AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

​BBK9 ಆರಂಭ: ಮನೆ ಒಳಗೆ ಹೋದ ಹಳೆಯ ಸ್ಪರ್ಧಿಗಳು ಇವರೇ: ಅರವಿಂದ್​​ಗಿಲ್ಲ ಅವಕಾಶ

ಈ ಮೊದಲೇ ಬಿಗ್ ಬಾಸ್ ಮನೆ ಪ್ರವೇಶಿಸಿದ್ದ ಸ್ಪರ್ಧಿಗಳು ಈ ಬಾರಿ ಇರಲಿದ್ದಾರೆ. ಆ ಸಾಲಿನಲ್ಲಿ ಮನೆ ಸೇರಿದ ಸ್ಪರ್ಧಿಗಳು ಇವರೇ.

​BBK9 ಆರಂಭ: ಮನೆ ಒಳಗೆ ಹೋದ ಹಳೆಯ ಸ್ಪರ್ಧಿಗಳು ಇವರೇ: ಅರವಿಂದ್​​ಗಿಲ್ಲ ಅವಕಾಶ
TV9 Web
| Edited By: |

Updated on:Sep 24, 2022 | 6:35 PM

Share

‘ಬಿಗ್ ಬಾಸ್ ಕನ್ನಡ ಸೀಸನ್ 9’ (Bigg Boss Kannada Season 9) ಆರಂಭ ಆಗಿದೆ. ಕಿಚ್ಚ ಸುದೀಪ್ ಅವರು ಪ್ರತಿಬಾರಿಯಂತೆ ಈ ಬಾರಿಯೂ ಶೋ ನಡೆಸಿಕೊಡುತ್ತಿದ್ದಾರೆ. ಅವರು ಗ್ರ್ಯಾಂಡ್ ಆಗಿ ವೇದಿಕೆಗೆ ಎಂಟ್ರಿ ನೀಡಿದ್ದಾರೆ. ಈ ಸೀಸನ್​ನಲ್ಲಿ ಹೊಸ ಸ್ಪರ್ಧಿಗಳ ಜತೆ ಹಳೆಯ ಸ್ಪರ್ಧಿಗಳೂ ಇರಲಿದ್ದಾರೆ. ಅಂದರೆ, ಈ ಮೊದಲೇ ಬಿಗ್ ಬಾಸ್ (Bigg Boss)​ ಮನೆ ಪ್ರವೇಶಿಸಿದ್ದ ಸ್ಪರ್ಧಿಗಳು ಈ ಬಾರಿ ಇರಲಿದ್ದಾರೆ. ಆ ಸಾಲಿನಲ್ಲಿ ಮನೆ ಸೇರಿದ ಸ್ಪರ್ಧಿಗಳು ಇವರೇ.

ಅರುಣ್ ಸಾಗರ್:

ಅರುಣ್ ಸಾಗರ್ ಅವರು ಬಿಗ್ ಬಾಸ್​ನ ಮೊದಲ ಸ್ಪರ್ಧಿಯಾಗಿ ಎಂಟ್ರಿ ಪಡೆದಿದ್ದಾರೆ. ಬಿಗ್ ಬಾಸ್ ಸೀಸನ್​ 1ರ ಸ್ಪರ್ಧಿ ಆಗಿದ್ದರು. ಅವರು ಈ ಶೋನಲ್ಲಿ ರನ್ನರ್ ಅಪ್​ ಆಗಿ ಹೊರಹೊಮ್ಮಿದ್ದರು. ಅವರು ನಟನೆ ಜತೆಗೆ ಕಲಾ ನಿರ್ದೇಶಕನಾಗಿಯೂ ಗುರುತಿಸಿಕೊಂಡಿದ್ದಾರೆ. ಅರುಣ್ ಅವರು ಸಾಕಷ್ಟು ಮನರಂಜನೆ ನೀಡುತ್ತಾರೆ. ಈ ಕಾರಣಕ್ಕೆ ಅವರಿಗೆ ಅವಕಾಶ ನೀಡಲಾಗಿದೆ.

