AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

BBK8 Finale: 100 ದಿನ ಪೂರೈಸಿದ ಕನ್ನಡ ಬಿಗ್​ ಬಾಸ್​ ಸೀಸನ್​ 8; ಫಿನಾಲೆ ನಡೆಯೋದು ಯಾವಾಗ?

ಫೆಬ್ರವರಿ 28ರಂದು ಬಿಗ್​ ಬಾಸ್​ ಸೀಸನ್​ 8 ಆರಂಭಗೊಂಡಿತ್ತು. 17 ಸ್ಪರ್ಧಿಗಳು ಬಿಗ್​ ಬಾಸ್​ ಮನೆ ಪ್ರವೇಶಿಸಿದ್ದರು. ‘ಸೀಸನ್​ 8’ 71 ದಿನ ಪೂರೈಸಿರುವಾಗಲೇ ಕೊವಿಡ್​ ಕಾಣಿಸಿಕೊಂಡಿತ್ತು. ಅದೇ ಸಂದರ್ಭದಲ್ಲಿ ರಾಜ್ಯ ಸರ್ಕಾರ ಲಾಕ್​ಡೌನ್​ ಕೂಡ ಘೋಷಣೆ ಮಾಡಿತ್ತು.

BBK8 Finale: 100 ದಿನ ಪೂರೈಸಿದ ಕನ್ನಡ ಬಿಗ್​ ಬಾಸ್​ ಸೀಸನ್​ 8; ಫಿನಾಲೆ ನಡೆಯೋದು ಯಾವಾಗ?
ಕಿಚ್ಚ ಸುದೀಪ್​
TV9 Web
| Edited By: |

Updated on:Jul 21, 2021 | 3:25 PM

Share

‘ಕನ್ನಡ ಬಿಗ್​ ಬಾಸ್​ ಸೀಸನ್​ 8’ 100 ದಿನಗಳನ್ನು ಪೂರೈಸಿದೆ. ವೈಲ್ಡ್​ ಕಾರ್ಡ್​ ಮೂಲಕ ಎಂಟ್ರಿ ಪಡೆದ ಚಕ್ರವರ್ತಿ ಚಂದ್ರಚೂಡ್​ ಹೊರತುಪಡಿಸಿ ಉಳಿದ 8 ಸ್ಪರ್ಧಿಗಳು ದೊಡ್ಮನೆಯಲ್ಲಿ 100 ದಿನ ಕಳೆದಿದ್ದಾರೆ. 100ನೇ ದಿನಕ್ಕೆ ವಿಶೇಷ ಕೇಕ್​ ಕಳುಹಿಸಲಾಗಿದೆ. ಈ ಮಧ್ಯೆ ಫಿನಾಲೆಗೆ ಕೌಂಟ್​ಡೌನ್​ ಶುರುವಾಗಿದೆ.

ಫೆಬ್ರವರಿ 28ರಂದು ಬಿಗ್​ ಬಾಸ್​ ಸೀಸನ್​ 8 ಆರಂಭಗೊಂಡಿತ್ತು. 17 ಸ್ಪರ್ಧಿಗಳು ಬಿಗ್​ ಬಾಸ್​ ಮನೆ ಪ್ರವೇಶಿಸಿದ್ದರು. ‘ಸೀಸನ್​ 8’ 71 ದಿನ ಪೂರೈಸಿರುವಾಗಲೇ ಕೊವಿಡ್​ ಎರಡನೇ ಅಲೆ ಕಾಣಿಸಿಕೊಂಡಿತ್ತು. ಅದೇ ಸಂದರ್ಭದಲ್ಲಿ ರಾಜ್ಯ ಸರ್ಕಾರ ಲಾಕ್​ಡೌನ್​ ಕೂಡ ಘೋಷಣೆ ಮಾಡಿತ್ತು. ಹೀಗಾಗಿ, ಮೇ 8ರಂದು ಬಿಗ್​ ಬಾಸ್​ ಅನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಯಿತು.

