ಬಿಗ್ ಬಾಸ್ ಮನೆಯಿಂದ ಮಯೂರಿ ಎಲಿಮಿನೇಟ್​; ನಟಿ ಹೊರಹೋಗಲು ಇದುವೇ ಕಾರಣ 

ಈ ವಾರ ಮಯೂರಿ, ಆರ್ಯವರ್ಧನ್ ಗುರೂಜಿ, ಪ್ರಶಾಂತ್ ಸಂಬರ್ಗಿ, ಕಾವ್ಯಶ್ರೀ ಗೌಡ, ನೇಹಾ ಗೌಡ, ಸಾನ್ಯಾ ಐಯ್ಯರ್, ರೂಪೇಶ್ ಶೆಟ್ಟಿ ಹಾಗೂ ದಿವ್ಯಾ ಉರುಡುಗ ನಾಮಿನೇಟ್​ ಆಗಿದ್ದರು. ಈ ಪೈಕಿ ದಿವ್ಯಾ ಉರುಡುಗ ಅವರು ಮೊದಲು ಸೇವ್ ಆದರು.

ಬಿಗ್ ಬಾಸ್ ಮನೆಯಿಂದ ಮಯೂರಿ ಎಲಿಮಿನೇಟ್​; ನಟಿ ಹೊರಹೋಗಲು ಇದುವೇ ಕಾರಣ 
Follow us
| Updated By: ರಾಜೇಶ್ ದುಗ್ಗುಮನೆ

Updated on:Oct 23, 2022 | 10:20 PM

‘ಬಿಗ್ ಬಾಸ್ ಕನ್ನಡ ಸೀಸನ್ 9’ರ (BBK 9) ನಾಲ್ಕನೇ ವಾರದ ಎಲಿಮಿನೇಷನ್ ಪ್ರಕ್ರಿಯೆ ಇಂದು (ಅಕ್ಟೋಬರ್ 23) ನಡೆದಿದೆ. ಸುದೀಪ್ ಅವರು ವಿದೇಶ ಪ್ರವಾಸದಲ್ಲಿರುವ ಕಾರಣ ಬೇರೆ ರೀತಿಯಲ್ಲಿ ಎಲಿಮಿನೇಷನ್ ಪ್ರಕ್ರಿಯೆ ನಡೆಸಲಾಯಿತು. ವಿವಿಧ ಹಂತಗಳಲ್ಲಿ ಈ ಪ್ರಕ್ರಿಯೆ ನಡೆದಿದೆ. ಸುದೀಪ್ ಇಲ್ಲದೆ ವೀಕೆಂಡ್ ಕಾರ್ಯಕ್ರಮ ನಡೆದಿದ್ದು ಈ ಸೀಸನ್​ನಲ್ಲಿ ಇದೇ ಮೊದಲು.  ಬಿಗ್ ಬಾಸ್​ನಲ್ಲಿ ಈ ವಾರ ಮಯೂರಿ ಔಟ್ ಆಗಿದ್ದಾರೆ.

ಈ ವಾರ ಮಯೂರಿ, ಆರ್ಯವರ್ಧನ್ ಗುರೂಜಿ, ಪ್ರಶಾಂತ್ ಸಂಬರ್ಗಿ, ಕಾವ್ಯಶ್ರೀ ಗೌಡ, ನೇಹಾ ಗೌಡ, ಸಾನ್ಯಾ ಐಯ್ಯರ್, ರೂಪೇಶ್ ಶೆಟ್ಟಿ ಹಾಗೂ ದಿವ್ಯಾ ಉರುಡುಗ ನಾಮಿನೇಟ್​​ ಆಗಿದ್ದರು. ಈ ಪೈಕಿ ದಿವ್ಯಾ ಉರುಡುಗ ಅವರು ಮೊದಲು ಸೇವ್ ಆದರು. ನಂತರ, ರೂಪೇಶ್ ಶೆಟ್ಟಿ, ಪ್ರಶಾಂತ್, ಆರ್ಯವರ್ಧನ್, ಸಾನ್ಯಾ, ಕಾವ್ಯಶ್ರೀ ಸೇವ್ ಆದರು. ಕೊನೆಯ ರೌಂಡ್​ನಲ್ಲಿ ಮಯೂರಿ ಹಾಗೂ ನೇಹಾ ಇದ್ದರು. ಆ ಪೈಕಿ ಮಯೂರಿ ಔಟ್ ಆದರು. ಅವರು ಸದಾ ಮಗುವಿನ ಚಿಂತೆಯಲ್ಲಿ ಇದ್ದರು. ಮನೆಯಿಂದ ಹೊರಹೋಗಬೇಕು ಎಂಬುದು ಅವರ ಆಸೆ ಆಗಿತ್ತು. ಇದು ಅವರಿಗೆ ಮುಳುವಾಗಿದೆ.

