AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bigg Boss Finale: ಬಿಗ್​ ಬಾಸ್​ ಫಿನಾಲೆ ತಲುಪಿದ ಐದು ಸ್ಪರ್ಧಿಗಳು ಇವರೇ; ಇಲ್ಲಿದೆ ಫೋಟೋ ಸಾಕ್ಷ್ಯ

Bigg Boss Kannada 8 Finale: ಫಿನಾಲೆ ವೀಕ್​ ಆದ್ದರಿಂದ ಎಲಿಮಿನೇಷನ್​ಗೆ ಎಲ್ಲರೂ ನಾಮಿನೇಟ್​​ ಆಗಿದ್ದಾರೆ. ಅಂದಹಾಗೆ, ಈ ವಾರದ ಮಧ್ಯದಲ್ಲಿ (ಬುಧವಾರ) ಒಬ್ಬರು ಎಲಿಮಿನೇಟ್​ ಆಗುತ್ತಿದ್ದಾರೆ.

Bigg Boss Finale: ಬಿಗ್​ ಬಾಸ್​ ಫಿನಾಲೆ ತಲುಪಿದ ಐದು ಸ್ಪರ್ಧಿಗಳು ಇವರೇ; ಇಲ್ಲಿದೆ ಫೋಟೋ ಸಾಕ್ಷ್ಯ
ಕಲರ್ಸ್​ ಕನ್ನಡ ವಾಹಿನಿ ಬ್ಯುಸಿನೆಸ್​ ಹೆಡ್​ ಪರಮೇಶ್ವರ್​ ಗುಂಡ್ಕಲ್ ಹಂಚಿಕೊಂಡ ಫೋಟೋ
TV9 Web
| Edited By: |

Updated on: Aug 04, 2021 | 4:51 PM

Share

ಈ ವಾರಾಂತ್ಯದಲ್ಲಿ ಕನ್ನಡ ಬಿಗ್​ ಬಾಸ್​ ಸೀಸನ್​ 8 ಫಿನಾಲೆ ನಡೆಯುತ್ತಿದೆ. ಮನೆಯಲ್ಲಿ ಸದ್ಯ ಆರು ಸ್ಪರ್ಧಿಗಳಿದ್ದಾರೆ. ಒಬ್ಬರು ಎಲಿಮಿನೇಟ್​ ಆಗಿ, ಐವರು ಫಿನಾಲೆ ತಲುಪಲಿದ್ದಾರೆ. ಆ ಐದು ಸ್ಪರ್ಧಿಗಳು ಯಾರು ಎನ್ನುವ ಕುತೂಹಲ ವೀಕ್ಷಕರನ್ನು ಕಾಡುತ್ತಿದೆ. ಹಾಗಾದರೆ, ಇಂದು ಹೊರ ಹೋಗುವ ಸ್ಪರ್ಧಿ ಯಾರು? ಫಿನಾಲೆಯಲ್ಲಿ ಉಳಿದುಕೊಳ್ಳೋ ಸ್ಪರ್ಧಿಗಳು ಯಾರ್ಯಾರು ಎನ್ನುವ ಪ್ರಶ್ನೆಗೆ ಇಲ್ಲಿದೆ ಉತ್ತರ.

ಬಿಗ್​ ಬಾಸ್​ ಮನೆಯಲ್ಲಿ ಮಂಜು ಪಾವಗಡ, ಅರವಿಂದ್ ಕೆ.ಪಿ., ಪ್ರಶಾಂತ್​ ಸಂಬರಗಿ, ದಿವ್ಯಾ ಉರುಡುಗ, ದಿವ್ಯಾ ಸುರೇಶ್​ ಹಾಗೂ ವೈಷ್ಣವಿ ಇದ್ದಾರೆ. ಫಿನಾಲೆ ವೀಕ್​ ಆದ್ದರಿಂದ ಎಲಿಮಿನೇಷನ್​ಗೆ ಎಲ್ಲರೂ ನಾಮಿನೇಟ್​​ ಆಗಿದ್ದಾರೆ. ಅಂದಹಾಗೆ, ಈ ವಾರದ ಮಧ್ಯದಲ್ಲಿ (ಬುಧವಾರ) ಒಬ್ಬರು ಎಲಿಮಿನೇಟ್​ ಆಗುತ್ತಿದ್ದಾರೆ. ಈ ಬಗ್ಗೆ ಕಲರ್ಸ್​ ಕನ್ನಡ ವಾಹಿನಿ ಪ್ರೋಮೋ ಕೂಡ ಹಂಚಿಕೊಂಡಿತ್ತು.

