AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

BBK8 Finale: 100 ದಿನ ಪೂರೈಸಿದ ಕನ್ನಡ ಬಿಗ್​ ಬಾಸ್​ ಸೀಸನ್​ 8; ಫಿನಾಲೆ ನಡೆಯೋದು ಯಾವಾಗ?

ಫೆಬ್ರವರಿ 28ರಂದು ಬಿಗ್​ ಬಾಸ್​ ಸೀಸನ್​ 8 ಆರಂಭಗೊಂಡಿತ್ತು. 17 ಸ್ಪರ್ಧಿಗಳು ಬಿಗ್​ ಬಾಸ್​ ಮನೆ ಪ್ರವೇಶಿಸಿದ್ದರು. ‘ಸೀಸನ್​ 8’ 71 ದಿನ ಪೂರೈಸಿರುವಾಗಲೇ ಕೊವಿಡ್​ ಕಾಣಿಸಿಕೊಂಡಿತ್ತು. ಅದೇ ಸಂದರ್ಭದಲ್ಲಿ ರಾಜ್ಯ ಸರ್ಕಾರ ಲಾಕ್​ಡೌನ್​ ಕೂಡ ಘೋಷಣೆ ಮಾಡಿತ್ತು.

BBK8 Finale: 100 ದಿನ ಪೂರೈಸಿದ ಕನ್ನಡ ಬಿಗ್​ ಬಾಸ್​ ಸೀಸನ್​ 8; ಫಿನಾಲೆ ನಡೆಯೋದು ಯಾವಾಗ?
ಕಿಚ್ಚ ಸುದೀಪ್​
TV9 Web
| Edited By: |

Updated on:Jul 21, 2021 | 3:25 PM

Share

‘ಕನ್ನಡ ಬಿಗ್​ ಬಾಸ್​ ಸೀಸನ್​ 8’ 100 ದಿನಗಳನ್ನು ಪೂರೈಸಿದೆ. ವೈಲ್ಡ್​ ಕಾರ್ಡ್​ ಮೂಲಕ ಎಂಟ್ರಿ ಪಡೆದ ಚಕ್ರವರ್ತಿ ಚಂದ್ರಚೂಡ್​ ಹೊರತುಪಡಿಸಿ ಉಳಿದ 8 ಸ್ಪರ್ಧಿಗಳು ದೊಡ್ಮನೆಯಲ್ಲಿ 100 ದಿನ ಕಳೆದಿದ್ದಾರೆ. 100ನೇ ದಿನಕ್ಕೆ ವಿಶೇಷ ಕೇಕ್​ ಕಳುಹಿಸಲಾಗಿದೆ. ಈ ಮಧ್ಯೆ ಫಿನಾಲೆಗೆ ಕೌಂಟ್​ಡೌನ್​ ಶುರುವಾಗಿದೆ.

ಫೆಬ್ರವರಿ 28ರಂದು ಬಿಗ್​ ಬಾಸ್​ ಸೀಸನ್​ 8 ಆರಂಭಗೊಂಡಿತ್ತು. 17 ಸ್ಪರ್ಧಿಗಳು ಬಿಗ್​ ಬಾಸ್​ ಮನೆ ಪ್ರವೇಶಿಸಿದ್ದರು. ‘ಸೀಸನ್​ 8’ 71 ದಿನ ಪೂರೈಸಿರುವಾಗಲೇ ಕೊವಿಡ್​ ಎರಡನೇ ಅಲೆ ಕಾಣಿಸಿಕೊಂಡಿತ್ತು. ಅದೇ ಸಂದರ್ಭದಲ್ಲಿ ರಾಜ್ಯ ಸರ್ಕಾರ ಲಾಕ್​ಡೌನ್​ ಕೂಡ ಘೋಷಣೆ ಮಾಡಿತ್ತು. ಹೀಗಾಗಿ, ಮೇ 8ರಂದು ಬಿಗ್​ ಬಾಸ್​ ಅನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಯಿತು.

ನಂತರ ಜೂನ್​ 23ರಂದು ಬಿಗ್​ ಬಾಸ್​ ಮತ್ತೆ ಆರಂಭಗೊಂಡಿದೆ. ಈ ಮೂಲಕ ಇಂದಿಗೆ ಬಿಗ್​ ಬಾಸ್​ 100 ದಿನಗಳನ್ನು ಪೂರೈಸಿದೆ. ಈ ವಿಶೇಷ ಖುಷಿಗೆ ಬಿಗ್​ ಬಾಸ್​ ಮನೆ ಮಂದಿಗೆ ಕೇಕ್​ ಒಂದನ್ನು ಕಳುಹಿಸಿದ್ದಾರೆ. ಈ ಕೇಕ್​ ನೋಡಿ ಮನೆ ಮಂದಿ ಸಾಕಷ್ಟು ಖುಷಿಯಾಗಿದ್ದಾರೆ.

