Sign In

By signing in or creating an account, you agree with Associated Broadcasting Company's Terms & Conditions and Privacy Policy.

BBK 9: ಈ ಬಾರಿ ಕನ್ನಡ ಬಿಗ್​ ಬಾಸ್​ನಲ್ಲಿ ಯಾರೆಲ್ಲ ಇರಬೇಕು? ಈಗಲೇ ಶುರುವಾಗಿದೆ ಚರ್ಚೆ

Bigg Boss Kannada Season 9: ಪ್ರತಿ ಬಾರಿಯೂ ಸಿನಿಮಾ ಮತ್ತು ಸೀರಿಯಲ್​ ಜಗತ್ತಿನ ಸೆಲೆಬ್ರಿಟಿಗಳಿಗೆ ಆದ್ಯತೆ ನೀಡಲಾಗುತ್ತದೆ. ಈ ಬಾರಿ ಸಾಮಾನ್ಯ ಜನರಿಗೂ ಅವಕಾಶ ನೀಡಿ ಎಂಬ ಒತ್ತಾಯ ಕೇಳಿಬಂದಿದೆ.

BBK 9: ಈ ಬಾರಿ ಕನ್ನಡ ಬಿಗ್​ ಬಾಸ್​ನಲ್ಲಿ ಯಾರೆಲ್ಲ ಇರಬೇಕು? ಈಗಲೇ ಶುರುವಾಗಿದೆ ಚರ್ಚೆ
ಬಿಗ್ ಬಾಸ್ ಕನ್ನಡ
Follow us
TV9 Web
| Updated By: ಮದನ್​ ಕುಮಾರ್​

Updated on: Jul 13, 2022 | 2:29 PM

ಕನ್ನಡ ಕಿರುತೆರೆ ಪ್ರೇಕ್ಷಕರು ಬಿಗ್​ ಬಾಸ್​ (Bigg Boss Kannada) ಹೊಸ ಸೀಸನ್​ಗಾಗಿ ಕಾಯುತ್ತಿದ್ದಾರೆ. ಈ ರಿಯಾಲಿಟಿ ಶೋಗೆ ಅದರದ್ದೇ ಆದಂತಹ ವೀಕ್ಷಕರ ವರ್ಗ ಇದೆ. ಪ್ರತಿ ಬಾರಿ ಬಿಗ್​ ಬಾಸ್​ ಶುರುವಾದಾಗಲೂ ದೊಡ್ಡ ಸೆನ್ಸೇಷನ್​ ಕ್ರಿಯೇಟ್​ ಆಗುತ್ತದೆ. ಗ್ರ್ಯಾಂಡ್​ ಓಪನಿಂಗ್​ ಆಗುವುದಕ್ಕೂ ಮುನ್ನವೇ ಹತ್ತಾರು ಬಗೆಯ ಚರ್ಚೆ ಹುಟ್ಟಿಕೊಳ್ಳುತ್ತದೆ. ಈ ಬಾರಿ ಕೂಡ ಅದು ಮುಂದುವರಿದಿದೆ. ಕನ್ನಡ ಬಿಗ್​ ಬಾಸ್​ 9ನೇ ಸೀಸನ್​ (Bigg Boss Kannada Season 9) ಆರಂಭಕ್ಕೆ ಸಕಲ ಸಿದ್ಧತೆ ನಡೆಯುತ್ತಿದೆ. ಈ ವರ್ಷ ಯಾವೆಲ್ಲ ಸೆಲೆಬ್ರಿಟಿಗಳು ಸ್ಪರ್ಧಿಸಬಹುದು ಎಂಬ ಬಗ್ಗೆ ಈಗಾಗಲೇ ಚರ್ಚೆ ಶುರುವಾಗಿದೆ. ಕಲರ್ಸ್​ ಕನ್ನಡ ವಾಹಿನಿ (Colors Kannada) ಬಿಸ್ನೆಸ್​ ಹೆಡ್​ ಪರಮೇಶ್ವರ ಗುಂಡ್ಕಲ್​ ಅವರು ‘ಬಿಗ್​ ಬಾಸ್​’ ಮನೆ ನಿರ್ಮಾಣ ಕಾರ್ಯದ ಬಗ್ಗೆ ಅಪ್​ಡೇಟ್​ ನೀಡಿದಾಗಿನಿಂದ ವೀಕ್ಷಕರ ವಲಯದಲ್ಲಿ ಕೌತುಕ ಹೆಚ್ಚಿದೆ.

