AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆನ್​ಲೈನ್​ನಲ್ಲೇ ಎಂಗೇಜ್​ಮೆಂಟ್​ ಮಾಡಿಕೊಂಡ ಕನ್ನಡ ಬಿಗ್​ ಬಾಸ್​ ಸೀಸನ್​ 8ರ ಸ್ಪರ್ಧಿ

ಈ ಬಾರಿಯ ಬಿಗ್​ ಬಾಸ್​ ಮನೆಗೆ ಮೂವರು ವೈಲ್ಡ್​ ಕಾರ್ಡ್​ ಮೂಲಕ ಎಂಟ್ರಿ ಪಡೆದಿದ್ದರು. ಪ್ರಿಯಾಂಕಾ ತಿಮ್ಮೇಶ್​ ಹಾಗೂ ವೈಜಯಂತಿ ಅಡಿಗ ಒಂದೇ ದಿನ ಮನೆಗೆ ಎಂಟ್ರಿ ಪಡೆದಿದ್ದರು.

ಆನ್​ಲೈನ್​ನಲ್ಲೇ ಎಂಗೇಜ್​ಮೆಂಟ್​ ಮಾಡಿಕೊಂಡ ಕನ್ನಡ ಬಿಗ್​ ಬಾಸ್​ ಸೀಸನ್​ 8ರ ಸ್ಪರ್ಧಿ
ಆನ್​ಲೈನ್​ನಲ್ಲೇ ಎಂಗೇಜ್​ಮೆಂಟ್​ ಮಾಡಿಕೊಂಡ ಕನ್ನಡ ಬಿಗ್​ ಬಾಸ್​ ಸೀಸನ್​ 8ರ ಸ್ಪರ್ಧಿ
TV9 Web
| Edited By: |

Updated on: Sep 18, 2021 | 3:24 PM

Share

‘ಕನ್ನಡ ಬಿಗ್​ ಬಾಸ್​ ಸೀಸನ್​ 8’ ಪೂರ್ಣಗೊಂಡು ಹಲವು ದಿನಗಳು ಕಳೆದಿವೆ. ಆದರೂ ಒಂದಲ್ಲಾ ಒಂದು ವಿಚಾರಕ್ಕೆ ಈ ಸ್ಪರ್ಧಿಗಳು ಸುದ್ದಿಯಲ್ಲಿದ್ದಾರೆ. ಈಗ ಬಿಗ್​ ಬಾಸ್​ 8ರ ಸ್ಪರ್ಧಿ ಆನ್​ಲೈನ್​ನಲ್ಲೇ ಎಂಗೇಜ್​ಮೆಂಟ್​ ಮಾಡಿಕೊಂಡಿದ್ದಾರೆ. ಸದ್ಯ, ಈ ಫೋಟೋಗಳು ಸಾಕಷ್ಟು ವೈರಲ್​ ಆಗುತ್ತಿದೆ. ಅಷ್ಟಕ್ಕೂ ಈ ರೀತಿ ನಿಶ್ಚಿತಾರ್ಥ ಮಾಡಿಕೊಂಡವರು ಯಾರು? ವೈಜಯಂತಿ ಅಡಿಗ.

