BBK9: ಮೊದಲ ವಾರವೇ ಬಿಗ್​ ಬಾಸ್​ ಮನೆಯಲ್ಲಿ 12 ಮಂದಿ ನಾಮಿನೇಟ್​; ಶುರುವಾಯ್ತು ಢವಢವ

Bigg Boss Kannada Season 9: ನಾಮಿನೇಟ್​ ಆದವರಿಗೆ ಖಂಡಿತವಾಗಿಯೂ ಢವಢವ ಶುರುವಾಗಿರುತ್ತದೆ. ಪ್ರತಿ ಟಾಸ್ಕ್​ ಕೂಡ ಚೆನ್ನಾಗಿ ಆಡಲೇ ಬೇಕಾಗುತ್ತದೆ.

BBK9: ಮೊದಲ ವಾರವೇ ಬಿಗ್​ ಬಾಸ್​ ಮನೆಯಲ್ಲಿ 12 ಮಂದಿ ನಾಮಿನೇಟ್​; ಶುರುವಾಯ್ತು ಢವಢವ
ಬಿಗ್ ಬಾಸ್
Follow us
| Updated By: ಮದನ್​ ಕುಮಾರ್​

Updated on:Sep 25, 2022 | 11:03 PM

ಸುಮಾರು ನೂರು ದಿನಗಳ ಕಾಲ ಬಿಗ್​ ಬಾಸ್​ (Bigg Boss Kannada) ರಿಯಾಲಿಟಿ ಶೋ ನಡೆಯಲಿದೆ. ಫಿನಾಲೆವರೆಗೂ ಸ್ಪರ್ಧಿಸಬೇಕು ಎಂಬ ಆಸೆ ಎಲ್ಲರಿಗೂ ಇರುತ್ತದೆ. ಟ್ರೋಫಿ ಗೆಲ್ಲಬೇಕು ಅಂತಲೇ ಪ್ರತಿಯೊಬ್ಬರೂ ಪೈಪೋಟಿ ನೀಡುತ್ತಾರೆ. ಮೊದಲ ವಾರವೇ ಎಲಿಮಿನೇಟ್​ ಆಗಿಬಿಟ್ಟರೆ ನಿಜಕ್ಕೂ ಬೇಸರ ಆಗುತ್ತದೆ. ಹಾಗಂತ ಎಲಿಮಿನೇಷನ್​ (Bigg Boss Elimination) ತಪ್ಪಿಸಲು ಸಾಧ್ಯವಿಲ್ಲ. ಒಬ್ಬರಲ್ಲಾ ಒಬ್ಬರು ಎಲಿಮಿನೇಟ್​ ಆಗಲೇಬೇಕು. ‘ಬಿಗ್​ ಬಾಸ್​ ಕನ್ನಡ ಸೀಸನ್​ 9’ (Bigg Boss Kannada Season 9) ಆರಂಭ ಆಗಿದೆ. ಇದರಲ್ಲಿ ಮೊದಲ ವಾರವೇ ಯಾರು ಔಟ್​ ಆಗುತ್ತಾರೆ ಎಂಬ ಕೌತುಕ ನಿರ್ಮಾಣ ಆಗಿದೆ. 18 ಜನರು ಈಗ ಸ್ಪರ್ಧೆ ನಡೆಸುತ್ತಿದ್ದಾರೆ. ಅಚ್ಚರಿ ಎಂದರೆ ಮೊದಲ ವಾರ ಬರೋಬ್ಬರಿ 12 ಜನರು ನಾಮಿನೇಟ್​ ಆಗಿದ್ದಾರೆ.