ಎಲ್ಲ ಭಾಷೆಯಲ್ಲೂ ಬಿಗ್​ ಬಾಸ್​ ಕಾರ್ಯಕ್ರಮ ಫೇಮಸ್​ ಆಗಿದೆ. ಕನ್ನಡದಲ್ಲಿ ಈವರೆಗೂ 8 ಸೀಸನ್​ಗಳು ಯಶಸ್ವಿಯಾಗಿ ಮುಗಿದಿವೆ. ಈ ಬಾರಿಯೂ ಕಿಚ್ಚ ಸುದೀಪ್​ ಅವರು ನಿರೂಪಣೆ ಮಾಡಲಿದ್ದಾರೆ. ಈಗಾಗಲೇ ಪ್ರೋಮೋ ಶೂಟಿಂಗ್​ ಕೂಡ ಮುಗಿದಿದೆ. ಹಾಗಿದ್ದರೆ ಯಾರಿಗೆಲ್ಲ ಈ ಸಲ ದೊಡ್ಮನೆ ಪ್ರವೇಶಿಸುವ ಚಾನ್ಸ್​ ಸಿಗಲಿದೆ ಎಂಬುದನ್ನು ತಿಳಿಯಲು ವೀಕ್ಷಕರು ಕಾತರರಾಗಿದ್ದಾರೆ.

ಇದನ್ನೂ ಓದಿ
Image
‘ಬಿಗ್​ ಬಾಸ್​’ನಲ್ಲಿ ಮದುವೆ ಆದ ಜೋಡಿಗೆ ಚಾನೆಲ್​ನವರಿಂದ ಸಿಕ್ಕಿತ್ತು 50 ಲಕ್ಷ ರೂ.; ಎರಡೇ ತಿಂಗಳಿಗೆ ಡಿವೋರ್ಸ್​
Image
ಬಿಗ್​ ಬಾಸ್​ ನಿರೂಪಕರು ಚೇಂಜ್​; ಅಧಿಕೃತ ಘೋಷಣೆ ಮಾಡಿದ ಸ್ಟಾರ್​ ನಟ; ವೀಕ್ಷಕರಿಗೆ ಬೇಸರ
Image
‘ಬಿಗ್​ ಬಾಸ್​’ ಮನೆಯಲ್ಲಿ ಅಗ್ನಿ ಅವಘಡ; ಸಾವು-ನೋವಿನ ಬಗ್ಗೆ ಆಗಿಲ್ಲ ವರದಿ
Image
ಬಿಗ್​ ಬಾಸ್​ ಗೆದ್ದವರ ಹಿಂದೆ ಲಾಬಿ ಇದೆಯೋ ಇಲ್ಲವೋ? ನೇರವಾಗಿ ಮಾತಾಡಿದ ಸ್ಪರ್ಧಿ ಕರಣ್​ ಕುಂದ್ರಾ

ಪ್ರತಿ ಬಾರಿಯೂ ಸಿನಿಮಾ ಮತ್ತು ಸೀರಿಯಲ್​ ಜಗತ್ತಿನ ಸೆಲೆಬ್ರಿಟಿಗಳಿಗೆ ಅವಕಾಶ ನೀಡಲಾಗುತ್ತದೆ. ಅದರಲ್ಲೂ ಕೊಂಚ ವಿವಾದಾತ್ಮಕ ವ್ಯಕ್ತಿಗಳಿಗೆ ಇಲ್ಲಿ ಹೆಚ್ಚಿನ ಆದ್ಯತೆ ಎಂದರೂ ತಪ್ಪಿಲ್ಲ. ಕಲರ್ಸ್​ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುವ ಧಾರಾವಾಹಿ ಮತ್ತು ರಿಯಾಲಿಟಿ ಶೋಗಳಲ್ಲಿನ ಪ್ರತಿಭೆಗಳಿಗೆ ಈ ಸಲ ಕೂಡ ಚಾನ್ಸ್​ ಸಿಗಲಿದೆ. ಇತ್ತೀಚಿನ ತಿಂಗಳಲ್ಲಿ ವಿವಾದ ಮಾಡಿಕೊಂಡ ಸೆಲೆಬ್ರಿಟಿಗಳ ಮೇಲೂ ಬಿಗ್ ಬಾಸ್​ ಆಯೋಜಕರು ಕಣ್ಣಿಟ್ಟಿದ್ದಾರೆ ಎನ್ನಲಾಗಿದೆ.

