AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್​ ಬಾಸ್​ ಫಿನಾಲೆಗೂ ಮೊದಲು ಬಿಗ್​ ಟ್ವಿಸ್ಟ್​; ಈ ವಾರದ ಎಲಿಮಿನೇಷನ್​ ನೋಡಿ ಚಕಿತಗೊಂಡ ಫ್ಯಾನ್ಸ್​

Bigg Boss Kannada Season 8 Elimination: ಈ ವಾರ ಪ್ರಶಾಂತ್ ಸಂಬರಗಿ​, ಶುಭಾ ಪೂಂಜಾ, ಶಮಂತ್​ ಬ್ರೋ ಗೌಡ, ಚಕ್ರವರ್ತಿ ಚಂದ್ರಚೂಡ್, ದಿವ್ಯಾ ಉರುಡುಗ​ ನಾಮಿನೇಷನ್​ ಲಿಸ್ಟ್​ನಲ್ಲಿದ್ದರು. ಈ ವಾರ ಡಬಲ್​ ಎಲಿಮಿನೇಷನ್​ ನಡೆಯಲಿದೆ ಎನ್ನಲಾಗಿತ್ತು.

ಬಿಗ್​ ಬಾಸ್​ ಫಿನಾಲೆಗೂ ಮೊದಲು ಬಿಗ್​ ಟ್ವಿಸ್ಟ್​; ಈ ವಾರದ ಎಲಿಮಿನೇಷನ್​ ನೋಡಿ ಚಕಿತಗೊಂಡ ಫ್ಯಾನ್ಸ್​
ಬಿಗ್​ ಬಾಸ್​ ಮನೆಯ ಸ್ಪರ್ಧಿಗಳಿಗೆ ಅಡುಗೆ ಬಡಿಸಲಿದ್ದಾರೆ ಕಿಚ್ಚ ಸುದೀಪ್​?
TV9 Web
| Edited By: |

Updated on:Jul 25, 2021 | 9:55 PM

Share

ಪ್ರತೀ ವಾರ ಬಿಗ್​ ಬಾಸ್​ ಮನೆಯಲ್ಲಿ ಹೊಸಹೊಸ ಟ್ವಿಸ್ಟ್​ ನೀಡಲಾಗುತ್ತದೆ. ಎಲಿಮಿನೇಷನ್​ ವಿಚಾರದಲ್ಲಿ ಸಾಕಷ್ಟು ಬಾರಿ ವೀಕ್ಷಕರ ಲೆಕ್ಕಾಚಾರ ಉಲ್ಟಾ ಆಗಿದ್ದಿದೆ. ಈ ವಾರದ ಎಲಿಮಿನೇಷನ್​ಗೂ ದೊಡ್ಡ ಟ್ವಿಸ್ಟ್​ ಸಿಕ್ಕಿದೆ. ಈ ವಾರ ಡಬಲ್​ ಎಲಿಮಿನೇಷನ್​ ನಡೆಯಬಹುದು ಎನ್ನಲಾಗಿತ್ತು. ಆದರೆ, ಅಚ್ಚರಿ ಎಂಬಂತೆ ಯಾರೊಬ್ಬರೂ ಮನೆಯಿಂದ ಈ ವಾರ ಹೊರಹೋಗಿಲ್ಲ. ಆದರೆ, ಮುಂದಿನ ಶನಿವಾರದೊಳಗೆ ಒಬ್ಬರು ಮನೆಯಿಂದ ಹೊರ ಹೋಗುತ್ತಾರೆ ಎಂದರು ಸುದೀಪ್​. 

ಈ ವಾರ ಪ್ರಶಾಂತ್ ಸಂಬರಗಿ​, ಶುಭಾ ಪೂಂಜಾ, ಶಮಂತ್​ ಬ್ರೋ ಗೌಡ, ಚಕ್ರವರ್ತಿ ಚಂದ್ರಚೂಡ್, ದಿವ್ಯಾ ಉರುಡುಗ​ ನಾಮಿನೇಷನ್​ ಲಿಸ್ಟ್​ನಲ್ಲಿದ್ದರು. ಈ ವಾರ ಡಬಲ್​ ಎಲಿಮಿನೇಷನ್​ ನಡೆಯಲಿದೆ ಎನ್ನಲಾಗಿತ್ತು.

