AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆನ್​ಲೈನ್​ನಲ್ಲೇ ಎಂಗೇಜ್​ಮೆಂಟ್​ ಮಾಡಿಕೊಂಡ ಕನ್ನಡ ಬಿಗ್​ ಬಾಸ್​ ಸೀಸನ್​ 8ರ ಸ್ಪರ್ಧಿ

ಈ ಬಾರಿಯ ಬಿಗ್​ ಬಾಸ್​ ಮನೆಗೆ ಮೂವರು ವೈಲ್ಡ್​ ಕಾರ್ಡ್​ ಮೂಲಕ ಎಂಟ್ರಿ ಪಡೆದಿದ್ದರು. ಪ್ರಿಯಾಂಕಾ ತಿಮ್ಮೇಶ್​ ಹಾಗೂ ವೈಜಯಂತಿ ಅಡಿಗ ಒಂದೇ ದಿನ ಮನೆಗೆ ಎಂಟ್ರಿ ಪಡೆದಿದ್ದರು.

ಆನ್​ಲೈನ್​ನಲ್ಲೇ ಎಂಗೇಜ್​ಮೆಂಟ್​ ಮಾಡಿಕೊಂಡ ಕನ್ನಡ ಬಿಗ್​ ಬಾಸ್​ ಸೀಸನ್​ 8ರ ಸ್ಪರ್ಧಿ
ಆನ್​ಲೈನ್​ನಲ್ಲೇ ಎಂಗೇಜ್​ಮೆಂಟ್​ ಮಾಡಿಕೊಂಡ ಕನ್ನಡ ಬಿಗ್​ ಬಾಸ್​ ಸೀಸನ್​ 8ರ ಸ್ಪರ್ಧಿ
TV9 Web
| Edited By: |

Updated on: Sep 18, 2021 | 3:24 PM

Share

‘ಕನ್ನಡ ಬಿಗ್​ ಬಾಸ್​ ಸೀಸನ್​ 8’ ಪೂರ್ಣಗೊಂಡು ಹಲವು ದಿನಗಳು ಕಳೆದಿವೆ. ಆದರೂ ಒಂದಲ್ಲಾ ಒಂದು ವಿಚಾರಕ್ಕೆ ಈ ಸ್ಪರ್ಧಿಗಳು ಸುದ್ದಿಯಲ್ಲಿದ್ದಾರೆ. ಈಗ ಬಿಗ್​ ಬಾಸ್​ 8ರ ಸ್ಪರ್ಧಿ ಆನ್​ಲೈನ್​ನಲ್ಲೇ ಎಂಗೇಜ್​ಮೆಂಟ್​ ಮಾಡಿಕೊಂಡಿದ್ದಾರೆ. ಸದ್ಯ, ಈ ಫೋಟೋಗಳು ಸಾಕಷ್ಟು ವೈರಲ್​ ಆಗುತ್ತಿದೆ. ಅಷ್ಟಕ್ಕೂ ಈ ರೀತಿ ನಿಶ್ಚಿತಾರ್ಥ ಮಾಡಿಕೊಂಡವರು ಯಾರು? ವೈಜಯಂತಿ ಅಡಿಗ.