ಕಿಚ್ಚ ಸುದೀಪ್​ ಅವರ ಸಾರಥ್ಯದಲ್ಲಿ ಬಿಗ್​ ಬಾಸ್​ ಕನ್ನಡ 9ನೇ ಸೀಸನ್​ ಮೂಡಿಬರುತ್ತಿದೆ. ಕಲರ್ಸ್​ ಕನ್ನಡ ವಾಹಿನಿಯಲ್ಲಿ ಪ್ರಸಾರ ಆಗುತ್ತಿರುವ ಈ ಶೋನಲ್ಲಿ ಒಟ್ಟು 18 ಜನರಿಗೆ ಅವಕಾಶ ಸಿಕ್ಕಿದೆ. ಪ್ರತಿ ವಾರವೂ ಸದಸ್ಯರ ಸಂಖ್ಯೆ ಕಡಿಮೆ ಆಗುತ್ತದೆ. ಆಟ ಶುರುವಾದ ಮೊದಲ ದಿನವೇ ನಾಮಿನೇಷನ್​ ಪ್ರಕ್ರಿಯೆ ನಡೆದಿದೆ. ಅದರಲ್ಲಿ ಆರ್ಯವರ್ಧನ್​, ದರ್ಶ್​, ದಿವ್ಯಾ ಉರುಡುಗ, ಐಶ್ವರ್ಯಾ ಪಿಸೆ, ಪ್ರಶಾಂತ್​ ಸಂಬರ್ಗಿ, ವಿನೋದ್​, ಅರುಣ್​ ಸಾಗರ್​, ​ನವಾಜ್​, ಸಾನ್ಯಾ ಅಯ್ಯರ್​, ಮಯೂರಿ, ರೂಪೇಶ್​ ರಾಜಣ್ಣ, ಕ್ಯಾವ್ಯಶ್ರೀ ಅವರು ನಾಮಿನೇಟ್​ ಆಗಿದ್ದಾರೆ.

ನಾಮಿನೇಟ್​ ಆದವರಿಗೆ ಖಂಡಿತವಾಗಿಯೂ ಢವಢವ ಶುರುವಾಗಿರುತ್ತದೆ. ಪ್ರತಿ ಟಾಸ್ಕ್​ ಕೂಡ ಚೆನ್ನಾಗಿ ಆಡಲೇ ಬೇಕಾಗುತ್ತದೆ. ಮನೆಯ ಸದಸ್ಯರ ಜೊತೆ ಹೇಗೆ ನಡೆದುಕೊಳ್ಳುತ್ತಾರೆ? ವೀಕ್ಷಕರನ್ನು ಎಷ್ಟರಮಟ್ಟಿಗೆ ಮನರಂಜಿಸುತ್ತಾರೆ ಎಂಬುದೆಲ್ಲವೂ ಪರಿಗಣನೆಗೆ ಬರುತ್ತದೆ. ಹಾಗಾಗಿ ಎಚ್ಚರಿಕೆಯಿಂದ ಆಟ ಆಡಲು ಎಲ್ಲರೂ ಸಜ್ಜಾಗಿದ್ದಾರೆ.

ಇದನ್ನೂ ಓದಿ
Image
Prashanth Sambargi: ನಿಜವಾದ ಹೆಸರು ಮುಚ್ಚಿಟ್ಟಿದ್ದಾರಾ ಗುರೂಜಿ? ‘ಸತ್ಯ ಬಯಲು ಮಾಡ್ತೀನಿ’ ಎಂದ ಪ್ರಶಾಂತ್​ ಸಂಬರಗಿ
Image
BBK9: ಮೊದಲ ದಿನವೇ ಬಿಗ್​ ಬಾಸ್​ ಮನೆಯಲ್ಲಿ ದೊಡ್ಡ ಫೈಟ್​; ಕೂಗಾಡಿದ ಪ್ರಶಾಂತ್​ ಸಂಬರ್ಗಿ
Image
Bigg Boss OTT: ‘ಬಿಗ್​ ಬಾಸ್​ ಒಟಿಟಿ’ ಲಾಭವೋ ನಷ್ಟವೋ? ಇನ್ನೊಂದು ಸೀಸನ್​ ಬರೋದು ಅನುಮಾನ
Image
BBK9 ಶೋನಲ್ಲಿ ಸ್ಪರ್ಧಿಸುವ ಚಾನ್ಸ್​ ಪಡೆದ ರಾಕೇಶ್​, ರೂಪೇಶ್​, ಆರ್ಯವರ್ಧನ್​, ಸಾನ್ಯಾ ಐಯ್ಯರ್​

