AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೊಡ್ಮನೆ ಸ್ಪರ್ಧಿಗಳ ಹೋರಾಟ ವ್ಯರ್ಥ; ಕ್ಯಾಪ್ಟನ್ಸಿ ಟಾಸ್ಕ್ ರದ್ದು ಮಾಡಿದ ಬಿಗ್ ಬಾಸ್

‘ಒಮ್ಮತದ ನಿರ್ಧಾರ ಬಂದಿಲ್ಲ. ಹೀಗಾಗಿ, ನಿಮಗೆ ಆಯ್ಕೆ ನೀಡುತ್ತಿದ್ದೇವೆ’ ಎಂದು ಸ್ಪರ್ಧಿಗಳು ಬಿಗ್ ಬಾಸ್​ಗೆ ಹೇಳಿದರು. ಬಿಗ್ ಬಾಸ್ ಇದಕ್ಕೆ ಟ್ವಿಸ್ಟ್ ಕೊಟ್ಟರು.

ದೊಡ್ಮನೆ ಸ್ಪರ್ಧಿಗಳ ಹೋರಾಟ ವ್ಯರ್ಥ; ಕ್ಯಾಪ್ಟನ್ಸಿ ಟಾಸ್ಕ್ ರದ್ದು ಮಾಡಿದ ಬಿಗ್ ಬಾಸ್
ಕಿಚ್ಚ ಸುದೀಪ್
TV9 Web
| Edited By: |

Updated on:Nov 18, 2022 | 10:21 PM

Share

ಬಿಗ್ ಬಾಸ್​ನಲ್ಲಿ (Bigg Boss) ಪ್ರತಿ ವಾರ ಕ್ಯಾಪ್ಟನ್ಸಿ ಟಾಸ್ಕ್ ಇರುತ್ತದೆ. ಈ ಟಾಸ್ಕ್​ಗೆ ಸ್ಪರ್ಧಿಗಳ​ ಆಯ್ಕೆ ಮಾಡಲು ಮನೆ ಮಂದಿಗೆ ನಾನಾ ಟಾಸ್ಕ್​ ನೀಡಲಾಗುತ್ತದೆ. ಕ್ಯಾಪ್ಟನ್ ಆದ್ರೆ ಸ್ಪರ್ಧಿಗಳಿಗೆ ಇಮ್ಯೂನಿಟಿ ಸಿಗುತ್ತದೆ. ಈ ಮೂಲಕ ಸ್ಪರ್ಧಿಗಳು ಎಲಿಮಿನೇಷನ್​ಗೆ ನಾಮಿನೇಟ್ ಆಗದೆ ಒಂದು ವಾರ ಉಳಿದುಕೊಳ್ಳಬಹುದು. ಆದರೆ, ಈ ವಾರ ಬಿಗ್ ಬಾಸ್​ನಲ್ಲಿ ಕ್ಯಾಪ್ಟನ್ಸಿ ಟಾಸ್ಕ್​ ಕ್ಯಾನ್ಸಲ್ ಆಗಿದೆ! ಬಿಗ್ ಬಾಸ್ ಮನೆಯಲ್ಲಿ ಈ ರೀತಿಯ ಅಪರೂಪದ ನಿರ್ಧಾರ ಹೊರ ಬಿದ್ದಿದೆ.

ಈ ಬಾರಿ ಎರಡು ಟೀಂ ಮಾಡಿ ಟಾಸ್ಕ್ ಆಡಿಸಲಾಗಿತ್ತು. ಈ ಆಟದ ವೇಳೆ ಸಾಕಷ್ಟು ಕಿತ್ತಾಟ ಆಗಿದೆ. ಕೆಲವರು ಮೈಕೈಗೆ ಗಾಯ ಮಾಡಿಕೊಂಡಿದ್ದಾರೆ. ಅರುಣ್ ಸಾಗರ್ ಅವರ ಬೆರಳು ಮುರಿದಿದೆ. ಅನೇಕ ಬಾರಿ ರೂಲ್ಸ್ ಬ್ರೇಕ್ ಆಗಿದೆ. ಈ ಕಾರಣಕ್ಕೆ ಆಟವನ್ನು ಅರ್ಧಕ್ಕೆ ನಿಲ್ಲಿಸಲಾಯಿತು. ಈ ಸಂದರ್ಭದಲ್ಲಿ ಎರಡೂ ಟೀಂಗಳು ಸಮಬಲ ಸಾಧಿಸಿದ್ದವು. ಹೀಗಾಗಿ, ಕ್ಯಾಪ್ಟನ್ಸಿ ಟಾಸ್ಕ್​ಗೆ ಯಾವ ತಂಡಗಳೂ ಆಯ್ಕೆ ಆಗಿರಲಿಲ್ಲ. ಈ ಕಾರಣಕ್ಕೆ ಬಿಗ್ ಬಾಸ್ ಹೊಸ ಘೋಷಣೆ ಮಾಡಿದರು.

