AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

BBK9: ಬಿಗ್​ ಬಾಸ್​ ಮನೆಯಲ್ಲಿ ಆರ್ಯವರ್ಧನ್​ ಗುರೂಜಿ ಡಬಲ್​ ಗೇಮ್​; ಸ್ಪರ್ಧಿಗಳ ನೇರ ಆರೋಪ

Bigg Boss Kannada | Aryavardhan Guruji: ದೊಡ್ಮನೆಯ ಬಹುತೇಕ ಸದಸ್ಯರು ಆರ್ಯವರ್ಧನ್​ ಗುರೂಜಿ ಕಡೆಗೆ ಕೈ ತೋರಿಸಿ ಡಬಲ್​ ಗೇಮ್​ ಎಂದಿದ್ದಾರೆ. ಇಂಥ ಆರೋಪ ಎದುರಾಗಿರುವುದಕ್ಕೆ ಗುರೂಜಿಗೆ ಅಚ್ಚರಿ ಆಗಿದೆ.

BBK9: ಬಿಗ್​ ಬಾಸ್​ ಮನೆಯಲ್ಲಿ ಆರ್ಯವರ್ಧನ್​ ಗುರೂಜಿ ಡಬಲ್​ ಗೇಮ್​; ಸ್ಪರ್ಧಿಗಳ ನೇರ ಆರೋಪ
ಆರ್ಯವರ್ಧನ್ ಗುರೂಜಿ
TV9 Web
| Edited By: |

Updated on:Nov 27, 2022 | 6:05 PM

Share

ಬಿಗ್ ಬಾಸ್​ ಶೋನಲ್ಲಿ ಸ್ಪರ್ಧಿಗಳು ಸಂದರ್ಭಕ್ಕೆ ತಕ್ಕಂತೆ ಬದಲಾಗುತ್ತಾರೆ. ಕೆಲವೊಮ್ಮೆ ಇಲ್ಲಿ ಅಭಿಪ್ರಾಯಗಳನ್ನು ನೇರವಾಗಿ ಹೇಳಬೇಕಾಗುತ್ತದೆ. ಈ ಹಿಂದಿನ ಸಂಚಿಕೆಗಳಲ್ಲಿ ಕಿಚ್ಚ ಸುದೀಪ್​ (Kichcha Sudeep) ಅವರು ‘ಯೆಸ್​ ಅಥವಾ ನೋ’ ಸುತ್ತಿನಲ್ಲಿ ಅನೇಕ ಪ್ರಶ್ನೆಗಳನ್ನು ಕೇಳಿದ್ದರು. ಅದಕ್ಕೆ ಸ್ಪರ್ಧಿಗಳು ನೇರವಾಗಿ ಉತ್ತರ ನೀಡಿದ್ದರು. ಈಗ ಅದಕ್ಕಿಂತಲೂ ನಿಷ್ಠುರವಾಗಿ ಒಂದು ಪ್ರಶ್ನೆ ಕೇಳಲಾಗಿದೆ. ‘ಬಿಗ್​ ಬಾಸ್​ ಕನ್ನಡ ಸೀಸನ್​ 9’ (Bigg Boss Kannada Season 9) ಶೋನಲ್ಲಿ ಗೇಮ್​ ಆಡೋರು ಯಾರು? ಡಬಲ್​ ಗೇಮ್​ ಆಡೋರು ಯಾರು ಎಂದು ಸುದೀಪ್​ ಕೇಳಿದ್ದಾರೆ. ಅದಕ್ಕೆ ದೊಡ್ಮನೆ ಸದಸ್ಯರು ವಿವಿಧ ಉತ್ತರ ನೀಡಿದ್ದಾರೆ. ಡಬಲ್​ ಗೇಮ್​ ವಿಚಾರದಲ್ಲಿ ಆರ್ಯವರ್ಧನ್​ ಗುರೂಜಿ (Aryavardhan Guruji) ಅವರಿಗೆ ಹೆಚ್ಚು ವೋಟ್​ ಬಂದಿದೆ. ಆ ಮೂಲಕ ಅವರೇ ಅತಿ ಹೆಚ್ಚು ಡಬಲ್​ ಗೇಮ್​ ಆಡ್ತಾರೆ ಎಂದು ಸ್ಪರ್ಧಿಗಳು ಅಭಿಪ್ರಾಯಪಟ್ಟಿದ್ದಾರೆ.

ಬಿಗ್​ ಬಾಸ್​ ಶೋಗೆ ಬರುವುದಕ್ಕೂ ಮುನ್ನ ಆರ್ಯವರ್ಧನ್​ ಗುರೂಜಿ ಅವರು ಸಂಖ್ಯಾಶಾಸ್ತ್ರ ಹೇಳುವ ಮೂಲಕ ಖ್ಯಾತಿ ಗಳಿಸಿದ್ದರು. ‘ಬಿಗ್​ ಬಾಸ್​ ಒಟಿಟಿ’ಯಲ್ಲಿ ಅವರು ಯಶಸ್ವಿಯಾಗಿ ಪಯಣ ಪೂರ್ಣಗೊಳಿಸಿ ಟಿವಿ ಸೀಸನ್​ಗೆ ಕಾಲಿಟ್ಟರು. ಅವರ ವ್ಯಕ್ತಿತ್ವವನ್ನು ಅರ್ಥ ಮಾಡಿಕೊಳ್ಳಲು ಪ್ರೇಕ್ಷಕರಿಗೆ ಮಾತ್ರವಲ್ಲದೇ ಸ್ಪರ್ಧಿಗಳಿಗೂ ಕಷ್ಟ ಆಗಿದೆ. ಕೆಲವೊಮ್ಮೆ ಮುಗ್ಧರಂತೆ ಕಾಣುವ ಗುರೂಜಿ, ಇನ್ನೂ ಕೆಲವೊಮ್ಮೆ ವೈಲೆಂಟ್​ ಆಗಿ ಬಿಡುತ್ತಾರೆ.

