AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಗಸ್ಟ್ 16ರಿಂದ ‘ಬಿಗ್ ಬಾಸ್ ಕನ್ನಡ’ ಹೊಸ ಸೀಸನ್ ಶುರು; ಈ ಬಾರಿ ಅಗ್ನಿಪರೀಕ್ಷೆ

ಈ ಬಾರಿ ‘ಬಿಗ್ ಬಾಸ್ ಕನ್ನಡ’ ರಿಯಾಲಿಟಿ ಶೋ ಬಹಳ ಡಿಫರೆಂಟ್ ಆಗಿರಲಿದೆ. ದೊಡ್ಮನೆ ಒಳಗೆ ಕಾಲಿಡಲು ಜನಸಾಮಾನ್ಯರಿಗೂ ಅವಕಾಶ ಸಿಗುತ್ತಿದೆ. ಆದರೆ ಅದಕ್ಕೂ ಮುನ್ನ ದೊಡ್ಡ ಅಗ್ನಿಪರೀಕ್ಷೆ ನಡೆಯಲಿದೆ. ಈ ಅಗ್ನಿಪರೀಕ್ಷೆಯಲ್ಲಿ ಯಶಸ್ವಿ ಆದವರಿಗೆ ಬಿಗ್ ಬಾಸ್ ಶೋನಲ್ಲಿ ಸ್ಪರ್ಧಿಸುವ ಅವಕಾಶ ಸಿಗಲಿದೆ.

ಆಗಸ್ಟ್ 16ರಿಂದ ‘ಬಿಗ್ ಬಾಸ್ ಕನ್ನಡ’ ಹೊಸ ಸೀಸನ್ ಶುರು; ಈ ಬಾರಿ ಅಗ್ನಿಪರೀಕ್ಷೆ
Bigg Boss
ಮದನ್​ ಕುಮಾರ್​
|

Updated on: Aug 04, 2026 | 9:41 PM

Share

ಮುಖ್ಯಾಂಶಗಳು

  • ‘ಬಿಗ್ ಬಾಸ್ ಕನ್ನಡ ಸೀಸನ್ 13’ ಶೋನಲ್ಲಿ ಇರಲಿದೆ ಹೊಸ ಕಾನ್ಸೆಪ್ಟ್.
  • ಅಗ್ನಿಪರೀಕ್ಷೆ ಎದುರಿಸುವ ಜನಸಾಮಾನ್ಯರಿಗೆ ಸಿಗಲಿದೆ ದೊಡ್ಡ ಅವಕಾಶ.
  • ಆ.16ರಿಂದ ಬಿಗ್ ಬಾಸ್ ಅಗ್ನಿಪರೀಕ್ಷೆಯ ಸಂಚಿಕೆಗಳು ಪ್ರಸಾರ ಆಗಲಿವೆ.

ಕಿರುತೆರೆಯಲ್ಲಿ ಬಿಗ್ ಬಾಸ್ ರಿಯಾಲಿಟಿ ಶೋಗೆ ಇರುವ ಜನಪ್ರಿಯತೆ ಅಪಾರ. ಕನ್ನಡದಲ್ಲಿ ಈಗಾಗಲೇ 12 ಸೀಸನ್​ಗಳು ಯಶಸ್ವಿಯಾಗಿ ಮುಗಿದಿವೆ. 13ನೇ ಸೀಸನ್ ಆರಂಭಕ್ಕೆ ಸಕಲ ಸಿದ್ಧತೆ ನಡೆದಿದೆ. ‘ಬಿಗ್ ಬಾಸ್ ಕನ್ನಡ ಸೀಸನ್ 13’ (Bigg Boss Kannada Season 13) ಆರಂಭಕ್ಕಾಗಿ ಕಾದಿದ್ದ ವೀಕ್ಷಕರಿಗೆ ಗುಡ್ ನ್ಯೂಸ್ ಸಿಕ್ಕಿದೆ. ಈ ಬಾರಿ ಬಿಗ್ ಬಾಸ್ ಯಾವಾಗ ಪ್ರಾರಂಭ ಆಗಲಿದೆ ಎಂಬ ಪ್ರಶ್ನೆಗೆ ‘ಕಲರ್ಸ್ ಕನ್ನಡ’ (Colors Kannada) ವಾಹಿನಿ ಉತ್ತರ ನೀಡಿದೆ. ಹೊಸ ಪ್ರೋಮೋ ಮೂಲಕ ಮಾಹಿತಿ ಹಂಚಿಕೊಳ್ಳಲಾಗಿದೆ. ಆಗಸ್ಟ್ 16ರಿಂದ ‘ಬಿಗ್ ಬಾಸ್’ ಶುರು ಆಗಲಿದೆ.

