AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಬಿಗ್ ಬಾಸ್’ ಭಾವಿ ಸ್ಪರ್ಧಿಗಳಿಗೆ ‘ಅಗ್ನಿಪರೀಕ್ಷೆ’; ಜಡ್ಜ್​ ಸ್ಥಾನದಲ್ಲಿ ಗಿಲ್ಲಿ, ಸಂಗೀತಾ?

'ಬಿಗ್ ಬಾಸ್ ಕನ್ನಡ ಸೀಸನ್ 13' ರಂಗೇರಲು ಸಿದ್ಧವಾಗಿದ್ದು, ಪ್ರೋಮೊ ಈಗಾಗಲೇ ಧೂಳೆಬ್ಬಿಸಿದೆ. ಈ ಬಾರಿ ಸಾಮಾನ್ಯ ಸ್ಪರ್ಧಿಗಳಿಗೆ 'ಅಗ್ನಿಪರೀಕ್ಷೆ' ನಡೆಸಲು ಬಿಗ್ ಬಾಸ್ ಟೀಮ್ ಪ್ಲ್ಯಾನ್ ಮಾಡಿದೆ. ಜಡ್ಜ್ ಸ್ಥಾನದಲ್ಲಿ ಹಳೇ ಸ್ಪರ್ಧಿಗಳಾದ ಸಂಗೀತಾ ಶೃಂಗೇರಿ, ವಿನಯ್ ಗೌಡ ಮತ್ತು ಗಿಲ್ಲಿ ನಟ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗಿದೆ.

‘ಬಿಗ್ ಬಾಸ್’ ಭಾವಿ ಸ್ಪರ್ಧಿಗಳಿಗೆ ‘ಅಗ್ನಿಪರೀಕ್ಷೆ’; ಜಡ್ಜ್​ ಸ್ಥಾನದಲ್ಲಿ ಗಿಲ್ಲಿ, ಸಂಗೀತಾ?
ಸಂಗೀತಾ-ಗಿಲ್ಲಿ
ರಾಜೇಶ್ ದುಗ್ಗುಮನೆ
|

Updated on: Aug 03, 2026 | 9:33 AM

Share

ಮುಖ್ಯಾಂಶಗಳು

  • ಬಿಗ್ ಬಾಸ್ ಮನೆಯೊಳಗೆ ಹೋಗಲು ಎದುರಾಗಲಿದೆ 'ಅಗ್ನಿಪರೀಕ್ಷೆ'
  • ಹೊಸ ಸೀಸನ್‌ಗೆ ಜಡ್ಜ್‌ಗಳಾಗಿ ಬರಲಿದ್ದಾರಾ ಫೈಯರ್ ಬ್ರ್ಯಾಂಡ್ ಸ್ಪರ್ಧಿ
  • ಅಭಿಮಾನಿಗಳಿಗೆ ಕುತೂಹಲ ಮೂಡಿಸಿದ ಕಲರ್ಸ್ ಪ್ಲ್ಯಾನ್

‘ಬಿಗ್ ಬಾಸ್’ (Bigg Boss) ಪ್ರತಿ ಸೀಸನ್​​ ಕೂಡ ಹೊಸ ಹೊಸ ರೂಪದಲ್ಲಿ ಬರುತ್ತದೆ. ಈ ಮೊದಲು ಬಿಗ್ ಬಾಸ್ ಟೀಂ ಆಯ್ಕೆ ಮಾಡಿದವರಿಗೆ ನೇರವಾಗಿ ಎಂಟ್ರಿ ಸಿಗುತ್ತಿತ್ತು. ಆದರೆ, ಇತ್ತೀಚೆಗೆ ಇದನ್ನು ಬದಲಿಸಲಾಗಿತ್ತು. ಬಿಗ್ ಬಾಸ್ ವೇದಿಕೆಯಲ್ಲಿ ಇರೋ ವೀಕ್ಷಕರಿಗೆ ವೋಟ್ ಹಾಕುವ ಅವಕಾಶ ನೀಡಿ ಸ್ಪರ್ಧಿಗಳು ಮನೆ ಒಳಗೆ ಹೋಗಬೇಕೋ, ಬೇಡವೋ ಎಂದು ನಿರ್ಧರಿಸುತ್ತಿದ್ದರು. ಈ ಬಾರಿ ಈ ಶೈಲಿಯನ್ನು ಮತ್ತಷ್ಟು ಬದಲಿಸೋ ಸಾಧ್ಯತೆ ಇದೆ. ಈ ಬಾರಿ ಸ್ಪರ್ಧಿಗಳಿಗೆ ‘ಅಗ್ನಿಪರೀಕ್ಷೆ’ ಆಯೋಜನೆ ಮಾಡುವ ಯೋಜನೆ ರೂಪಿಸಲಾಗಿದೆ ಎನ್ನಲಾಗಿದೆ.