ಅನುಪಮಾ ಗೌಡ:

ಅನುಪಮಾ ಗೌಡ ಅವರು ಈ ಮೊದಲು ಬಿಗ್ ಬಾಸ್​ ಮನೆಗೆ ಎಂಟ್ರಿ ಕೊಟ್ಟಿದ್ದರು. ಈ ಮೂಲಕ ಅವರ ಖ್ಯಾತಿ ಹೆಚ್ಚಿತ್ತು. ನಟಿಯಾಗಿ, ನಿರೂಪಕಿಯಾಗಿ ಅವರು ಗುರುತಿಸಿಕೊಂಡಿದ್ದಾರೆ. ಅವರಿಗೆ ಸೋಶಿಯಲ್ ಮೀಡಿಯಾದಲ್ಲಿ ದೊಡ್ಡ ಸಂಖ್ಯೆಯಲ್ಲಿ ಹಿಂಬಾಲಕರು ಇದ್ದಾರೆ. ಈ ಕಾರಣಕ್ಕೆ ಅವರ ಎಂಟ್ರಿ ಸಾಕಷ್ಟು ಕುತೂಹಲ ಮೂಡಿಸಿದೆ.

ದಿವ್ಯಾ ಉರುಡುಗ:

ದಿವ್ಯಾ ಉರುಡುಗ ಅವರು ಸೀಸನ್ 8ರಲ್ಲಿ ಕಾಣಿಸಿಕೊಂಡಿದ್ದರು. ಅರವಿಂದ್ ಕೆಪಿ ಜತೆಗಿನ ಕೆಮಿಸ್ಟ್ರಿ ಎಲ್ಲರಿಗೂ ಇಷ್ಟ ಆಗಿತ್ತು. ಈ ಬಾರಿ ಅವರು ಮತ್ತೆ ಬಿಗ್ ಬಾಸ್ ಮನೆಗೆ ಬರುತ್ತಿದ್ದಾರೆ. ಕಳೆದ ಬಾರಿ ಎರಡನೇ ರನ್ನರ್​ಅಪ್​ ಆಗಿದ್ದರು. ಈ ಬಾರಿ ಅವರು ವಿನ್ ಆಗಲೇಬೇಕು ಎಂಬ ಹಂಬಲದೊಂದಿಗೆ ಬಂದಿದ್ದಾರೆ. ಅರವಿಂದ್ ಕೆಪಿ ಬಿಗ್ ಬಾಸ್ ಮನೆಗೆ ಎಂಟ್ರಿ ಕೊಡಲಿದ್ದಾರೆ ಎನ್ನಲಾಗಿತ್ತು. ಆದರೆ, ಅದು ಸುಳ್ಳಾಗಿದೆ. ಅವರು ಈ ಬಾರಿ ದೊಡ್ಮನೆಗೆ ಬರುತ್ತಿಲ್ಲ.

ಪ್ರಶಾಂತ್ ಸಂಬರ್ಗಿ: ಎಲ್ಲರನ್ನೂ ವಿರೋಧಿಸಿ ಗಮನ ಸೆಳೆದಿದ್ದ ಪ್ರಶಾಂತ್ ಸಂಬರ್ಗಿ ಅವರು ಈ ಬಾರಿ ಬಿಗ್ ಬಾಸ್ ಮನೆಗೆ ಬಂದಿದ್ದಾರೆ. ಅವರು ಎಲ್ಲರನ್ನೂ ವಿರೋಧಿಸಿ ಕಳೆದ ಬಾರಿ ಗಮನ ಸೆಳೆದಿದ್ದರು. ಈ ಬಾರಿಯೂ ಅವರು ತಮ್ಮ ಖಡಕ್ ವ್ಯಕ್ತಿತ್ವದ ಮೂಲಕ ಗಮನ ಸೆಳೆಯುತ್ತಾರಾ ಎಂಬುದನ್ನು ಕಾದು ನೋಡಬೇಕಿದೆ.

ದೀಪಿಕಾ ದಾಸ್:

ದೀಪಿಕಾ ದಾಸ್ ಅವರು ಬಿಗ್ ಬಾಸ್ ಮನೆಗೆ ಈ ಮೊದಲೇ ಎಂಟ್ರಿ ಕೊಟ್ಟಿದ್ದರು. ಅವರು ಈ ಬಾರಿಯೂ ಮತ್ತೆ ಬಂದಿದ್ದಾರೆ. ಶೈನ್ ಶೆಟ್ಟಿ ಜತೆಗಿನ ಫ್ರೆಂಡ್​​ಶಿಪ್​ನಿಂದ ಅವರು ಗಮನ ಸೆಳೆದಿದ್ದರು. ಅವರು ಯಾವ ರೀತಿ ಈ ಬಾರಿ ಆಡುತ್ತಾರೆ ಎಂಬುದು ಸದ್ಯದ ಕುತೂಹಲ.

Published On - 6:18 pm, Sat, 24 September 22

Follow Us
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