AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್​ ಬಾಸ್​ ಎಲಿಮಿನೇಷನ್​ನಲ್ಲಿ ಟ್ವಿಸ್ಟ್​; ಶನಿವಾರವೇ ಹೊರ ಬಿದ್ದ ಶುಭಾ ಪೂಂಜಾ

ಬಿಗ್​ ಬಾಸ್​ ಮನೆಯಲ್ಲಿ ಮಂಜು ಪಾವಗಡ, ಅರವಿಂದ್ ಕೆ.ಪಿ, ಶಮಂತ್​ ಬ್ರೋ ಗೌಡ, ಪ್ರಶಾಂತ್​ ಸಂಬರಗಿ, ವೈಷ್ಣವಿ ಗೌಡ, ಶುಭಾ ಪೂಂಜಾ, ದಿವ್ಯಾ ಸುರೇಶ್​ ಹಾಗೂ ದಿವ್ಯಾ ಉರುಡುಗ ಇದ್ದಾರೆ. ಈ ಪೈಕಿ ದಿವ್ಯಾ ಉರುಡುಗ ಕ್ಯಾಪ್ಟನ್​ ಆಗಿದ್ದರಿಂದ ನಾಮಿನೇಷನ್​ನಿಂದ ಬಚಾವ್​ ಆಗಿದ್ದಾರೆ.

ಬಿಗ್​ ಬಾಸ್​ ಎಲಿಮಿನೇಷನ್​ನಲ್ಲಿ ಟ್ವಿಸ್ಟ್​; ಶನಿವಾರವೇ ಹೊರ ಬಿದ್ದ ಶುಭಾ ಪೂಂಜಾ
ಶುಭಾ ಪೂಂಜಾ
TV9 Web
| Edited By: |

Updated on:Jul 31, 2021 | 9:59 PM

Share

ಕನ್ನಡ ಬಿಗ್​ ಬಾಸ್​ ಸೀಸನ್​ 8 ಫಿನಾಲೆ ಹಂತ ತಲುಪಿದೆ. ಮುಂದಿನ ವಾರ ಗ್ರ್ಯಾಂಡ್​ ಫಿನಾಲೆ ನಡೆಯಲಿದೆ. ಅದಕ್ಕೂ ಮೊದಲು ಶನಿವಾರವೇ ಒಂದು ಎಲಿಮಿನೇಷನ್​ ನಡೆದಿದೆ. ಶುಭಾ ಬಿಗ್​ ಬಾಸ್​ ಮನೆಯಿಂದ ಔಟ್​ ಆಗಿದ್ದಾರೆ. ಇದು ಕೆಲವರಿಗೆ ಅಚ್ಚರಿ ಎನಿಸಿದರೆ, ಇನ್ನೂ ಕೆಲವರಿಗೆ ಇದು ನಿರೀಕ್ಷಿತವಾಗಿತ್ತು. ಆದರೆ, ಶನಿವಾರವೇ ಎಲಿಮಿನೇಷನ್​ ನಡೆದಿದೆ ಅನ್ನೋದು ಶಾಕಿಂಗ್​ ಆಗಿತ್ತು.

ಬಿಗ್​ ಬಾಸ್​ ಮನೆಯಲ್ಲಿ ಮಂಜು ಪಾವಗಡ, ಅರವಿಂದ್ ಕೆ.ಪಿ, ಶಮಂತ್​ ಬ್ರೋ ಗೌಡ, ಪ್ರಶಾಂತ್​ ಸಂಬರಗಿ, ವೈಷ್ಣವಿ ಗೌಡ, ಶುಭಾ ಪೂಂಜಾ, ದಿವ್ಯಾ ಸುರೇಶ್​ ಹಾಗೂ ದಿವ್ಯಾ ಉರುಡುಗ ಇದ್ದರು. ಈ ಪೈಕಿ ದಿವ್ಯಾ ಉರುಡುಗ ಕ್ಯಾಪ್ಟನ್​ ಆಗಿದ್ದರಿಂದ ನಾಮಿನೇಷನ್​ನಿಂದ ಬಚಾವ್​ ಆಗಿದ್ದರು. ಉಳಿದಂತೆ ಏಳು ಜನರು ನಾಮಿನೇಷನ್​ ಲಿಸ್ಟ್​ನಲ್ಲಿದ್ದರು.