‘ಎರಡೂ ತಂಡಗಳು ಸಮಬಲ ಸಾಧಿಸಿವೆ. ಹೀಗಾಗಿ ಪ್ರತಿ ತಂಡದಿಂದ ಒಬ್ಬರನ್ನು ಕ್ಯಾಪ್ಟನ್ಸಿ ಟಾಸ್ಕ್​ಗೆ ಆಯ್ಕೆ ಮಾಡಿ’ ಎಂದು ಬಿಗ್ ಬಾಸ್​ ಸೂಚಿಸಿದರು. ಆದರೆ, ಒಮ್ಮತದ ನಿರ್ಧಾರ ಬರಲೇ ಇಲ್ಲ. ಈ ಕಾರಣಕ್ಕೆ ಬಿಗ್ ಬಾಸ್ ಎದುರು ಸ್ಪರ್ಧಿಗಳು ಬೇಡಿಕೆ ಇಟ್ಟರು. ‘ಒಮ್ಮತದ ನಿರ್ಧಾರ ಬಂದಿಲ್ಲ. ಹೀಗಾಗಿ, ನಿಮಗೆ ಆಯ್ಕೆ ನೀಡುತ್ತಿದ್ದೇವೆ’ ಎಂದು ಸ್ಪರ್ಧಿಗಳು ಬಿಗ್ ಬಾಸ್​ಗೆ ಹೇಳಿದರು.

ಬಿಗ್ ಬಾಸ್ ಯಾರಿಗಾದರೂ ಅವಕಾಶ ನೀಡಬಹುದು ಎಂದು ಸ್ಪರ್ಧಿಗಳು ಭಾವಿಸಿದ್ದರು. ಆದರೆ, ಅದು ಉಲ್ಟಾ ಹೊಡೆದಿತ್ತು. ‘ಒಮ್ಮತದ ನಿರ್ಧಾರ ಬರದ ಕಾರಣ ಈ ವಾರ ಯಾವುದೇ ಕ್ಯಾಪ್ಟನ್ಸಿ ಟಾಸ್ಕ್ ಇರುವುದಿಲ್ಲ. ಹೀಗಾಗಿ ಮುಂದಿನ ವಾರಕ್ಕೆ ಯಾರೂ ಕ್ಯಾಪ್ಟನ್ ಇರುವುದಿಲ್ಲ. ಯಾರಿಗೂ ಇಮ್ಯೂನಿಟಿ ಇರುವುದಿಲ್ಲ’ ಎಂದರು ಬಿಗ್ ಬಾಸ್.

ಇದನ್ನೂ ಓದಿ: ಬಿಗ್ ಬಾಸ್ ಮನೆಯಲ್ಲಿ ಮತ್ತೆ ಬಕ್ರಾ ಆದ ರೂಪೇಶ್ ರಾಜಣ್ಣ; ಅವರ ಪಾಡು ಯಾರಿಗೂ ಬೇಡ

ಇದರಿಂದ ಮನೆಯವರಿಗೆ ಅನೇಕರಿಗೆ ಖುಷಿ ಆಗಿದೆ. ‘ಇನ್ನು ಮುಂದೆ ಒಂದು ವಾರಗಳ ಕಾಲ ನಾವೆಲ್ಲರೂ ಸಮಾನರು. ಇದು ಖುಷಿಯ ವಿಚಾರ’ ಎಂದರು ಅರುಣ್ ಸಾಗರ್.

Published On - 9:56 pm, Fri, 18 November 22

Follow Us
Web contact
Web contact

TV9 Kannada

Read More
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು