾಗಿ ಕೆಲಸ ಮಾಡ್ತಿದ್ದಾರೆ. ಮಾಲತೇಶ ವಿಜಯನಗರ ಜಿಲ್ಲೆ ಹೂವಿನ ಹಡಗಲಿ ತಾಲ್ಲೂಕು ಹೊಳಲು ಗ್ರಾಮದವರು. ಕಳೆದ 15 ವರ್ಷಗಳಲ್ಲಿ ಮಾಧ್ಯಮ ಲೋಕದ ವಿವಿಧ ವಿಭಾಗಗಳಲ್ಲಿ ವರದಿಗಾರಿಕೆ ಮಾಡಿದ ಅನುಭವ ಇದೆ. ಸಿನಿಮಾ ವಿಭಾಗದ ಜೊತೆ ರಾಜಕೀಯ, ಮೆಟ್ರೋ, ಕ್ರೈಂ ವಿಭಾಗದಲ್ಲೂ ಕೆಲವು ಸನ್ನಿವೇಶಗಳಲ್ಲಿ ವರದಿಗಾರಿಕೆ ಮಾಡಿದ್ದಾರೆ. ಹಾವೇರಿಯ ಕೆಎಫ್ ಚಾನಲ್ , ನಂತರ ಬೆಂಗಳೂರಿನ ಸಮಯ ನ್ಯೂಸ್, ಜನಶ್ರಿ ನ್ಯೂಸ್, ಪಬ್ಲಿಕ್ ಟಿವಿ ಸೇರಿದಂತೆ ವಿವಿಧ ವಾಹಿನಿಗಳಲ್ಲಿ ಕೆಲಸ ಮಾಡಿದ ಅನುಭವ ಇದೆ. Tv9kannada ನ್ಯೂಸ್ ಚಾನಲ್ ನಲ್ಲಿ ಕಳೆದ 10 ವರ್ಷಗಳಿಂದ ಇದ್ದಾರೆ. ಕಲೆ, ಸಾಹಿತ್ಯ, ಸಿನಿಮಾ, ಕ್ರಿಡೆ ಆಸಕ್ತಿ ವಿಷಯಗಳು.

Read More
ಮಾವಿನಹಣ್ಣು ಸೇವಿಸಿ ಅಸ್ವಸ್ಥರಾಗಿದ್ದ ಇಬ್ಬರು ಬಾಲಕಿಯರು ಸಾವು
ಮಾವಿನಹಣ್ಣು ಸೇವಿಸಿ ಅಸ್ವಸ್ಥರಾಗಿದ್ದ ಇಬ್ಬರು ಬಾಲಕಿಯರು ಸಾವು
ರಾಜ್ಯಸಭೆಗೆ ಅವಿರೋಧ ಆಯ್ಕೆ: ಪ್ರಮಾಣಪತ್ರ ಸ್ವೀಕರಿಸಿದ ಮಲ್ಲಿಕಾರ್ಜುನ ಖರ್ಗೆ
ರಾಜ್ಯಸಭೆಗೆ ಅವಿರೋಧ ಆಯ್ಕೆ: ಪ್ರಮಾಣಪತ್ರ ಸ್ವೀಕರಿಸಿದ ಮಲ್ಲಿಕಾರ್ಜುನ ಖರ್ಗೆ
ಮಂಗಳೂರಿನಲ್ಲಿ ಬಂದಿಳಿದ ತಮಿಳುನಾಡು ಸಿಎಂ ಜೋಸೆಫ್ ವಿಜಯ್​ಗೆ ಅದ್ದೂರಿ ಸ್ವಾಗ
ಮಂಗಳೂರಿನಲ್ಲಿ ಬಂದಿಳಿದ ತಮಿಳುನಾಡು ಸಿಎಂ ಜೋಸೆಫ್ ವಿಜಯ್​ಗೆ ಅದ್ದೂರಿ ಸ್ವಾಗ
ಖಾಸಗಿ ಜೆಟ್​​ನಲ್ಲಿ ಕುಟುಂಬದ ಜೊತೆ ಕ್ರಿಕೆಟ್ ಆಡಿದ ಸಚಿನ್ ತೆಂಡೂಲ್ಕರ್
ಖಾಸಗಿ ಜೆಟ್​​ನಲ್ಲಿ ಕುಟುಂಬದ ಜೊತೆ ಕ್ರಿಕೆಟ್ ಆಡಿದ ಸಚಿನ್ ತೆಂಡೂಲ್ಕರ್
ರಾಷ್ಟ್ರಪತಿ, ಉಪರಾಷ್ಟ್ರಪತಿಗಳನ್ನು ಭೇಟಿಯಾದ ಸಿಎಂ ಡಿಕೆಶಿ
ರಾಷ್ಟ್ರಪತಿ, ಉಪರಾಷ್ಟ್ರಪತಿಗಳನ್ನು ಭೇಟಿಯಾದ ಸಿಎಂ ಡಿಕೆಶಿ
ಪ್ರಕಾಶ್ ರಾಜ್ ವಿರುದ್ಧ ಚಿನ್ನಯ್ಯ ಆರೋಪಕ್ಕೆ ಗೃಹ ಸಚಿವರು ಹೇಳಿದ್ದೇನು ನೋಡಿ
ಪ್ರಕಾಶ್ ರಾಜ್ ವಿರುದ್ಧ ಚಿನ್ನಯ್ಯ ಆರೋಪಕ್ಕೆ ಗೃಹ ಸಚಿವರು ಹೇಳಿದ್ದೇನು ನೋಡಿ
ಊಟದಲ್ಲಿ ಹುಳ ಕಂಡು ಹೌಹಾರಿದ ಯುವತಿಯರು: ಪಿಜಿ ವಿರುದ್ಧ ಪ್ರತಿಭಟನೆ
ಊಟದಲ್ಲಿ ಹುಳ ಕಂಡು ಹೌಹಾರಿದ ಯುವತಿಯರು: ಪಿಜಿ ವಿರುದ್ಧ ಪ್ರತಿಭಟನೆ
ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ
ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