‘ಬಿಗ್ ಬಾಸ್ ಕನ್ನಡ ಸೀಸನ್ 13’ ಆರಂಭಕ್ಕೆ ದಿನಗಣನೆ ಶುರುವಾಗಿದೆ. ಸೆಪ್ಟೆಂಬರ್ ವೇಳೆಗೆ ಹೊಸ ಸೀಸನ್ ಆರಂಭ ಆಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಾ ಇದೆ. ಆಗಸ್ಟ್ 2ರಂದು ಪ್ರೋಮೋ ರಿಲೀಸ್ ಆಗಿದೆ. ಸುದೀಪ್ ಅವರ ಗೆಟಪ್ ಗಮನ ಸೆಳೆದಿದೆ. ಈ ಶೋ ಬಗ್ಗೆ ವೀಕ್ಷಕರಿಗೆ ಕುತೂಹಲ ಮೂಡಿದೆ. ಈಗ ಹೊಸ ಆಯಾಮದ ಬಗ್ಗೆಯೂ ಚರ್ಚೆ ನಡೆಯುತ್ತಿದೆ.

ಈ ಬಾರಿಯ ಬಿಗ್ ಬಾಸ್​ ಅಲ್ಲಿ ಜನ ಸಾಮಾನ್ಯರಿಗೂ ಅವಕಾಶ ನೀಡಲಾಗುತ್ತದೆ ಎಂದು ಕಲರ್ಸ್ ಕನ್ನಡ ವಾಹಿನಿ ಈ ಮೊದಲು ಘೋಷಣೆ ಮಾಡಿದೆ. ಇದಕ್ಕೆ ಲಕ್ಷಾಂತರ ಮಂದಿ ಅಪ್ಲಿಕೇಷನ್ ಹಾಕಿದ್ದಾರೆ ಎನ್ನಲಾಗಿದೆ. ಇವರ ಪೈಕಿ ಕೆಲವೇ ಕೆಲವರನ್ನು ಆಯ್ಕೆ ಮಾಡಲಾಗುತ್ತದೆ. ಇದಕ್ಕೆ ಅಗ್ನಿಪರೀಕ್ಷೆ ಇಡಲಾಗುತ್ತದೆಯೇ ಎಂಬ ಪ್ರಶ್ನೆ ಮೂಡಿದೆ.

ಈಗ ಕೇಳಿ ಬರುತ್ತಿರುವ ಹೊಸ ವದಂತಿ ಎಂದರೆ ಅಗ್ನಿಪರೀಕ್ಷೆಯಲ್ಲಿ ಸಂಗೀತಾ ಶೃಂಗೇರಿ, ಗಿಲ್ಲಿ ನಟ ಹಾಗೂ ವಿನಯ್ ಗೌಡ ಜಡ್ಜ್​ ಸ್ಥಾನದಲ್ಲಿ ಇರಲಿದ್ದಾರೆ ಎನ್ನಲಾಗಿದೆ. ಈ ಮೂವರು ಬಿಗ್ ಬಾಸ್​ನಲ್ಲಿ ಫೈಯರ್ ಬ್ರ್ಯಾಂಡ್ ರೀತಿ ಗುರುತಿಸಿಕೊಂಡವರು. ಈ ಕಾರಣದಿಂದ ಇವರನ್ನು ಆಯ್ಕೆ ಮಾಡಿರುವ ಸಾಧ್ಯತೆ ಇದೆ ಎನ್ನಲಾಗಿದೆ.

ಇದನ್ನೂ ಓದಿ: ಬಿಗ್ ಬಾಸ್ ಸಂಭಾವನೆ ಗುಟ್ಟು ರಟ್ಟು ಮಾಡಿದ ಧನರಾಜ್; ಅಸಲಿ ವಿಷಯ ಕೇಳಿ ಜನ ಶಾಕ್

ಇನ್ನು, ಜೀ ಕನ್ನಡದಲ್ಲಿ ಶೀಘ್ರವೇ ‘ಹಳ್ಳಿ ಪವರ್ ರೀಲೋಡೆಡ್’ ಶೋ ಆಯೋಜನೆ ಮಾಡಲಾಗುತ್ತಿದೆ. ಬಿಗ್ ಬಾಸ್ ಪ್ರಸಾರ ಸಮಯ ಹಾಗೂ ಹಳ್ಳಿ ಪವರ್ ಶೋ ಸಮಯ ಒಂದೇ ಇರಲಿದೆ ಎಂದು ಊಹಿಸಲಾಗಿದೆ. ಹೀಗಾಗಿ, ಎರಡು ಶೋಗಳ ಮಧ್ಯೆ ಕಾಂಪಿಟೇಷನ್ ಏರ್ಪಡುವ ಸಾಧ್ಯತೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’