ನಂತರ ಜೂನ್​ 23ರಂದು ಬಿಗ್​ ಬಾಸ್​ ಮತ್ತೆ ಆರಂಭಗೊಂಡಿದೆ. ಈ ಮೂಲಕ ಇಂದಿಗೆ ಬಿಗ್​ ಬಾಸ್​ 100 ದಿನಗಳನ್ನು ಪೂರೈಸಿದೆ. ಈ ವಿಶೇಷ ಖುಷಿಗೆ ಬಿಗ್​ ಬಾಸ್​ ಮನೆ ಮಂದಿಗೆ ಕೇಕ್​ ಒಂದನ್ನು ಕಳುಹಿಸಿದ್ದಾರೆ. ಈ ಕೇಕ್​ ನೋಡಿ ಮನೆ ಮಂದಿ ಸಾಕಷ್ಟು ಖುಷಿಯಾಗಿದ್ದಾರೆ.

ಸದ್ಯ, ಬಿಗ್​ ಬಾಸ್​ ಮನೆಯಲ್ಲಿ ಅರವಿಂದ್​ ಕೆ.ಪಿ, ಮಂಜು ಪಾವಗಡ, ವೈಷ್ಣವಿ, ಶಮಂತ್​ ಬ್ರೋ ಗೌಡ, ದಿವ್ಯಾ ಉರುಡುಗ, ದಿವ್ಯಾ ಸುರೇಶ್​, ಚಕ್ರವರ್ತಿ ಚಂದ್ರಚೂಡ್​, ಶುಭಾ ಪೂಂಜಾ ಹಾಗೂ ಪ್ರಶಾಂತ್​ ಸಂಬರಗಿ ಇದ್ದಾರೆ. ಇವರ ಪೈಕಿ ಚಕ್ರವರ್ತಿ ಚಂದ್ರಚೂಡ್​, ಶುಭಾ ಪೂಂಜಾ, ಪ್ರಶಾಂತ್ ಹಾಗೂ ದಿವ್ಯಾ ಉರುಡುಗ ನಾಮಿನೇಟ್​ ಆಗಿದ್ದಾರೆ.

ಈ ನಾಲ್ವರಲ್ಲಿ ಒಬ್ಬರು ಈ ವಾರ ಮನೆಯಿಂದ ಹೊರ ಹೋಗುತ್ತಾರೆ. ನಂತರ ಉಳಿಯೋದು 8 ಮಂದಿ ಮಾತ್ರ. ಡಬಲ್​ ನಾಮಿನೇಷನ್​ ಕೂಡ ಶೀಘ್ರದಲ್ಲೇ ನಡೆಯಲಿದೆ ಎನ್ನಲಾಗುತ್ತಿದೆ. ಬಿಗ್​ ಬಾಸ್ ಘೋಷಣೆ ಮಾಡಿದಂತೆ ಇನ್ನು ಮೂರು ವಾರಗಳಲ್ಲಿ ಫಿನಾಲೆ ನಡೆಯಲಿದೆ. ಆಗಸ್ಟ್​ 8 ಅಥವಾ 15ರಂದು ಬಿಗ್​ ಬಾಸ್​ ಫಿನಾಲೆ ನಡೆಯಬಹುದು. ಈ ಬಗ್ಗೆ ಅಧಿಕೃತ ಘೋಷಣೆ ಮಾತ್ರ ಬಾಕಿ ಇದೆ.

ಇದನ್ನೂ ಓದಿ: ಪ್ರಿಯಾಂಕಾಗೆ ಅಶ್ಲೀಲ ಸನ್ನೆ ತೋರಿಸಿದ ಚಕ್ರವರ್ತಿ; ಬಿಗ್​ ಬಾಸ್​ ನೀಡ್ತೀರೋ ಶಿಕ್ಷೆ ಏನು?

ಬಿಗ್​ ಬಾಸ್​ ಮನೆಯಲ್ಲಿ ಇದೇ ಮೊದಲ ಬಾರಿಗೆ ತಾಳ್ಮೆ ಕಳೆದುಕೊಂಡ ವೈಷ್ಣವಿ; ಪ್ರಶಾಂತ್​ ವಿರುದ್ಧ ತಿರುಗಿಬಿದ್ದ ನಟಿ

