AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ವಾರ ಡಬಲ್​ ಎಲಿಮಿನೇಷನ್? ಸೂಚನೆ ಕೊಟ್ಟ ಬಿಗ್​ ಬಾಸ್​; ಔಟ್​ ಆಗೋರು ಯಾರು?

Bigg Boss Kannada Season 8 Elimination: ಎರಡನೇ ಇನ್ನಿಂಗ್ಸ್​ ಆರಂಭವಾಗುವಾಗ ಕಿಚ್ಚ ಸುದೀಪ್​ ಅವರು ಬಿಗ್​ ಬಾಸ್​ ಒಂದು ತಿಂಗಳು ನಡೆಯಲಿದೆ ಎಂದಿದ್ದರು. ಅವರು ಹೇಳಿದಂತೆ ಆಗಿದ್ದರೆ ಈ ವಾರ ಫಿನಾಲೆ ಆಗಬೇಕಿತ್ತು. ಆದರೆ, ಆ ರೀತಿ ಆಗಿಲ್ಲ.

ಈ ವಾರ ಡಬಲ್​ ಎಲಿಮಿನೇಷನ್? ಸೂಚನೆ ಕೊಟ್ಟ ಬಿಗ್​ ಬಾಸ್​; ಔಟ್​ ಆಗೋರು ಯಾರು?
ಬಿಗ್ ಬಾಸ್ ಕನ್ನಡ ಸೀಸನ್​ 8
TV9 Web
| Edited By: |

Updated on:Jul 25, 2021 | 3:43 PM

Share

ಪ್ರತಿ ಸೀಸನ್​ನಲ್ಲೂ ಕೆಲ ಸಾಮಾನ್ಯ ವಿಚಾರಗಳು ಬಿಗ್ ಬಾಸ್ ಮನೆಯಲ್ಲಿ ಕಂಡುಬರುತ್ತವೆ. ಅದರಲ್ಲಿ ವೈಲ್ಡ್​ ಕಾರ್ಡ್ ಎಂಟ್ರಿ​, ಡಬಲ್​ ಎಲಿಮಿನೇಷನ್​ ಕೂಡ ಒಂದು. ಈಗಾಗಲೇ ಬಿಗ್​ ಬಾಸ್​ ಮನೆಯಲ್ಲಿ ಮೂರು ಜನರು ವೈಲ್ಡ್ ಕಾರ್ಡ್​ ಮೂಲಕ ಎಂಟ್ರಿ ಪಡೆದಿದ್ದಾರೆ. ಆದರೆ, ಈ ವರೆಗೆ ಡಬಲ್​ ಎಲಿಮಿನೇಷನ್​ ಆಗಿಲ್ಲ. ಅಲ್ಲದೆ, ದಿನಗಳು ಕಡಿಮೆ ಇದ್ದು, ಸ್ಪರ್ಧಿಗಳ ಸಂಖ್ಯೆ ಹೆಚ್ಚಿದೆ. ಈ ಕಾರಣಕ್ಕೆ ಈ ವಾರವೇ ಡಬಲ್​ ಎಲಿಮಿನೇಷನ್​ ನಡೆಯಲಿದೆ ಎನ್ನಲಾಗುತ್ತಿದೆ. ಈ ಬಗ್ಗೆ ಬಿಗ್​ ಬಾಸ್​ ಸೂಚನೆ ನೀಡಿದ್ದಾರೆ.

ಎರಡನೇ ಇನ್ನಿಂಗ್ಸ್​ ಆರಂಭವಾಗುವಾಗ ಕಿಚ್ಚ ಸುದೀಪ್​ ಅವರು ಬಿಗ್​ ಬಾಸ್​ ಒಂದು ತಿಂಗಳು ನಡೆಯಲಿದೆ ಎಂದಿದ್ದರು. ಅವರು ಹೇಳಿದಂತೆ ಆಗಿದ್ದರೆ ಈ ವಾರ ಫಿನಾಲೆ ಆಗಬೇಕಿತ್ತು. ಆದರೆ, ಆ ರೀತಿ ಆಗಿಲ್ಲ. ಆಗಸ್ಟ್​ 8ರಂದು ಬಿಗ್​ ಬಾಸ್​ ಫಿನಾಲೆ ನಡೆಯಲಿದೆ ಎನ್ನಲಾಗಿದೆ. ಅದಕ್ಕೂ ಮೊದಲು ಒಂದು ಡಬಲ್​ ಎಲಿಮಿನೇಷನ್​ ಬಿಗ್​ ಬಾಸ್​ ಮನೆಯಲ್ಲಿ ನಡೆಯುತ್ತಿದೆ ಎನ್ನಲಾಗಿತ್ತು.