ದಿವ್ಯಾ ಉರುಡುಗ ಬಿಗ್​ ಬಾಸ್​ ಮನೆಯಲ್ಲಿ ಅತ್ಯದ್ಭುತ ಪರ್ಫಾರ್ಮೆನ್ಸ್​ ನೀಡಿ ಕ್ಯಾಪ್ಟನ್​ ಆಗಿದ್ದಾರೆ. ಶಮಂತ್​ ಕೂಡ ಬಿಗ್​ ಬಾಸ್​ ಮನೆಯಲ್ಲಿ ಒಳ್ಳೆಯ ರೀತಿಯಲ್ಲಿ ಆಟವಾಡುತ್ತಿದ್ದಾರೆ. ಹೀಗಾಗಿ, ಅವರು ಸೇವ್​ ಆಗಲಿದ್ದಾರೆ ಎನ್ನುವ ಮಾತು ಕೇಳಿ ಬಂದಿತ್ತು. ಕಳೆದ ವಾರ ಪ್ರಿಯಾಂಕಾ ಎಲಿಮಿನೇಟ್​ ಆದಾಗ ಚಕ್ರವರ್ತಿ ಚಂದ್ರಚೂಡ್​ ನಡೆದುಕೊಂಡಿದ್ದ ರೀತಿ ಅನೇಕರಿಗೆ ಇಷ್ಟವಾಗಿರಲಿಲ್ಲ. ಅವರು ಪ್ರಿಯಾಂಕಾಗೆ ಅಶ್ಲೀಲ ಸನ್ನೆ ತೋರಿದ್ದರು. ಇದು ಜನರ ಆಕ್ರೋಶಕ್ಕೆ ಕಾರಣವಾಗಿತ್ತು. ಈ ಕಾರಣಕ್ಕೆ ಇವರು ಕಡಿಮೆ ವೋಟ್​ ಪಡೆದು ಈ ವಾರ ಬಿಗ್​ ಬಾಸ್​ ಮನೆಯಿಂದ ಮೊದಲು ಎಲಿಮಿನೇಟ್​ ಆಗಲಿದ್ದಾರೆ ಎಂಬುದು ಅಭಿಮಾನಿಗಳ ಲೆಕ್ಕಾಚಾರವಾಗಿತ್ತು. ಇವರ ಜತೆ ಪ್ರಶಾಂತ್​ ಹಾಗೂ ಶುಭಾ ಇಬ್ಬರಲ್ಲಿ ಒಬ್ಬರು ಔಟ್​ ಆಗಬಹುದು ಎನ್ನಲಾಗಿತ್ತು. ಆದರೆ, ಈ ಲೆಕ್ಕಾಚಾರ ಉಲ್ಟಾ ಆಗಿದೆ.

ಪ್ರಶಾಂತ್ ಸಂಬರಗಿ​, ಶುಭಾ ಪೂಂಜಾ, ಶಮಂತ್​ ಬ್ರೋ ಗೌಡ, ಚಕ್ರವರ್ತಿ ಚಂದ್ರಚೂಡ್, ದಿವ್ಯಾ ಉರುಡುಗ​ ನಾಮಿನೇಷನ್​ನಲ್ಲಿ ಮುಂದುವರಿಯುತ್ತಿದ್ದಾರೆ.

ಎರಡನೇ ಇನ್ನಿಂಗ್ಸ್​ ಆರಂಭವಾಗುವಾಗ ಕಿಚ್ಚ ಸುದೀಪ್​ ಅವರು ಬಿಗ್​ ಬಾಸ್​ ಒಂದು ತಿಂಗಳು ನಡೆಯಲಿದೆ ಎಂದಿದ್ದರು. ಅವರು ಹೇಳಿದಂತೆ ಆಗಿದ್ದರೆ ಈ ವಾರ ಫಿನಾಲೆ ಆಗಬೇಕಿತ್ತು. ಆದರೆ, ಆ ರೀತಿ ಆಗಿಲ್ಲ. ಆಗಸ್ಟ್​ 8ರಂದು ಬಿಗ್​ ಬಾಸ್​ ಫಿನಾಲೆ ನಡೆಯುತ್ತಿದೆ. ಅದಕ್ಕೂ ಮೊದಲು ಒಂದು ಡಬಲ್​ ಎಲಿಮಿನೇಷನ್​ ಬಿಗ್​ ಬಾಸ್​ ಮನೆಯಲ್ಲಿ ನಡೆಯುತ್ತಿದೆ ಎನ್ನಲಾಗಿತ್ತು. ಆದರೆ, ಬಿಗ್​ ಬಾಸ್​ ಫ್ಯಾನ್ಸ್​ಗೆ ಅಚ್ಚರಿ ಸಿಕ್ಕಿದೆ.

ಇದನ್ನೂ ಓದಿ: ‘ನೀವು ನನ್ನನ್ನು ಸ್ತ್ರೀ ನಿಂದಕ ಎಂಬಂತೆ ಮಾಡಿದ್ದೀರಿ’; ಸುದೀಪ್​ ಮೇಲೆಯೇ ಗೂಬೆ ಕೂರಿಸಿದ ಚಕ್ರವರ್ತಿ, ಕಿಚ್ಚ ಕೊಟ್ಟ ಉತ್ತರ ಏನು?

ಬಿಗ್​ ಬಾಸ್​ ಫಿನಾಲೆಗೂ ಮೊದಲೇ ರಘು ಗೌಡ-ರಾಜೀವ್ ಅಭಿಮಾನಿಗಳಿಗೆ ಗುಡ್ ನ್ಯೂಸ್​

Published On - 9:51 pm, Sun, 25 July 21

Follow Us
Web contact
Web contact

TV9 Kannada

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು