AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಲಿಮಿನೇಷನ್ ವಿಚಾರದಲ್ಲಿ ಮತ್ತೆ ಮರುಕಳಿಸಿತು ‘ಬಿಗ್ ಬಾಸ್​ ಸೀಸನ್ 8’ರ ಘಟನೆ?

ಈ ವಾರ ನೀತು ವನಜಾಕ್ಷಿ ಅವರು ಎಲಿಮಿನೇಟ್ ಆಗಬೇಕಿತ್ತಂತೆ. ಆದರೆ, ವರ್ತೂರು ಸಂತೋಷ್ ಅವರು ತಾವು ದೊಡ್ಮನೆಯಿಂದ ಹೊರ ಹೋಗುವ ನಿರ್ಧಾರ ತೆಗೆದುಕೊಂಡಿದ್ದಾರೆ ಎನ್ನಲಾಗುತ್ತಿದೆ.

ಎಲಿಮಿನೇಷನ್ ವಿಚಾರದಲ್ಲಿ ಮತ್ತೆ ಮರುಕಳಿಸಿತು ‘ಬಿಗ್ ಬಾಸ್​ ಸೀಸನ್ 8’ರ ಘಟನೆ?
ಬಿಗ್ ಬಾಸ್
Follow us
ರಾಜೇಶ್ ದುಗ್ಗುಮನೆ
|

Updated on:Nov 12, 2023 | 8:31 AM

‘ಬಿಗ್ ಬಾಸ್ ಕನ್ನಡ ಸೀಸನ್ 10’ರ (BBK 10) ಐದನೇ ವಾರ ಪೂರ್ಣಗೊಳ್ಳುವ ಹಂತಕ್ಕೆ ಬಂದಿದೆ. ಈ ವರ್ಷ ಜಗಳಗಳು, ಕಿತ್ತಾಟಗಳು, ಮನಸ್ತಾಪಗಳಲ್ಲೇ ಶೋ ಪೂರ್ಣಗೊಳ್ಳುವ ಸೂಚನೆ ಸಿಕ್ಕಿದೆ. ಯಾರೂ ಹಾಸ್ಯ ಮಾಡುವ ಗೋಜಿಗೆ ಹೋಗುತ್ತಿಲ್ಲ. ಈ ಮಧ್ಯೆ ಎಲಿಮಿನೇಷನ್ ವಿಚಾರದಲ್ಲಿ ಈ ಬಾರಿ ಟ್ವಿಸ್ಟ್ ಸಿಕ್ಕಿದೆ ಎನ್ನಲಾಗುತ್ತಿದೆ. ಕೆಲವು ವರದಿಗಳ ಪ್ರಕಾರ ‘ಬಿಗ್ ಬಾಸ್ ಕನ್ನಡ ಸೀಸನ್ 8’ರ ಘಟನೆ ಇಲ್ಲಿ ಮರಳಿ ನಡೆದಿದೆ ಎಂದು ಹೇಳಲಾಗುತ್ತಿದೆ. ಇದನ್ನು ಖಾತ್ರಿಪಡಿಸಿಕೊಳ್ಳಲು ಇಂದಿನ (ನವೆಂಬರ್ 12) ಎಪಿಸೋಡ್​ಗಾಗಿ ಕಾಯಲೇಬೇಕಿದೆ.

ಬಿಗ್ ಬಾಸ್ ಎಂಟನೇ ಸೀಸನ್​ನಲ್ಲಿ ಒಂದು ಅಪರೂಪದ ಘಟನೆ ನಡೆದಿತ್ತು. ಕೆಲವು ಸಿನಿಮಾಗಳಲ್ಲಿ ನಟಿಸಿದ್ದ ವೈಜಯಂತಿ ಅಡಿಗ ಅವರು ಬಿಗ್ ಬಾಸ್ ಮನೆಗೆ ಬಂದಿದ್ದರು. ಅವರಿಗೆ ಬಿಗ್ ಬಾಸ್​ನಲ್ಲಿ ಇರೋಕೆ ಸಾಧ್ಯವೇ ಆಗಲಿಲ್ಲ. ಹೀಗಾಗಿ, ಅವರು ದೊಡ್ಮನೆಯಿಂದ ಹೊರ ಹೋಗುವ ನಿರ್ಧಾರಕ್ಕೆ ಬಂದರು. ಆ ವಾರ ಎಲಿಮಿನೇಟ್ ಆಗಬೇಕಿದ್ದಿದ್ದು ಶಮಂತ್ ಬ್ರೋ ಗೌಡ. ಅವರ ಬದಲಿಗೆ ತಾವು ಹೊರ ಹೋಗುವುದಾಗಿ ಹೇಳಿದರು ವೈಜಯಂತಿ. ಈ ಮೂಲಕ ಶಮಂತ್ ಉಳಿದುಕೊಂಡರು ಹಾಗೂ ವೈಜಯಂತಿ ಔಟ್ ಆದರು.

ಈ ಘಟನೆ ಮತ್ತೆ ಮರುಕಳಿಸುತ್ತಿದ್ದೆ ಎನ್ನುತ್ತಿವೆ ಕೆಲವು ಮೂಲಗಳು. ಈ ವಾರ ನೀತು ವನಜಾಕ್ಷಿ ಅವರು ಎಲಿಮಿನೇಟ್ ಆಗಬೇಕಿತ್ತಂತೆ. ಆದರೆ, ವರ್ತೂರು ಸಂತೋಷ್ ಅವರು ತಾವು ದೊಡ್ಮನೆಯಿಂದ ಹೊರ ಹೋಗುವ ನಿರ್ಧಾರ ತೆಗೆದುಕೊಂಡಿದ್ದಾರೆ ಎನ್ನಲಾಗುತ್ತಿದೆ. ಈ ಮೂಲಕ ನೀತುನ ಉಳಿಸಿ ಅವರು  ಹೊರಹೋಗಿದ್ದಾರಂತೆ. ಎಪಿಸೋಡ್​ ನೋಡಿದ ಬಳಿಕ ಏನಾಗಿದೆ ಎಂಬುದರ ಪಕ್ಕಾ ಸೂಚನೆ ಸಿಗಲಿದೆ.