ಈ ಬಾರಿ ‘ಬಿಗ್ ಬಾಸ್ ಕನ್ನಡ’ ರಿಯಾಲಿಟಿ ಶೋ ಸಂಪೂರ್ಣ ಭಿನ್ನವಾಗಿ ಇರಲಿದೆ. ಸೆಲೆಬ್ರಿಟಿಗಳು ಮಾತ್ರವಲ್ಲದೇ ಸಾಮಾನ್ಯ ಜನರಿಗೂ ದೊಡ್ಮನೆಗೆ ಕಾಲಿಡುವ ಅವಕಾಶವನ್ನು ನೀಡಲಾಗುತ್ತಿದೆ. ತಮ್ಮ ಪ್ರತಿಭೆಯನ್ನು ತೋರಿಸುವ ಮೂಲಕ ಆಡಿಷನ್ ನೀಡುವಂತೆ ಈ ಹಿಂದೆ ಜನರಿಗೆ ಅವಕಾಶ ಕಲ್ಪಿಸಲಾಗಿತ್ತು. ಲಕ್ಷಾಂತರ ಜನರು ಆಸಕ್ತಿ ತೋರಿಸಿದ್ದಾರೆ.

ಆಗಸ್ಟ್ 16ರಿಂದ ಬಿಗ್ ಬಾಸ್ ಅಗ್ನಿಪರೀಕ್ಷೆ:

ಬಿಗ್ ಬಾಸ್ ಮನೆಗೆ ಬರುವ ಉತ್ಸಾಹದಲ್ಲಿ ಇರುವವರಿಗೆ ವೇದಿಕೆ ಸಜ್ಜುಗೊಳಿಸಲಾಗಿದೆ. ಆಡಿಷನ್ ನೀಡಿರುವವರಿಗೆ ಅಗ್ನಿಪರೀಕ್ಷೆ ಏರ್ಪಡಿಸಲಾಗುತ್ತದೆ. ಯಶಸ್ವಿಯಾಗಿ ಅಗ್ನಿಪರೀಕ್ಷೆ ಎದುರಿಸುವವರಿಗೆ ಬಿಗ್ ಬಾಸ್ ಮನೆಯೊಳಗೆ ಕಾಲಿಡುವ ಅವಕಾಶ ಸಿಗಲಿದೆ. ಈ ಅಗ್ನಿಪರೀಕ್ಷೆಯ ಸಂಚಿಕೆಗಳು ಆಗಸ್ಟ್ 16ರಿಂದ ಪ್ರಸಾರ ಆಗಲಿವೆ. ಅಂದು ರಾತ್ರಿ 9 ಗಂಟೆಗೆ ಕಾರ್ಯಕ್ರಮಕ್ಕೆ ಚಾಲನೆ ಸಿಗಲಿದೆ. ಬಳಿಕ ಪ್ರತಿ ಸೋಮವಾರದಿಂದ ಶುಕ್ರವಾರ ರಾತ್ರಿ 9.30ಕ್ಕೆ ಎಪಿಸೋಡ್​ಗಳು ಪ್ರಸಾರವಾಗಲಿದೆ.

