BBK 9 Finale: ‘ಬಿಗ್ ಬಾಸ್ ಸೀಸನ್ 9’ರ ಫಿನಾಲೆ ಡೇಟ್ ಘೋಷಣೆ; ಈ ವಾರ ಡಬಲ್ ಎಲಿಮಿನೇಷನ್ ಸಾಧ್ಯತೆ

ಫಿನಾಲೆಯಲ್ಲಿ ಇರೋದು ಐವರು ಮಾತ್ರ. ಆದರೆ, ಈಗ ಇರೋದು 10 ಮಂದಿ. ಹೀಗಾಗಿ, ಎಂಟು ಮಂದಿಯಲ್ಲಿ ಇಬ್ಬರು ಈ ವಾರ ಹೊರಹೋಗಬಹುದು. ಮತ್ತೋರ್ವ ಸ್ಪರ್ಧಿ ಮುಂದಿನವಾರದ ಮಧ್ಯದಲ್ಲಿ ಎಲಿಮಿನೇಟ್ ಆಗಲಿದ್ದಾರೆ.

BBK 9 Finale: ‘ಬಿಗ್ ಬಾಸ್ ಸೀಸನ್ 9’ರ ಫಿನಾಲೆ ಡೇಟ್ ಘೋಷಣೆ; ಈ ವಾರ ಡಬಲ್ ಎಲಿಮಿನೇಷನ್ ಸಾಧ್ಯತೆ
Follow us
| Updated By: Digi Tech Desk

Updated on:Dec 23, 2022 | 5:52 PM

‘ಬಿಗ್ ಬಾಸ್ ಕನ್ನಡ ಸೀಸನ್ 9’ರ (BBK 9) ಫಿನಾಲೆ ಯಾವಾಗ ಎಂಬ ಪ್ರಶ್ನೆ ಅನೇಕರಲ್ಲಿತ್ತು. ಈ ಪ್ರಶ್ನೆಗೆ ಈಗ ಬಿಗ್ ಬಾಸ್ ಕಡೆಯಿಂದಲೇ ಉತ್ತರ ಸಿಕ್ಕಿದೆ. ಡಿಸೆಂಬರ್ 31 ಹಾಗೂ ಜನವರಿ 1ರಂದು ಈ ಸೀಸನ್​ನ ಫಿನಾಲೆ ನಡೆಯಲಿದೆ. ಈ ಕುರಿತು ಬಿಗ್ ಬಾಸ್ (Bigg Boss) ಮನೆಯಲ್ಲಿ ಸ್ಪರ್ಧಿಗಳಿಗೆ ಮಾಹಿತಿ ನೀಡಲಾಗಿದೆ. ನವೆಂಬರ್ 22ರ ಎಪಿಸೋಡ್​ನಲ್ಲಿ ಫಿನಾಲೆಗೆ 10 ದಿನ ಬಾಕಿ ಎಂಬ ಸೂಚನೆ ನೀಡಲಾಗಿದೆ. ಇದನ್ನು ನೋಡಿ ಸ್ಪರ್ಧಿಗಳಿಗೆ ಖುಷಿ ಹಾಗೂ ಬೇಸರ ಎರಡೂ ಆಗಿದೆ.

ಈ ಬಾರಿ ‘ಬಿಗ್ ಬಾಸ್​ ಒಟಿಟಿ’ ಮೊದಲ ಬಾರಿಗೆ ಆರಂಭ ಆಯಿತು. 45 ದಿನಗಳ ಕಾಲ ಸ್ಪರ್ಧಿಗಳು ದೊಡ್ಮನೆಯಲ್ಲಿ ಕಳೆದರು. ಇಲ್ಲಿಂದ ನಾಲ್ಕು ಸ್ಪರ್ಧಿಗಳು ಬಿಗ್ ಬಾಸ್ ಟಿವಿ ಸೀಸನ್​ಗೆ ಕಾಲಿಟ್ಟರು. ಈ ಬಾರಿ ನವೀನರು ಹಾಗೂ ಪ್ರವೀಣರು ಎಂಬ ತಂತ್ರದ ಮೊರೆ ಹೋಗಲಾಯಿತು. 9 ನವೀನರು ಹಾಗೂ 9 ಹಳೆಯ ಸ್ಪರ್ಧಿಗಳು ಬಂದರು. ಸದ್ಯ ಬಿಗ್ ಬಾಸ್ ಮನೆಯಲ್ಲಿ 8 ಸ್ಪರ್ಧಿಗಳಿದ್ದಾರೆ. ಈ ವಾರ ಡಬಲ್ ಎಲಿಮಿನೇಷನ್ ನಡೆಯಬಹುದು ಎನ್ನಲಾಗುತ್ತಿದೆ.