Published On - 3:12 pm, Wed, 21 July 21

Follow Us
ಡ್ಯಾಶ್‌ಕ್ಯಾಮ್‌ನಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಡ್ಯಾಶ್‌ಕ್ಯಾಮ್‌ನಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ವಿಮಾನ ನಿಲ್ದಾಣದ ರನ್​ವೇನಲ್ಲಿ ಟ್ರಕ್​ಗೆ ಡಿಕ್ಕಿ ಹೊಡೆದ ಏರ್ ಕೆನಡಾ ವಿಮಾನ
ವಿಮಾನ ನಿಲ್ದಾಣದ ರನ್​ವೇನಲ್ಲಿ ಟ್ರಕ್​ಗೆ ಡಿಕ್ಕಿ ಹೊಡೆದ ಏರ್ ಕೆನಡಾ ವಿಮಾನ
ರಸ್ತೆ ಹೇಗೆ ದಾಟ್ಬೇಕು ಗೊತ್ತಾ? ಮನುಷ್ಯರಿಗೇ ಪಾಠ ಹೇಳಿದ ಕಾಡಾನೆ ಹಿಂಡು!
ರಸ್ತೆ ಹೇಗೆ ದಾಟ್ಬೇಕು ಗೊತ್ತಾ? ಮನುಷ್ಯರಿಗೇ ಪಾಠ ಹೇಳಿದ ಕಾಡಾನೆ ಹಿಂಡು!
ಕಾಂಗ್ರೆಸ್ ಟಿಕೆಟ್​ ಅಸಮಾಧಾನ: ಬಿಜೆಪಿ ಸೇರಿದ 20ಕ್ಕೂ ಹೆಚ್ಚು ಮುಸ್ಲಿಮರು!
ಕಾಂಗ್ರೆಸ್ ಟಿಕೆಟ್​ ಅಸಮಾಧಾನ: ಬಿಜೆಪಿ ಸೇರಿದ 20ಕ್ಕೂ ಹೆಚ್ಚು ಮುಸ್ಲಿಮರು!
ಬಡವರಿಗೆ ‘ಸರಿಗಮಪ’ದಲ್ಲಿ ಮಣೆ ಎಂದವರಿಗೆ ಪ್ರೋಮೋದಲ್ಲೇ ಖಡಕ್ ಉತ್ತರ
ಬಡವರಿಗೆ ‘ಸರಿಗಮಪ’ದಲ್ಲಿ ಮಣೆ ಎಂದವರಿಗೆ ಪ್ರೋಮೋದಲ್ಲೇ ಖಡಕ್ ಉತ್ತರ
ತುಳಸಿ ಕಟ್ಟೆ ಪ್ರದಕ್ಷಿಣೆ ಹಾಗೂ ಇದರ ಮಹತ್ವವೇನು ಗೊತ್ತಾ?
ತುಳಸಿ ಕಟ್ಟೆ ಪ್ರದಕ್ಷಿಣೆ ಹಾಗೂ ಇದರ ಮಹತ್ವವೇನು ಗೊತ್ತಾ?
ಇಂದು ಈ ರಾಶಿಯ ಪತಿ-ಪತ್ನಿಯರಲ್ಲಿ ಭಿನ್ನಾಭಿಪ್ರಾಯ!
ಇಂದು ಈ ರಾಶಿಯ ಪತಿ-ಪತ್ನಿಯರಲ್ಲಿ ಭಿನ್ನಾಭಿಪ್ರಾಯ!
ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ:ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ
ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ:ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ
ದಾವಣಗೆರೆ ದಕ್ಷಿಣ ಉಪಚುನಾವಣೆ: ಆರಂಭದಲ್ಲೇ ಕಾಂಗ್ರೆಸ್​​​ಗೆ ಮರ್ಮಾಘಾತ
ದಾವಣಗೆರೆ ದಕ್ಷಿಣ ಉಪಚುನಾವಣೆ: ಆರಂಭದಲ್ಲೇ ಕಾಂಗ್ರೆಸ್​​​ಗೆ ಮರ್ಮಾಘಾತ
ಹಬ್ಬಕ್ಕೆ ಹೋಗಿದ್ದ ಜನ ಬೆಂಗಳೂರಿಗೆ ವಾಪಸ್: ನೆಲಮಂಗಲ ಬಳಿ ಫುಲ್ ಟ್ರಾಫಿಕ್
ಹಬ್ಬಕ್ಕೆ ಹೋಗಿದ್ದ ಜನ ಬೆಂಗಳೂರಿಗೆ ವಾಪಸ್: ನೆಲಮಂಗಲ ಬಳಿ ಫುಲ್ ಟ್ರಾಫಿಕ್