‘ಡಬಲ್​ ಗೇಮ್​ ಯಾರದ್ದು’ ಎಂಬ ಪ್ರಶ್ನೆಗೆ ಮನೆಯಲ್ಲಿನ 12 ಸ್ಪರ್ಧಿಗಳ ಪೈಕಿ ಒಟ್ಟು 7 ಜನರು ಆರ್ಯವರ್ಧನ್​ ಗುರೂಜಿ ಹೆಸರನ್ನು ಉತ್ತರವಾಗಿ ಹೇಳಿದ್ದಾರೆ. 3 ಮಂದಿ ಪ್ರಶಾಂತ್​ ಸಂಬರ್ಗಿ ಹೆಸರನ್ನು ಹೇಳಿದ್ದಾರೆ. ರೂಪೇಶ್​ ಶೆಟ್ಟಿ ಮತ್ತು ವಿನೋದ್​ ಗೊಬ್ಬರಗಾಲ ಅವರಿಗೆ ತಲಾ ಒಂದು ವೋಟ್​ ಬಿದ್ದಿದೆ.

ಇದನ್ನೂ ಓದಿ
Image
Bigg Boss Elimination: ಬಿಗ್​ ಬಾಸ್​ನಲ್ಲಿ ದರ್ಶ್​ ಆಟ ಅಂತ್ಯ; 3ನೇ ವಾರದ ಎಲಿಮಿನೇಷನ್​ನಲ್ಲಿ ಮಯೂರಿ ಸೇಫ್​
Image
BBK9: ಬಿಗ್​ ಬಾಸ್​ ಮೇಲೆ ಮ್ಯಾಚ್​ ಫಿಕ್ಸಿಂಗ್​ ಆರೋಪ; ಗುರೂಜಿ ವಿರುದ್ಧ ಗುಡುಗಿದ ಸುದೀಪ್​
Image
BBK9: ಬಿಗ್​ ಬಾಸ್​ 2ನೇ ವಾರ ನವಾಜ್​ ಎಲಿಮಿನೇಟ್​; ದೊಡ್ಮನೆಯಲ್ಲಿ ನಡೆಯಲಿಲ್ಲ ಪ್ರಾಸದ ಆಟ
Image
BBK9: ಬಿಗ್​ ಬಾಸ್​ನಿಂದ ಐಶ್ವರ್ಯಾ ಪಿಸ್ಸೆ ಎಲಿಮಿನೇಟ್​; ಒಂದೇ ವಾರಕ್ಕೆ ಮುಗಿಯಿತು ದೊಡ್ಮನೆ ಆಟ

ದೊಡ್ಮನೆಯ ಸದಸ್ಯರೆಲ್ಲೂ ತಮ್ಮ ಕಡೆಗೆ ಕೈ ತೋರಿಸಿ ಡಬಲ್​ ಗೇಮ್​ ಆರೋಪ ಮಾಡಿರುವುದು ಆರ್ಯವರ್ಧನ್​ ಗುರೂಜಿ ಅವರಿಗೆ ಅಚ್ಚರಿ ಮೂಡಿಸಿದೆ. ‘ನಾನು ಯಾರನ್ನೂ ಮೆಚ್ಚಿಸುವ ಕೆಲಸ ಮಾಡಿಲ್ಲ. ಡಬಲ್​ ಗೇಮ್​ ರೀತಿ ನಡೆದುಕೊಂಡಿಲ್ಲ. ಇವರೆಲ್ಲರ ಕಣ್ಣಿಗೆ ಏನು ಕಂಡಿದೆಯೋ ನನಗೆ ಗೊತ್ತಿಲ್ಲ’ ಎಂದು ಅವರು ಕಿಚ್ಚ ಸುದೀಪ್​ ಎದುರಲ್ಲಿ ವಾದ ಮುಂದಿಟ್ಟಿದ್ದಾರೆ.

‘ಸೂಪರ್​ ಸಂಡೇ ವಿತ್​ ಸುದೀಪ್​’ ಎಪಿಸೋಡ್​ನಲ್ಲಿ ಈ ವಿಚಾರ ಚರ್ಚೆ ಆಗಿದೆ. ಇದರ ಪ್ರೋಮೋವನ್ನು ಕಲರ್ಸ್​ ಕನ್ನಡ ವಾಹಿನಿ ತನ್ನ ಸೋಶಿಯಲ್​ ಮೀಡಿಯಾ ಖಾತೆಯಲ್ಲಿ ಹಂಚಿಕೊಂಡಿದೆ. ನ.27ರ ಸಂಜೆ ಈ ಸಂಚಿಕೆ ಪ್ರಸಾರ ಆಗಲಿದೆ. ಇನ್ನು, ‘ಗೇಮ್​ ಯಾರದ್ದು’ ಎಂಬ ಪ್ರಶ್ನೆಗೆ ವಿಶ್ರ ಪ್ರತಿಕ್ರಿಯೆ ಬಂದಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 6:05 pm, Sun, 27 November 22

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್