AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್​ ಬಾಸ್​ ಮನೆಯಲ್ಲಿರುವ ಎಂಟು ಸ್ಪರ್ಧಿಗಳ ಪೈಕಿ ಹೊರ ಹೋಗುವ ಆ ಮೂವರು ಯಾರು?

Bigg Boss Kannada 8 Elimination: ಬಿಗ್​ ಬಾಸ್​ ಮನೆಯಲ್ಲಿ ಮಂಜು ಪಾವಗಡ, ಅರವಿಂದ್ ಕೆ.ಪಿ, ಶಮಂತ್​ ಬ್ರೋ ಗೌಡ, ಪ್ರಶಾಂತ್​ ಸಂಬರಗಿ, ವೈಷ್ಣವಿ ಗೌಡ, ಶುಭಾ ಪೂಂಜಾ, ದಿವ್ಯಾ ಸುರೇಶ್​ ಹಾಗೂ ದಿವ್ಯಾ ಉರುಡುಗ ಇದ್ದಾರೆ.

ಬಿಗ್​ ಬಾಸ್​ ಮನೆಯಲ್ಲಿರುವ ಎಂಟು ಸ್ಪರ್ಧಿಗಳ ಪೈಕಿ ಹೊರ ಹೋಗುವ ಆ ಮೂವರು ಯಾರು?
ಸುದೀಪ್​
TV9 Web
| Edited By: |

Updated on:Jul 31, 2021 | 2:37 PM

Share

ಕನ್ನಡ ಬಿಗ್​ ಬಾಸ್​ ಸೀಸನ್​ 8 ಫಿನಾಲೆ ಹಂತ ತಲುಪಿದೆ. ಮುಂದಿನ ವಾರ ಗ್ರ್ಯಾಂಡ್​ ಫಿನಾಲೆ ನಡೆಯಲಿದೆ. ಕಿಚ್ಚ ಸುದೀಪ್​ ಅವರು ಒಬ್ಬರನ್ನು ವಿಜೇತರೆಂದು ಘೋಷಿಸಿದರೆ, ಮತ್ತೊಬ್ಬರು ರನ್ನರ್​ ಅಪ್​ ಆಗಲಿದ್ದಾರೆ. ಅದಕ್ಕೂ ಮೊದಲು ಅಂದರೆ ಈ ವಾರ ಕೆಲವರು ಎಲಿಮಿನೇಟ್​ ಆಗಲಿದ್ದಾರೆ. ಅವರು ಯಾರು ಅನ್ನೋ ಕುತೂಹಲ ವೀಕ್ಷಕರಲ್ಲಿ ಕಾಡುತ್ತಿದೆ.

ಬಿಗ್​ ಬಾಸ್​ ಮನೆಯಲ್ಲಿ ಮಂಜು ಪಾವಗಡ, ಅರವಿಂದ್ ಕೆ.ಪಿ, ಶಮಂತ್​ ಬ್ರೋ ಗೌಡ, ಪ್ರಶಾಂತ್​ ಸಂಬರಗಿ, ವೈಷ್ಣವಿ ಗೌಡ, ಶುಭಾ ಪೂಂಜಾ, ದಿವ್ಯಾ ಸುರೇಶ್​ ಹಾಗೂ ದಿವ್ಯಾ ಉರುಡುಗ ಇದ್ದಾರೆ. ಈ ಪೈಕಿ ದಿವ್ಯಾ ಉರುಡುಗ ಕ್ಯಾಪ್ಟನ್​ ಆಗಿದ್ದರಿಂದ ನಾಮಿನೇಷನ್​ನಿಂದ ಬಚಾವ್​ ಆಗಿದ್ದಾರೆ. ಉಳಿದಂತೆ ಏಳು ಜನರು ನಾಮಿನೇಷನ್​ ಲಿಸ್ಟ್​ನಲ್ಲಿದ್ದಾರೆ.

ಬಿಗ್​ ಬಾಸ್​ ಫಿನಾಲೆ ವಾರದಲ್ಲಿ ಐವರು ಉಳಿದುಕೊಳ್ಳುತ್ತಾರೆ. ಇದು ಬಿಗ್​ ಬಾಸ್​ ಸಂಪ್ರದಾಯ. ಅಂದರೆ, ಫಿನಾಲೆ ಬರುವುದರೊಳಗೆ ಬಿಗ್​ ಬಾಸ್​ ಮನೆಯಿಂದ ಮೂವರು ಎಲಿಮಿನೇಷನ್​ ಆಗೋದು ಪಕ್ಕಾ ಎನ್ನಲಾಗುತ್ತಿದೆ. ಆ ಮೂವರು ಸ್ಪರ್ಧಿಗಳು ಯಾರು ಅನ್ನೋದು ಸದ್ಯದ ಕುತೂಹಲ.

