AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಜು ಪಾವಗಡ ಗೆದ್ದ ವಿಚಾರಕ್ಕೆ ‘ಅರವಿಯಾ’​ ಫ್ಯಾನ್ಸ್​ ಹೇಳಿದ್ದೇನು?

ಅರವಿಂದ್​ ಅವರು ಬೈಕ್​ ರೇಸ್ ಹಿನ್ನೆಲೆಯಿಂದ ಬಂದವರು. ಚಿತ್ರರಂಗಕ್ಕೂ ಅವರಿಗೂ ಹೆಚ್ಚು ಒಡನಾಟ ಇರಲಿಲ್ಲ. ಆದಾಗ್ಯೂ ಬಿಗ್​ ಬಾಸ್​ ಮನೆಯಲ್ಲಿ ಕೊಂಚವೂ ಹೆದರದೇ ಅರವಿಂದ್​ ಅವರು ಮುನ್ನುಗ್ಗಿದ್ದರು.

ಮಂಜು ಪಾವಗಡ ಗೆದ್ದ ವಿಚಾರಕ್ಕೆ ‘ಅರವಿಯಾ’​ ಫ್ಯಾನ್ಸ್​ ಹೇಳಿದ್ದೇನು?
ಅರವಿಂದ್​-ದಿವ್ಯಾ
TV9 Web
| Updated By: ರಾಜೇಶ್ ದುಗ್ಗುಮನೆ|

Updated on:Aug 09, 2021 | 12:18 PM

Share

ಮಂಜು ಪಾವಗಡ ಅವರು ಕನ್ನಡ ಬಿಗ್​ ಬಾಸ್​ ಸೀಸನ್ 8ರ ವಿಜೇತರಾಗಿ ಹೊರ ಹೊಮ್ಮಿದ್ದಾರೆ. ಅದ್ದೂರಿ ವೇದಿಕೆ ಮೇಲೆ ಅರವಿಂದ್​ ಹಾಗೂ ಮಂಜು ನಡುವೆ ಕಿಚ್ಚ ಸುದೀಪ್​ ಅವರು ಮಂಜು ಕೈ ಎತ್ತುವ ಮೂಲಕ ವಿನ್ನರ್​ ಹೆಸರು ಘೋಷಣೆ ಮಾಡಿದ್ದಾರೆ. ಈ ವಿಚಾರ ಮಂಜು ಅವರ ಅಭಿಮಾನಿ ಬಳಗಕ್ಕೆ ಸಾಕಷ್ಟು ಖುಷಿ ನೀಡಿದೆ. ಈ ಮಧ್ಯೆ ಮಂಜು ಗೆಲುವು ‘ಅರವಿಯಾ’ ಫ್ಯಾನ್ಸ್​ಗೆ ಬೇಸರ ಮೂಡಿಸಿದೆ.

ಅರವಿಂದ್​ ಅವರು ಬೈಕ್​ ರೇಸ್ ಹಿನ್ನೆಲೆಯಿಂದ ಬಂದವರು. ಚಿತ್ರರಂಗಕ್ಕೂ ಅವರಿಗೂ ಹೆಚ್ಚು ಒಡನಾಟ ಇರಲಿಲ್ಲ. ಆದಾಗ್ಯೂ ಬಿಗ್​ ಬಾಸ್​ ಮನೆಯಲ್ಲಿ ಕೊಂಚವೂ ಹೆದರದೇ ಅರವಿಂದ್​ ಅವರು ಮುನ್ನುಗ್ಗಿದ್ದರು. ಪ್ರತಿಯೊಂದು ವಿಚಾರವನ್ನೂ ಹೆಚ್ಚು ಕಾನ್ಫಿಡೆಂಟ್​ ಆಗಿ ಮಾಡುತ್ತಿದ್ದರು.

ಇನ್ನು ಅರವಿಂದ್ ಹಾಗೂ ದಿವ್ಯಾ ಅವರ ನಡುವಿನ ಪ್ರೀತಿ-ಪ್ರೇಮ ವಿಚಾರ ದೊಡ್ಡ ಅಭಿಮಾನಿ ಬಳಗ ಹುಟ್ಟಿಕೊಳ್ಳೋಕೆ ಕಾರಣವಾಗಿತ್ತು. ಅರವಿಂದ್​ ಮತ್ತು ದಿವ್ಯಾರನ್ನು ‘ಅರವಿಯಾ’ ಎಂದು ಅಭಿಮಾನಿಗಳು ಪ್ರೀತಿಯಿಂದ ಕರೆಯೋಕೆ ಆರಂಭಿಸಿದ್ದರು. ಅವರ ಅಭಿಮಾನಿ ಬಳಗ ಹಿರಿದಾಗೋಕೆ ಇದು ಕೂಡ ಕಾರಣವಾಗಿತ್ತು.

ಸದ್ಯ, ಮಂಜು ಪಾವಗಡ ಗೆದ್ದಿರೋದು ಅರವಿಯಾ ಫ್ಯಾನ್ಸ್​ಗೆ ಬೇಸರ ತರಿಸಿದೆ. ‘ಈ ತೀರ್ಪು ಸಾಕಷ್ಟು ಬೇಸರ ಮೂಡಿಸಿದೆ’ ಎಂದು ಕೆಲವರು ಹೇಳಿದ್ದಾರೆ. ‘ಅರವಿಂದ್​ ಬಿಗ್​ ಬಾಸ್​ ಗೆಲ್ಲದೆ ಇರಬಹುದು. ಆದರೆ, ಅವರು ನಮ್ಮ ಹೃದಯ ಗೆದ್ದಿದ್ದಾರೆ’ ಎಂದು ಕೆಲವರು ಕಮೆಂಟ್​ ಮಾಡಿದ್ದಾರೆ.  ‘ಇದು ನಿರಾಶಾದಾಯಕ ತೀರ್ಪು. ಅರವಿಂದ್​ ಕೆಪಿ ನಿಜವಾದ ವಿನ್ನರ್​​’ ಎಂದಿದ್ದಾರೆ ಅರವಿಯಾ ಫ್ಯಾನ್ಸ್​.

ಇನ್ನು, ಮಂಜು ಗೆಲುವಿಗೆ ಅನೇಕರು ಸಂತೋಷ ಹೊರ ಹಾಕಿದ್ದಾರೆ. ನಾವು ಅಂದುಕೊಂಡಂತೆ ಯಾವುದೇ ಸೀಸನ್​ನಲ್ಲೂ ನಡೆಯುತ್ತಿರಲಿಲ್ಲ. ಆದರೆ, ಈ ಬಾರಿ ಆ ರೀತಿ ಆಗಿಲ್ಲ. ಮಂಜು ಅವರೇ ವಿನ್​ ಆಗಿದ್ದಾರೆ ಎಂದು ಕೆಲವರು ಸಂತಸ ಕೂಡ ಮೂಡಿಸಿದ್ದಾರೆ.

ಇದನ್ನೂ ಓದಿ:Manju Pavagada: ನನ್ನ ಗೆಲುವಿಗೆ ಅರವಿಂದ್ ಸ್ಫೂರ್ತಿ ಎಂದ ಬಿಗ್ ಬಾಸ್ ಕನ್ನಡ 8 ವಿಜೇತ ಮಂಜು ಪಾವಗಡ 

Published On - 12:14 pm, Mon, 9 August 21

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