AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bigg Boss Finale: ಬಿಗ್​ ಬಾಸ್​ ಫಿನಾಲೆ ತಲುಪಿದ ಐದು ಸ್ಪರ್ಧಿಗಳು ಇವರೇ; ಇಲ್ಲಿದೆ ಫೋಟೋ ಸಾಕ್ಷ್ಯ

Bigg Boss Kannada 8 Finale: ಫಿನಾಲೆ ವೀಕ್​ ಆದ್ದರಿಂದ ಎಲಿಮಿನೇಷನ್​ಗೆ ಎಲ್ಲರೂ ನಾಮಿನೇಟ್​​ ಆಗಿದ್ದಾರೆ. ಅಂದಹಾಗೆ, ಈ ವಾರದ ಮಧ್ಯದಲ್ಲಿ (ಬುಧವಾರ) ಒಬ್ಬರು ಎಲಿಮಿನೇಟ್​ ಆಗುತ್ತಿದ್ದಾರೆ.

Bigg Boss Finale: ಬಿಗ್​ ಬಾಸ್​ ಫಿನಾಲೆ ತಲುಪಿದ ಐದು ಸ್ಪರ್ಧಿಗಳು ಇವರೇ; ಇಲ್ಲಿದೆ ಫೋಟೋ ಸಾಕ್ಷ್ಯ
ಕಲರ್ಸ್​ ಕನ್ನಡ ವಾಹಿನಿ ಬ್ಯುಸಿನೆಸ್​ ಹೆಡ್​ ಪರಮೇಶ್ವರ್​ ಗುಂಡ್ಕಲ್ ಹಂಚಿಕೊಂಡ ಫೋಟೋ
TV9 Web
| Edited By: |

Updated on: Aug 04, 2021 | 4:51 PM

Share

ಈ ವಾರಾಂತ್ಯದಲ್ಲಿ ಕನ್ನಡ ಬಿಗ್​ ಬಾಸ್​ ಸೀಸನ್​ 8 ಫಿನಾಲೆ ನಡೆಯುತ್ತಿದೆ. ಮನೆಯಲ್ಲಿ ಸದ್ಯ ಆರು ಸ್ಪರ್ಧಿಗಳಿದ್ದಾರೆ. ಒಬ್ಬರು ಎಲಿಮಿನೇಟ್​ ಆಗಿ, ಐವರು ಫಿನಾಲೆ ತಲುಪಲಿದ್ದಾರೆ. ಆ ಐದು ಸ್ಪರ್ಧಿಗಳು ಯಾರು ಎನ್ನುವ ಕುತೂಹಲ ವೀಕ್ಷಕರನ್ನು ಕಾಡುತ್ತಿದೆ. ಹಾಗಾದರೆ, ಇಂದು ಹೊರ ಹೋಗುವ ಸ್ಪರ್ಧಿ ಯಾರು? ಫಿನಾಲೆಯಲ್ಲಿ ಉಳಿದುಕೊಳ್ಳೋ ಸ್ಪರ್ಧಿಗಳು ಯಾರ್ಯಾರು ಎನ್ನುವ ಪ್ರಶ್ನೆಗೆ ಇಲ್ಲಿದೆ ಉತ್ತರ.

ಬಿಗ್​ ಬಾಸ್​ ಮನೆಯಲ್ಲಿ ಮಂಜು ಪಾವಗಡ, ಅರವಿಂದ್ ಕೆ.ಪಿ., ಪ್ರಶಾಂತ್​ ಸಂಬರಗಿ, ದಿವ್ಯಾ ಉರುಡುಗ, ದಿವ್ಯಾ ಸುರೇಶ್​ ಹಾಗೂ ವೈಷ್ಣವಿ ಇದ್ದಾರೆ. ಫಿನಾಲೆ ವೀಕ್​ ಆದ್ದರಿಂದ ಎಲಿಮಿನೇಷನ್​ಗೆ ಎಲ್ಲರೂ ನಾಮಿನೇಟ್​​ ಆಗಿದ್ದಾರೆ. ಅಂದಹಾಗೆ, ಈ ವಾರದ ಮಧ್ಯದಲ್ಲಿ (ಬುಧವಾರ) ಒಬ್ಬರು ಎಲಿಮಿನೇಟ್​ ಆಗುತ್ತಿದ್ದಾರೆ. ಈ ಬಗ್ಗೆ ಕಲರ್ಸ್​ ಕನ್ನಡ ವಾಹಿನಿ ಪ್ರೋಮೋ ಕೂಡ ಹಂಚಿಕೊಂಡಿತ್ತು.