ಬಿಗ್​ ಬಾಸ್​ ಫಿನಾಲೆ ವಾರದಲ್ಲಿ ಐವರು ಉಳಿದುಕೊಳ್ಳುತ್ತಾರೆ. ಇದು ಬಿಗ್​ ಬಾಸ್​ ಸಂಪ್ರದಾಯ. ಅಂದರೆ, ಫಿನಾಲೆ ಬರುವುದರೊಳಗೆ ಬಿಗ್​ ಬಾಸ್​ ಮನೆಯಿಂದ ಮೂವರು ಎಲಿಮಿನೇಷನ್​ ಆಗಲಿದ್ದಾರೆ. ಆ ಮೂವರು ಸ್ಪರ್ಧಿಗಳು ಯಾರು ಅನ್ನೋದು ಸದ್ಯದ ಕುತೂಹಲವಾಗಿತ್ತು. ಅದರಲ್ಲಿ ಈಗ ಒಬ್ಬರು ಶುಭಾ ಆಗಿದ್ದಾರೆ.

ಶುಭಾ ಪೂಂಜಾ ಬಿಗ್​ ಬಾಸ್​ ಮನೆಯಲ್ಲಿ ಟಾಸ್ಕ್​ನಲ್ಲಿ ಅಷ್ಟಾಗಿ ಆ್ಯಕ್ಟಿವ್​ ಆಗಿರಲಿಲ್ಲ. ಇನ್ನು, ಉಳಿದ ಕಂಟೆಸ್ಟೆಂಟ್​ಗಳಿಗೆ ಹೋಲಿಸಿದರೆ, ಶುಭಾ ವೀಕ್​ ಆಗಿದ್ದರು. ಈ ಕಾರಣಕ್ಕೆ ಅವರು ಎಲಿಮಿನೇಟ್​ ಆಗಿದ್ದಾರೆ. ಅವರು ಚಿಕ್ಕಮಕ್ಕಳಂತೆ ಆಡೋದು ಕಿರಿಕಿರಿ ತರುತ್ತಿದೆ ಎಂದು ಕೆಲವರು ಹೇಳಿದ್ದರು.

ಮಂಜು ಪಾವಗಡ, ಅರವಿಂದ್​ ಕೆ.ಪಿ. ಹಾಗೂ ವೈಷ್ಣವಿ ಬಿಗ್​ ಬಾಸ್​ ಮನೆಯಲ್ಲಿ ಸ್ಟ್ರಾಂಗ್​ ಕಂಟೆಸ್ಟೆಂಟ್ಸ್​​ ಎನಿಸಿಕೊಂಡಿದ್ದಾರೆ. ಇವರು ಫಿನಾಲೆ ವೀಕ್​ನಲ್ಲಿ ಉಳಿಯೋದು ಬಹುತೇಕ ಖಚಿತ ಎನ್ನಲಾಗುತ್ತಿದೆ. ಟಾಸ್ಕ್​ ವಿಚಾರಕ್ಕಿರಲಿ ಅಥವಾ ಮನೆಯಲ್ಲಿ ಹೊಂದಿಕೊಂಡು ಹೋಗುವ ವಿಚಾರದಲ್ಲಿರಲಿ ಈ ಮೂವರು ಮುಂದಿರುತ್ತಾರೆ.

ಮಂಜು ಪಾವಗಡ, ಅರವಿಂದ್ ಕೆ.ಪಿ, ಶಮಂತ್​ ಬ್ರೋ ಗೌಡ, ಪ್ರಶಾಂತ್​ ಸಂಬರಗಿ, ವೈಷ್ಣವಿ ಗೌಡ, ದಿವ್ಯಾ ಸುರೇಶ್​  ಡೇಂಜರ್​ಜೋನ್​ನಲ್ಲಿ ಮುಂದುವರಿದಿದ್ದಾರೆ. ಇವರಲ್ಲಿ ಒಬ್ಬರು ನಾಳೆ ಎಲಿಮಿನೇಟ್​ ಆಗಲಿದ್ದಾರೆ. ಮಂಗಳವಾರ ಮತ್ತೊಬ್ಬರು ಔಟ್​ ಆಗಲಿದ್ದಾರೆ.

ಇದನ್ನೂ ಓದಿ: ದೊಡ್ಮನೆಯಲ್ಲಿ ಅರವಿಂದ್ ಮಧ್ಯ ಬೆರಳು ತೋರಿಸಿದ ವಿಡಿಯೋ ವೈರಲ್​; ಬಿಗ್​ ಬಾಸ್ ತಂಡದಿಂದ ಸ್ಪಷ್ಟನೆ

ಹಳೆಯ ಫೋಟೋ ವೈರಲ್​ ಪ್ರಕರಣ; ಕೋರ್ಟ್​ ಮೊರೆ ಹೋದ ಬಿಗ್​ ಬಾಸ್​ ಸ್ಪರ್ಧಿ ದಿವ್ಯಾ ಉರುಡುಗ

Published On - 9:52 pm, Sat, 31 July 21

Follow Us
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!