AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೊಡ್ಮನೆ ಸ್ಪರ್ಧಿಗಳ ಹೋರಾಟ ವ್ಯರ್ಥ; ಕ್ಯಾಪ್ಟನ್ಸಿ ಟಾಸ್ಕ್ ರದ್ದು ಮಾಡಿದ ಬಿಗ್ ಬಾಸ್

‘ಒಮ್ಮತದ ನಿರ್ಧಾರ ಬಂದಿಲ್ಲ. ಹೀಗಾಗಿ, ನಿಮಗೆ ಆಯ್ಕೆ ನೀಡುತ್ತಿದ್ದೇವೆ’ ಎಂದು ಸ್ಪರ್ಧಿಗಳು ಬಿಗ್ ಬಾಸ್​ಗೆ ಹೇಳಿದರು. ಬಿಗ್ ಬಾಸ್ ಇದಕ್ಕೆ ಟ್ವಿಸ್ಟ್ ಕೊಟ್ಟರು.

ದೊಡ್ಮನೆ ಸ್ಪರ್ಧಿಗಳ ಹೋರಾಟ ವ್ಯರ್ಥ; ಕ್ಯಾಪ್ಟನ್ಸಿ ಟಾಸ್ಕ್ ರದ್ದು ಮಾಡಿದ ಬಿಗ್ ಬಾಸ್
ಕಿಚ್ಚ ಸುದೀಪ್
TV9 Web
| Edited By: |

Updated on:Nov 18, 2022 | 10:21 PM

Share

ಬಿಗ್ ಬಾಸ್​ನಲ್ಲಿ (Bigg Boss) ಪ್ರತಿ ವಾರ ಕ್ಯಾಪ್ಟನ್ಸಿ ಟಾಸ್ಕ್ ಇರುತ್ತದೆ. ಈ ಟಾಸ್ಕ್​ಗೆ ಸ್ಪರ್ಧಿಗಳ​ ಆಯ್ಕೆ ಮಾಡಲು ಮನೆ ಮಂದಿಗೆ ನಾನಾ ಟಾಸ್ಕ್​ ನೀಡಲಾಗುತ್ತದೆ. ಕ್ಯಾಪ್ಟನ್ ಆದ್ರೆ ಸ್ಪರ್ಧಿಗಳಿಗೆ ಇಮ್ಯೂನಿಟಿ ಸಿಗುತ್ತದೆ. ಈ ಮೂಲಕ ಸ್ಪರ್ಧಿಗಳು ಎಲಿಮಿನೇಷನ್​ಗೆ ನಾಮಿನೇಟ್ ಆಗದೆ ಒಂದು ವಾರ ಉಳಿದುಕೊಳ್ಳಬಹುದು. ಆದರೆ, ಈ ವಾರ ಬಿಗ್ ಬಾಸ್​ನಲ್ಲಿ ಕ್ಯಾಪ್ಟನ್ಸಿ ಟಾಸ್ಕ್​ ಕ್ಯಾನ್ಸಲ್ ಆಗಿದೆ! ಬಿಗ್ ಬಾಸ್ ಮನೆಯಲ್ಲಿ ಈ ರೀತಿಯ ಅಪರೂಪದ ನಿರ್ಧಾರ ಹೊರ ಬಿದ್ದಿದೆ.

ಈ ಬಾರಿ ಎರಡು ಟೀಂ ಮಾಡಿ ಟಾಸ್ಕ್ ಆಡಿಸಲಾಗಿತ್ತು. ಈ ಆಟದ ವೇಳೆ ಸಾಕಷ್ಟು ಕಿತ್ತಾಟ ಆಗಿದೆ. ಕೆಲವರು ಮೈಕೈಗೆ ಗಾಯ ಮಾಡಿಕೊಂಡಿದ್ದಾರೆ. ಅರುಣ್ ಸಾಗರ್ ಅವರ ಬೆರಳು ಮುರಿದಿದೆ. ಅನೇಕ ಬಾರಿ ರೂಲ್ಸ್ ಬ್ರೇಕ್ ಆಗಿದೆ. ಈ ಕಾರಣಕ್ಕೆ ಆಟವನ್ನು ಅರ್ಧಕ್ಕೆ ನಿಲ್ಲಿಸಲಾಯಿತು. ಈ ಸಂದರ್ಭದಲ್ಲಿ ಎರಡೂ ಟೀಂಗಳು ಸಮಬಲ ಸಾಧಿಸಿದ್ದವು. ಹೀಗಾಗಿ, ಕ್ಯಾಪ್ಟನ್ಸಿ ಟಾಸ್ಕ್​ಗೆ ಯಾವ ತಂಡಗಳೂ ಆಯ್ಕೆ ಆಗಿರಲಿಲ್ಲ. ಈ ಕಾರಣಕ್ಕೆ ಬಿಗ್ ಬಾಸ್ ಹೊಸ ಘೋಷಣೆ ಮಾಡಿದರು.