ಈ ಬಾರಿಯ ಬಿಗ್​ ಬಾಸ್​ ಮನೆಗೆ ಮೂವರು ವೈಲ್ಡ್​ ಕಾರ್ಡ್​ ಮೂಲಕ ಎಂಟ್ರಿ ಪಡೆದಿದ್ದರು. ಪ್ರಿಯಾಂಕಾ ತಿಮ್ಮೇಶ್​ ಹಾಗೂ ವೈಜಯಂತಿ ಅಡಿಗ ಒಂದೇ ದಿನ ಮನೆಗೆ ಎಂಟ್ರಿ ಪಡೆದಿದ್ದರು. ಆದರೆ, ವೈಜಯಂತಿಗೆ ಬಿಗ್​ ಬಾಸ್​ ಮನೆಯಲ್ಲಿ ಹೆಚ್ಚು ದಿನ ಇರೋಕೆ ಸಾಧ್ಯವಾಗಿಲ್ಲ. ಪದೇಪದೇ ಕ್ಯಾಮೆರಾ ಬಳಿ ತೆರಳಿ ನನಗೆ ಇಲ್ಲಿ ಇರೋಕೆ ಸಾಧ್ಯವಾಗುತ್ತಿಲ್ಲ ಎಂದು ಹೇಳಿಕೊಂಡಿದ್ದರು. ಕೊನೆಗೆ, ವೀಕೆಂಡ್​ನಲ್ಲಿ ಬಿಗ್​ ಬಾಸ್​ ಮನೆಯಿಂದ ಹೊರ ಹೋಗೋಕೆ ವೈಜಯಂತಿಗೆ ಸುದೀಪ್​ ಆಫರ್​ ನೀಡಿದರು. ಈ ಆಫರ್​ಅನ್ನು ಸ್ವೀಕರಿಸಿದರು ವೈಜಯಂತಿ ಅಡಿಗ. ಈ ಮೂಲಕ ಬೆರಳೆಣಿಕೆ ದಿನಗಳಲ್ಲಿ ಅವರು ಮನೆಯಿಂದ ಹೊರ ಬಂದರು.

ಬಿಗ್​ ಬಾಸ್​ ಫಿನಾಲೆ ದಿನ ಎಲ್ಲಾ ಸ್ಪರ್ಧಿಗಳು ವೇದಿಕೆಗೆ ಬಂದಿದ್ದರು. ಆದರೆ, ವೈಜಯಂತಿ ಅಡಿಗ ಬಂದಿರಲಿಲ್ಲ. ಇನ್​ಸ್ಟಾಗ್ರಾಮ್​ನಲ್ಲಿ ಆಸ್ಕ್​ ಮಿ ಎನಿಥಿಂಗ್​ ಸೆಷನ್​ ನಡೆಸಿದಾಗಲೂ ವೈಜಯಂತಿ ಬಿಗ್​ ಬಾಸ್​ ಬಗ್ಗೆ ಮಾತನಾಡೋಕೆ ನೋ ಎಂದಿದ್ದರು. ಈಗ ಅವರು ತಮ್ಮ ಪ್ರಿಯಕರ ಸೂರಜ್​ ಜತೆ ಆನ್​ಲೈನ್​ನಲ್ಲಿ ಎಂಗೇಜ್​ಮೆಂಟ್​ ಮಾಡಿಕೊಂಡಿದ್ದಾರೆ.

ಈ ಫೋಟೋಗಳನ್ನು ವೈಜಯಂತಿ ಅಡಿಗ ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ವೈಜಯಂತಿ ಕುಟುಂಬ ಕೂಡ ಈ ಎಂಗೇಜ್​ಮೆಂಟ್​ನಲ್ಲಿ ಭಾಗಿಯಾಗಿತ್ತು. ಅವರ ಮದುವೆ ಆಗುವ ಹುಡುಗ ಅಮೆರಿಕದಲ್ಲಿ ವಾಸವಾಗಿದ್ದಾರೆ ಎನ್ನಲಾಗಿದೆ. ವೈಜಯಂತಿ ಅಡಿಗ ಖ್ಯಾತ ಹೋಟೆಲ್ ಉದ್ಯಮಿ ವಾಸುದೇವ ಅಡಿಗ ಅವರ ಮಗಳು. ‘ಅಮ್ಮಚ್ಚಿ ಎಂಬ ನೆನಪು’ ಸಿನಿಮಾದಲ್ಲಿ ಇವರು ನಟಿಸಿದ್ದರು.

ಇದನ್ನೂ ಓದಿ: ಪ್ಲೀಸ್​ ಬೇರೆಯವರ ಅವಕಾಶ ಕಿತ್ತುಕೊಳ್ಳಬೇಡಿ; ಎಲಿಮಿನೇಟ್​ ಆದ ವೈಜಯಂತಿಗೆ ಸುದೀಪ್​ ಕಿವಿಮಾತು

ವೈಜಯಂತಿಗೆ ಈ ಭಯ ತುಂಬಾನೇ ಕಾಡಿತ್ತಂತೆ; ಚಂದ್ರಚೂಡ್​ ಬಿಚ್ಚಿಟ್ರು ರಹಸ್ಯ

ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