ಸದ್ಯ, ಬಿಗ್​ ಬಾಸ್​ ಮನೆಯಲ್ಲಿ ಅರವಿಂದ್​ ಕೆ.ಪಿ, ಮಂಜು ಪಾವಗಡ, ವೈಷ್ಣವಿ, ಶಮಂತ್​ ಬ್ರೋ ಗೌಡ, ದಿವ್ಯಾ ಉರುಡುಗ, ದಿವ್ಯಾ ಸುರೇಶ್​, ಚಕ್ರವರ್ತಿ ಚಂದ್ರಚೂಡ್​, ಶುಭಾ ಪೂಂಜಾ ಹಾಗೂ ಪ್ರಶಾಂತ್​ ಸಂಬರಗಿ ಇದ್ದಾರೆ. ಇವರ ಪೈಕಿ ಚಕ್ರವರ್ತಿ ಚಂದ್ರಚೂಡ್​, ಶುಭಾ ಪೂಂಜಾ, ಪ್ರಶಾಂತ್ ಹಾಗೂ ದಿವ್ಯಾ ಉರುಡುಗ ನಾಮಿನೇಟ್​ ಆಗಿದ್ದಾರೆ.

ಈ ನಾಲ್ವರಲ್ಲಿ ಒಬ್ಬರು ಈ ವಾರ ಮನೆಯಿಂದ ಹೊರ ಹೋಗುತ್ತಾರೆ. ನಂತರ ಉಳಿಯೋದು 8 ಮಂದಿ ಮಾತ್ರ. ಡಬಲ್​ ನಾಮಿನೇಷನ್​ ಕೂಡ ಶೀಘ್ರದಲ್ಲೇ ನಡೆಯಲಿದೆ ಎನ್ನಲಾಗುತ್ತಿದೆ. ಬಿಗ್​ ಬಾಸ್ ಘೋಷಣೆ ಮಾಡಿದಂತೆ ಇನ್ನು ಮೂರು ವಾರಗಳಲ್ಲಿ ಫಿನಾಲೆ ನಡೆಯಲಿದೆ. ಆಗಸ್ಟ್​ 8 ಅಥವಾ 15ರಂದು ಬಿಗ್​ ಬಾಸ್​ ಫಿನಾಲೆ ನಡೆಯಬಹುದು. ಈ ಬಗ್ಗೆ ಅಧಿಕೃತ ಘೋಷಣೆ ಮಾತ್ರ ಬಾಕಿ ಇದೆ.

ಇದನ್ನೂ ಓದಿ: ಪ್ರಿಯಾಂಕಾಗೆ ಅಶ್ಲೀಲ ಸನ್ನೆ ತೋರಿಸಿದ ಚಕ್ರವರ್ತಿ; ಬಿಗ್​ ಬಾಸ್​ ನೀಡ್ತೀರೋ ಶಿಕ್ಷೆ ಏನು?

ಬಿಗ್​ ಬಾಸ್​ ಮನೆಯಲ್ಲಿ ಇದೇ ಮೊದಲ ಬಾರಿಗೆ ತಾಳ್ಮೆ ಕಳೆದುಕೊಂಡ ವೈಷ್ಣವಿ; ಪ್ರಶಾಂತ್​ ವಿರುದ್ಧ ತಿರುಗಿಬಿದ್ದ ನಟಿ

