AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್​ ಬಾಸ್​ ಮನೆಯಲ್ಲಿರುವ ಎಂಟು ಸ್ಪರ್ಧಿಗಳ ಪೈಕಿ ಹೊರ ಹೋಗುವ ಆ ಮೂವರು ಯಾರು?

Bigg Boss Kannada 8 Elimination: ಬಿಗ್​ ಬಾಸ್​ ಮನೆಯಲ್ಲಿ ಮಂಜು ಪಾವಗಡ, ಅರವಿಂದ್ ಕೆ.ಪಿ, ಶಮಂತ್​ ಬ್ರೋ ಗೌಡ, ಪ್ರಶಾಂತ್​ ಸಂಬರಗಿ, ವೈಷ್ಣವಿ ಗೌಡ, ಶುಭಾ ಪೂಂಜಾ, ದಿವ್ಯಾ ಸುರೇಶ್​ ಹಾಗೂ ದಿವ್ಯಾ ಉರುಡುಗ ಇದ್ದಾರೆ.

ಬಿಗ್​ ಬಾಸ್​ ಮನೆಯಲ್ಲಿರುವ ಎಂಟು ಸ್ಪರ್ಧಿಗಳ ಪೈಕಿ ಹೊರ ಹೋಗುವ ಆ ಮೂವರು ಯಾರು?
ಸುದೀಪ್​
TV9 Web
| Updated By: ರಾಜೇಶ್ ದುಗ್ಗುಮನೆ|

Updated on:Jul 31, 2021 | 2:37 PM

Share

ಕನ್ನಡ ಬಿಗ್​ ಬಾಸ್​ ಸೀಸನ್​ 8 ಫಿನಾಲೆ ಹಂತ ತಲುಪಿದೆ. ಮುಂದಿನ ವಾರ ಗ್ರ್ಯಾಂಡ್​ ಫಿನಾಲೆ ನಡೆಯಲಿದೆ. ಕಿಚ್ಚ ಸುದೀಪ್​ ಅವರು ಒಬ್ಬರನ್ನು ವಿಜೇತರೆಂದು ಘೋಷಿಸಿದರೆ, ಮತ್ತೊಬ್ಬರು ರನ್ನರ್​ ಅಪ್​ ಆಗಲಿದ್ದಾರೆ. ಅದಕ್ಕೂ ಮೊದಲು ಅಂದರೆ ಈ ವಾರ ಕೆಲವರು ಎಲಿಮಿನೇಟ್​ ಆಗಲಿದ್ದಾರೆ. ಅವರು ಯಾರು ಅನ್ನೋ ಕುತೂಹಲ ವೀಕ್ಷಕರಲ್ಲಿ ಕಾಡುತ್ತಿದೆ.

ಬಿಗ್​ ಬಾಸ್​ ಮನೆಯಲ್ಲಿ ಮಂಜು ಪಾವಗಡ, ಅರವಿಂದ್ ಕೆ.ಪಿ, ಶಮಂತ್​ ಬ್ರೋ ಗೌಡ, ಪ್ರಶಾಂತ್​ ಸಂಬರಗಿ, ವೈಷ್ಣವಿ ಗೌಡ, ಶುಭಾ ಪೂಂಜಾ, ದಿವ್ಯಾ ಸುರೇಶ್​ ಹಾಗೂ ದಿವ್ಯಾ ಉರುಡುಗ ಇದ್ದಾರೆ. ಈ ಪೈಕಿ ದಿವ್ಯಾ ಉರುಡುಗ ಕ್ಯಾಪ್ಟನ್​ ಆಗಿದ್ದರಿಂದ ನಾಮಿನೇಷನ್​ನಿಂದ ಬಚಾವ್​ ಆಗಿದ್ದಾರೆ. ಉಳಿದಂತೆ ಏಳು ಜನರು ನಾಮಿನೇಷನ್​ ಲಿಸ್ಟ್​ನಲ್ಲಿದ್ದಾರೆ.

ಬಿಗ್​ ಬಾಸ್​ ಫಿನಾಲೆ ವಾರದಲ್ಲಿ ಐವರು ಉಳಿದುಕೊಳ್ಳುತ್ತಾರೆ. ಇದು ಬಿಗ್​ ಬಾಸ್​ ಸಂಪ್ರದಾಯ. ಅಂದರೆ, ಫಿನಾಲೆ ಬರುವುದರೊಳಗೆ ಬಿಗ್​ ಬಾಸ್​ ಮನೆಯಿಂದ ಮೂವರು ಎಲಿಮಿನೇಷನ್​ ಆಗೋದು ಪಕ್ಕಾ ಎನ್ನಲಾಗುತ್ತಿದೆ. ಆ ಮೂವರು ಸ್ಪರ್ಧಿಗಳು ಯಾರು ಅನ್ನೋದು ಸದ್ಯದ ಕುತೂಹಲ.

