AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ವೀಕೆಂಡ್​ನಲ್ಲಿ ನಾನು ಧ್ವಂಸ’; ಕಿಚ್ಚನ ಕ್ಲಾಸ್ ನೆನೆದು ಮಂಜುಗೆ ನಡುಕ

ಬಿಗ್ ಬಾಸ್ ಕನ್ನಡ 13ರಲ್ಲಿ ಮಾಡರ್ನ್ ಮಹಾಕವಿ ಮಂಜು ನಡೆದುಕೊಳ್ಳುತ್ತಿರುವ ರೀತಿ ಹಾಗೂ ಸಹ-ಸ್ಪರ್ಧಿಗಳ ಕ್ಯಾರೆಕ್ಟರ್ ಬಗ್ಗೆ ಆಡಿದ ಮಾತುಗಳು ತೀವ್ರ ವಿವಾದಕ್ಕೆ ಕಾರಣವಾಗಿವೆ. ಹಾಲು-ಮೊಟ್ಟೆ ಕಳ್ಳತನ ಮಾಡಿ ಸಿಕ್ಕಿಬಿದ್ದಿರುವ ಮಂಜು, ಈ ಬಾರಿಯ ವಾರಾಂತ್ಯದ ಪಂಚಾಯಿತಿಯಲ್ಲಿ ಕಿಚ್ಚ ಸುದೀಪ್ ಅವರಿಂದ ತಮಗೆ ಭಾರಿ ಕ್ಲಾಸ್ ಕಾದಿದೆ ಎಂದು ಭಯ ವ್ಯಕ್ತಪಡಿಸಿದ್ದಾರೆ.

‘ವೀಕೆಂಡ್​ನಲ್ಲಿ ನಾನು ಧ್ವಂಸ’; ಕಿಚ್ಚನ ಕ್ಲಾಸ್ ನೆನೆದು ಮಂಜುಗೆ ನಡುಕ
ಶಾಸ್ತ್ರಿ-ಮಂಜು Image Credit source: Colors Kannada
ರಾಜೇಶ್ ದುಗ್ಗುಮನೆ
|

Updated on: Sep 18, 2026 | 7:22 AM

Share

ಮುಖ್ಯಾಂಶಗಳು

  • ಸೌಂದರ್ಯ ಕ್ಯಾರೆಕ್ಟರ್‌ ಬಗ್ಗೆ ಕೆಟ್ಟದಾಗಿ ಮಾತನಾಡಿ ಕ್ಷಮೆಯನ್ನೂ ಕೇಳದ ಮಂಜು
  • ಮನೆಯಲ್ಲಿ ಹಾಲು-ಮೊಟ್ಟೆ ಕದ್ದು ಸಿಕ್ಕಿಬಿದ್ದು ಸಮರ್ಥಿಸಿಕೊಂಡ ಕವಿ
  • 'ವಾರಾಂತ್ಯದಲ್ಲಿ ನಾನು ಧ್ವಂಸ': ಸುದೀಪ್ ಪಂಚಾಯಿತಿಗೆ ಹೆದರಿದ ಮಾಡರ್ನ್ ಮಹಾಕವಿ

ಬಿಗ್ ಬಾಸ್ ಕನ್ನಡ ಸೀಸನ್ 13’ರ ಆರಂಭಕ್ಕ ಮೊದಲು ಅಗ್ನಿಪರೀಕ್ಷೆ ಹೆಸರಲ್ಲಿ ಶೋ ನಡೆಯಿತು. 60 ಜನ ಸಾಮಾನ್ಯ ಸ್ಪರ್ಧಿಗಳ ಪೈಕಿ ನಾಲ್ವರನ್ನು ಆಯ್ಕೆ ಮಾಡಿ ಬಿಗ್ ಬಾಸ್ ಮನೆಗೆ ಕಳುಹಿಸಲಾಯಿತು. ಈಗ ಜನ ಸಾಮಾನ್ಯರು ನಡೆದುಕೊಳ್ಳುತ್ತಿರುವ ರೀತಿ ಇಡೀ ಮನೆಯನ್ನು ಅಶಾಂತಿಗೆ ತಳ್ಳಿದೆ. ಅಷ್ಟೇ ಅಲ್ಲ ವೀಕ್ಷಕರು ಕೂಡ ತೀವ್ರ ಅಸಮಾಧಾನ ಹೊರಹಾಕುತ್ತಿದ್ದಾರೆ. ಈ ಬಗ್ಗೆ ವೀಕೆಂಡ್​ನಲ್ಲಿ ಕ್ಲಾಸ್ ಫಿಕ್ಸ್ ಅನ್ನೋದು ಮಾಡರ್ನ್ ಮಹಾಕವಿ ಮಂಜುಗೆ ಮನದಟ್ಟಾಗಿದೆ.