ಈ ಬಾರಿಯ ಬಿಗ್​ ಬಾಸ್​ ಮನೆಗೆ ಮೂವರು ವೈಲ್ಡ್​ ಕಾರ್ಡ್​ ಮೂಲಕ ಎಂಟ್ರಿ ಪಡೆದಿದ್ದರು. ಪ್ರಿಯಾಂಕಾ ತಿಮ್ಮೇಶ್​ ಹಾಗೂ ವೈಜಯಂತಿ ಅಡಿಗ ಒಂದೇ ದಿನ ಮನೆಗೆ ಎಂಟ್ರಿ ಪಡೆದಿದ್ದರು. ಆದರೆ, ವೈಜಯಂತಿಗೆ ಬಿಗ್​ ಬಾಸ್​ ಮನೆಯಲ್ಲಿ ಹೆಚ್ಚು ದಿನ ಇರೋಕೆ ಸಾಧ್ಯವಾಗಿಲ್ಲ. ಪದೇಪದೇ ಕ್ಯಾಮೆರಾ ಬಳಿ ತೆರಳಿ ನನಗೆ ಇಲ್ಲಿ ಇರೋಕೆ ಸಾಧ್ಯವಾಗುತ್ತಿಲ್ಲ ಎಂದು ಹೇಳಿಕೊಂಡಿದ್ದರು. ಕೊನೆಗೆ, ವೀಕೆಂಡ್​ನಲ್ಲಿ ಬಿಗ್​ ಬಾಸ್​ ಮನೆಯಿಂದ ಹೊರ ಹೋಗೋಕೆ ವೈಜಯಂತಿಗೆ ಸುದೀಪ್​ ಆಫರ್​ ನೀಡಿದರು. ಈ ಆಫರ್​ಅನ್ನು ಸ್ವೀಕರಿಸಿದರು ವೈಜಯಂತಿ ಅಡಿಗ. ಈ ಮೂಲಕ ಬೆರಳೆಣಿಕೆ ದಿನಗಳಲ್ಲಿ ಅವರು ಮನೆಯಿಂದ ಹೊರ ಬಂದರು.

ಬಿಗ್​ ಬಾಸ್​ ಫಿನಾಲೆ ದಿನ ಎಲ್ಲಾ ಸ್ಪರ್ಧಿಗಳು ವೇದಿಕೆಗೆ ಬಂದಿದ್ದರು. ಆದರೆ, ವೈಜಯಂತಿ ಅಡಿಗ ಬಂದಿರಲಿಲ್ಲ. ಇನ್​ಸ್ಟಾಗ್ರಾಮ್​ನಲ್ಲಿ ಆಸ್ಕ್​ ಮಿ ಎನಿಥಿಂಗ್​ ಸೆಷನ್​ ನಡೆಸಿದಾಗಲೂ ವೈಜಯಂತಿ ಬಿಗ್​ ಬಾಸ್​ ಬಗ್ಗೆ ಮಾತನಾಡೋಕೆ ನೋ ಎಂದಿದ್ದರು. ಈಗ ಅವರು ತಮ್ಮ ಪ್ರಿಯಕರ ಸೂರಜ್​ ಜತೆ ಆನ್​ಲೈನ್​ನಲ್ಲಿ ಎಂಗೇಜ್​ಮೆಂಟ್​ ಮಾಡಿಕೊಂಡಿದ್ದಾರೆ.

ಈ ಫೋಟೋಗಳನ್ನು ವೈಜಯಂತಿ ಅಡಿಗ ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ವೈಜಯಂತಿ ಕುಟುಂಬ ಕೂಡ ಈ ಎಂಗೇಜ್​ಮೆಂಟ್​ನಲ್ಲಿ ಭಾಗಿಯಾಗಿತ್ತು. ಅವರ ಮದುವೆ ಆಗುವ ಹುಡುಗ ಅಮೆರಿಕದಲ್ಲಿ ವಾಸವಾಗಿದ್ದಾರೆ ಎನ್ನಲಾಗಿದೆ. ವೈಜಯಂತಿ ಅಡಿಗ ಖ್ಯಾತ ಹೋಟೆಲ್ ಉದ್ಯಮಿ ವಾಸುದೇವ ಅಡಿಗ ಅವರ ಮಗಳು. ‘ಅಮ್ಮಚ್ಚಿ ಎಂಬ ನೆನಪು’ ಸಿನಿಮಾದಲ್ಲಿ ಇವರು ನಟಿಸಿದ್ದರು.

ಇದನ್ನೂ ಓದಿ: ಪ್ಲೀಸ್​ ಬೇರೆಯವರ ಅವಕಾಶ ಕಿತ್ತುಕೊಳ್ಳಬೇಡಿ; ಎಲಿಮಿನೇಟ್​ ಆದ ವೈಜಯಂತಿಗೆ ಸುದೀಪ್​ ಕಿವಿಮಾತು

ವೈಜಯಂತಿಗೆ ಈ ಭಯ ತುಂಬಾನೇ ಕಾಡಿತ್ತಂತೆ; ಚಂದ್ರಚೂಡ್​ ಬಿಚ್ಚಿಟ್ರು ರಹಸ್ಯ

Follow Us
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