‘ಎರಡೂ ತಂಡಗಳು ಸಮಬಲ ಸಾಧಿಸಿವೆ. ಹೀಗಾಗಿ ಪ್ರತಿ ತಂಡದಿಂದ ಒಬ್ಬರನ್ನು ಕ್ಯಾಪ್ಟನ್ಸಿ ಟಾಸ್ಕ್​ಗೆ ಆಯ್ಕೆ ಮಾಡಿ’ ಎಂದು ಬಿಗ್ ಬಾಸ್​ ಸೂಚಿಸಿದರು. ಆದರೆ, ಒಮ್ಮತದ ನಿರ್ಧಾರ ಬರಲೇ ಇಲ್ಲ. ಈ ಕಾರಣಕ್ಕೆ ಬಿಗ್ ಬಾಸ್ ಎದುರು ಸ್ಪರ್ಧಿಗಳು ಬೇಡಿಕೆ ಇಟ್ಟರು. ‘ಒಮ್ಮತದ ನಿರ್ಧಾರ ಬಂದಿಲ್ಲ. ಹೀಗಾಗಿ, ನಿಮಗೆ ಆಯ್ಕೆ ನೀಡುತ್ತಿದ್ದೇವೆ’ ಎಂದು ಸ್ಪರ್ಧಿಗಳು ಬಿಗ್ ಬಾಸ್​ಗೆ ಹೇಳಿದರು.

ಬಿಗ್ ಬಾಸ್ ಯಾರಿಗಾದರೂ ಅವಕಾಶ ನೀಡಬಹುದು ಎಂದು ಸ್ಪರ್ಧಿಗಳು ಭಾವಿಸಿದ್ದರು. ಆದರೆ, ಅದು ಉಲ್ಟಾ ಹೊಡೆದಿತ್ತು. ‘ಒಮ್ಮತದ ನಿರ್ಧಾರ ಬರದ ಕಾರಣ ಈ ವಾರ ಯಾವುದೇ ಕ್ಯಾಪ್ಟನ್ಸಿ ಟಾಸ್ಕ್ ಇರುವುದಿಲ್ಲ. ಹೀಗಾಗಿ ಮುಂದಿನ ವಾರಕ್ಕೆ ಯಾರೂ ಕ್ಯಾಪ್ಟನ್ ಇರುವುದಿಲ್ಲ. ಯಾರಿಗೂ ಇಮ್ಯೂನಿಟಿ ಇರುವುದಿಲ್ಲ’ ಎಂದರು ಬಿಗ್ ಬಾಸ್.

ಇದನ್ನೂ ಓದಿ: ಬಿಗ್ ಬಾಸ್ ಮನೆಯಲ್ಲಿ ಮತ್ತೆ ಬಕ್ರಾ ಆದ ರೂಪೇಶ್ ರಾಜಣ್ಣ; ಅವರ ಪಾಡು ಯಾರಿಗೂ ಬೇಡ

ಇದರಿಂದ ಮನೆಯವರಿಗೆ ಅನೇಕರಿಗೆ ಖುಷಿ ಆಗಿದೆ. ‘ಇನ್ನು ಮುಂದೆ ಒಂದು ವಾರಗಳ ಕಾಲ ನಾವೆಲ್ಲರೂ ಸಮಾನರು. ಇದು ಖುಷಿಯ ವಿಚಾರ’ ಎಂದರು ಅರುಣ್ ಸಾಗರ್.