‘ಮೊದಲ ವಾರವೇ ನಾಮಿನೇಟ್​ ಆಗಬಾರದು ಎಂದುಕೊಂಡಿದ್ದೆ. ಆದರೆ ಆಗಿ ಹೋಯ್ತು’ ಎಂದು ರೂಪೇಶ್​ ರಾಜಣ್ಣ ಬೇಸರ ಮಾಡಿಕೊಂಡಿದ್ದಾರೆ. ಇನ್ನುಳಿದ ಸ್ಪರ್ಧಿಗಳಾದ ರಾಕೇಶ್​ ಅಡಿಗ, ಅನುಪಮಾ ಗೌಡ, ಅಮೂಲ್ಯ ಗೌಡ, ದೀಪಿಕಾ ದಾಸ್​, ನೇಹಾ ಗೌಡ, ರೂಪೇಶ್​ ಶೆಟ್ಟಿ ಸದ್ಯಕ್ಕೆ ಸೇಫ್​ ಆಗಿದ್ದಾರೆ.

ಪ್ರವೀಣರು ಮತ್ತು ನವೀನರು ಎಂಬ ಹೊಸ ಮಾದರಿಯನ್ನು ಈ ಬಾರಿ ಬಿಗ್​ ಬಾಸ್​ನಲ್ಲಿ ಪರಿಚಯಿಸಲಾಗಿದೆ. ಹೊಸಬರನ್ನು ಮತ್ತು ಹಳಬರನ್ನು ಜೋಡಿಯಾಗಿಸಿ ಟಾಸ್ಕ್​ಗಳನ್ನು ಆಡಿಸಲಾಗುತ್ತಿದೆ. ಮೊದಲ ದಿನ ನಡೆದ ಟಾಸ್ಕ್​ನಲ್ಲಿ ಪ್ರಶಾಂ​ತ್ ಸಂಬರ್ಗಿ ಹಾಗೂ ವಿನೋದ್​ ಗೊಬ್ಬರಗಾಲ ಜೋಡಿ ವಿನ್​ ಆಗಿದೆ. ‘ಫಸ್ಟ್​ ಟಾಸ್ಕ್​ ಗೆದ್ದಿದ್ದಕ್ಕಾಗಿ ಐಸ್​ ಕ್ರೀಮ್​ ಅಥವಾ ಏನಾದರೂ ಕೊಡಿ’ ಎಂದು ಬಿಗ್​​ ಬಾಸ್​ ಬಳಿ ಪ್ರಶಾಂತ್​ ಸಂಬರ್ಗಿ ಮನವಿ ಮಾಡಿಕೊಂಡಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 11:03 pm, Sun, 25 September 22

ಸ್ತ್ರೀಯರು ಬೈತಲೆ ತೆಗೆದು ತಲೆ ಬಾಚಿದ್ರೆ ಏನಾಗುತ್ತೆ? ವಿಡಿಯೋ ನೋಡಿ
ಸ್ತ್ರೀಯರು ಬೈತಲೆ ತೆಗೆದು ತಲೆ ಬಾಚಿದ್ರೆ ಏನಾಗುತ್ತೆ? ವಿಡಿಯೋ ನೋಡಿ
ವಾರ ಭವಿಷ್ಯ: ಅಕ್ಟೋಬರ್ 21 ರಿಂದ 27 ರವರೆಗೆ ವಾರ ಭವಿಷ್ಯ ಹೀಗಿದೆ
ವಾರ ಭವಿಷ್ಯ: ಅಕ್ಟೋಬರ್ 21 ರಿಂದ 27 ರವರೆಗೆ ವಾರ ಭವಿಷ್ಯ ಹೀಗಿದೆ
Nithya Bhavishya: ರವಿವಾರ ಸಂಕಷ್ಟ ಚತುರ್ಥಿ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ರವಿವಾರ ಸಂಕಷ್ಟ ಚತುರ್ಥಿ ದಿನದ ರಾಶಿ ಭವಿಷ್ಯ ತಿಳಿಯಿರಿ
ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಎನ್‌ಡಿಎ ಅಭ್ಯರ್ಥಿ ಯಾರೆಂದು ನಾಳೆ ಫೈನಲ್
ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಎನ್‌ಡಿಎ ಅಭ್ಯರ್ಥಿ ಯಾರೆಂದು ನಾಳೆ ಫೈನಲ್
ರೈಲು ಅಪಘಾತದಿಂದ 60 ಆನೆಗಳ ರಕ್ಷಣೆ; ಲೋಕೋ ಪೈಲಟ್ ಕಾರ್ಯಕ್ಕೆ ಮೆಚ್ಚುಗೆ
ರೈಲು ಅಪಘಾತದಿಂದ 60 ಆನೆಗಳ ರಕ್ಷಣೆ; ಲೋಕೋ ಪೈಲಟ್ ಕಾರ್ಯಕ್ಕೆ ಮೆಚ್ಚುಗೆ
ತೆಲಂಗಾಣದಲ್ಲಿ ಉತ್ಖನನದ ವೇಳೆ ಆಂಜನೇಯನ ಪ್ರತಿಮೆ ಪತ್ತೆ
ತೆಲಂಗಾಣದಲ್ಲಿ ಉತ್ಖನನದ ವೇಳೆ ಆಂಜನೇಯನ ಪ್ರತಿಮೆ ಪತ್ತೆ
ಮನೆ ಸದಸ್ಯರಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ ಸುದೀಪ್, ಎಲ್ಲರೂ ಎಲಿಮಿನೇಟ್?
ಮನೆ ಸದಸ್ಯರಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ ಸುದೀಪ್, ಎಲ್ಲರೂ ಎಲಿಮಿನೇಟ್?
ಈಡಿ ವ್ಯಾಪ್ತಿಯನ್ನು ಸರ್ವೋಚ್ಛ ನ್ಯಾಯಾಲಯದಲ್ಲಿ ಪ್ರಶ್ನಿಸಲಾಗಿದೆ: ಸಚಿವ
ಈಡಿ ವ್ಯಾಪ್ತಿಯನ್ನು ಸರ್ವೋಚ್ಛ ನ್ಯಾಯಾಲಯದಲ್ಲಿ ಪ್ರಶ್ನಿಸಲಾಗಿದೆ: ಸಚಿವ
ಬೆಂಗಳೂರು: ಜಿಟಿ ಜಿಟಿ ಮಳೆಯಲ್ಲಿ ಫೋಟೋಶೂಟ್ ಮಾಡಿಸಿಕೊಂಡ ಮುದ್ದಾದ ಜೋಡಿ
ಬೆಂಗಳೂರು: ಜಿಟಿ ಜಿಟಿ ಮಳೆಯಲ್ಲಿ ಫೋಟೋಶೂಟ್ ಮಾಡಿಸಿಕೊಂಡ ಮುದ್ದಾದ ಜೋಡಿ
Bangalore Rains: ಬೆಂಗಳೂರಿನಲ್ಲಿ ಮತ್ತೆ ಮಳೆ, ಧರೆಗುರುಳಿದ ಮರಗಳು
Bangalore Rains: ಬೆಂಗಳೂರಿನಲ್ಲಿ ಮತ್ತೆ ಮಳೆ, ಧರೆಗುರುಳಿದ ಮರಗಳು