AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್​ ಬಾಸ್​ ಮನೆಯಲ್ಲಿರುವ ಎಂಟು ಸ್ಪರ್ಧಿಗಳ ಪೈಕಿ ಹೊರ ಹೋಗುವ ಆ ಮೂವರು ಯಾರು?

Bigg Boss Kannada 8 Elimination: ಬಿಗ್​ ಬಾಸ್​ ಮನೆಯಲ್ಲಿ ಮಂಜು ಪಾವಗಡ, ಅರವಿಂದ್ ಕೆ.ಪಿ, ಶಮಂತ್​ ಬ್ರೋ ಗೌಡ, ಪ್ರಶಾಂತ್​ ಸಂಬರಗಿ, ವೈಷ್ಣವಿ ಗೌಡ, ಶುಭಾ ಪೂಂಜಾ, ದಿವ್ಯಾ ಸುರೇಶ್​ ಹಾಗೂ ದಿವ್ಯಾ ಉರುಡುಗ ಇದ್ದಾರೆ.

ಬಿಗ್​ ಬಾಸ್​ ಮನೆಯಲ್ಲಿರುವ ಎಂಟು ಸ್ಪರ್ಧಿಗಳ ಪೈಕಿ ಹೊರ ಹೋಗುವ ಆ ಮೂವರು ಯಾರು?
ಸುದೀಪ್​
TV9 Web
| Edited By: |

Updated on:Jul 31, 2021 | 2:37 PM

Share

ಕನ್ನಡ ಬಿಗ್​ ಬಾಸ್​ ಸೀಸನ್​ 8 ಫಿನಾಲೆ ಹಂತ ತಲುಪಿದೆ. ಮುಂದಿನ ವಾರ ಗ್ರ್ಯಾಂಡ್​ ಫಿನಾಲೆ ನಡೆಯಲಿದೆ. ಕಿಚ್ಚ ಸುದೀಪ್​ ಅವರು ಒಬ್ಬರನ್ನು ವಿಜೇತರೆಂದು ಘೋಷಿಸಿದರೆ, ಮತ್ತೊಬ್ಬರು ರನ್ನರ್​ ಅಪ್​ ಆಗಲಿದ್ದಾರೆ. ಅದಕ್ಕೂ ಮೊದಲು ಅಂದರೆ ಈ ವಾರ ಕೆಲವರು ಎಲಿಮಿನೇಟ್​ ಆಗಲಿದ್ದಾರೆ. ಅವರು ಯಾರು ಅನ್ನೋ ಕುತೂಹಲ ವೀಕ್ಷಕರಲ್ಲಿ ಕಾಡುತ್ತಿದೆ.

ಬಿಗ್​ ಬಾಸ್​ ಮನೆಯಲ್ಲಿ ಮಂಜು ಪಾವಗಡ, ಅರವಿಂದ್ ಕೆ.ಪಿ, ಶಮಂತ್​ ಬ್ರೋ ಗೌಡ, ಪ್ರಶಾಂತ್​ ಸಂಬರಗಿ, ವೈಷ್ಣವಿ ಗೌಡ, ಶುಭಾ ಪೂಂಜಾ, ದಿವ್ಯಾ ಸುರೇಶ್​ ಹಾಗೂ ದಿವ್ಯಾ ಉರುಡುಗ ಇದ್ದಾರೆ. ಈ ಪೈಕಿ ದಿವ್ಯಾ ಉರುಡುಗ ಕ್ಯಾಪ್ಟನ್​ ಆಗಿದ್ದರಿಂದ ನಾಮಿನೇಷನ್​ನಿಂದ ಬಚಾವ್​ ಆಗಿದ್ದಾರೆ. ಉಳಿದಂತೆ ಏಳು ಜನರು ನಾಮಿನೇಷನ್​ ಲಿಸ್ಟ್​ನಲ್ಲಿದ್ದಾರೆ.

ಬಿಗ್​ ಬಾಸ್​ ಫಿನಾಲೆ ವಾರದಲ್ಲಿ ಐವರು ಉಳಿದುಕೊಳ್ಳುತ್ತಾರೆ. ಇದು ಬಿಗ್​ ಬಾಸ್​ ಸಂಪ್ರದಾಯ. ಅಂದರೆ, ಫಿನಾಲೆ ಬರುವುದರೊಳಗೆ ಬಿಗ್​ ಬಾಸ್​ ಮನೆಯಿಂದ ಮೂವರು ಎಲಿಮಿನೇಷನ್​ ಆಗೋದು ಪಕ್ಕಾ ಎನ್ನಲಾಗುತ್ತಿದೆ. ಆ ಮೂವರು ಸ್ಪರ್ಧಿಗಳು ಯಾರು ಅನ್ನೋದು ಸದ್ಯದ ಕುತೂಹಲ.