Published On - 9:56 pm, Fri, 18 November 22

Follow Us
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು
ರಾಯಚೂರಲ್ಲಿ ಪೊಲೀಸ್ ಶ್ವಾನಗಳಿಗೆ ಫ್ಯಾನ್, ಏರ್ ಕೂಲರ್​ ವ್ಯವಸ್ಥೆ
ರಾಯಚೂರಲ್ಲಿ ಪೊಲೀಸ್ ಶ್ವಾನಗಳಿಗೆ ಫ್ಯಾನ್, ಏರ್ ಕೂಲರ್​ ವ್ಯವಸ್ಥೆ
ಅನ್ನಭಾಗ್ಯ ಅಕ್ಕಿಯ ಅಕ್ರಮ ದಾಸ್ತಾನು: ದಂಧೆಕೋರರಿಗೆ ಬಿಗ್​​ ಶಾಕ್​​
ಅನ್ನಭಾಗ್ಯ ಅಕ್ಕಿಯ ಅಕ್ರಮ ದಾಸ್ತಾನು: ದಂಧೆಕೋರರಿಗೆ ಬಿಗ್​​ ಶಾಕ್​​
ರೈಲಿನ ಮೇಲೆ ಸಾಹಸ ಮಾಡಲು ಹೋಗಿ ಯುವಕ ಸಾವು
ರೈಲಿನ ಮೇಲೆ ಸಾಹಸ ಮಾಡಲು ಹೋಗಿ ಯುವಕ ಸಾವು
ಉತ್ತರ ಪ್ರದೇಶದ ಮುಖ್ಯಮಂತ್ರಿಗೆ ಫೋಟೋ ಟಿಪ್ಸ್ ನೀಡಿದ ರವಿ ಕಿಶನ್
ಉತ್ತರ ಪ್ರದೇಶದ ಮುಖ್ಯಮಂತ್ರಿಗೆ ಫೋಟೋ ಟಿಪ್ಸ್ ನೀಡಿದ ರವಿ ಕಿಶನ್
KSRTC ಬಸ್​ ಅಡ್ಡಗಟ್ಟಿ ಕುಡುಕರ ಕಿರಿಕ್​​: ಸೆಲ್ಫಿ ತೆಗೆದು ಹುಚ್ಚಾಟ
KSRTC ಬಸ್​ ಅಡ್ಡಗಟ್ಟಿ ಕುಡುಕರ ಕಿರಿಕ್​​: ಸೆಲ್ಫಿ ತೆಗೆದು ಹುಚ್ಚಾಟ
ಮಗುವನ್ನು ಸಾಕ್ಷಾತ್ ದೇವರಂತೆ ಬಂದು ರಕ್ಷಿಸಿದ ಪೊಲೀಸರು!
ಮಗುವನ್ನು ಸಾಕ್ಷಾತ್ ದೇವರಂತೆ ಬಂದು ರಕ್ಷಿಸಿದ ಪೊಲೀಸರು!
ಲಕ್ಷ್ಮೀಪುರ ಬಿಡಿಎ ಲೇಔಟಲ್ಲಿ ಚೀಲದಲ್ಲಿ ಅಪರಿಚಿತ ಶವ ಪತ್ತೆ, ಬೆಚ್ಚಿದ ಜನ
ಲಕ್ಷ್ಮೀಪುರ ಬಿಡಿಎ ಲೇಔಟಲ್ಲಿ ಚೀಲದಲ್ಲಿ ಅಪರಿಚಿತ ಶವ ಪತ್ತೆ, ಬೆಚ್ಚಿದ ಜನ
ಸಿಇಟಿ ಬರೆಯಲು ಬಂದ ವಿದ್ಯಾರ್ಥಿಯ ಜನಿವಾರ ತೆಗೆಸಿದ್ರಾ ಸಿಬ್ಬಂದಿ?
ಸಿಇಟಿ ಬರೆಯಲು ಬಂದ ವಿದ್ಯಾರ್ಥಿಯ ಜನಿವಾರ ತೆಗೆಸಿದ್ರಾ ಸಿಬ್ಬಂದಿ?
ನಾವೇನು ಪಾಕಿಸ್ತಾನದಲ್ಲಿ ಇದ್ದೇವಾ? ಜನಿವಾರ ತೆಗೆಸಿದ್ದಕ್ಕೆ ವ್ಯಾಪಕ ಆಕ್ರೋಶ
ನಾವೇನು ಪಾಕಿಸ್ತಾನದಲ್ಲಿ ಇದ್ದೇವಾ? ಜನಿವಾರ ತೆಗೆಸಿದ್ದಕ್ಕೆ ವ್ಯಾಪಕ ಆಕ್ರೋಶ