ಬಿಗ್ ಬಾಸ್ ಕನ್ನಡ ಹೊಸ ಪ್ರೋಮೋ:

ವೀಕ್ಷಕರಿಗೂ ಇದು ಹೊಸ ಅನುಭವ:

ಈ ರೀತಿ ಅಗ್ನಿಪರೀಕ್ಷೆ ಮಾಡುವ ಮೂಲಕ ಸ್ಪರ್ಧಿಗಳನ್ನು ಆಯ್ಕೆ ಮಾಡುತ್ತಿರುವುದು ಬಿಗ್ ಬಾಸ್ ಶೋನಲ್ಲಿ ಹೊಸ ಕಾನ್ಸೆಪ್ಟ್. ಹಾಗಾಗಿ ವೀಕ್ಷಕರಿಗೆ ಸಖತ್ ಕುತೂಹಲ ಇದೆ. ಈ ಸಂಚಿಕೆಗಳು ಹೇಗಿರಲಿವೆ? ನಿರೂಪಣೆ ಯಾರು ಮಾಡಲಿದ್ದಾರೆ? ವಿಡಿಯೋ ಕಳಿಸಿದ ಎಷ್ಟು ಮಂದಿಗೆ ಅಗ್ನಿಪರೀಕ್ಷೆಯಲ್ಲಿ ಭಾಗವಹಿಸುವ ಅವಕಾಶ ಸಿಗಲಿದೆ? ಅಂತಿಮವಾಗಿ ಯಾರು ಬಿಗ್ ಬಾಸ್ ಮನೆಗೆ ಕಾಲಿಡುತ್ತಾರೆ ಎಂಬುದನ್ನು ನೋಡಲು ಜನರು ಉತ್ಸುಕರಾಗಿದ್ದಾರೆ.

ಇದನ್ನೂ ಓದಿ: ‘ಬಿಗ್ ಬಾಸ್’ ಭಾವಿ ಸ್ಪರ್ಧಿಗಳಿಗೆ ‘ಅಗ್ನಿಪರೀಕ್ಷೆ’; ಜಡ್ಜ್​ ಸ್ಥಾನದಲ್ಲಿ ಗಿಲ್ಲಿ, ಸಂಗೀತಾ?