ಈ ವಾರ ಪ್ರಶಾಂತ್ ಸಂಬರಗಿ​, ಶುಭಾ ಪೂಂಜಾ, ಶಮಂತ್​ ಬ್ರೋ ಗೌಡ, ಚಕ್ರವರ್ತಿ ಚಂದ್ರಚೂಡ್, ದಿವ್ಯಾ ಉರುಡುಗ​ ನಾಮಿನೇಷನ್​ ಲಿಸ್ಟ್​ನಲ್ಲಿದ್ದಾರೆ.  ಈ ಐವರಲ್ಲಿ ಇಬ್ಬರು ಈ ವಾರ ಹೊರ ಹೋಗಬಹುದು ಎನ್ನಲಾಗಿತ್ತು.

ದಿವ್ಯಾ ಉರುಡುಗ ಬಿಗ್​ ಬಾಸ್​ ಮನೆಯಲ್ಲಿ ಅತ್ಯದ್ಭುತ ಪರ್ಫಾರ್ಮೆನ್ಸ್​ ನೀಡಿ ಕ್ಯಾಪ್ಟನ್​ ಆಗಿದ್ದಾರೆ.  ಕಳೆದ ವಾರ ಪ್ರಿಯಾಂಕಾ ಎಲಿಮಿನೇಟ್​ ಆದಾಗ ಚಕ್ರವರ್ತಿ ಚಂದ್ರಚೂಡ್​ ನಡೆದುಕೊಂಡಿದ್ದ ರೀತಿ ಅನೇಕರಿಗೆ ಇಷ್ಟವಾಗಿರಲಿಲ್ಲ. ಅವರು ಪ್ರಿಯಾಂಕಾಗೆ ಅಶ್ಲೀಲ ಸನ್ನೆ ತೋರಿದ್ದರು. ಇದು ಜನರ ಆಕ್ರೋಶಕ್ಕೆ ಕಾರಣವಾಗಿದೆ. ಈ ಕಾರಣಕ್ಕೆ ಇವರು ಕಡಿಮೆ ವೋಟ್​ ಪಡೆದು ಈ ವಾರ ಬಿಗ್​ ಬಾಸ್​ ಮನೆಯಿಂದ ಮೊದಲು ಎಲಿಮಿನೇಟ್​ ಆಗಲಿದ್ದಾರೆ ಎನ್ನಲಾಗಿದೆ. ಶಮಂತ್​ ಈ ವಾರ ಮನೆಯಿಂದ ಹೊರ ನಡೆದಿದ್ದಾರೆ ಎನ್ನುವ ಮಾತು ಕೇಳಿ ಬಂದಿದೆ. ಮೂಲಗಳ ಪ್ರಕಾರ ಈ ವಾರ ಎಲಿಮಿನೇಷನ್​ ನಡೆದೇ ಇಲ್ಲ ಎಂದು ಕೂಡ ಹೇಳಲಾಗುತ್ತಿದೆ. ಇದಕ್ಕೆ ಇಂದು ಉತ್ತರ ಸಿಗಬೇಕಿದೆ.

ಇದನ್ನೂ ಓದಿ: ಬಿಗ್​ ಬಾಸ್​ ಫಿನಾಲೆಗೂ ಮೊದಲೇ ಶುಭಾ ಪೂಂಜಾಗೆ ಬಿಗ್​ ಬಾಸ್​ ಕಡೆಯಿಂದ ಶಾಕ್​

ಬಿಗ್​ ಬಾಸ್​ ಫಿನಾಲೆಗೆ ನೇರವಾಗಿ ಆಯ್ಕೆಯಾದ ದಿವ್ಯಾ ಉರುಡುಗ; ಮಂಜು-ಅರವಿಂದ್ ಅವರನ್ನು ಬೀಟ್​ ಮಾಡಿದ್ದು ಹೇಗೆ?

Published On - 9:39 am, Sat, 24 July 21

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್