ಕೆಲವು ಸೀಸನ್​ಗಳಲ್ಲಿ ಸೆಲೆಬ್ರಿಟಿಗಳ ಜೊತೆಗೆ ಜನ ಸಾಮಾನ್ಯರಿಗೂ ಅವಕಾಶ ಸಿಕ್ಕ ಉದಾಹರಣೆ ಇದೆ. ಕಳೆದ ಸೀಸನ್​ನಲ್ಲಿ ಸೆಲೆಬ್ರಿಟಿಗಳ ಜೊತೆ ಕೆಲವು ಯೂಟ್ಯೂಬರ್​ಗಳು ಕೂಡ ಸ್ಪರ್ಧಿಸಿದ್ದರು. ಈ ಬಾರಿ ಸಾಮಾನ್ಯ ಜನರಿಗೂ ಅವಕಾಶ ನೀಡಬೇಕು ಎಂದು ಜನರು ಒತ್ತಾಯ ಹೇರುತ್ತಿದ್ದಾರೆ. ಕಮೆಂಟ್​ಗಳ ಮೂಲಕ ನೆಟ್ಟಿಗರು ತಮ್ಮ ಹಂಬಲ ವ್ಯಕ್ತಪಡಿಸುತ್ತಿದ್ದಾರೆ. ಇತ್ತೀಚೆಗೆ ಸೋಶಿಯಲ್​ ಮೀಡಿಯಾದ ಹವಾ ಹೆಚ್ಚಿದೆ. ಇನ್​ಸ್ಟಾಗ್ರಾಮ್​, ಯೂಟ್ಯೂಬ್​, ಫೇಸ್​ಬುಕ್​ನಲ್ಲಿ ಸಾಕಷ್ಟು ಖ್ಯಾತಿ ಗಳಿಸಿದವರಿಗೂ ಈ ಬಾರಿಯ ಬಿಗ್​ ಬಾಸ್​ನಲ್ಲಿ ಚಾನ್ಸ್​ ಸಿಗಬಹುದು ಎಂಬ ನಿರೀಕ್ಷೆ ಇದೆ.