ಫಿನಾಲೆಯಲ್ಲಿ ಇರೋದು ಐವರು ಮಾತ್ರ. ಆದರೆ, ಈಗ ಇರೋದು 10 ಮಂದಿ. ಹೀಗಾಗಿ, ಎಂಟು ಮಂದಿಯಲ್ಲಿ ಇಬ್ಬರು ಈ ವಾರ ಹೊರಹೋಗಬಹುದು. ಮತ್ತೋರ್ವ ಸ್ಪರ್ಧಿ ಮುಂದಿನವಾರದ ಮಧ್ಯದಲ್ಲಿ ಎಲಿಮಿನೇಟ್ ಆಗಲಿದ್ದಾರೆ. ಈ ಮೂಲಕ ಫಿನಾಲೆಗೆ ಐವರು ಸ್ಪರ್ಧಿಗಳು ತಲುಪಲಿದ್ದಾರೆ.

ಇದನ್ನೂ ಓದಿ
Image
ಬಿಗ್ ಬಾಸ್ ಮನೆಯಲ್ಲಿ ಮತ್ತೆ ಓಪನ್ ಆಯ್ತು ಆರ್ಯವರ್ಧನ್ ಗುರೂಜಿ ಹೋಟೆಲ್
Image
ಸುದೀಪ್​ಗಾಗಿ ಸಿನಿಮಾ ಕಥೆ ಮಾಡಿದ ಆರ್ಯವರ್ಧನ್​ ಗುರೂಜಿ; ಸ್ಟೋರಿ ಕೇಳಿ ತಲೆಕೆಡಿಸಿಕೊಂಡ ಕಿಚ್ಚ
Image
ಬಿಗ್ ಬಾಸ್ ಮನೆಯಿಂದ ಅನುಪಮಾ ಗೌಡ ಎಲಿಮಿನೇಟ್ ಆಗಲು ಕಾರಣವಾದ ಅಂಶಗಳಿವು
Image
Anupama Gowda: ಬಿಗ್​ ಬಾಸ್​ನಿಂದ ಎಲಿಮಿನೇಟ್​ ಆದ ಅನುಪಮಾ ಗೌಡ; ನಟಿ-ನಿರೂಪಕಿಯ ದೊಡ್ಮನೆ ಆಟ ಅಂತ್ಯ

ಇದನ್ನೂ ಓದಿ: ಫಿನಾಲೆಗೂ ಮೊದಲು ಬಿಗ್ ಬಾಸ್ ಮನೆಗೆ ಮಂಜು ಪಾವಗಡ ಎಂಟ್ರಿ; ರಾಕೇಶ್​ಗೆ ಟೆನ್ಷನ್

ಅರುಣ್ ಸಾಗರ್, ಅಮೂಲ್ಯ ಗೌಡ, ಆರ್ಯವರ್ಧನ್​ ಗುರೂಜಿ, ದೀಪಿಕಾ ದಾಸ್, ರಾಕೇಶ್ ಅಡಿಗ, ರೂಪೇಶ್ ರಾಜಣ್ಣ ಹಾಗೂ ರೂಪೇಶ್ ಶೆಟ್ಟಿ ಮತ್ತು ದಿವ್ಯಾ ಉರುಡುಗ ಮನೆಯಲ್ಲಿ ಸ್ಪರ್ಧೆ ಮಾಡುತ್ತಿದ್ದಾರೆ. ಈ ವಾರ ವೈಯಕ್ತಿಕ ಟಾಸ್ಕ್​ಗಳನ್ನು ನೀಡಿ ಅದರಲ್ಲಿ ಗೆದ್ದವರಿಗೆ ಅಂಕ ನೀಡಲಾಗುತ್ತಿದೆ. ಸದ್ಯ ಈ ರೇಸ್​ನಲ್ಲಿ ಆರ್ಯವರ್ಧನ್ ಗುರೂಜಿ ಅವರು ಮುಂದಿದ್ದಾರೆ. ಈ ಪೈಕಿ ಯಾರು ಕಪ್ ಗೆಲ್ಲಲಿದ್ದಾರೆ ಎಂಬ ಕುತೂಹಲ ಮೂಡಿದೆ. ಬಿಗ್ ಬಾಸ್ ಗೆದ್ದವರಿಗೆ 50 ಲಕ್ಷ ರೂಪಾಯಿ ಹಾಗೂ ಒಂದು ಕಪ್ ಸಿಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 3:19 pm, Fri, 23 December 22

‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