ಕಳೆದ ವಾರದ ಆರಂಭದಲ್ಲಿ ಬಿಗ್​ ಬಾಸ್​ ಮನೆಯಲ್ಲಿ 9 ಸದಸ್ಯರು ಇದ್ದರು. ಈ ಪೈಕಿ ಚಕ್ರವರ್ತಿ ಚಂದ್ರಚೂಡ್​ ವಾರದ ಮಧ್ಯದಲ್ಲಿ ಎಲಿಮಿನೇಟ್​ ಆದರು. ಕಳೆದ ವಾರಾಂತ್ಯದಲ್ಲಿ ಶುಭಾ ಪೂಂಜಾ ಹಾಗೂ ಶಮಂತ್​ ಬ್ರೋ ಗೌಡ ಎಲಿಮಿನೇಟ್​ ಆಗಿದ್ದಾರೆ. ಇಂದು ಯಾರು ಹೊರ ಹೋಗುತ್ತಾರೆ ಎನ್ನುವ ಕುತೂಹಲ ವೀಕ್ಷಕರದ್ದು.

ಕಲರ್ಸ್​ ಕನ್ನಡ ವಾಹಿನಿ ಬ್ಯುಸಿನೆಸ್​ ಹೆಡ್​ ಪರಮೇಶ್ವರ್​ ಗುಂಡ್ಕಲ್​ ಸೋಶಿಯಲ್​ ಮೀಡಿಯಾದಲ್ಲಿ ಫೋಟೋ ಒಂದನ್ನು ಹಂಚಿಕೊಂಡಿದ್ದಾರೆ. ಈ ಫೋಟೋಗೆ ಶನಿವಾರ ಮತ್ತು ಭಾನುವಾರ ಫಿನಾಲೆ ಎನ್ನುವ ಕ್ಯಾಪ್ಶನ್​ ನೀಡಿದ್ದಾರೆ ಅವರು. ಈ ಫೋಟೋದಲ್ಲಿ ನಾಲ್ಕು ಫ್ರೇಮ್​ ಇದೆ. ಒಂದರಲ್ಲಿ ಬಿಗ್​ ಬಾಸ್​ ಮನೆಯಲ್ಲಿರುವ ದೇವರ ಫೋಟೋ ಇದೆ. ಉಳಿದ ಮೂರು ಫ್ರೇಮ್​ಗಳಲ್ಲಿ ದಿವ್ಯಾ ಉರುಡುಗ-ಅರವಿಂದ್​, ಮಂಜು-ವೈಷ್ಣವಿ ಹಾಗೂ ಪ್ರಶಾಂತ್​ ಸಂಬರಗಿ ಇದ್ದಾರೆ. ದಿವ್ಯಾ ಸುರೇಶ್​ ಫೋಟೋದಿಂದ ಮಿಸ್​ ಆಗಿದ್ದಾರೆ.

ಈ ಮೂಲಕ ದಿವ್ಯಾ ಸುರೇಶ್​ ಇಂದು ಬಿಗ್​ ಬಾಸ್​ ಮನೆಯಿಂದ ಹೊರಹೋಗುವುದು ಖಚಿತವಾಗಿದೆ. ಹೀಗಾಗಿ, ಮಂಜು ಪಾವಗಡ, ಅರವಿಂದ್ ಕೆ.ಪಿ., ಪ್ರಶಾಂತ್​ ಸಂಬರಗಿ, ದಿವ್ಯಾ ಉರುಡುಗ ಹಾಗೂ ವೈಷ್ಣವಿ ಫಿನಾಲೆ ತಲುಪಿರುವುದು ಬಹುತೇಕ ಖಚಿತವಾಗಿದೆ.

ಇದನ್ನೂ ಓದಿ: ಬಿಗ್​ ಬಾಸ್​ ಫಿನಾಲೆಗೂ ಮೊದಲು ಮಿಡ್​ವೀಕ್​ ಎಲಿಮಿನೇಷನ್​; ಇಂದು ಹೊರ ಹೋಗುವ ಸ್ಪರ್ಧಿ ಇವರೇನಾ?

Follow Us
ಖಗೋಳ ವಿಸ್ಮಯ: ಸೂರ್ಯನ ಸುತ್ತ ಕಾಣಿಸಿತು ಆಕರ್ಷಕ ಸ್ವರ್ಣ ಉಂಗುರ!
ಖಗೋಳ ವಿಸ್ಮಯ: ಸೂರ್ಯನ ಸುತ್ತ ಕಾಣಿಸಿತು ಆಕರ್ಷಕ ಸ್ವರ್ಣ ಉಂಗುರ!
ಬೆಂಗಳೂರು-ತುಮಕೂರು ರೈಲು ಪ್ರಯಾಣಿಕರಿಗೆ ಭರ್ಜರಿ ಕೊಡುಗೆ
ಬೆಂಗಳೂರು-ತುಮಕೂರು ರೈಲು ಪ್ರಯಾಣಿಕರಿಗೆ ಭರ್ಜರಿ ಕೊಡುಗೆ
ಕೊಪ್ಪಳ: ಯರೇ ಹಂಚಿನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ತೀವ್ರ
ಕೊಪ್ಪಳ: ಯರೇ ಹಂಚಿನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ತೀವ್ರ
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್