ಮಂಜು ಪಾವಗಡ, ಅರವಿಂದ್​ ಕೆ.ಪಿ. ಹಾಗೂ ವೈಷ್ಣವಿ ಬಿಗ್​ ಬಾಸ್​ ಮನೆಯಲ್ಲಿ ಸ್ಟ್ರಾಂಗ್​ ಕಂಟೆಸ್ಟೆಂಟ್ಸ್​​ ಎನಿಸಿಕೊಂಡಿದ್ದಾರೆ. ಇವರು ಫಿನಾಲೆ ವೀಕ್​ನಲ್ಲಿ ಉಳಿಯೋದು ಬಹುತೇಕ ಖಚಿತ. ಟಾಸ್ಕ್​ ವಿಚಾರಕ್ಕಿರಲಿ ಅಥವಾ ಮನೆಯಲ್ಲಿ ಹೊಂದಿಕೊಂಡು ಹೋಗುವ ವಿಚಾರದಲ್ಲಿರಲಿ ಈ ಮೂವರು ಮುಂದಿರುತ್ತಾರೆ.

ಇನ್ನು ದಿವ್ಯಾ ಉರುಡುಗ ಕೂಡ ಪ್ರಮುಖ ಸ್ಪರ್ಧಿಯಾಗಿದ್ದಾರೆ. ಇವರು ಕೂಡ ಸ್ಟ್ರಾಂಗ್​ ಎನಿಸಿಕೊಂಡಿದ್ದಾರೆ. ಅರವಿಂದ್​ ಹಾಗೂ ದಿವ್ಯಾ ಕೆಮಿಸ್ಟ್ರಿ ಎಲ್ಲರಿಗೂ ಇಷ್ಟವಾಗಿದೆ. ಈ ಕಾರಣಕ್ಕೆ ದಿವ್ಯಾ ಪ್ರಮುಖ ಎನಿಸಿಕೊಂಡಿದ್ದಾರೆ. ಈ ವಾರ ಕ್ಯಾಪ್ಟನ್​ ಕೂಡ ಆಗಿರುವುದರಿಂದ ಟಾಪ್​ 5ನಲ್ಲಿ ದಿವ್ಯಾ ಕಾಣಿಸಿಕೊಂಡರೂ ಅಚ್ಚರಿ ಇಲ್ಲ.

ಇನ್ನು ಐದನೇ ಸ್ಥಾನಕ್ಕೆ ಯಾರು ಅನ್ನೋದು ಸದ್ಯದ ಕುತೂಹಲ. ಶುಭಾ, ಪ್ರಶಾಂತ್​, ಶಮಂತ್​ ಹಾಗೂ ದಿವ್ಯಾ ಸುರೇಶ್ ಈ ನಾಲ್ವರ ನಡುವೆ ಟಫ್​ ಕಾಂಪಿಟೇಷನ್​ ಇದೆ. ಫಿನಾಲೆಗೂ ಮೊದಲು ಈ ನಾಲ್ವರಲ್ಲಿ ಮೂವರು ಹೊರಹೋಗಬಹುದು ಎಂಬುದು ವೀಕ್ಷಕರ ಲೆಕ್ಕಾಚಾರ.

ಇದನ್ನೂ ಓದಿ: ಹಗಲಿನಲ್ಲಿ ನಿದ್ದೆ ಮಾಡೋಕೆ ಮುಂದಾದ ಮಂಜು-ವೈಷ್ಣವಿಗೆ ಕಠಿಣ ಶಿಕ್ಷೆ; ಉಳಿದ ಸ್ಪರ್ಧಿಗಳಿಗೆ ಎಚ್ಚರಿಕೆ ಗಂಟೆ

ಶಮಂತ್​ಗೆ ಬಿಗ್​ ಬಾಸ್​ ನೀಡಿದ್ರು ಸರ್​ಪ್ರೈಸ್​ ಗಿಫ್ಟ್​; ಭಾವುಕರಾದ ಬ್ರೋ ಗೌಡ

Published On - 2:36 pm, Sat, 31 July 21

Follow Us
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