AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bigg Boss Finale: ಬಿಗ್​ ಬಾಸ್​ ಫಿನಾಲೆ ತಲುಪಿದ ಐದು ಸ್ಪರ್ಧಿಗಳು ಇವರೇ; ಇಲ್ಲಿದೆ ಫೋಟೋ ಸಾಕ್ಷ್ಯ

Bigg Boss Kannada 8 Finale: ಫಿನಾಲೆ ವೀಕ್​ ಆದ್ದರಿಂದ ಎಲಿಮಿನೇಷನ್​ಗೆ ಎಲ್ಲರೂ ನಾಮಿನೇಟ್​​ ಆಗಿದ್ದಾರೆ. ಅಂದಹಾಗೆ, ಈ ವಾರದ ಮಧ್ಯದಲ್ಲಿ (ಬುಧವಾರ) ಒಬ್ಬರು ಎಲಿಮಿನೇಟ್​ ಆಗುತ್ತಿದ್ದಾರೆ.

Bigg Boss Finale: ಬಿಗ್​ ಬಾಸ್​ ಫಿನಾಲೆ ತಲುಪಿದ ಐದು ಸ್ಪರ್ಧಿಗಳು ಇವರೇ; ಇಲ್ಲಿದೆ ಫೋಟೋ ಸಾಕ್ಷ್ಯ
ಕಲರ್ಸ್​ ಕನ್ನಡ ವಾಹಿನಿ ಬ್ಯುಸಿನೆಸ್​ ಹೆಡ್​ ಪರಮೇಶ್ವರ್​ ಗುಂಡ್ಕಲ್ ಹಂಚಿಕೊಂಡ ಫೋಟೋ
TV9 Web
| Edited By: |

Updated on: Aug 04, 2021 | 4:51 PM

Share

ಈ ವಾರಾಂತ್ಯದಲ್ಲಿ ಕನ್ನಡ ಬಿಗ್​ ಬಾಸ್​ ಸೀಸನ್​ 8 ಫಿನಾಲೆ ನಡೆಯುತ್ತಿದೆ. ಮನೆಯಲ್ಲಿ ಸದ್ಯ ಆರು ಸ್ಪರ್ಧಿಗಳಿದ್ದಾರೆ. ಒಬ್ಬರು ಎಲಿಮಿನೇಟ್​ ಆಗಿ, ಐವರು ಫಿನಾಲೆ ತಲುಪಲಿದ್ದಾರೆ. ಆ ಐದು ಸ್ಪರ್ಧಿಗಳು ಯಾರು ಎನ್ನುವ ಕುತೂಹಲ ವೀಕ್ಷಕರನ್ನು ಕಾಡುತ್ತಿದೆ. ಹಾಗಾದರೆ, ಇಂದು ಹೊರ ಹೋಗುವ ಸ್ಪರ್ಧಿ ಯಾರು? ಫಿನಾಲೆಯಲ್ಲಿ ಉಳಿದುಕೊಳ್ಳೋ ಸ್ಪರ್ಧಿಗಳು ಯಾರ್ಯಾರು ಎನ್ನುವ ಪ್ರಶ್ನೆಗೆ ಇಲ್ಲಿದೆ ಉತ್ತರ.

ಬಿಗ್​ ಬಾಸ್​ ಮನೆಯಲ್ಲಿ ಮಂಜು ಪಾವಗಡ, ಅರವಿಂದ್ ಕೆ.ಪಿ., ಪ್ರಶಾಂತ್​ ಸಂಬರಗಿ, ದಿವ್ಯಾ ಉರುಡುಗ, ದಿವ್ಯಾ ಸುರೇಶ್​ ಹಾಗೂ ವೈಷ್ಣವಿ ಇದ್ದಾರೆ. ಫಿನಾಲೆ ವೀಕ್​ ಆದ್ದರಿಂದ ಎಲಿಮಿನೇಷನ್​ಗೆ ಎಲ್ಲರೂ ನಾಮಿನೇಟ್​​ ಆಗಿದ್ದಾರೆ. ಅಂದಹಾಗೆ, ಈ ವಾರದ ಮಧ್ಯದಲ್ಲಿ (ಬುಧವಾರ) ಒಬ್ಬರು ಎಲಿಮಿನೇಟ್​ ಆಗುತ್ತಿದ್ದಾರೆ. ಈ ಬಗ್ಗೆ ಕಲರ್ಸ್​ ಕನ್ನಡ ವಾಹಿನಿ ಪ್ರೋಮೋ ಕೂಡ ಹಂಚಿಕೊಂಡಿತ್ತು.