ಮಂಜು ಪಾವಗಡ, ಅರವಿಂದ್​ ಕೆ.ಪಿ. ಹಾಗೂ ವೈಷ್ಣವಿ ಬಿಗ್​ ಬಾಸ್​ ಮನೆಯಲ್ಲಿ ಸ್ಟ್ರಾಂಗ್​ ಕಂಟೆಸ್ಟೆಂಟ್ಸ್​​ ಎನಿಸಿಕೊಂಡಿದ್ದಾರೆ. ಇವರು ಫಿನಾಲೆ ವೀಕ್​ನಲ್ಲಿ ಉಳಿಯೋದು ಬಹುತೇಕ ಖಚಿತ. ಟಾಸ್ಕ್​ ವಿಚಾರಕ್ಕಿರಲಿ ಅಥವಾ ಮನೆಯಲ್ಲಿ ಹೊಂದಿಕೊಂಡು ಹೋಗುವ ವಿಚಾರದಲ್ಲಿರಲಿ ಈ ಮೂವರು ಮುಂದಿರುತ್ತಾರೆ.

ಇನ್ನು ದಿವ್ಯಾ ಉರುಡುಗ ಕೂಡ ಪ್ರಮುಖ ಸ್ಪರ್ಧಿಯಾಗಿದ್ದಾರೆ. ಇವರು ಕೂಡ ಸ್ಟ್ರಾಂಗ್​ ಎನಿಸಿಕೊಂಡಿದ್ದಾರೆ. ಅರವಿಂದ್​ ಹಾಗೂ ದಿವ್ಯಾ ಕೆಮಿಸ್ಟ್ರಿ ಎಲ್ಲರಿಗೂ ಇಷ್ಟವಾಗಿದೆ. ಈ ಕಾರಣಕ್ಕೆ ದಿವ್ಯಾ ಪ್ರಮುಖ ಎನಿಸಿಕೊಂಡಿದ್ದಾರೆ. ಈ ವಾರ ಕ್ಯಾಪ್ಟನ್​ ಕೂಡ ಆಗಿರುವುದರಿಂದ ಟಾಪ್​ 5ನಲ್ಲಿ ದಿವ್ಯಾ ಕಾಣಿಸಿಕೊಂಡರೂ ಅಚ್ಚರಿ ಇಲ್ಲ.

ಇನ್ನು ಐದನೇ ಸ್ಥಾನಕ್ಕೆ ಯಾರು ಅನ್ನೋದು ಸದ್ಯದ ಕುತೂಹಲ. ಶುಭಾ, ಪ್ರಶಾಂತ್​, ಶಮಂತ್​ ಹಾಗೂ ದಿವ್ಯಾ ಸುರೇಶ್ ಈ ನಾಲ್ವರ ನಡುವೆ ಟಫ್​ ಕಾಂಪಿಟೇಷನ್​ ಇದೆ. ಫಿನಾಲೆಗೂ ಮೊದಲು ಈ ನಾಲ್ವರಲ್ಲಿ ಮೂವರು ಹೊರಹೋಗಬಹುದು ಎಂಬುದು ವೀಕ್ಷಕರ ಲೆಕ್ಕಾಚಾರ.

ಇದನ್ನೂ ಓದಿ: ಹಗಲಿನಲ್ಲಿ ನಿದ್ದೆ ಮಾಡೋಕೆ ಮುಂದಾದ ಮಂಜು-ವೈಷ್ಣವಿಗೆ ಕಠಿಣ ಶಿಕ್ಷೆ; ಉಳಿದ ಸ್ಪರ್ಧಿಗಳಿಗೆ ಎಚ್ಚರಿಕೆ ಗಂಟೆ

ಶಮಂತ್​ಗೆ ಬಿಗ್​ ಬಾಸ್​ ನೀಡಿದ್ರು ಸರ್​ಪ್ರೈಸ್​ ಗಿಫ್ಟ್​; ಭಾವುಕರಾದ ಬ್ರೋ ಗೌಡ

Published On - 2:36 pm, Sat, 31 July 21

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