AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೊಡ್ಮನೆ ಸ್ಪರ್ಧಿಗಳ ಹೋರಾಟ ವ್ಯರ್ಥ; ಕ್ಯಾಪ್ಟನ್ಸಿ ಟಾಸ್ಕ್ ರದ್ದು ಮಾಡಿದ ಬಿಗ್ ಬಾಸ್

‘ಒಮ್ಮತದ ನಿರ್ಧಾರ ಬಂದಿಲ್ಲ. ಹೀಗಾಗಿ, ನಿಮಗೆ ಆಯ್ಕೆ ನೀಡುತ್ತಿದ್ದೇವೆ’ ಎಂದು ಸ್ಪರ್ಧಿಗಳು ಬಿಗ್ ಬಾಸ್​ಗೆ ಹೇಳಿದರು. ಬಿಗ್ ಬಾಸ್ ಇದಕ್ಕೆ ಟ್ವಿಸ್ಟ್ ಕೊಟ್ಟರು.

ದೊಡ್ಮನೆ ಸ್ಪರ್ಧಿಗಳ ಹೋರಾಟ ವ್ಯರ್ಥ; ಕ್ಯಾಪ್ಟನ್ಸಿ ಟಾಸ್ಕ್ ರದ್ದು ಮಾಡಿದ ಬಿಗ್ ಬಾಸ್
ಕಿಚ್ಚ ಸುದೀಪ್
TV9 Web
| Edited By: |

Updated on:Nov 18, 2022 | 10:21 PM

Share

ಬಿಗ್ ಬಾಸ್​ನಲ್ಲಿ (Bigg Boss) ಪ್ರತಿ ವಾರ ಕ್ಯಾಪ್ಟನ್ಸಿ ಟಾಸ್ಕ್ ಇರುತ್ತದೆ. ಈ ಟಾಸ್ಕ್​ಗೆ ಸ್ಪರ್ಧಿಗಳ​ ಆಯ್ಕೆ ಮಾಡಲು ಮನೆ ಮಂದಿಗೆ ನಾನಾ ಟಾಸ್ಕ್​ ನೀಡಲಾಗುತ್ತದೆ. ಕ್ಯಾಪ್ಟನ್ ಆದ್ರೆ ಸ್ಪರ್ಧಿಗಳಿಗೆ ಇಮ್ಯೂನಿಟಿ ಸಿಗುತ್ತದೆ. ಈ ಮೂಲಕ ಸ್ಪರ್ಧಿಗಳು ಎಲಿಮಿನೇಷನ್​ಗೆ ನಾಮಿನೇಟ್ ಆಗದೆ ಒಂದು ವಾರ ಉಳಿದುಕೊಳ್ಳಬಹುದು. ಆದರೆ, ಈ ವಾರ ಬಿಗ್ ಬಾಸ್​ನಲ್ಲಿ ಕ್ಯಾಪ್ಟನ್ಸಿ ಟಾಸ್ಕ್​ ಕ್ಯಾನ್ಸಲ್ ಆಗಿದೆ! ಬಿಗ್ ಬಾಸ್ ಮನೆಯಲ್ಲಿ ಈ ರೀತಿಯ ಅಪರೂಪದ ನಿರ್ಧಾರ ಹೊರ ಬಿದ್ದಿದೆ.

ಈ ಬಾರಿ ಎರಡು ಟೀಂ ಮಾಡಿ ಟಾಸ್ಕ್ ಆಡಿಸಲಾಗಿತ್ತು. ಈ ಆಟದ ವೇಳೆ ಸಾಕಷ್ಟು ಕಿತ್ತಾಟ ಆಗಿದೆ. ಕೆಲವರು ಮೈಕೈಗೆ ಗಾಯ ಮಾಡಿಕೊಂಡಿದ್ದಾರೆ. ಅರುಣ್ ಸಾಗರ್ ಅವರ ಬೆರಳು ಮುರಿದಿದೆ. ಅನೇಕ ಬಾರಿ ರೂಲ್ಸ್ ಬ್ರೇಕ್ ಆಗಿದೆ. ಈ ಕಾರಣಕ್ಕೆ ಆಟವನ್ನು ಅರ್ಧಕ್ಕೆ ನಿಲ್ಲಿಸಲಾಯಿತು. ಈ ಸಂದರ್ಭದಲ್ಲಿ ಎರಡೂ ಟೀಂಗಳು ಸಮಬಲ ಸಾಧಿಸಿದ್ದವು. ಹೀಗಾಗಿ, ಕ್ಯಾಪ್ಟನ್ಸಿ ಟಾಸ್ಕ್​ಗೆ ಯಾವ ತಂಡಗಳೂ ಆಯ್ಕೆ ಆಗಿರಲಿಲ್ಲ. ಈ ಕಾರಣಕ್ಕೆ ಬಿಗ್ ಬಾಸ್ ಹೊಸ ಘೋಷಣೆ ಮಾಡಿದರು.

