AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

BBK9: ಬಿಗ್​ ಬಾಸ್​ ಮನೆಯಲ್ಲಿ ಆರ್ಯವರ್ಧನ್​ ಗುರೂಜಿ ಡಬಲ್​ ಗೇಮ್​; ಸ್ಪರ್ಧಿಗಳ ನೇರ ಆರೋಪ

Bigg Boss Kannada | Aryavardhan Guruji: ದೊಡ್ಮನೆಯ ಬಹುತೇಕ ಸದಸ್ಯರು ಆರ್ಯವರ್ಧನ್​ ಗುರೂಜಿ ಕಡೆಗೆ ಕೈ ತೋರಿಸಿ ಡಬಲ್​ ಗೇಮ್​ ಎಂದಿದ್ದಾರೆ. ಇಂಥ ಆರೋಪ ಎದುರಾಗಿರುವುದಕ್ಕೆ ಗುರೂಜಿಗೆ ಅಚ್ಚರಿ ಆಗಿದೆ.

BBK9: ಬಿಗ್​ ಬಾಸ್​ ಮನೆಯಲ್ಲಿ ಆರ್ಯವರ್ಧನ್​ ಗುರೂಜಿ ಡಬಲ್​ ಗೇಮ್​; ಸ್ಪರ್ಧಿಗಳ ನೇರ ಆರೋಪ
ಆರ್ಯವರ್ಧನ್ ಗುರೂಜಿ
TV9 Web
| Edited By: |

Updated on:Nov 27, 2022 | 6:05 PM

Share

ಬಿಗ್ ಬಾಸ್​ ಶೋನಲ್ಲಿ ಸ್ಪರ್ಧಿಗಳು ಸಂದರ್ಭಕ್ಕೆ ತಕ್ಕಂತೆ ಬದಲಾಗುತ್ತಾರೆ. ಕೆಲವೊಮ್ಮೆ ಇಲ್ಲಿ ಅಭಿಪ್ರಾಯಗಳನ್ನು ನೇರವಾಗಿ ಹೇಳಬೇಕಾಗುತ್ತದೆ. ಈ ಹಿಂದಿನ ಸಂಚಿಕೆಗಳಲ್ಲಿ ಕಿಚ್ಚ ಸುದೀಪ್​ (Kichcha Sudeep) ಅವರು ‘ಯೆಸ್​ ಅಥವಾ ನೋ’ ಸುತ್ತಿನಲ್ಲಿ ಅನೇಕ ಪ್ರಶ್ನೆಗಳನ್ನು ಕೇಳಿದ್ದರು. ಅದಕ್ಕೆ ಸ್ಪರ್ಧಿಗಳು ನೇರವಾಗಿ ಉತ್ತರ ನೀಡಿದ್ದರು. ಈಗ ಅದಕ್ಕಿಂತಲೂ ನಿಷ್ಠುರವಾಗಿ ಒಂದು ಪ್ರಶ್ನೆ ಕೇಳಲಾಗಿದೆ. ‘ಬಿಗ್​ ಬಾಸ್​ ಕನ್ನಡ ಸೀಸನ್​ 9’ (Bigg Boss Kannada Season 9) ಶೋನಲ್ಲಿ ಗೇಮ್​ ಆಡೋರು ಯಾರು? ಡಬಲ್​ ಗೇಮ್​ ಆಡೋರು ಯಾರು ಎಂದು ಸುದೀಪ್​ ಕೇಳಿದ್ದಾರೆ. ಅದಕ್ಕೆ ದೊಡ್ಮನೆ ಸದಸ್ಯರು ವಿವಿಧ ಉತ್ತರ ನೀಡಿದ್ದಾರೆ. ಡಬಲ್​ ಗೇಮ್​ ವಿಚಾರದಲ್ಲಿ ಆರ್ಯವರ್ಧನ್​ ಗುರೂಜಿ (Aryavardhan Guruji) ಅವರಿಗೆ ಹೆಚ್ಚು ವೋಟ್​ ಬಂದಿದೆ. ಆ ಮೂಲಕ ಅವರೇ ಅತಿ ಹೆಚ್ಚು ಡಬಲ್​ ಗೇಮ್​ ಆಡ್ತಾರೆ ಎಂದು ಸ್ಪರ್ಧಿಗಳು ಅಭಿಪ್ರಾಯಪಟ್ಟಿದ್ದಾರೆ.

ಬಿಗ್​ ಬಾಸ್​ ಶೋಗೆ ಬರುವುದಕ್ಕೂ ಮುನ್ನ ಆರ್ಯವರ್ಧನ್​ ಗುರೂಜಿ ಅವರು ಸಂಖ್ಯಾಶಾಸ್ತ್ರ ಹೇಳುವ ಮೂಲಕ ಖ್ಯಾತಿ ಗಳಿಸಿದ್ದರು. ‘ಬಿಗ್​ ಬಾಸ್​ ಒಟಿಟಿ’ಯಲ್ಲಿ ಅವರು ಯಶಸ್ವಿಯಾಗಿ ಪಯಣ ಪೂರ್ಣಗೊಳಿಸಿ ಟಿವಿ ಸೀಸನ್​ಗೆ ಕಾಲಿಟ್ಟರು. ಅವರ ವ್ಯಕ್ತಿತ್ವವನ್ನು ಅರ್ಥ ಮಾಡಿಕೊಳ್ಳಲು ಪ್ರೇಕ್ಷಕರಿಗೆ ಮಾತ್ರವಲ್ಲದೇ ಸ್ಪರ್ಧಿಗಳಿಗೂ ಕಷ್ಟ ಆಗಿದೆ. ಕೆಲವೊಮ್ಮೆ ಮುಗ್ಧರಂತೆ ಕಾಣುವ ಗುರೂಜಿ, ಇನ್ನೂ ಕೆಲವೊಮ್ಮೆ ವೈಲೆಂಟ್​ ಆಗಿ ಬಿಡುತ್ತಾರೆ.