ಇದನ್ನೂ ಓದಿ: BBK 10: ವರ್ತೂರು ಸಂತೋಷ್​ ಅರೆಸ್ಟ್​ ಬಗ್ಗೆ ಬಿಗ್​ ಬಾಸ್​ ಸ್ಪರ್ಧಿಗಳಿಗೆ ಮಾಹಿತಿ ಇದೆಯಾ? ಸತ್ಯ ಬಿಚ್ಚಿಟ್ಟ ರಕ್ಷಕ್​

ವರ್ತೂರು ಸಂತೋಷ್ ಅವರು ಹುಲಿ ಉಗುರು ಹೊಂದಿರುವ ಪ್ರಕರಣದಲ್ಲಿ ಬಂಧನಕ್ಕೆ ಒಳಗಾದರು. ಈ ಕಾರಣದಿಂದ ಅವರು ಮರಳಿ ಬಿಗ್ ಬಾಸ್​ಗೆ ಬರುವ ಅನಿವಾರ್ಯತೆ ಇತ್ತು. ಆ ಬಳಿಕ ಅವರು ಮರಳಿ ದೊಡ್ಮನೆಗೆ ಬಂದರು. ಕಳೆದ ಎರಡು ವಾರಗಳಿಂದ ಅವರು ಬಿಗ್ ಬಾಸ್ ಮನೆಯಲ್ಲಿ ಇದ್ದರು. ಹೊರಗೆ ಹೋಗುವ ಅನಿವಾರ್ಯತೆ ಎದುರಾಗಿದ್ದರಿಂದ ಅವರು ಹೊರ ಹೋಗುವ ನಿರ್ಧಾರ ತೆಗೆದುಕೊಂಡಿದ್ದಾರೆ ಎನ್ನಲಾಗಿದೆ. ಕಲರ್ಸ್ ಕನ್ನಡ ಹಾಗೂ ಜಿಯೋ ಸಿನಿಮಾದಲ್ಲಿ ‘ಬಿಗ್ ಬಾಸ್’ ಪ್ರಸಾರ ಕಾಣುತ್ತಿದೆ. ಜಿಯೋ ಸಿನಿಮಾದಲ್ಲಿ ದಿನದ 24 ಗಂಟೆಯೂ ಉಚಿತವಾಗಿ ಲೈವ್ ವೀಕ್ಷಿಸಬಹುದಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 7:05 am, Sun, 12 November 23

ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಕೊಪ್ಪಳದ 96 ವರ್ಷದ ಭೀಮವ್ವ ಶಿಳ್ಳೆಕ್ಯಾತರ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಕೊಪ್ಪಳದ 96 ವರ್ಷದ ಭೀಮವ್ವ ಶಿಳ್ಳೆಕ್ಯಾತರ
ಸ್ಪಿನ್ ಲೆಜೆಂಡ್ ಆರ್​. ಅಶ್ವಿನ್​ಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ಸ್ಪಿನ್ ಲೆಜೆಂಡ್ ಆರ್​. ಅಶ್ವಿನ್​ಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ಕಪ್ಪು ಬಾವುಟ ಪ್ರದರ್ಶಿಶಿದ ಮಹಿಳೆಯರ ವಿರುದ್ಧ ಕೇಸ್ ದಾಖಲಾಗಿದೆ: ಐಜಿಪಿ
ಕಪ್ಪು ಬಾವುಟ ಪ್ರದರ್ಶಿಶಿದ ಮಹಿಳೆಯರ ವಿರುದ್ಧ ಕೇಸ್ ದಾಖಲಾಗಿದೆ: ಐಜಿಪಿ
Pahalgam Attack: ಪ್ರವಾಸಿಗರೊಬ್ಬರ ಕ್ಯಾಮರಾದಲ್ಲಿ ದಾಳಿ ಭೀಕರ ದೃಶ್ಯ!
Pahalgam Attack: ಪ್ರವಾಸಿಗರೊಬ್ಬರ ಕ್ಯಾಮರಾದಲ್ಲಿ ದಾಳಿ ಭೀಕರ ದೃಶ್ಯ!
ಸಿಎಂ ವರ್ತನೆಯಿಂದ ಅಧಿಕಾರಿ ಮಾನಸಿಕ ಕ್ಷೋಭೆಗೊಳಗಾಗಿರುತ್ತಾರೆ: ಶೆಟ್ಟರ್
ಸಿಎಂ ವರ್ತನೆಯಿಂದ ಅಧಿಕಾರಿ ಮಾನಸಿಕ ಕ್ಷೋಭೆಗೊಳಗಾಗಿರುತ್ತಾರೆ: ಶೆಟ್ಟರ್
ಪ್ರಧಾನಿ ಹೇಳಿದಂತೆ ಪಾಕ್​ ಅನ್ನು ನುಗ್ಗಿ ವೈರಿಗಳನ್ನು ಸದೆಬಡಿಯಬೇಕು: ಅರುಣ್
ಪ್ರಧಾನಿ ಹೇಳಿದಂತೆ ಪಾಕ್​ ಅನ್ನು ನುಗ್ಗಿ ವೈರಿಗಳನ್ನು ಸದೆಬಡಿಯಬೇಕು: ಅರುಣ್
ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