ಕಳೆದ ವಾರದ ಆರಂಭದಲ್ಲಿ ಬಿಗ್​ ಬಾಸ್​ ಮನೆಯಲ್ಲಿ 9 ಸದಸ್ಯರು ಇದ್ದರು. ಈ ಪೈಕಿ ಚಕ್ರವರ್ತಿ ಚಂದ್ರಚೂಡ್​ ವಾರದ ಮಧ್ಯದಲ್ಲಿ ಎಲಿಮಿನೇಟ್​ ಆದರು. ಕಳೆದ ವಾರಾಂತ್ಯದಲ್ಲಿ ಶುಭಾ ಪೂಂಜಾ ಹಾಗೂ ಶಮಂತ್​ ಬ್ರೋ ಗೌಡ ಎಲಿಮಿನೇಟ್​ ಆಗಿದ್ದಾರೆ. ಇಂದು ಯಾರು ಹೊರ ಹೋಗುತ್ತಾರೆ ಎನ್ನುವ ಕುತೂಹಲ ವೀಕ್ಷಕರದ್ದು.

ಕಲರ್ಸ್​ ಕನ್ನಡ ವಾಹಿನಿ ಬ್ಯುಸಿನೆಸ್​ ಹೆಡ್​ ಪರಮೇಶ್ವರ್​ ಗುಂಡ್ಕಲ್​ ಸೋಶಿಯಲ್​ ಮೀಡಿಯಾದಲ್ಲಿ ಫೋಟೋ ಒಂದನ್ನು ಹಂಚಿಕೊಂಡಿದ್ದಾರೆ. ಈ ಫೋಟೋಗೆ ಶನಿವಾರ ಮತ್ತು ಭಾನುವಾರ ಫಿನಾಲೆ ಎನ್ನುವ ಕ್ಯಾಪ್ಶನ್​ ನೀಡಿದ್ದಾರೆ ಅವರು. ಈ ಫೋಟೋದಲ್ಲಿ ನಾಲ್ಕು ಫ್ರೇಮ್​ ಇದೆ. ಒಂದರಲ್ಲಿ ಬಿಗ್​ ಬಾಸ್​ ಮನೆಯಲ್ಲಿರುವ ದೇವರ ಫೋಟೋ ಇದೆ. ಉಳಿದ ಮೂರು ಫ್ರೇಮ್​ಗಳಲ್ಲಿ ದಿವ್ಯಾ ಉರುಡುಗ-ಅರವಿಂದ್​, ಮಂಜು-ವೈಷ್ಣವಿ ಹಾಗೂ ಪ್ರಶಾಂತ್​ ಸಂಬರಗಿ ಇದ್ದಾರೆ. ದಿವ್ಯಾ ಸುರೇಶ್​ ಫೋಟೋದಿಂದ ಮಿಸ್​ ಆಗಿದ್ದಾರೆ.

ಈ ಮೂಲಕ ದಿವ್ಯಾ ಸುರೇಶ್​ ಇಂದು ಬಿಗ್​ ಬಾಸ್​ ಮನೆಯಿಂದ ಹೊರಹೋಗುವುದು ಖಚಿತವಾಗಿದೆ. ಹೀಗಾಗಿ, ಮಂಜು ಪಾವಗಡ, ಅರವಿಂದ್ ಕೆ.ಪಿ., ಪ್ರಶಾಂತ್​ ಸಂಬರಗಿ, ದಿವ್ಯಾ ಉರುಡುಗ ಹಾಗೂ ವೈಷ್ಣವಿ ಫಿನಾಲೆ ತಲುಪಿರುವುದು ಬಹುತೇಕ ಖಚಿತವಾಗಿದೆ.

ಇದನ್ನೂ ಓದಿ: ಬಿಗ್​ ಬಾಸ್​ ಫಿನಾಲೆಗೂ ಮೊದಲು ಮಿಡ್​ವೀಕ್​ ಎಲಿಮಿನೇಷನ್​; ಇಂದು ಹೊರ ಹೋಗುವ ಸ್ಪರ್ಧಿ ಇವರೇನಾ?

Follow Us
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