Published On - 3:12 pm, Wed, 21 July 21

ಅಖಾಡಕ್ಕಿಳಿದ ವಾಟಾಳ್ ನಾಗರಾಜ್, ಬಿಎಂಆರ್​​ಸಿಎಲ್​​​ಗೆ ಡೆಡ್​​ಲೈನ್
ಅಖಾಡಕ್ಕಿಳಿದ ವಾಟಾಳ್ ನಾಗರಾಜ್, ಬಿಎಂಆರ್​​ಸಿಎಲ್​​​ಗೆ ಡೆಡ್​​ಲೈನ್
ಕೆಎಲ್ ರಾಹುಲ್ 25ನೇ ಶತಕದ ಇನ್ನಿಂಗ್ಸ್​ನ ಝಲಕ್ ಇಲ್ಲಿದೆ
ಕೆಎಲ್ ರಾಹುಲ್ 25ನೇ ಶತಕದ ಇನ್ನಿಂಗ್ಸ್​ನ ಝಲಕ್ ಇಲ್ಲಿದೆ
ಬಜೆಟ್ ಪೂರ್ವಭಾವಿ ಸಭೆ ಬಿಟ್ಟು ದೆಹಲಿ ಪ್ರವಾಸ: ಡಿಕೆಶಿ ನಡೆಯೇ ಕುತೂಹಲ
ಬಜೆಟ್ ಪೂರ್ವಭಾವಿ ಸಭೆ ಬಿಟ್ಟು ದೆಹಲಿ ಪ್ರವಾಸ: ಡಿಕೆಶಿ ನಡೆಯೇ ಕುತೂಹಲ
3 ಮಾದರಿಯ ಸರಣಿಗಾಗಿ ಆಸ್ಟ್ರೇಲಿಯಾ ತಲುಪಿದ ಟೀಂ ಇಂಡಿಯಾ
3 ಮಾದರಿಯ ಸರಣಿಗಾಗಿ ಆಸ್ಟ್ರೇಲಿಯಾ ತಲುಪಿದ ಟೀಂ ಇಂಡಿಯಾ
SC ST ಸಮುದಾಯದವರಿಗೆ ಸೈಟ್: ಸತೀಶ್ ಜಾರಕಿಹೊಳಿ ಮಹತ್ವದ ಘೋಷಣೆ
SC ST ಸಮುದಾಯದವರಿಗೆ ಸೈಟ್: ಸತೀಶ್ ಜಾರಕಿಹೊಳಿ ಮಹತ್ವದ ಘೋಷಣೆ
ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನ ಸ್ಫೋಟ: ಪ್ರೀತಂಗೆ ನಿಖಿಲ್ ಕೌಂಟರ್
ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನ ಸ್ಫೋಟ: ಪ್ರೀತಂಗೆ ನಿಖಿಲ್ ಕೌಂಟರ್
ಗಂಡ 12 ಸಾವಿರದ ಬಟ್ಟೆ ತೆಗೆದುಕೊಟ್ಟಿಲ್ಲ ಎಂದು ಕಣ್ಣೀರು ಹಾಕಿದ ಪತ್ನಿ
ಗಂಡ 12 ಸಾವಿರದ ಬಟ್ಟೆ ತೆಗೆದುಕೊಟ್ಟಿಲ್ಲ ಎಂದು ಕಣ್ಣೀರು ಹಾಕಿದ ಪತ್ನಿ
ಬೆಂಗಳೂರಲ್ಲಿ ಬಿಎಂಟಿಸಿಯಿಂದ ಮತ್ತೊಂದು ಡೆಡ್ಲಿ ಆ್ಯಕ್ಸಿಡೆಂಟ್!
ಬೆಂಗಳೂರಲ್ಲಿ ಬಿಎಂಟಿಸಿಯಿಂದ ಮತ್ತೊಂದು ಡೆಡ್ಲಿ ಆ್ಯಕ್ಸಿಡೆಂಟ್!
‘ನನ್ನನ್ನು ಹಾಗೆ ಕರೀ ಬೇಡಿ ಪ್ಲೀಸ್’; ಎಲ್ಲರ ಎದುರು ಕೋರಿಕೊಂಡ ಗಿಲ್ಲಿ ನಟ
‘ನನ್ನನ್ನು ಹಾಗೆ ಕರೀ ಬೇಡಿ ಪ್ಲೀಸ್’; ಎಲ್ಲರ ಎದುರು ಕೋರಿಕೊಂಡ ಗಿಲ್ಲಿ ನಟ
ಮೋದಿ ವಿರುದ್ಧ ಕಾಂಗ್ರೆಸ್ ಫ್ಲೆಕ್ಸ್: ಪೊಲೀಸ್ ದೂರು ದಾಖಲಿಸಿದ ಬಿಜೆಪಿ
ಮೋದಿ ವಿರುದ್ಧ ಕಾಂಗ್ರೆಸ್ ಫ್ಲೆಕ್ಸ್: ಪೊಲೀಸ್ ದೂರು ದಾಖಲಿಸಿದ ಬಿಜೆಪಿ