ಮಂಜು ಅವರು ಬಿಗ್ ಬಾಸ್ ಮನೆಯಲ್ಲಿ ಅತಿ ಕೆಟ್ಟದಾಗಿ ನಡೆದುಕೊಳ್ಳುತ್ತಿದ್ದಾರೆ. ನಾಲಿಗೆಯ ಮೇಲೆ ಅವರಿಗೆ ಲಿಮಿಟ್ ಇಲ್ಲ. ಎಲ್ಲರನ್ನೂ ಟ್ರಿಗರ್ ಮಾಡೋದೆ ಅವರ ಉದ್ದೇಶ. ಯಾರಾದರೂ ಸ್ವಲ್ಪವೇ ಕೆರಳಿದರೂ ಅವರನ್ನು ಟಾರ್ಗೆಟ್ ಮಾಡಿ ಮತ್ತಷ್ಟು ಕೆರಳಿಸುತ್ತಾರೆ. ಈ ವಾರವಿಡೀ ಅವರು ಸಾಕಷ್ಟು ತಪ್ಪುಗಳನ್ನು ಮಾಡಿದ್ದಾರೆ.

ಸೌಂದರ್ಯಾ ಅವರ ಕ್ಯಾರೆಕ್ಟರ್ ಬಗ್ಗೆ ಮಂಜು ಕೆಟ್ಟದಾಗಿ ಮಾತನಾಡಿದ್ದರು. ಇದಕ್ಕೆ ಕ್ಷಮೆ ಕೇಳಲು ಅವರು ರೆಡಿ ಇಲ್ಲ. ‘ನಾನು ನೋಡಿದ್ದನ್ನು ಹೇಳುತ್ತಿದ್ದೇನೆ ಅಷ್ಟೇ’ ಎಂದು ಸಾಧಿಸಿದರೇ ಹೊರತು ಸೌಂದರ್ಯಾ ಬಳಿ ಕ್ಷಮೆ ಕೇಳಿಲ್ಲ. ಇದರಿಂದ ಸೌಂದರ್ಯಾ ಅವರು ಸಾಕಷ್ಟು ಕಣ್ಣೀರು ಹಾಕಿದರು.

