AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆನ್​ಲೈನ್​ನಲ್ಲೇ ಎಂಗೇಜ್​ಮೆಂಟ್​ ಮಾಡಿಕೊಂಡ ಕನ್ನಡ ಬಿಗ್​ ಬಾಸ್​ ಸೀಸನ್​ 8ರ ಸ್ಪರ್ಧಿ

ಈ ಬಾರಿಯ ಬಿಗ್​ ಬಾಸ್​ ಮನೆಗೆ ಮೂವರು ವೈಲ್ಡ್​ ಕಾರ್ಡ್​ ಮೂಲಕ ಎಂಟ್ರಿ ಪಡೆದಿದ್ದರು. ಪ್ರಿಯಾಂಕಾ ತಿಮ್ಮೇಶ್​ ಹಾಗೂ ವೈಜಯಂತಿ ಅಡಿಗ ಒಂದೇ ದಿನ ಮನೆಗೆ ಎಂಟ್ರಿ ಪಡೆದಿದ್ದರು.

ಆನ್​ಲೈನ್​ನಲ್ಲೇ ಎಂಗೇಜ್​ಮೆಂಟ್​ ಮಾಡಿಕೊಂಡ ಕನ್ನಡ ಬಿಗ್​ ಬಾಸ್​ ಸೀಸನ್​ 8ರ ಸ್ಪರ್ಧಿ
ಆನ್​ಲೈನ್​ನಲ್ಲೇ ಎಂಗೇಜ್​ಮೆಂಟ್​ ಮಾಡಿಕೊಂಡ ಕನ್ನಡ ಬಿಗ್​ ಬಾಸ್​ ಸೀಸನ್​ 8ರ ಸ್ಪರ್ಧಿ
TV9 Web
| Edited By: |

Updated on: Sep 18, 2021 | 3:24 PM

Share

‘ಕನ್ನಡ ಬಿಗ್​ ಬಾಸ್​ ಸೀಸನ್​ 8’ ಪೂರ್ಣಗೊಂಡು ಹಲವು ದಿನಗಳು ಕಳೆದಿವೆ. ಆದರೂ ಒಂದಲ್ಲಾ ಒಂದು ವಿಚಾರಕ್ಕೆ ಈ ಸ್ಪರ್ಧಿಗಳು ಸುದ್ದಿಯಲ್ಲಿದ್ದಾರೆ. ಈಗ ಬಿಗ್​ ಬಾಸ್​ 8ರ ಸ್ಪರ್ಧಿ ಆನ್​ಲೈನ್​ನಲ್ಲೇ ಎಂಗೇಜ್​ಮೆಂಟ್​ ಮಾಡಿಕೊಂಡಿದ್ದಾರೆ. ಸದ್ಯ, ಈ ಫೋಟೋಗಳು ಸಾಕಷ್ಟು ವೈರಲ್​ ಆಗುತ್ತಿದೆ. ಅಷ್ಟಕ್ಕೂ ಈ ರೀತಿ ನಿಶ್ಚಿತಾರ್ಥ ಮಾಡಿಕೊಂಡವರು ಯಾರು? ವೈಜಯಂತಿ ಅಡಿಗ.