‘ಡಬಲ್​ ಗೇಮ್​ ಯಾರದ್ದು’ ಎಂಬ ಪ್ರಶ್ನೆಗೆ ಮನೆಯಲ್ಲಿನ 12 ಸ್ಪರ್ಧಿಗಳ ಪೈಕಿ ಒಟ್ಟು 7 ಜನರು ಆರ್ಯವರ್ಧನ್​ ಗುರೂಜಿ ಹೆಸರನ್ನು ಉತ್ತರವಾಗಿ ಹೇಳಿದ್ದಾರೆ. 3 ಮಂದಿ ಪ್ರಶಾಂತ್​ ಸಂಬರ್ಗಿ ಹೆಸರನ್ನು ಹೇಳಿದ್ದಾರೆ. ರೂಪೇಶ್​ ಶೆಟ್ಟಿ ಮತ್ತು ವಿನೋದ್​ ಗೊಬ್ಬರಗಾಲ ಅವರಿಗೆ ತಲಾ ಒಂದು ವೋಟ್​ ಬಿದ್ದಿದೆ.

ಇದನ್ನೂ ಓದಿ
Image
Bigg Boss Elimination: ಬಿಗ್​ ಬಾಸ್​ನಲ್ಲಿ ದರ್ಶ್​ ಆಟ ಅಂತ್ಯ; 3ನೇ ವಾರದ ಎಲಿಮಿನೇಷನ್​ನಲ್ಲಿ ಮಯೂರಿ ಸೇಫ್​
Image
BBK9: ಬಿಗ್​ ಬಾಸ್​ ಮೇಲೆ ಮ್ಯಾಚ್​ ಫಿಕ್ಸಿಂಗ್​ ಆರೋಪ; ಗುರೂಜಿ ವಿರುದ್ಧ ಗುಡುಗಿದ ಸುದೀಪ್​
Image
BBK9: ಬಿಗ್​ ಬಾಸ್​ 2ನೇ ವಾರ ನವಾಜ್​ ಎಲಿಮಿನೇಟ್​; ದೊಡ್ಮನೆಯಲ್ಲಿ ನಡೆಯಲಿಲ್ಲ ಪ್ರಾಸದ ಆಟ
Image
BBK9: ಬಿಗ್​ ಬಾಸ್​ನಿಂದ ಐಶ್ವರ್ಯಾ ಪಿಸ್ಸೆ ಎಲಿಮಿನೇಟ್​; ಒಂದೇ ವಾರಕ್ಕೆ ಮುಗಿಯಿತು ದೊಡ್ಮನೆ ಆಟ

ದೊಡ್ಮನೆಯ ಸದಸ್ಯರೆಲ್ಲೂ ತಮ್ಮ ಕಡೆಗೆ ಕೈ ತೋರಿಸಿ ಡಬಲ್​ ಗೇಮ್​ ಆರೋಪ ಮಾಡಿರುವುದು ಆರ್ಯವರ್ಧನ್​ ಗುರೂಜಿ ಅವರಿಗೆ ಅಚ್ಚರಿ ಮೂಡಿಸಿದೆ. ‘ನಾನು ಯಾರನ್ನೂ ಮೆಚ್ಚಿಸುವ ಕೆಲಸ ಮಾಡಿಲ್ಲ. ಡಬಲ್​ ಗೇಮ್​ ರೀತಿ ನಡೆದುಕೊಂಡಿಲ್ಲ. ಇವರೆಲ್ಲರ ಕಣ್ಣಿಗೆ ಏನು ಕಂಡಿದೆಯೋ ನನಗೆ ಗೊತ್ತಿಲ್ಲ’ ಎಂದು ಅವರು ಕಿಚ್ಚ ಸುದೀಪ್​ ಎದುರಲ್ಲಿ ವಾದ ಮುಂದಿಟ್ಟಿದ್ದಾರೆ.

‘ಸೂಪರ್​ ಸಂಡೇ ವಿತ್​ ಸುದೀಪ್​’ ಎಪಿಸೋಡ್​ನಲ್ಲಿ ಈ ವಿಚಾರ ಚರ್ಚೆ ಆಗಿದೆ. ಇದರ ಪ್ರೋಮೋವನ್ನು ಕಲರ್ಸ್​ ಕನ್ನಡ ವಾಹಿನಿ ತನ್ನ ಸೋಶಿಯಲ್​ ಮೀಡಿಯಾ ಖಾತೆಯಲ್ಲಿ ಹಂಚಿಕೊಂಡಿದೆ. ನ.27ರ ಸಂಜೆ ಈ ಸಂಚಿಕೆ ಪ್ರಸಾರ ಆಗಲಿದೆ. ಇನ್ನು, ‘ಗೇಮ್​ ಯಾರದ್ದು’ ಎಂಬ ಪ್ರಶ್ನೆಗೆ ವಿಶ್ರ ಪ್ರತಿಕ್ರಿಯೆ ಬಂದಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 6:05 pm, Sun, 27 November 22

Follow Us
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