ಮಂಜು ಪಾವಗಡ, ಅರವಿಂದ್​ ಕೆ.ಪಿ. ಹಾಗೂ ವೈಷ್ಣವಿ ಬಿಗ್​ ಬಾಸ್​ ಮನೆಯಲ್ಲಿ ಸ್ಟ್ರಾಂಗ್​ ಕಂಟೆಸ್ಟೆಂಟ್ಸ್​​ ಎನಿಸಿಕೊಂಡಿದ್ದಾರೆ. ಇವರು ಫಿನಾಲೆ ವೀಕ್​ನಲ್ಲಿ ಉಳಿಯೋದು ಬಹುತೇಕ ಖಚಿತ. ಟಾಸ್ಕ್​ ವಿಚಾರಕ್ಕಿರಲಿ ಅಥವಾ ಮನೆಯಲ್ಲಿ ಹೊಂದಿಕೊಂಡು ಹೋಗುವ ವಿಚಾರದಲ್ಲಿರಲಿ ಈ ಮೂವರು ಮುಂದಿರುತ್ತಾರೆ.

ಇನ್ನು ದಿವ್ಯಾ ಉರುಡುಗ ಕೂಡ ಪ್ರಮುಖ ಸ್ಪರ್ಧಿಯಾಗಿದ್ದಾರೆ. ಇವರು ಕೂಡ ಸ್ಟ್ರಾಂಗ್​ ಎನಿಸಿಕೊಂಡಿದ್ದಾರೆ. ಅರವಿಂದ್​ ಹಾಗೂ ದಿವ್ಯಾ ಕೆಮಿಸ್ಟ್ರಿ ಎಲ್ಲರಿಗೂ ಇಷ್ಟವಾಗಿದೆ. ಈ ಕಾರಣಕ್ಕೆ ದಿವ್ಯಾ ಪ್ರಮುಖ ಎನಿಸಿಕೊಂಡಿದ್ದಾರೆ. ಈ ವಾರ ಕ್ಯಾಪ್ಟನ್​ ಕೂಡ ಆಗಿರುವುದರಿಂದ ಟಾಪ್​ 5ನಲ್ಲಿ ದಿವ್ಯಾ ಕಾಣಿಸಿಕೊಂಡರೂ ಅಚ್ಚರಿ ಇಲ್ಲ.

ಇನ್ನು ಐದನೇ ಸ್ಥಾನಕ್ಕೆ ಯಾರು ಅನ್ನೋದು ಸದ್ಯದ ಕುತೂಹಲ. ಶುಭಾ, ಪ್ರಶಾಂತ್​, ಶಮಂತ್​ ಹಾಗೂ ದಿವ್ಯಾ ಸುರೇಶ್ ಈ ನಾಲ್ವರ ನಡುವೆ ಟಫ್​ ಕಾಂಪಿಟೇಷನ್​ ಇದೆ. ಫಿನಾಲೆಗೂ ಮೊದಲು ಈ ನಾಲ್ವರಲ್ಲಿ ಮೂವರು ಹೊರಹೋಗಬಹುದು ಎಂಬುದು ವೀಕ್ಷಕರ ಲೆಕ್ಕಾಚಾರ.

ಇದನ್ನೂ ಓದಿ: ಹಗಲಿನಲ್ಲಿ ನಿದ್ದೆ ಮಾಡೋಕೆ ಮುಂದಾದ ಮಂಜು-ವೈಷ್ಣವಿಗೆ ಕಠಿಣ ಶಿಕ್ಷೆ; ಉಳಿದ ಸ್ಪರ್ಧಿಗಳಿಗೆ ಎಚ್ಚರಿಕೆ ಗಂಟೆ

ಶಮಂತ್​ಗೆ ಬಿಗ್​ ಬಾಸ್​ ನೀಡಿದ್ರು ಸರ್​ಪ್ರೈಸ್​ ಗಿಫ್ಟ್​; ಭಾವುಕರಾದ ಬ್ರೋ ಗೌಡ

Published On - 2:36 pm, Sat, 31 July 21

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