ಈ ಬಾರಿಯ ಬಿಗ್​ ಬಾಸ್​ ಮನೆಗೆ ಮೂವರು ವೈಲ್ಡ್​ ಕಾರ್ಡ್​ ಮೂಲಕ ಎಂಟ್ರಿ ಪಡೆದಿದ್ದರು. ಪ್ರಿಯಾಂಕಾ ತಿಮ್ಮೇಶ್​ ಹಾಗೂ ವೈಜಯಂತಿ ಅಡಿಗ ಒಂದೇ ದಿನ ಮನೆಗೆ ಎಂಟ್ರಿ ಪಡೆದಿದ್ದರು. ಆದರೆ, ವೈಜಯಂತಿಗೆ ಬಿಗ್​ ಬಾಸ್​ ಮನೆಯಲ್ಲಿ ಹೆಚ್ಚು ದಿನ ಇರೋಕೆ ಸಾಧ್ಯವಾಗಿಲ್ಲ. ಪದೇಪದೇ ಕ್ಯಾಮೆರಾ ಬಳಿ ತೆರಳಿ ನನಗೆ ಇಲ್ಲಿ ಇರೋಕೆ ಸಾಧ್ಯವಾಗುತ್ತಿಲ್ಲ ಎಂದು ಹೇಳಿಕೊಂಡಿದ್ದರು. ಕೊನೆಗೆ, ವೀಕೆಂಡ್​ನಲ್ಲಿ ಬಿಗ್​ ಬಾಸ್​ ಮನೆಯಿಂದ ಹೊರ ಹೋಗೋಕೆ ವೈಜಯಂತಿಗೆ ಸುದೀಪ್​ ಆಫರ್​ ನೀಡಿದರು. ಈ ಆಫರ್​ಅನ್ನು ಸ್ವೀಕರಿಸಿದರು ವೈಜಯಂತಿ ಅಡಿಗ. ಈ ಮೂಲಕ ಬೆರಳೆಣಿಕೆ ದಿನಗಳಲ್ಲಿ ಅವರು ಮನೆಯಿಂದ ಹೊರ ಬಂದರು.

ಬಿಗ್​ ಬಾಸ್​ ಫಿನಾಲೆ ದಿನ ಎಲ್ಲಾ ಸ್ಪರ್ಧಿಗಳು ವೇದಿಕೆಗೆ ಬಂದಿದ್ದರು. ಆದರೆ, ವೈಜಯಂತಿ ಅಡಿಗ ಬಂದಿರಲಿಲ್ಲ. ಇನ್​ಸ್ಟಾಗ್ರಾಮ್​ನಲ್ಲಿ ಆಸ್ಕ್​ ಮಿ ಎನಿಥಿಂಗ್​ ಸೆಷನ್​ ನಡೆಸಿದಾಗಲೂ ವೈಜಯಂತಿ ಬಿಗ್​ ಬಾಸ್​ ಬಗ್ಗೆ ಮಾತನಾಡೋಕೆ ನೋ ಎಂದಿದ್ದರು. ಈಗ ಅವರು ತಮ್ಮ ಪ್ರಿಯಕರ ಸೂರಜ್​ ಜತೆ ಆನ್​ಲೈನ್​ನಲ್ಲಿ ಎಂಗೇಜ್​ಮೆಂಟ್​ ಮಾಡಿಕೊಂಡಿದ್ದಾರೆ.

ಈ ಫೋಟೋಗಳನ್ನು ವೈಜಯಂತಿ ಅಡಿಗ ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ವೈಜಯಂತಿ ಕುಟುಂಬ ಕೂಡ ಈ ಎಂಗೇಜ್​ಮೆಂಟ್​ನಲ್ಲಿ ಭಾಗಿಯಾಗಿತ್ತು. ಅವರ ಮದುವೆ ಆಗುವ ಹುಡುಗ ಅಮೆರಿಕದಲ್ಲಿ ವಾಸವಾಗಿದ್ದಾರೆ ಎನ್ನಲಾಗಿದೆ. ವೈಜಯಂತಿ ಅಡಿಗ ಖ್ಯಾತ ಹೋಟೆಲ್ ಉದ್ಯಮಿ ವಾಸುದೇವ ಅಡಿಗ ಅವರ ಮಗಳು. ‘ಅಮ್ಮಚ್ಚಿ ಎಂಬ ನೆನಪು’ ಸಿನಿಮಾದಲ್ಲಿ ಇವರು ನಟಿಸಿದ್ದರು.

ಇದನ್ನೂ ಓದಿ: ಪ್ಲೀಸ್​ ಬೇರೆಯವರ ಅವಕಾಶ ಕಿತ್ತುಕೊಳ್ಳಬೇಡಿ; ಎಲಿಮಿನೇಟ್​ ಆದ ವೈಜಯಂತಿಗೆ ಸುದೀಪ್​ ಕಿವಿಮಾತು

ವೈಜಯಂತಿಗೆ ಈ ಭಯ ತುಂಬಾನೇ ಕಾಡಿತ್ತಂತೆ; ಚಂದ್ರಚೂಡ್​ ಬಿಚ್ಚಿಟ್ರು ರಹಸ್ಯ

Follow Us
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