ಇತ್ತೀಚೆಗಷ್ಟೇ ‘ಬಿಗ್ ಬಾಸ್ ಕನ್ನಡ ಸೀಸನ್ 13’ರ ಹೊಸ ಪ್ರೋಮೋ ಬಿಡುಗಡೆ ಮಾಡಲಾಗಿತ್ತು. ಕಿಚ್ಚ ಸುದೀಪ್ ಅವರು ಎಂದಿನ ಗತ್ತಿನಲ್ಲಿ ಕಾಣಿಸಿಕೊಂಡು ಅಭಿಮಾನಿಗಳಿಗೆ ಥ್ರಿಲ್ ನೀಡಿದ್ದರು. ಆ ಪ್ರೋಮೋದ ಬೆನ್ನಲ್ಲೇ ‘ಅಗ್ನಿಪರೀಕ್ಷೆ’ಯ ಪ್ರೋಮೋ ಅನಾವರಣ ಮಾಡಲಾಗಿದೆ. ‘ಕಲರ್ಸ್ ಕನ್ನಡ’ ವಾಹಿನಿಯ ಸೋಶಿಯಲ್ ಮೀಡಿಯಾ ಖಾತೆಗಳಲ್ಲಿ ಪ್ರೋಮೋ ರಿಲೀಸ್ ಆಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಮೈದುಂಬಿದ ಚಿಕ್ಲಿಹೊಳೆ ಜಲಾಶಯ: ಅರ್ಧ ಚಂದ್ರಾಕೃತಿಯಲ್ಲಿ ಹರಿಯುವ ನೀರು
ಮೈದುಂಬಿದ ಚಿಕ್ಲಿಹೊಳೆ ಜಲಾಶಯ: ಅರ್ಧ ಚಂದ್ರಾಕೃತಿಯಲ್ಲಿ ಹರಿಯುವ ನೀರು
ಬೀದಿ ದೀಪ ಅಳವಡಿಸದ ಹಿನ್ನೆಲೆ ಅಧಿಕಾರಿಗಳಿಗೆ ಕೃಷ್ಣ ಭೈರೇಗೌಡ ಕ್ಲಾಸ್​​
ಬೀದಿ ದೀಪ ಅಳವಡಿಸದ ಹಿನ್ನೆಲೆ ಅಧಿಕಾರಿಗಳಿಗೆ ಕೃಷ್ಣ ಭೈರೇಗೌಡ ಕ್ಲಾಸ್​​
ಶಾಲೆಗೆ ಹೋಗಲು ಪ್ರಾಣ ಪಣಕ್ಕಿಡುತ್ತಿರುವ ಮಕ್ಕಳು! ವಿಡಿಯೋ ವೈರಲ್
ಶಾಲೆಗೆ ಹೋಗಲು ಪ್ರಾಣ ಪಣಕ್ಕಿಡುತ್ತಿರುವ ಮಕ್ಕಳು! ವಿಡಿಯೋ ವೈರಲ್
ಮಳೆ ಆರ್ಭಟ: ಉಕ್ಕಿ ಹರಿಯುತ್ತಿರುವ ಮಲಪ್ರಭೆ; ಗಂಗಾಂಬಿಕಾ ಐಕ್ಯ ಸ್ಥಳ ಜಲಾವೃತ
ಮಳೆ ಆರ್ಭಟ: ಉಕ್ಕಿ ಹರಿಯುತ್ತಿರುವ ಮಲಪ್ರಭೆ; ಗಂಗಾಂಬಿಕಾ ಐಕ್ಯ ಸ್ಥಳ ಜಲಾವೃತ
ಸಿದ್ದರಾಮಯ್ಯ ಮುನಿಸಿಕೊಂಡಿದ್ದಾರಾ?: ಅಸಲಿ ಸತ್ಯ ಬಿಚ್ಚಿಟ್ಟ ಶಿವಲಿಂಗೇಗೌಡ
ಸಿದ್ದರಾಮಯ್ಯ ಮುನಿಸಿಕೊಂಡಿದ್ದಾರಾ?: ಅಸಲಿ ಸತ್ಯ ಬಿಚ್ಚಿಟ್ಟ ಶಿವಲಿಂಗೇಗೌಡ
3 ವರ್ಷಗಳಲ್ಲಿ 1,000 ರೋಬೋಟಿಕ್ ಸರ್ಜರಿ ಯಶಸ್ವಿ
3 ವರ್ಷಗಳಲ್ಲಿ 1,000 ರೋಬೋಟಿಕ್ ಸರ್ಜರಿ ಯಶಸ್ವಿ
ದಿನೇಶ್ ಗುಂಡೂರಾವ್​​ಗೆ ಕೈತಪ್ಪಿದ ಸಚಿವ ಸ್ಥಾನ: ಬೆಂಬಲಿಗರಿಂದ ಪ್ರತಿಭಟನೆ
ದಿನೇಶ್ ಗುಂಡೂರಾವ್​​ಗೆ ಕೈತಪ್ಪಿದ ಸಚಿವ ಸ್ಥಾನ: ಬೆಂಬಲಿಗರಿಂದ ಪ್ರತಿಭಟನೆ
ಎಒ, ಎಎಒ ನೇಮಕಾತಿ ಸಮಸ್ಯೆ: ವಿದ್ಯಾರ್ಥಿಗಳ ಜೊತೆ ಡಿಕೆಶಿ ಚರ್ಚೆ
ಎಒ, ಎಎಒ ನೇಮಕಾತಿ ಸಮಸ್ಯೆ: ವಿದ್ಯಾರ್ಥಿಗಳ ಜೊತೆ ಡಿಕೆಶಿ ಚರ್ಚೆ
ರಾಜೀನಾಮೆ ಬೆದರಿಕೆ ಹಾಕಿದವರ ಮಾಹಿತಿ ಕೋರಿದ ಕಾಂಗ್ರೆಸ್ ಹೈಕಮಾಂಡ್
ರಾಜೀನಾಮೆ ಬೆದರಿಕೆ ಹಾಕಿದವರ ಮಾಹಿತಿ ಕೋರಿದ ಕಾಂಗ್ರೆಸ್ ಹೈಕಮಾಂಡ್
ಸಂಪುಟದಲ್ಲಿ ಮಹಿಳೆಯರಿಗೆ ಅವಕಾಶನೇ ಇಲ್ಲದೇ ಇರೋದು ಸರಿಯಲ್ಲ ಎಂದ KN ರಾಜಣ್ಣ
ಸಂಪುಟದಲ್ಲಿ ಮಹಿಳೆಯರಿಗೆ ಅವಕಾಶನೇ ಇಲ್ಲದೇ ಇರೋದು ಸರಿಯಲ್ಲ ಎಂದ KN ರಾಜಣ್ಣ