ಪತಿ ಸೂರ್ಯ ಸಾವಿನ ಹಿಂದೆ ಶ್ವೇತಾಳ ಕೈವಾಡವಿದೆ ಎಂದ ಪತ್ನಿ ದೀಪಿಕಾ
ಪತಿ ಸೂರ್ಯ ಸಾವಿನ ಹಿಂದೆ ಶ್ವೇತಾಳ ಕೈವಾಡವಿದೆ ಎಂದ ಪತ್ನಿ ದೀಪಿಕಾ
ಸಿಐಡಿ ತನಿಖೆ ರಾಜ್ಯ ಸರ್ಕಾರ ಹಿಂತೆಗೆದುಕೊಂಡ ಕಾರಣ ಗೊತ್ತಿಲ್ಲ: ಅಣ್ಣಾಮಲೈ
ಸಿಐಡಿ ತನಿಖೆ ರಾಜ್ಯ ಸರ್ಕಾರ ಹಿಂತೆಗೆದುಕೊಂಡ ಕಾರಣ ಗೊತ್ತಿಲ್ಲ: ಅಣ್ಣಾಮಲೈ
ಲಾರಿಗೆ ಡಿಕ್ಕಿ ಹೊಡೆದ ಮುಂಬೈ- ಅಮರಾವತಿ ಎಕ್ಸ್​ಪ್ರೆಸ್​ ರೈಲು
ಲಾರಿಗೆ ಡಿಕ್ಕಿ ಹೊಡೆದ ಮುಂಬೈ- ಅಮರಾವತಿ ಎಕ್ಸ್​ಪ್ರೆಸ್​ ರೈಲು
ಮಹಿಳೆಯೊಂದಿಗೆ ಕಿರಿಕ್​:ಪುಂಡರ ಮರ್ಯಾದೆ ಮೂರು ಕಾಸಿಗೆ ಹರಾಜು ಹಾಕಿದ ಪೊಲೀಸ್
ಮಹಿಳೆಯೊಂದಿಗೆ ಕಿರಿಕ್​:ಪುಂಡರ ಮರ್ಯಾದೆ ಮೂರು ಕಾಸಿಗೆ ಹರಾಜು ಹಾಕಿದ ಪೊಲೀಸ್
ಚಿಕ್ಕಬಳ್ಳಾಪುರ: ಹೊತ್ತಿ ಉರಿದ ದೇವಸ್ಥಾನದ ಮುಂದೆ ನಿಲ್ಲಿಸಿದ್ದ ಕಾರು
ಚಿಕ್ಕಬಳ್ಳಾಪುರ: ಹೊತ್ತಿ ಉರಿದ ದೇವಸ್ಥಾನದ ಮುಂದೆ ನಿಲ್ಲಿಸಿದ್ದ ಕಾರು
ನಿಂತುಹೋಗಿರುವ ಕಾಮಗಾರಿಗಳನ್ನು ಪೂರ್ತಿಗೊಳಿಸಲು ಕೋರಿದೆ: ರೇಣುಕಾಚಾರ್ಯ
ನಿಂತುಹೋಗಿರುವ ಕಾಮಗಾರಿಗಳನ್ನು ಪೂರ್ತಿಗೊಳಿಸಲು ಕೋರಿದೆ: ರೇಣುಕಾಚಾರ್ಯ
ವಿದ್ಯಾರ್ಥಿಗಳ ಕಳಪೆ ಪ್ರದರ್ಶನ, ತಮಗೆ ತಾವೇ ಶಿಕ್ಷೆ ಕೊಟ್ಟುಕೊಂಡ ಶಿಕ್ಷಕರು
ವಿದ್ಯಾರ್ಥಿಗಳ ಕಳಪೆ ಪ್ರದರ್ಶನ, ತಮಗೆ ತಾವೇ ಶಿಕ್ಷೆ ಕೊಟ್ಟುಕೊಂಡ ಶಿಕ್ಷಕರು
ಪ್ರಶ್ನೆಗೆ ಉತ್ತರ ಸಿಗದಿದ್ದರೆ ಆಯಾ ಇಲಾಖೆ ಅಧಿಕಾರಿಗಳು ಜವಾಬ್ದಾರರು:ಖಾದರ್
ಪ್ರಶ್ನೆಗೆ ಉತ್ತರ ಸಿಗದಿದ್ದರೆ ಆಯಾ ಇಲಾಖೆ ಅಧಿಕಾರಿಗಳು ಜವಾಬ್ದಾರರು:ಖಾದರ್
ಸದನದಲ್ಲಿ ವಿಶ್ವನಾಥ್ ಎತ್ತಿದ ಆಕ್ಷೇಪಣೆಗೆ ಉತ್ತರ ನೀಡಿದ ಸುರೇಶ್
ಸದನದಲ್ಲಿ ವಿಶ್ವನಾಥ್ ಎತ್ತಿದ ಆಕ್ಷೇಪಣೆಗೆ ಉತ್ತರ ನೀಡಿದ ಸುರೇಶ್
ಕಾರಿಗೆ ಸಿಲುಕಿ ಮಹಿಳೆ ಮೃತಪಟ್ಟರೂ ಪಶ್ಚಾತಾಪವಿಲ್ಲದೆ ದರ್ಪ ತೋರಿದ ಯುವಕ
ಕಾರಿಗೆ ಸಿಲುಕಿ ಮಹಿಳೆ ಮೃತಪಟ್ಟರೂ ಪಶ್ಚಾತಾಪವಿಲ್ಲದೆ ದರ್ಪ ತೋರಿದ ಯುವಕ