ಇದನ್ನೂ ಓದಿ: ಕಾಮನ್ ಮ್ಯಾನ್ ಆಟಕ್ಕೆ ಬೇಸತ್ತ ಜನಸಾಮಾನ್ಯರು; ಕಿಚ್ಚನ ಎಂಟ್ರಿಗೆ ಕಾದ ವೀಕ್ಷಕರು

ಇನ್ನು, ಬಿಗ್ ಬಾಸ್ ಮನೆಯಲ್ಲಿ ನಡೆದ ಹಾಲು ಹಾಗೂ ಮೊಟ್ಟೆ ಕಳ್ಳತನದ ವಿಷಯದಲ್ಲಿ ಮಂಜು ಅವರದ್ದು ಸಿಂಹಪಾಲು. ಈ ರೀತಿ ಕದ್ದಿದ್ದೂ ಅಲ್ಲದೆ, ತಮ್ಮನ್ನು ತಾವು ಸಮರ್ಥನೆ ಮಾಡಿಕೊಂಡಿದ್ದಾರೆ. ಅವಿನಾಶ್ ಅವರನ್ನು ಕೆರಳಿಸಿದ್ದಾರೆ. ಈ ಎಲ್ಲಾ ಬೆಳವಣಿಗೆಯಿಂದ ಅವರಿಗೆ ವೀಕೆಂಡ್​​ನಲ್ಲಿ ಕ್ಲಾಸ್ ಫಿಕ್ಸ್ ಅನ್ನೋದು ಸ್ಪಷ್ಟವಾಗಿದೆ. ಈ ಬಗ್ಗೆ ಸ್ವತಃ ಮಂಜು ಅವರಿಗೂ ಅನಿಸಿದೆ. ‘ವೀಕೆಂಡ್​ನಲ್ಲಿ ನಾನು ಧ್ವಂಸ ಆಗೋದು ಫಿಕ್ಸ್’ ಎಂದು ಅವರು ಹೇಳಿಕೊಂಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಕರ್ಕಾಟಕ ರಾಶಿಗೆ ಕುಜ ಗ್ರಹ ಪ್ರವೇಶ ಇಂದು: ದ್ವಾದಶ ರಾಶಿಗಳ ದಿನ ಭವಿಷ್ಯ
ಕರ್ಕಾಟಕ ರಾಶಿಗೆ ಕುಜ ಗ್ರಹ ಪ್ರವೇಶ ಇಂದು: ದ್ವಾದಶ ರಾಶಿಗಳ ದಿನ ಭವಿಷ್ಯ
ಪ್ರಧಾನಿ ಮೋದಿ ಜನ್ಮದಿನಕ್ಕೆ ಸಿಎಂ ಧಾಮಿಯಿಂದ ಯಮುನಾ ಆರತಿ
ಪ್ರಧಾನಿ ಮೋದಿ ಜನ್ಮದಿನಕ್ಕೆ ಸಿಎಂ ಧಾಮಿಯಿಂದ ಯಮುನಾ ಆರತಿ
ಶಿಪ್ರಾ ನದಿ ದಂಡೆಯಲ್ಲಿ ದೀಪಗಳಿಂದಲೇ ಮೂಡಿದ ಪ್ರಧಾನಿ ಮೋದಿಯವರ ಬೃ
ಶಿಪ್ರಾ ನದಿ ದಂಡೆಯಲ್ಲಿ ದೀಪಗಳಿಂದಲೇ ಮೂಡಿದ ಪ್ರಧಾನಿ ಮೋದಿಯವರ ಬೃ
ಪ್ರಧಾನಿ ಮೋದಿ ಹುಟ್ಟುಹಬ್ಬ ಅಂಗವಾಗಿ ರಕ್ತದಾನ ಮಾಡಿದ ಪ್ರಲ್ಹಾದ್​​ ಜೋಶಿ
ಪ್ರಧಾನಿ ಮೋದಿ ಹುಟ್ಟುಹಬ್ಬ ಅಂಗವಾಗಿ ರಕ್ತದಾನ ಮಾಡಿದ ಪ್ರಲ್ಹಾದ್​​ ಜೋಶಿ
'ವಿದೇಶಿ ಕಂಪನಿಗೆ ಹೆದರಿ ಯುಪಿಐ ತೆರಿಗೆ ಜಾರಿ ಮಾಡಿದ್ದಲ್ಲ'; ಜೋಶಿ
'ವಿದೇಶಿ ಕಂಪನಿಗೆ ಹೆದರಿ ಯುಪಿಐ ತೆರಿಗೆ ಜಾರಿ ಮಾಡಿದ್ದಲ್ಲ'; ಜೋಶಿ
ಪ್ರಧಾನಿ ಮೋದಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದ ಇಟಲಿ ಪ್ರಧಾನಿ ಮೆಲೋನಿ
ಪ್ರಧಾನಿ ಮೋದಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದ ಇಟಲಿ ಪ್ರಧಾನಿ ಮೆಲೋನಿ
ರಾಜ್ಯ SC ST ಪತ್ರಿಕಾ ಸಂಪಾದಕರ ಸಂಘದ ವಾರ್ಷಿಕ ದತ್ತಿ ಪ್ರಶಸ್ತಿ ಪ್ರದಾನ
ರಾಜ್ಯ SC ST ಪತ್ರಿಕಾ ಸಂಪಾದಕರ ಸಂಘದ ವಾರ್ಷಿಕ ದತ್ತಿ ಪ್ರಶಸ್ತಿ ಪ್ರದಾನ
ಅನಂತ್ ನಾಗ್ ಅವರಿಗೆ ದಾದಾ ಸಾಹೇಬ್ ಫಾಲ್ಕೆ: ಸಾರಾ ಗೋವಿಂದು ಪ್ರತಿಕ್ರಿಯೆ
ಅನಂತ್ ನಾಗ್ ಅವರಿಗೆ ದಾದಾ ಸಾಹೇಬ್ ಫಾಲ್ಕೆ: ಸಾರಾ ಗೋವಿಂದು ಪ್ರತಿಕ್ರಿಯೆ
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ: ಹಲವೆಡೆ ಎಂಟ್ರಿ-ಎಕ್ಸಿಟ್ ಕ್ಲೋಸ್​​
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ: ಹಲವೆಡೆ ಎಂಟ್ರಿ-ಎಕ್ಸಿಟ್ ಕ್ಲೋಸ್​​
ನನ್ನ ಮಾತು ಎಷ್ಟು ನಡೆಯುತ್ತೆ? ಎಷ್ಟು ನಡೆಯಲ್ಲ ಅನ್ನೋದು ನನಗೆ ಗೊತ್ತು
ನನ್ನ ಮಾತು ಎಷ್ಟು ನಡೆಯುತ್ತೆ? ಎಷ್ಟು ನಡೆಯಲ್ಲ ಅನ್ನೋದು ನನಗೆ ಗೊತ್ತು