‘ಎರಡೂ ತಂಡಗಳು ಸಮಬಲ ಸಾಧಿಸಿವೆ. ಹೀಗಾಗಿ ಪ್ರತಿ ತಂಡದಿಂದ ಒಬ್ಬರನ್ನು ಕ್ಯಾಪ್ಟನ್ಸಿ ಟಾಸ್ಕ್​ಗೆ ಆಯ್ಕೆ ಮಾಡಿ’ ಎಂದು ಬಿಗ್ ಬಾಸ್​ ಸೂಚಿಸಿದರು. ಆದರೆ, ಒಮ್ಮತದ ನಿರ್ಧಾರ ಬರಲೇ ಇಲ್ಲ. ಈ ಕಾರಣಕ್ಕೆ ಬಿಗ್ ಬಾಸ್ ಎದುರು ಸ್ಪರ್ಧಿಗಳು ಬೇಡಿಕೆ ಇಟ್ಟರು. ‘ಒಮ್ಮತದ ನಿರ್ಧಾರ ಬಂದಿಲ್ಲ. ಹೀಗಾಗಿ, ನಿಮಗೆ ಆಯ್ಕೆ ನೀಡುತ್ತಿದ್ದೇವೆ’ ಎಂದು ಸ್ಪರ್ಧಿಗಳು ಬಿಗ್ ಬಾಸ್​ಗೆ ಹೇಳಿದರು.

ಬಿಗ್ ಬಾಸ್ ಯಾರಿಗಾದರೂ ಅವಕಾಶ ನೀಡಬಹುದು ಎಂದು ಸ್ಪರ್ಧಿಗಳು ಭಾವಿಸಿದ್ದರು. ಆದರೆ, ಅದು ಉಲ್ಟಾ ಹೊಡೆದಿತ್ತು. ‘ಒಮ್ಮತದ ನಿರ್ಧಾರ ಬರದ ಕಾರಣ ಈ ವಾರ ಯಾವುದೇ ಕ್ಯಾಪ್ಟನ್ಸಿ ಟಾಸ್ಕ್ ಇರುವುದಿಲ್ಲ. ಹೀಗಾಗಿ ಮುಂದಿನ ವಾರಕ್ಕೆ ಯಾರೂ ಕ್ಯಾಪ್ಟನ್ ಇರುವುದಿಲ್ಲ. ಯಾರಿಗೂ ಇಮ್ಯೂನಿಟಿ ಇರುವುದಿಲ್ಲ’ ಎಂದರು ಬಿಗ್ ಬಾಸ್.

ಇದನ್ನೂ ಓದಿ: ಬಿಗ್ ಬಾಸ್ ಮನೆಯಲ್ಲಿ ಮತ್ತೆ ಬಕ್ರಾ ಆದ ರೂಪೇಶ್ ರಾಜಣ್ಣ; ಅವರ ಪಾಡು ಯಾರಿಗೂ ಬೇಡ

ಇದರಿಂದ ಮನೆಯವರಿಗೆ ಅನೇಕರಿಗೆ ಖುಷಿ ಆಗಿದೆ. ‘ಇನ್ನು ಮುಂದೆ ಒಂದು ವಾರಗಳ ಕಾಲ ನಾವೆಲ್ಲರೂ ಸಮಾನರು. ಇದು ಖುಷಿಯ ವಿಚಾರ’ ಎಂದರು ಅರುಣ್ ಸಾಗರ್.

Published On - 9:56 pm, Fri, 18 November 22

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್