ಕಿಚ್ಚ ಸುದೀಪ್ ಅವರು ಪತ್ನಿ ಪ್ರಿಯಾ ಜತೆ ಆಸ್ಟ್ರೇಲಿಯಾಗೆ ತೆರಳಿದ್ದಾರೆ. ಅಲ್ಲಿಯೇ ವಿವಾಹ ವಾರ್ಷಿಕೋತ್ಸವ ಆಚರಿಸಿಕೊಂಡಿದ್ದಾರೆ. ಇಂದು (ಅಕ್ಟೋಬರ್ 23) ಭಾರತ ಹಾಗೂ ಪಾಕಿಸ್ತಾನ ನಡುವಣ ಮ್ಯಾಚ್ ವೀಕ್ಷಿಸಿದ್ದಾರೆ ಈ ದಂಪತಿ. ಇಂದಿನ ಎಪಿಸೋಡ್ ಆರಂಭಕ್ಕೂ ಮೊದಲು ಸುದೀಪ್ ಬರುವುದಿಲ್ಲ ಎಂಬ ವಿಚಾರವನ್ನು ಘೋಷಿಸಲಾಯಿತು. ‘ಸುದೀಪ್ ಅವರು ವಿದೇಶ ಪ್ರಯಾಣದಲ್ಲಿ ಇದ್ದಾರೆ. ಹೀಗಾಗಿ, ಅವರು ಇಂದಿನ ಕಾರ್ಯಕ್ರಮ ನಡೆಸುವುದಿಲ್ಲ. ಆದರೆ, ಎಲಿಮಿನೇಷನ್ ಪ್ರಕ್ರಿಯೆ ಇರುತ್ತದೆ’ ಎಂದು ಘೋಷಿಸಲಾಯಿತು.

ಇದನ್ನೂ ಓದಿ
Image
ಬಿಗ್ ಬಾಸ್​ನಲ್ಲಿ ಭಾನುವಾರವೂ ಇಲ್ಲ ಕಿಚ್ಚ ಸುದೀಪ್​; ಈ ವಾರದ ಎಲಿಮಿನೇಷನ್ ಕಥೆ ಏನು?
Image
BBK9: ಬಿಗ್​ ಬಾಸ್​ ಮೇಲೆ ಮ್ಯಾಚ್​ ಫಿಕ್ಸಿಂಗ್​ ಆರೋಪ; ಗುರೂಜಿ ವಿರುದ್ಧ ಗುಡುಗಿದ ಸುದೀಪ್​
Image
BBK9: ಬಿಗ್​ ಬಾಸ್​ 2ನೇ ವಾರ ನವಾಜ್​ ಎಲಿಮಿನೇಟ್​; ದೊಡ್ಮನೆಯಲ್ಲಿ ನಡೆಯಲಿಲ್ಲ ಪ್ರಾಸದ ಆಟ
Image
BBK9: ಬಿಗ್​ ಬಾಸ್​ನಿಂದ ಐಶ್ವರ್ಯಾ ಪಿಸ್ಸೆ ಎಲಿಮಿನೇಟ್​; ಒಂದೇ ವಾರಕ್ಕೆ ಮುಗಿಯಿತು ದೊಡ್ಮನೆ ಆಟ

ಇದನ್ನೂ ಓದಿ: ಬಿಗ್ ಬಾಸ್ ಮನೆಯಿಂದ ಮಯೂರಿ ಎಲಿಮಿನೇಟ್​; ನಟಿ ಹೊರಹೋಗಲು ಇದುವೇ ಕಾರಣ 

ಸುದೀಪ್ ಬರುತ್ತಿಲ್ಲ ಎಂಬ ವಿಚಾರ ಕೇಳಿ ಮನೆ ಮಂದಿ ಬೇಸರಗೊಂಡರು. ವಿಡಿಯೋ ಕಾಲ್ ಮೂಲಕ ಅವರು ಜಾಯಿನ್ ಆಗಬಹುದು ಎಂದು ಕೆಲವರು ಅಭಿಪ್ರಾಯ ಹಂಚಿಕೊಂಡರು. ಕಳೆದ ಸೀಸನ್​ಲ್ಲಿ ಸುದೀಪ್​ಗೆ ಕೊವಿಡ್ ಕಾಣಿಸಿಕೊಂಡಿತ್ತು. ಹೀಗಾಗಿ, ಅವರು ಕೆಲ ಎಪಿಸೋಡ್ ನಡೆಸಿಕೊಟ್ಟಿರಲಿಲ್ಲ. ಕಳೆದ ಸೀಸನ್​ನ ಸ್ಪರ್ಧಿಗಳಾದ ಪ್ರಶಾಂತ್ ಸಂಬರ್ಗಿ ಹಾಗೂ ದಿವ್ಯಾ ಉರುಡುಗ ಈ ಬಗ್ಗೆ ಸ್ಪಷ್ಟನೆ ನೀಡಿದರು. ‘ಸುದೀಪ್ ಬರದೇ ಹಲವು ಎಪಿಸೋಡ್ ನಡೆದಿದೆ. ಈ ವಾರ ಅವರು ಬರಲ್ಲ ಅಂದ್ರೆ ಬರಲ್ಲ’ ಅಂದ್ರು ದಿವ್ಯಾ.

Published On - 9:49 pm, Sun, 23 October 22

ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ ಪಿಲ್ಲರ್ ಮೇಲೆ ಸಿಲುಕಿದ ಯುವತಿ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ ಪಿಲ್ಲರ್ ಮೇಲೆ ಸಿಲುಕಿದ ಯುವತಿ
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಬೆಳಗಾವಿ: ರೋಗಿ ಕೈಗೆ ಕೊಳಲು ಕೊಟ್ಟು ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು
ಬೆಳಗಾವಿ: ರೋಗಿ ಕೈಗೆ ಕೊಳಲು ಕೊಟ್ಟು ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು
ಒಂದು ಕಡೆ ಕೋಮು ಗಲಭೆ, ಮತ್ತೊಂದೆಡೆ ಹಿಂದೂ ಮುಸ್ಲಿಂ ಯುವಕರಿಂದ ವಿಸರ್ಜನೆ
ಒಂದು ಕಡೆ ಕೋಮು ಗಲಭೆ, ಮತ್ತೊಂದೆಡೆ ಹಿಂದೂ ಮುಸ್ಲಿಂ ಯುವಕರಿಂದ ವಿಸರ್ಜನೆ
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್