ಕಳೆದ ವಾರದ ಆರಂಭದಲ್ಲಿ ಬಿಗ್​ ಬಾಸ್​ ಮನೆಯಲ್ಲಿ 9 ಸದಸ್ಯರು ಇದ್ದರು. ಈ ಪೈಕಿ ಚಕ್ರವರ್ತಿ ಚಂದ್ರಚೂಡ್​ ವಾರದ ಮಧ್ಯದಲ್ಲಿ ಎಲಿಮಿನೇಟ್​ ಆದರು. ಕಳೆದ ವಾರಾಂತ್ಯದಲ್ಲಿ ಶುಭಾ ಪೂಂಜಾ ಹಾಗೂ ಶಮಂತ್​ ಬ್ರೋ ಗೌಡ ಎಲಿಮಿನೇಟ್​ ಆಗಿದ್ದಾರೆ. ಇಂದು ಯಾರು ಹೊರ ಹೋಗುತ್ತಾರೆ ಎನ್ನುವ ಕುತೂಹಲ ವೀಕ್ಷಕರದ್ದು.

ಕಲರ್ಸ್​ ಕನ್ನಡ ವಾಹಿನಿ ಬ್ಯುಸಿನೆಸ್​ ಹೆಡ್​ ಪರಮೇಶ್ವರ್​ ಗುಂಡ್ಕಲ್​ ಸೋಶಿಯಲ್​ ಮೀಡಿಯಾದಲ್ಲಿ ಫೋಟೋ ಒಂದನ್ನು ಹಂಚಿಕೊಂಡಿದ್ದಾರೆ. ಈ ಫೋಟೋಗೆ ಶನಿವಾರ ಮತ್ತು ಭಾನುವಾರ ಫಿನಾಲೆ ಎನ್ನುವ ಕ್ಯಾಪ್ಶನ್​ ನೀಡಿದ್ದಾರೆ ಅವರು. ಈ ಫೋಟೋದಲ್ಲಿ ನಾಲ್ಕು ಫ್ರೇಮ್​ ಇದೆ. ಒಂದರಲ್ಲಿ ಬಿಗ್​ ಬಾಸ್​ ಮನೆಯಲ್ಲಿರುವ ದೇವರ ಫೋಟೋ ಇದೆ. ಉಳಿದ ಮೂರು ಫ್ರೇಮ್​ಗಳಲ್ಲಿ ದಿವ್ಯಾ ಉರುಡುಗ-ಅರವಿಂದ್​, ಮಂಜು-ವೈಷ್ಣವಿ ಹಾಗೂ ಪ್ರಶಾಂತ್​ ಸಂಬರಗಿ ಇದ್ದಾರೆ. ದಿವ್ಯಾ ಸುರೇಶ್​ ಫೋಟೋದಿಂದ ಮಿಸ್​ ಆಗಿದ್ದಾರೆ.

ಈ ಮೂಲಕ ದಿವ್ಯಾ ಸುರೇಶ್​ ಇಂದು ಬಿಗ್​ ಬಾಸ್​ ಮನೆಯಿಂದ ಹೊರಹೋಗುವುದು ಖಚಿತವಾಗಿದೆ. ಹೀಗಾಗಿ, ಮಂಜು ಪಾವಗಡ, ಅರವಿಂದ್ ಕೆ.ಪಿ., ಪ್ರಶಾಂತ್​ ಸಂಬರಗಿ, ದಿವ್ಯಾ ಉರುಡುಗ ಹಾಗೂ ವೈಷ್ಣವಿ ಫಿನಾಲೆ ತಲುಪಿರುವುದು ಬಹುತೇಕ ಖಚಿತವಾಗಿದೆ.

ಇದನ್ನೂ ಓದಿ: ಬಿಗ್​ ಬಾಸ್​ ಫಿನಾಲೆಗೂ ಮೊದಲು ಮಿಡ್​ವೀಕ್​ ಎಲಿಮಿನೇಷನ್​; ಇಂದು ಹೊರ ಹೋಗುವ ಸ್ಪರ್ಧಿ ಇವರೇನಾ?

Follow Us
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!